Connect with us

    LATEST NEWS

    ಮದುವೆಗೂ ಮೊದಲು ಹುಡುಗರು ಹುಡುಗಿಯ ಬಳಿ ಈ ಪ್ರಶ್ನೆಗಳನ್ನು ಕೇಳಲೇಬೇಕಂತೆ!

    Published

    on

    ಮಂಗಳೂರು: ಮದುವೆ, ಸಂಸಾರ ಹಾಗೂ ಮಕ್ಕಳು ಎಲ್ಲವೂ ಸರಿಯಾದ ಸಮಯಕ್ಕೆ ಆದರೇನೇ ಚಂದ ಎನ್ನುವ ಮಾತಿದೆ. ಆದರೆ ಈಗಿನ ಕಾಲದಲ್ಲಿ ಮದುವೆಯನ್ನು ಮುಂದಕ್ಕೆ ಹಾಕುವವರೇ ಹೆಚ್ಚಾಗಿದ್ದಾರೆ. ಮದುವೆಗೆ ವಧು ಹುಡುಕುತ್ತಿರುವಾಗ, ಮನೆಯ ಹಿರಿಯರು ಹುಡುಗಿಯ ಮನೆಗೆ ಹೋಗುವ ಸಂಪ್ರದಾಯವಿದೆ. ಹುಡುಗಿ ನೋಡುವ ಶಾಸ್ತ್ರದ ಬಳಿಕ ಹುಡುಗ ಮತ್ತು ಹುಡುಗಿ ಪರಸ್ಪರ ಮಾತನಾಡಲು ಅವಕಾಶವಿರುತ್ತದೆ. ಈ ವೇಳೆ ಆಕೆಯ ಬಳಿ ಈ ಪ್ರಶ್ನೆಗಳನ್ನು ಕಡ್ಡಾಯವಾಗಿ ಕೇಳಲೇ ಬೇಕಂತೆ. ಹುಡುಗಿಯು ನೀಡುವ ಉತ್ತರವು ಈಕೆಯು ತನಗೆ ಸಂಗಾತಿಯಾಗಲು ಅರ್ಹಳೇ ಎನ್ನುವುದಕ್ಕೆ ಸ್ಪಷ್ಟತೆಯೂ ಸಿಗುತ್ತದೆಯಂತೆ.

    ಯಾವ ರೀತಿಯ ಜೀವನ ಸಂಗಾತಿಯ ಬೇಕೆಂದು ಪ್ರಶ್ನಿಸಿ

    ತಮ್ಮ ಜೀವನ ಸಂಗಾತಿಯ ಕುರಿತು ಎಲ್ಲರೂ ಕನಸುಗಳನ್ನು ಕಟ್ಟಿರುತ್ತಾರೆ. ಹೀಗಾಗಿ ಹುಡುಗರು ಹುಡುಗಿಯ ಬಳಿ ಯಾವ ರೀತಿಯ ವ್ಯಕ್ತಿಯನ್ನು ತನ್ನ ಜೀವನ ಸಂಗಾತಿಯನ್ನಾಗಿ ಪಡೆಯಲು ಬಯಸುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳುವುದು ಒಳ್ಳೆಯದು. ಆಕೆಯ ಉತ್ತರಕ್ಕೆ ತಕ್ಕಂತೆ ನೀವಿದ್ದರೆ ನೀವು ಅವರಿಗೆ ಸರಿಯಾದ ಸಂಗಾತಿಯಾದಂತೆಯೇ ಎನ್ನುವುದು ನಿಮಗೆ ತಿಳಿಯುತ್ತದೆ.

