Connect with us

    DAKSHINA KANNADA

    ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಮುಂದಾದಾಗ ಅಡ್ಡಿಪಡಿಸಿದ BJP ಈಗ ಮಾಡುತ್ತಿರುದೇನು..?-ಮಾಜಿ ಸಚಿವ ರೈ ಪ್ರಶ್ನೆ

    Published

    on

    ಮಂಗಳೂರು: ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ.


    ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗಾಡ್ಗೀಳ್ ವರದಿಯನ್ವಯ ಕಠಿಣ ಅರಣ್ಯ ಕಾಯ್ದೆ ತರಲು ಹೋದ ಸಂದರ್ಭದಲ್ಲಿ ಅರಣ್ಯ ಅಂಚಿನಲ್ಲಿರುವ ಕೆಲವರು ವಿರೋಧ ಮಾಡಿದಾಗ ಕಸ್ತೂರಿ ರಂಗನ್ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಲಾಯಿತು. ಗಾಡ್ಗೀಳ್‌ನಲ್ಲಿದ್ದ ಸರಿ ತಪ್ಪು ಸರಿಪಡಿಸಿ ವರದಿಯನ್ನು ಕೊಡಲು ಸಭೆ ಮಾಡಿತ್ತು.

    ಕಸ್ತೂರಿ ರಂಗನ್‌ ಅವರು ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ವಿಚಾರವಲ್ಲ, ಕೇರಳ, ಆಂಧ್ರಪ್ರದೇಶ, ತೇಲಂಗಾಣ, ಗೋವಾ ಹೀಗೆ ಎಲ್ಲಾ ರಾಜ್ಯಗಳಿಗೆ ಸೇರಿದ ವಿಚಾರವಾಗಿದ್ದ ಕಾರಣ ಅಂದು ಎಲ್ಲ ರಾಜ್ಯಗಳಿಗೆ ಕರಡು ನೋಟಿಫಿಕೇಶನ್ ನೀಡಲಾಯಿತು. ರಾಜ್ಯಗಳ ತಕರಾರು ಇದ್ದರೆ ಸೂಚಿಸಿ ಕಳುಹಿಸಿ ಕೊಡಿ ಎಂದು ಹೇಳಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಈ ಬಗ್ಗೆ ವಿಸ್ತಾರ ಚರ್ಚೆಯೂ ನಡೆಯಿತು ಎಂದರು.

    ಈಗಿರುವ ಅರಣ್ಯ ಕಾಯ್ದೆ ಬಹಳ ಕಠಿಣ ಇದೆ, ಇರುವ ನಿಯಮಾವಳಿಗಳು ಸಾಕು ಕಾಂಗ್ರೆಸ್ ಕಳಿಸಿತ್ತು. ನಾಲ್ಕೈದು ಬಾರಿ‌ಡ್ರಾಫ್ಟ್ ನೋಟಿಫಿಕೇಶನ್ ಬರುತ್ತಲೆ ಇತ್ತು. ಮೊದಲ ಬಾರಿ ಬಂದಾಗ ಜನರಲ್ಲಿ ಸರಿಯಾದ ಮಾಹಿತಿ ಇಲ್ಲದೆ ಗುಲ್ಲೆದ್ದಿತು.

    ಎನ್‌ಡಿಎ ಬಂದ ಮೇಲೆ ಕಾಂಗ್ರೆಸ್ ವರದಿ ಸರಿಯಾಗಿ ಕೊಟ್ಟಿಲ್ಲ ಎಂದು ಅಪಪ್ರಚಾರ ಮಾಡಿದರು. ಅಂತಿಮವಾಗಿ ಕಸ್ತೂರಿ ರಂಗನ್‌ ವರದಿಯೇ ಬೇಡ ಎಂದು ನಿರ್ಧರಿಸಿದೆವು. ಮತ್ತೆ ಡ್ರಾಫ್ಟ್‌ ನೊಟಿಫಿಕೇಶನ್ ಬಂತು. ಈಗಿನ ಸರ್ಕಾರ ಕೂಡ ವರದಿ ಬೇಡ ಅಂತ ವರದಿ ಕೊಟ್ಟಿದೆ ಎಂದರು.

    ಈ ವರದಿಯನ್ನು ಜಾರಿ ಮಾಡೋದು ಬಿಡೋದು ಕೇಂದ್ರ. ವಿರೋಧ ಅಂದರೆ ಸಾಲದು ರದ್ದು ಮಾಡುವಲ್ಲಿ ಏನು ಕ್ರಮ ಕೈಗೊಂಡಿದ್ದಾರೆ..? ಡಬಲ್ ಎಂಜಿನ್ ಸರಕಾರ ಇರುವಾಗ ಕೇಂದ್ರ ಜತೆ ಮಾತನಾಡಿ ಕೇಂದ್ರ ಅರಣ್ಯ ಪರಿಸರ ಇಲಾಖೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

    ಇನ್ನೂ ಕಸ್ತೂರಿ ರಂಗನ್‌ ವರದಿ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ರಾಜ್ಯ ಸರ್ಕಾರ ವಿರೋಧ ಇದೆ ಎಂದ ಮಾತ್ರಕ್ಕೆ ರದ್ದಾಗಲ್ಲ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಿದಿರಿ. ರದ್ದು ಮಾಡಲು ಆಗದಿದ್ದರೆ ವರದಿ ಹೆಸರು ಹೇಳಿ ರಾಜಕೀಯ ಮಾಡೋದನ್ನ ನಿಲ್ಲಿಸಿ ಎಂದರು.

    ಅಂದು ಎತ್ತಿನಹೊಳೆ ಬೇಡ ಎಂದವರು ಈಗ ನಾವೇ ಅದನ್ನು ಮಾಡಿದ್ದು ಎನ್ನುತ್ತಿದ್ದಾರೆ. ಅದೇ ರೀತಿ ಇದನ್ನೂ ರದ್ದು ಮಾಡದೆ ಕೇವಲ ವಿರೋಧ ಇದೆ ಎನ್ನುವುದು ಸಂಪೂರ್ಣ ರಾಜಕೀಯವಾಗಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಶಶಿಧರ ಹೆಗ್ಡೆ, ಶಾಲೆಟ್‌ ಪಿಂಟೊ, ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಗಣೇಶ್ ಪೂಜಾರಿ, ಉಮೇಶ್ ದಂಡಕೇರಿ, ಅಪ್ಪಿ ಮೊದಲಾದರಿದ್ದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending