Connect with us

LATEST NEWS

ಮಂಗಳೂರಿನಲ್ಲಿ ಎ.30 ರಿಂದ ಮೇ 1ರ ವರೆಗೆ ನೀರು ಪೂರೈಕೆ ಸ್ಥಗಿತ; ಎಲ್ಲೆಲ್ಲಿ?

Published

on

ಮಂಗಳೂರು : ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಎ.30ರ ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಮಹಾ ನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಯಂತ್ರ ಸ್ಥಾವರದಂದ ಮಂಗಳೂರು ನಗರಕ್ಕೆ ಬರುವ ನೀರು ಹಾಯಿಸುವ ಕೊಳವೆ ಕಾಮಗಾರಿ ಕೆಲಸ ನಡೆಯಲಿರುವ ಕಾರಣ 24 ಗಂಟೆ ಅವಧಿಯಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ; ಶಾಸಕರು ಭಾಗಿ

ಈ ಅವಧಿಯಲ್ಲಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರ್, ಮುಳಿಹಿತ್ಲು, ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಬಜಾಲ್, ಜಪ್ಪಿನಮೊಗರು, ಕಣ್ಣೂರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲ್, ಊರ್ವಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು ಮತ್ತು ಮರಕಡದ ಭಾಗಶಃ ಪ್ರದೇಶಗಳಿಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಊಟದ ಬಳಿಕ ಟೀ ಕುಡಿಯೋರೇ ಎಚ್ಚರ? ಈ ಸ್ಟೋರಿ ಓದಿ

Published

on

ಮಂಗಳೂರು: ಕಾಫಿ ಹಾಗೂ ಟೀ ಎಂದರೇ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಬೆಳಗ್ಗೆ ಎದ್ದು, ಹಾಲು, ಕಾಫಿ, ಟೀ ಇಲ್ಲದೇ ಇದ್ದರೆ ಲೈಫ್ ಬೋರು ಅಂತಾರೇ ಜನರು. ಅದರಲ್ಲೂ ಕೆಲವರಂತೂ ಟೀ ಹಾಗೂ ಕಾಫಿಯಿಂದಲೇ ದಿನವನ್ನು ಶುರು ಮಾಡುತ್ತಾರೆ. ಬೆಳಗ್ಗೆ ಎದ್ದಾಗ ಒಂದು ಟೀ, ಟಿಫನ್​ ಬಳಿಕ ಒಂದು ಟೀ, ಮಧ್ಯಾಹ್ನ ಊಟದ ಬಳಿಕ ಒಂದು ಟೀ, ಸಂಜೆಯ ಹೊತ್ತಲ್ಲಿ ಹೀಗೆ ದಿನದಲ್ಲಿ ಐದಾರು ಭಾರೀ ಟೀ ಅಥವಾ ಕಾಫಿ ಕುಡಿಯೋ ಜನರು ಇದ್ದಾರೆ. ಆದರೆ ಈ ಟೀ ಮತ್ತು ಕಾಫಿಯನ್ನು ಪದೇ ಪದೇ ಕುಡಿಯೋ ಲವರ್ಸ್‌ ಈ ಸ್ಟೋರಿ ಓದಲೇಬೇಕು.

ಊಟದ ಬಳಿಕ ಟೀ ಕುಡಿಯೋ ಅಭ್ಯಾಸ ಬಿಟ್ಟುಬಿಡಿ

ನೀವೇನಾದರೂ ಊಟವಾದ ಬಳಿಕ ಅಥವಾ ಮೊದಲು ಟೀ, ಕಾಫಿ ಸೇವಿಸುತ್ತಿದ್ದರೆ ಈ ಕೂಡಲೇ ಆ ಅಭ್ಯಾಸವನ್ನು ಬಿಟ್ಟುಬಿಡಿ. ಹೀಗೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಆಘಾತಕಾರಿ ಮಾಹಿತಿಯೊಂದನ್ನು ಬಿಡುಗಡೆ ಮಾಡಿದೆ.  ಏಕೆಂದರೆ ಈ ಪಾನೀಯಗಳು ಆಹಾರದಲ್ಲಿನ ಕಬ್ಬಿಣಾಂಶವನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ. ರಕ್ತ ಉತ್ಪಾದನೆಗೆ ಕಬ್ಬಿಣಾಂಶ ಅತ್ಯಗತ್ಯ. ದೇಹದ ಶೇ.70ರಷ್ಟು ಕಬ್ಬಿಣಾಂಶವು ಹೀಮೊಗ್ಲೋಬಿನ್ ಕೆಂಪು ರಕ್ತಕಣಗಳಲ್ಲಿ ಇರುತ್ತದೆ. ಹೀಗಾಗಿ ಟೀ ಅಥವಾ ಕಾಫಿ ಕುಡಿಯುವುದರಿಂದ ಕಬ್ಬಿಣಾಂಶ ಕೊರತೆಯಾಗಿ ರಕ್ತಹೀನತೆಗೆ ಕಾರಣವಾಗುತ್ತದೆ ಎಂದು ಐಸಿಎಂಆರ್ ತಿಳಿಸಿದೆ.