    ಇಷ್ಟ ಕಷ್ಟಗಳ ಬಗ್ಗೆ ತಿಳಿಯಿರಿ

    ಹುಡುಗ ಹುಡುಗಿಯ ಮಾತುಕತೆಯ ವೇಳೆಯಲ್ಲಿ ತನ್ನ ಇಷ್ಟ ಕಷ್ಟಗಳ ಬಗ್ಗೆ ಚರ್ಚಿಸುವುದು ಒಳ್ಳೆಯದು. ಹುಡುಗಿಯ ಇಷ್ಟವೇನು ಎನ್ನುವುದು ತಿಳಿಯುವುದು ಮುಖ್ಯ. ಇಬ್ಬರ ಇಷ್ಟ ಕಷ್ಟಗಳು ಒಂದೇಯಾಗಿದ್ದರೆ ಮದುವೆಯ ನಿರ್ಧಾರಕ್ಕೆ ಹೋಗಬಹುದು. ಒಂದು ವೇಳೆ ಇಬ್ಬರ ಇಷ್ಟಗಳು ತದ್ವಿರುದ್ದವಾಗಿದ್ದರೆ ಸಂಬಂಧವನ್ನು ಮುಂದುವರೆಸುವುದೇ ಬೇಡವೇ ಎನ್ನುವುದರ ಬಗ್ಗೆ ನಿಮಗೆ ಸ್ಪಷ್ಟ ಚಿತ್ರಣವು ಸಿಗುತ್ತದೆ.

    ಸೇವಿಸುವ ಆಹಾರದ ಬಗ್ಗೆ ಮಾತನಾಡಿ

    ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ನಿಮ್ಮ ಭವಿಷ್ಯದ ಜೀವನ ಸಂಗಾತಿಯ ಬಳಿ ಸಸ್ಯಾಹಾರಿ ಅಥವಾ ಮಾಂಸಾಹಾರಿಯೇ? ಎನ್ನುವ ಪ್ರಶ್ನೆಗಳನ್ನು ಕೇಳಲೇಬೇಕು. ಇಬ್ಬರ ಆಹಾರ ಹಾಗೂ ಅಭಿರುಚಿಗಳು ಬೇರೆ ಬೇರೆಯಾಗಿದ್ದರೆ ಬದುಕು ಕಷ್ಟವೆನಿಸುತ್ತದೆ.

    ಭವಿಷ್ಯದ ಯೋಜನೆಯ ಬಗ್ಗೆ ಪ್ರಶ್ನಿಸಿ

    ಈಗಿನ ಕಾಲದಲ್ಲಿ ಬಹುತೇಕ ಹುಡುಗಿಯರು ಉದ್ಯೋಗದಲ್ಲಿರುತ್ತಾರೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಕೆಲವೊಮ್ಮೆ ಕೆಲಸಕ್ಕೆ ಹೋಗಲು ಸಾಧ್ಯವಾಗದೇ ಇರಬಹುದು. ಆದರೆ ಕೆಲ ವಿವಾಹದ ಬಳಿಕ ಉದ್ಯೋಗಕ್ಕೆ ಹೋಗಬೇಕು, ಹೀಗೆ ಜೀವನ ನಡೆಯಬೇಕು ಎಂದು ಕೊಂಡಿರುತ್ತಾರೆ. ಪರಸ್ಪರ ಪ್ರಶ್ನಿಸಿ ಉತ್ತರ ಕಂಡುಕೊಂಡರೆ ಇಬ್ಬರಿಗೂ ತಮ್ಮ ಭವಿಷ್ಯದ ಯೋಜನೆಯ ಬಗ್ಗೆ ಸ್ಪಷ್ಟನೆ ಸಿಗುತ್ತದೆ. ಇಬ್ಬರ ಜೀವನದ ಗುರಿಗಳು ವಿರುದ್ಧ ದಿಕ್ಕಿನಲ್ಲಿದ್ದರೆ ಜೊತೆಯಾಗಿ ಬದುಕಲು ಕಷ್ಟವಾಗಬಹುದು. ಈ ಪ್ರಶ್ನೆಯನ್ನು ಮದುವೆಗೂ ಮುಂಚಿತವಾಗಿ ಕೇಳುವುದು ಸೂಕ್ತ.

    LATEST NEWS

    ಸೂರತ್ ನಲ್ಲಿ ಬಹುಮಹಡಿ ಕಟ್ಟಡ ಕುಸಿತ; ಕನಿಷ್ಠ 7 ಮಂದಿ ಸಾ*ವು

    Published

    on

    ಸೂರತ್ : ಗುಜರಾತ್ ನ ಸೂರತ್ ನಲ್ಲಿ ಕಟ್ಟಡ ಕುಸಿತ ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾ*ವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
    ಸೂರತ್ ನಲ್ಲಿ ಸಚಿನ್ ಪಾಲಿ ಗ್ರಾಮದಲ್ಲಿ ದುರಂ*ತ ಸಂಭವಿಸಿದೆ. ಸುಮಾರು 6 ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿದೆ. ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು, ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.


    ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಎಸ್ ಡಿ ಆರ್ ಎಫ್ ತಂಡ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಈ ವರೆಗೂ 7 ಮೃ*ತದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ ಅನೇಕರು ಸಿಲುಕಿರುವ ಸಾಧ್ಯತೆ ಇದೆ. ಅವಶೇಷಗಳ ಅಡಿಯಿಂದ ಒಬ್ಬ ಮಹಿಳೆಯನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ : ಆಗುಂಬೆ : ಯುವತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್; ಕೊಳೆತ ಸ್ಥಿತಿಯಲ್ಲಿ ಶ*ವ ಪತ್ತೆ

    2017 ರಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಐದು ಕುಟುಂಬಗಳು ವಾಸಿಸುತ್ತಿದ್ದವು. ಕಟ್ಟಡವು ಕೇವಲ ಎಂಟು ವರ್ಷಗಳಷ್ಟು ಹಳೆಯದಾಗಿದ್ದರೂ, ಹೆಚ್ಚಿನ ಫ್ಲ್ಯಾಟ್‌ಗಳು ಖಾಲಿ ಮತ್ತು ಶಿಥಿಲಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Continue Reading

    LATEST NEWS

    ಆಗುಂಬೆ : ಯುವತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್; ಕೊಳೆತ ಸ್ಥಿತಿಯಲ್ಲಿ ಶ*ವ ಪತ್ತೆ

    Published

    on

    ಶಿವಮೊಗ್ಗ : ನಾಪತ್ತೆ ಆಗಿದ್ದ ಯುವತಿ ಶ*ವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ (24) ಅವರ ಮೃ*ತದೇಹ ಪತ್ತೆಯಾಗಿದೆ.

    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಭೀಕರವಾಗಿ ಕೊಲೆಗೈದು ಅರಣ್ಯ ಪ್ರದೇಶದಲ್ಲಿ ಶವವನ್ನು ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

    ಇದನ್ನೂ ಓದಿ : ತನ್ನವರ ಶಸ್ತ್ರ ಚಿಕಿತ್ಸೆ ಮಾಡುತ್ತದೆಯಂತೆ ಈ ಜೀವಿ..!

    ಖಾಸಗಿ ಸಂಸ್ಥೆಯಲ್ಲಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 30 ರಂದು ಪೂಜಾ ನಾಪತ್ತೆಯಾಗಿದ್ದಳು. ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಸಲ್ಮಾನ್ ಖಾನ್ ಜೊತೆ ಹುಟ್ಟುಹಬ್ಬ ಆಚರಿಸಿದ ಧೋನಿ..! ಪತಿಯ ಆಶೀರ್ವಾದ ಪಡೆದ ಸಾಕ್ಷಿ ಧೋನಿ

    Published

    on

    ಮುಂಬೈ/ಮಂಗಳೂರು:  ಭಾರತದ ಕ್ಯಾಪ್ಟನ್ ಕೂಲ್ ಮಹಿ ತನ್ನ 43 ನೇ ಹುಟ್ಟುಹಬ್ಬವನ್ನು ಬಾಲಿವುಡ್ ಬಾದ್‌ಶಾ ಸಲ್ಮಾನ್ ಖಾನ್ ಜೊತೆ ಆಚರಿಸಿಕೊಂಡಿದ್ದಾರೆ. ಸತತ ಮೂರು ಬಾರಿ ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಎಲ್ಲರ ಫೇವರೆಟ್ ಕ್ರಿಕೆಟರ್. ಮೈದಾನದಲ್ಲಿ ಮಾತ್ರವಲ್ಲದೇ ತಮ್ಮ ದೈನಂದಿನ ಜೀವನದಲ್ಲೂ ತುಂಬಾನೇ ಕೂಲ್ ಆಗಿರ್ತಾರಂತೆ ದೋನಿ. ಇದೀಗ ತಮ್ಮ ಹುಟ್ಟುಹಬ್ಬವನ್ನು ಸಲ್ಮಾನ್ ಖಾನ್ ರವರ ಜೊತೆ ಆಚರಿಸಿಕೊಂಡಿದ್ದು ಇವರಿಬ್ಬರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

