LATEST NEWS
ಏನಿದು ‘ವಿಮಲ್ ಪಾನ್ ಮಸಾಲಾ ಐಸ್ ಕ್ರೀಮ್’..! ಜನರು ಉಗಳಬೇಕೋ, ನುಂಗಬೇಕಾ ಎಂದು ಪ್ರಶ್ನೆ ಮಾಡಿದ್ಯಾಕೆ?
ಇತ್ತೀಚಿನ ದಿನಗಳಲ್ಲಿ ಫುಡ್ಗಳಲ್ಲಿ ಎಕ್ಸ್ಪ ರಿಮೆಂಟ್ ಮಾಡೋದು ಜಾಸ್ತಿ ಆಗಿದೆ. ಹಿಂದೆಲ್ಲ ಫುಡ್ ಅಂದ್ರೆ ಅದು ರುಚಿಕರವಾಗಿ ಸ್ವಾದಭರಿತವಾಗಿ ಇರುತ್ತಿತ್ತು. ಜೊತೆಗೆ ಆರೋಗ್ಯಕರವಾಗಿಯೂ ಇರುತ್ತಿತ್ತು. ಆದರೆ ಈಗೀಗ ಫುಡ್ಗಳ ಎಕ್ಸ್ಪ ರಿಮೆಂಟ್ಗಳಿಂದಾಗಿ ಮನಷ್ಯನ ಆರೋಗ್ಯವೂ ಕೈ ತಪ್ಪಿ ಹೋಗುತ್ತಿದೆ. ಲೈಕ್ಸ್, ಕಮೆಂಟ್ಗಳ ಮೋಜಿಗೆ ಬಿದ್ದ ಜನರು ಸಿಕ್ಕ ಸಿಕ್ಕ ಒಂದಕ್ಕೊಂದು ಹೊಂದಾಣಿಕೆಯೇ ಇಲ್ಲದ ಐಟಂ ಗಳಿಂದ ಆಹಾರ ತಯಾರಿಸುತ್ತಿದ್ದಾರೆ.
ಇದೀಗ ವಿಮ್ ಪಾನ್ ಮಸಾಲಾ ಮಿಶ್ರಿತ ಐಸ್ಕ್ರೀಂ ಒಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಪಾನ್ ಮಸಾಲಾ ಸಹಿತವಾದ ಐಸ್ಕ್ರೀಮ ತಯಾರಿಸಿದ ರೀತಿ ಹಾಗೂ ಅದನ್ನು ಡೆಕೋರೇಟ್ ಮಾಡಿದ ರೀತಿಗೆ ಜನ ಫಿದಾ ಆಗಿದ್ದಾರೆ.
ಮುಂದೆ ಓದಿ..; ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋದರೆ ಒಳ್ಳೆಯದಾ..? ಕೆಟ್ಟದ್ದಾ..?
ಬಾಲಿವುಡ್ ಸ್ಟಾರ್ ಅಜಯ್ ದೇವಗನ್, ಶಾರುಖ್ ಖಾನ್ ಹಾಗೂ ಅಕ್ಷಯ್ ಕುಮಾರ್ ಅವರು ಪ್ರಚಾರ ಮಾಡ್ತಾ ಇರೋ ವಿಮಲ್ ಎಲೈಚಿ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುತ್ತದೆ. ಬೋಲೋ ಜುಬಾನ್ ಕೇಸರ್ ಕಿ ಅಂತ ಹೇಳೋ ಈ ಜಾಹಿರಾತು ಸಾಕಷ್ಟು ಫೇಮಸ್ ಆಗಿದೆ. ಆದ್ರೆ ಇದೀಗ ಇದೇ ವಿಮಲ್ ಪಾನ್ ಮಸಾಲಾ ಐಸ್ ಕ್ರೀಮ್ ಜೊತೆಗೆ ಹೊಸ ರೂಪ ಪಡೆದುಕೊಂಡಿದೆ. ಈ ರೀತಿ ವಿಮಲ್ ಪಾನ್ ಮಸಾಲಾ ಜೊತೆಗೆ ಐಸ್ಕ್ರೀಂ ಮಾಡಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹವಾ ಎಬ್ಬಿಸಿದ್ದು, ಜನರು ಈ ವೀಡಿಯೋಗೆ ಕಮೆಂಟ್ ಮಾಡುತ್ತಿದ್ದಾರೆ.
ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಮಿಮಲ್ ಪಾನ್ ಮಸಾಲಾ ಬಳಸಿ ವಿಶೇಷ ಐಸ್ ಕ್ರೀಂ ತಯಾರಿಸಲಾಗಿದೆ. ಮೊದಲಿಗೆ ಐಸ್ಕ್ರೀಮ್ ಪ್ಲೇಟ್ ಮೇಲೆ ವಿಮಲ್ ಪಾನ್ ಮಸಾಲಾ ಹಾಕಿ ನಂತರ ಅದರ ಮೇಲೆ ಐಸ್ಕ್ರೀಂ ಹಾಕುತ್ತಾರೆ. ಬಳಿಕ ಅವೆರಡರ ಮಿಶ್ರಣ ಮಾಡಿ ರೋಲ್ ಮಾಡಿ ಡೆಕೋರೇಟ್ ಮಾಡ್ತಾರೆ. ಇದಕ್ಕೆ ಕೆಲವೊಂದು ಸಾಸ್ಗಳನ್ನೂ ಕೂಡಾ ಬಳಸಿ ಚಾಕೋಲೇಟ್ ಚಿಪ್ಸ್ ಮುಂತಾದವುಗಳನ್ನು ಸೇರಿಸಿಕೊಂಡಿದ್ದಾರೆ. ಒಟ್ಟಾರೆ ಹೇಳ್ಬೇಕಂದ್ರೆ ಕಲರ್ ಫುಲ್ ಆಗಿ ರೆಡಿಯಾದ ಪಾನ್ ಐಸ್ ಕ್ರೀಂ ನೋಡಿ ಜನ ಅಂತು ಫಿದಾ ಆಗಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬರೋಬ್ಬರಿ 23ಮಿಲಿ ಜನರು ವೀಕ್ಷಕಣೆ ಮಾಡಿದ್ದು, ಪರ ವಿರೋಧ ಚರ್ಚೆಗಳಾಗುತ್ತಿದೆ. ಕೆಲವರು ಈ ಐಸ್ಕ್ರೀಂ ಅನ್ನು ಅಜಯ್ ದೇವಗನ್ಗೆ ನೀಡಿ ಎಂದರೆ ಇನ್ನು ಕೆಲವರು ಈ ಐಸ್ಕ್ರೀಂ ತಿಂದು ಉಗುಳಬೇಕಾ.. ನುಂಗಬೇಕಾ ಎಂದು ಪ್ರಶ್ನೆ ಮಾಡ್ತಾ ಇದ್ದಾರೆ. ಈ ಹಿಂದೆ ಮ್ಯಾಗಿ ಹಾಗೂ ಐಸ್ಕ್ರೀಂ ಮಿಕ್ಸ್ ಮಾಡಿ ರೋಲ್ ಮಾಡಿದ್ದು ಅದನ್ನು ಚಪ್ಪರಿಸಿಕೊಂಡು ತಿಂದ ವೀಡಿಯೊ ವೈರಲ್ ಆಗಿತ್ತು.
ಅದೇನೆ ಆಗಲಿ ಆಹಾರ ಯಾವತ್ತು ನಮ್ಮ ದೇಹಕ್ಕೆ ಆರೋಗ್ಯಕರವಾಗಿರಬೇಕೆ ಹೊರತು ಅನಾರೋಗ್ಯಕ್ಕೆ ತುತ್ತಾಗುವಂತೆ ಇರಬಾರದು.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS4 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS6 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA1 day ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