ಟೀ ಮತ್ತು ಕಾಫಿಗಳಲ್ಲಿ ಕೆಫೀನ್ ಇರುತ್ತದೆ. ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ ಎಂದು ಸಂಶೋಧಕರು ಮಾಹಿತಿ ನೀಡಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಇತ್ತೀಚೆಗೆ ಭಾರತೀಯರಿಗೆ 17 ಆಹಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಆ ಮಾರ್ಗಸೂಚಿಯಲ್ಲಿ ರಾಷ್ಟ್ರೀಯ ಪೋಷಣೆಯ ಸಂಸ್ಥೆ ಅದರ ಸಂಶೋಧನಾ ವಿಭಾಗದೊಂದಿಗೆ ವೈದ್ಯಕೀಯ ಸಮಿತಿಯು ಚಹಾ ಮತ್ತು ಕಾಫಿಯ ಸೇವನೆಯನ್ನು ಮಿತವಾಗಿ ಸೇವನೆ ಮಾಡಬೇಕು ಅಂತ ವಿವರಿಸಿದೆ.

ಚಹಾ ಅಥವಾ ಕಾಫಿಯನ್ನು ಸಂಪೂರ್ಣವಾಗಿ ತ್ಯಜಿಸಿ ಎಂದರೆ ಯಾರು ಕೇಳುವುದಿಲ್ಲ. ಹೀಗಾಗಿ ಇದನ್ನು ಮಿತವಾಗಿ ಸೇವನೆ ಮಾಡಿ. ಏಕೆಂದರೆ ಪಾನೀಯಗಳಲ್ಲಿನ ಕೆಫೀನ್ ಅಂಶದ ಬಗ್ಗೆ ಎಚ್ಚರದಿಂದಿರಿ ಎಂದು ಅವರು ಭಾರತೀಯರಿಗೆ ಎಚ್ಚರಿಕೆ ನೀಡಿದ್ದಾರೆ. ಅದರಲ್ಲೂ ಊಟಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಅಥವಾ ನಂತರ ಕಾಫಿ ಮತ್ತು ಚಹಾವನ್ನು ಸೇವಿಸಬೇಕು. ಊಟವಾದ ಕೂಡಲೇ ಕಾಫಿ ಮತ್ತು ಚಹಾ ಸೇವಿಸಿದರೆ ಟ್ಯಾನಿನ್‌ಗಳು ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಅಡ್ಡಿಪಡಿಸಬಹುದು.

ಹಾಲು ಇಲ್ಲದೆ ಚಹಾ ದೇಹಕ್ಕೆ ಒಳ್ಳೆಯದು

ಆಗಾಗ ದಣಿವು ಅಥವಾ ಶಕ್ತಿಯ ಕೊರತೆ ಉಂಟಾಗುತ್ತದೆ. ಉಸಿರಾಟದ ತೊಂದರೆ, ತಲೆನೋವು, ತ್ವರಿತ ಹೃದಯ ಬಡಿತ, ಉಗುರುಗಳು ಸೀಳುವುದು ಅಥವಾ ಕೂದಲು ಉದುರುವಿಕೆ. ಇದಲ್ಲದೆ  ಸಂಶೋಧಕರು ಹಾಲು ಇಲ್ಲದೆ ಚಹಾವನ್ನು ಸೇವಿಸುವುದರಿಂದ ರಕ್ತ ಪರಿಚಲನೆಯನ್ನು ಉತ್ತೇಜಿಸಬಹುದು. ಜೊತೆಗೆ ಹೊಟ್ಟೆಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮೇ 20ರವರೆಗೆ ದ.ಕ. ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ

Published

on

ಮಂಗಳೂರು : ಕರಾವಳಿಗೆ ಮೇ 20ರ ವರೆಗೆ ಜಿಲ್ಲೆಯಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದ.ಕ.ದ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸೋಮವಾರ ಬೆಳಗ್ಗಿನ ಜಾವ ಗುಡುಗು ಸಹಿತ ಸಾಧಾರಣ ಮಳೆ ಯಾಗಿತ್ತು. ಸುಳ್ಯ, ಅರಂತೋಡು, ಹಾಲೆಟ್ಟಿ, ಬಡ್ಡಟ್ಕ, ಸಂಪಾಜೆ ಪರಿಸರದಲ್ಲಿ ಮಂಗಳವಾರ ಬೆಳಗ್ಗೆ ಮಳೆ ಸುರಿದಿದೆ.

