KADABA
ಕಡಬ: ರಸ್ತೆಗೆ ನುಗ್ಗಿದ ಕುಮಾರಾಧಾರಾ ನದಿಯ ನೀರು-ಸಂಚಾರ ಸ್ಥಗಿತ
ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು ಪುಳಿಕುಕ್ಕು, ಎಡಮಂಗಲ, ನಿಂತಿಕಲ್ಲು ಮೂಲಕ ಪಂಜಕ್ಕೆ ತೆರಳುತ್ತಿದ್ದಾರೆ.
ಇನ್ನು ಮರ ಬಿದ್ದು ವಿದ್ಯುತ್ ಸಂಪರ್ಕ ಕೂಡಾ ಕಡಿತಗೊಂಡಿದೆ.
DAKSHINA KANNADA
ಕಳ್ಳರನ್ನು ಹಿಡಿದ 60 ರ ವೃದ್ಧೆ..!
ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ ಸಿಕ್ಕಿಬಿದ್ದಿದ್ದಾರೆ.
ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
ಗಾಳಿಗೆ ಹಾರಿದ ಶಾಲೆಯ ಹೆಂಚು..! ರಜಾ ದಿನವಾದ ಕಾರಣ ತಪ್ಪಿದ ಅನಾಹುತ..!
ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ. ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ. ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ.
ಬೀಸಿದ ಗಾಳಿಗೆ ಶಾಲೆಯ ಹೆಂಚಿನ ಜೊತೆಗೆ ಗ್ರಾಮದ ಕೃಷಿಕರ ಅಡಿಕೆ ತೋಟಕ್ಕೂ ಹಾನಿಯಾಗಿದೆ. ಹಲವು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ತಂತಿಯ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಕ್ಕೂ ಕೂಡಾ ಹಾನಿ ಸಂಭವಿಸಿದೆ.
ಜುಲೈ 15 ಮತ್ತು 16 ರಂದು ಕೂಡಾ ಜೋರಾದ ಗಾಳಿಯ ಜೊತೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