    ಪೋಸ್ಟ್ ಹಾಕಿ ವಿಶ್ ಮಾಡಿದ ಸಲ್ಮಾನ್‌

    ಸಲ್ಮಾನ್ ಖಾನ್ ತನ್ನ ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಂ ನಲ್ಲಿ ಧೋನಿ ಸಲ್ಮಾನ್ ಜೊತೆಗೆ ಕೇಕ್ ಕತ್ತರಿಸುವ ಫೊಟೋವನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ “ಹ್ಯಾಪಿ ಬರ್ತ್‌ಡೇ ಕ್ಯಾಪ್ಟನ್ ಸಾಹೇಬ್” ಎಂದು ಬರೆದು ಧೋನಿಯನ್ನು ಟ್ಯಾಗ್ ಮಾಡಿದ್ದಾರೆ.

    ಪತಿಯ ಪಾದ ಮುಟ್ಟಿ ಆಶೀರ್ವಾದ ಪಡೆದ ಸಾಕ್ಷಿ ಧೋನಿ

    ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆ ಪೂರ್ವ ಸಮಾರಂಭದ ಸಂಗೀತ ಕಾರ್ಯಕ್ರಮದಲ್ಲಿ ಧೋನಿ ಹಾಗೂ ಅವರ ಪತ್ನಿ  ಪಾಲ್ಗೊಂಡಿದ್ದರು. ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ನಟ, ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ದಿನ ರಾತ್ರಿ  ಪತ್ನಿ ಸಾಕ್ಷಿರವರು ದೋನಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಕೂಡಾ ಜೊತೆಗಿದ್ದು ವಿಶ್ ಮಾಡಿದ್ದಾರೆ. ಕೇಕ್ ಕಟ್‌ ಮಾಡಿ ಮೊದಲು ಪತ್ನಿ ಸಾಕ್ಷಿ ತನ್ನಿಸಿದ್ದಾರೆ. ಬಳಿಕ ಸಲ್ಮಾನ್ ಖಾನ್ ಗೆ ಕೇಕ್ ತಿನ್ನಿಸಿದ್ದಾರೆ. ಈ ವೇಳೆ ಧೋನಿ ಪತ್ನಿ ಪತಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದರ ಮೂಲಕ ಭಾರತೀಯ ಸಂಸ್ಕೃತಿ ಮೆರೆದಿದ್ದಾರೆ.

    ತಾಯ್ನಾಡಿಗೆ ಬಂದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ..! ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾದ ಮುಂಬೈ

    ಅಭಿಮಾನಿಗಳಿಂದ ಕಟೌಟ್ ಹಾಕಿ ಸಂಭ್ರಮಾಚರಣೆ

    ಇನ್ನೂ ಮಹೇಂದ್ರ ಸಿಂಗ್ ಧೋನಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಇವರಿಗೆ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಇವರನ್ನು ಕ್ರಿಕೆಟ್ ದೇವರೆಂದೂ ಪೂಜಿಸುವವರೂ ಕೂಡಾ ಇದ್ದಾರೆ.  ಮಹೇಂದ್ರ ಸಿಂಗ್​ ಧೋನಿ ಅವರು ಟೀಮ್​ ಇಂಡಿಯಾದ ಬ್ಲೂ ಜೆರ್ಸಿಯಲ್ಲಿ ಬ್ಯಾಟ್​ ಹಿಡಿದ ಬರೋಬ್ಬರಿ 52 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದಾರೆ. ಸದ್ಯ ಧೋನಿಯ ಈ ಕಟೌಟ್​ ಫೋಟೋವನ್ನು ಅಂತರ್ಜಾಲದಲ್ಲಿ ಕೊಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಕಳೆದ ಬಾರಿಯೂ ಕೂಡ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಧೋನಿಯ 43ನೇ ಜನ್ಮದಿನದ ಗೌರವಾರ್ಥವಾಗಿ 43 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು. ಕೇರಳದಲ್ಲಿಯೂ 2018 ರಲ್ಲಿ 35 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು.

    Continue Reading

    LATEST NEWS

    Trending