ಸಮುದ್ರವೂ ಪ್ರಕ್ಷುಬ್ದಗೊಂಡಿದ್ದು, ಅಲೆಗಳ ಅಬ್ಬರ ಕಂಡುಬಂದಿದೆ. ದ.ಕ ಜಿಲ್ಲೆಯಲ್ಲಿ ಮಂಗಳವಾರ ಸರಾಸರಿ 31.7 ಡಿಗ್ರಿ ಗರಿಷ್ಠ, 24.2 ಡಿಗ್ರಿ ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗುಡುಗು ಮಿಂಚಿನೊಂದಿಗೆ ಉತ್ತಮ ಮಳೆ ಸಾಧ್ಯತೆ

ದ.ಕ, ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 20ರ ವರೆಗೆ ಗಾಳಿ, ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 1ವಾರ ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ತುಸು ಹೆಚ್ಚಾಗಿ ಬೀಚ್ ವ್ಯಾಪ್ತಿಯಲ್ಲೂ ಕಡಲಬ್ಬರ ಹೆಚ್ಚಳಗೊಳ್ಳಲಿದೆ. ರಾತ್ರಿ ವೇಳೆ ಚಳಿಯ ತೀವ್ರತೆ ಸಾಧಾರಣಕ್ಕಿಂತ ತುಸು ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಜೊತೆಗೆ ಆಲಿಕಲ್ಲು ಮಳೆ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಧಿಕೃತ ಮೂಲಗಳು ತಿಳಿಸಿವೆ.

Continue Reading

LATEST NEWS

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ

Published

on

ಮಂಗಳೂರು/ಬೆಂಗಳೂರು : ಚಿನ್ನದ ಬೆಲೆ ಏರಿಕೆ ಕಂಡು ಬೇಸರಿಸಿಕೊಂಡಿದ್ದ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಂದು (ಮೇ 15) ಕೊಂಚ ಇಳಿಕೆ ಕಂಡಿದೆ. ಹಾಗಾಗಿ ಚಿನ್ನ ಕೊಳ್ಳುವಲ್ಲಿ ಸ್ವರ್ಣ ಪ್ರಿಯರು ತೊಡಗಿಕೊಳ್ಳಬಹುದಾಗಿದೆ.
ಇತ್ತ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ರೆ, ಅತ್ತ, ಬೆಳ್ಳಿಯ ಬೆಲೆ ಏರಿಕೆ ಕಂಡಿದೆ. 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,750 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,820 ರೂಪಾಯಿ ಆಗಿದ್ದು, 100 ಗ್ರಾಮ್ ಬೆಳ್ಳಿ ಬೆಲೆ 8,720 ರೂಪಾಯಿ ಇದೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ದರ :

* 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,750 ರೂ
* 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,820 ರೂ
* ಬೆಳ್ಳಿ ಬೆಲೆ 10 ಗ್ರಾಂಗೆ : 872 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

* 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,750 ರೂ
* 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,820 ರೂ
* ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ :

* ಬೆಂಗಳೂರು: 66,750 ರೂ
* ಚೆನ್ನೈ: 66,900 ರೂ
* ಮುಂಬೈ: 66,750 ರೂ
* ದೆಹಲಿ: 66,900 ರೂ
* ಕೋಲ್ಕತಾ: 66,750 ರೂ
* ಕೇರಳ: 66,750 ರೂ
* ಅಹ್ಮದಾಬಾದ್: 66,800 ರೂ
* ಜೈಪುರ್: 66,900 ರೂ
* ಲಕ್ನೋ: 66,900 ರೂ
* ಭುವನೇಶ್ವರ್: 66,750 ರೂ

ಇದನ್ನೂ ಓದಿ : PHOTOS : ಆಸ್ಟ್ರೇಲಿಯಾದಲ್ಲಿ ರಶ್ಮಿಕಾ ಮಂದಣ್ಣ; ಹಾಟ್ ಫೋಟೋಗಳು ವೈರಲ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ

* ಮಲೇಷ್ಯಾ: 3,500 ರಿಂಗಿಟ್ (61,837 ರುಪಾಯಿ)
* ದುಬೈ: 2,630 ಡಿರಾಮ್ (59,800 ರುಪಾಯಿ)
* ಅಮೆರಿಕ: 715 ಡಾಲರ್ (59,713 ರುಪಾಯಿ)
* ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,422 ರುಪಾಯಿ)
* ಕತಾರ್: 2,675 ಕತಾರಿ ರಿಯಾಲ್ (61,299 ರೂ)
* ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,664 ರುಪಾಯಿ)
* ಓಮನ್: 283.50 ಒಮಾನಿ ರಿಯಾಲ್ (61,543 ರುಪಾಯಿ)
* ಕುವೇತ್: 222.50 ಕುವೇತಿ ದಿನಾರ್ (60,839 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ

* ಬೆಂಗಳೂರು: 8,600 ರೂ
* ಚೆನ್ನೈ: 9,070 ರೂ
* ಮುಂಬೈ: 8,720 ರೂ
* ದೆಹಲಿ: 8,720 ರೂ
* ಕೋಲ್ಕತಾ: 8,720 ರೂ
* ಕೇರಳ: 9,070 ರೂ
* ಅಹ್ಮದಾಬಾದ್: 8,720 ರೂ
* ಜೈಪುರ್: 8,720 ರೂ
* ಲಕ್ನೋ: 8,720 ರೂ
* ಭುವನೇಶ್ವರ್: 9,070 ರೂ

Continue Reading

LATEST NEWS

Trending