LATEST NEWS
ಮನೆಯಲ್ಲಿ ಕನ್ನಡಿ ಯಾವ ದಿಕ್ಕಿಗೆ ಇದ್ರೆ ಶುಭ, ಯಾವ ದಿಕ್ಕಿಗೆ ಇಡುವಂತಿಲ್ಲ..!
ಮಂಗಳೂರು: ವಾಸ್ತುವಿನಲ್ಲಿ ಯಾವುದೇ ದೋಷವಿದ್ದರೂ ಕನ್ನಡಿಯ ಸಹಾಯದಿಂದ ಅದನ್ನು ಪರಿಹರಿಸಲು ಸಾಧ್ಯವೇ ಎಂಬ ಪ್ರಶ್ನೆ ನಿಮ್ಮನ್ನು ಈಗ ಕಾಡುತ್ತಿರಬಹುದು. ಆದರೆ ವಾಸ್ತು ನಿಯಮಗಳನ್ನ ಅನುಸರಿಸುವ ಮೂಲಕ ಕನ್ನಡಿಯಿಂದ ವಾಸ್ತುದೋಷವನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಹಾಗಾದರೆ ಕನ್ನಡಿಯನ್ನು ಯಾವ ದಿಕ್ಕಿಗೆ ಇಡಬೇಕು ಇದರ ವಿವರ ಇಲ್ಲಿದೆ.
ಪ್ರತಿಯೊಂದು ಮನೆಯಲ್ಲಿಯೂ ಕನ್ನಡಿ ಇದ್ದೇ ಇರುತ್ತದೆ. ಆದರೆ ಅದನ್ನು ಯಾವ ದಿಕ್ಕಿನಲ್ಲಿ ಇಡಬೇಕೆಂಬುದು ಬಹು ಮುಖ್ಯ. ಕನ್ನಡಿಗಳು ಸುಲಭವಾಗಿ ಧನಾತ್ಮಕ ಶಕ್ತಿಯನ್ನಾಗಲಿ ಅಥವಾ ಋಣಾತ್ಮಕ ಶಕ್ತಿಯನ್ನಾಗಲಿ ಆಕರ್ಷಿಸಿಕೊಳ್ಳುತ್ತದೆ. ಮಾತ್ರವಲ್ಲದೆ ಅದನ್ನು ಪ್ರತಿಪಲಿಸುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಅದನ್ನು ಬಳಸಬೇಕು. ಯಾವುದೇ ಕಟ್ಟಡದಲ್ಲಿನ ಕೆಟ್ಟ ಫಲಗಳನ್ನು ಕನ್ನಡಿಯ ಸಹಾಯದಿಂದ ಸುಲಭವಾಗಿ ಸರಿಪಡಿಸಬಹುದು. ಕನ್ನಡಿಯ ಅಳತೆಯು ದೊಡ್ಡದಾಗಿದ್ದಷ್ಟು ನಾವು ಹೆಚ್ಚಿನ ಮಟ್ಟದಲ್ಲಿ ಶುಭಫಲಗಳನ್ನು ಪಡೆಯಬಹುದು.
ಕನ್ನಡಿ ಯಾವ ದಿಕ್ಕಿಗೆ ಇದ್ರೆ ಉತ್ತಮ
ಪೂರ್ವ ದಿಕ್ಕಿನಲ್ಲಿ ಉಪಯೋಗಿಸುವ ಕನ್ನಡಿಯು ಆಯತಾಕಾರವಾಗಿರಬೇಕು.ಇದನ್ನು ಕಟ್ಟಿಗೆಯ ಚೌಕಟ್ಟಿಗೆ ಹೊಂದಿಸುವುದು ಒಳ್ಳೆಯದು. ಸಾಧ್ಯವಿಲ್ಲದೆ ಹೋದಲ್ಲಿ ತಿಳಿ ಹಸಿರು ಬಣ್ಣದ ಪ್ಲಾಸ್ಟಿಕ್ ಚೌಕಟ್ಟಿನಲ್ಲಿ ಇದನ್ನು ಹೊಂದಿಸಬಹುದು. ಪೂರ್ವ ದಿಕ್ಕಿನಲ್ಲಿ ಕನ್ನಡಿಯನ್ನು ಇರಿಸಿದಾಗ ಆ ದಿಕ್ಕು ಬೆಳೆದಂತೆ ಕಾಣುತ್ತದೆ. ಯಾವುದೇ ಕಟ್ಟಡವಾದರೂ ಪೂರ್ವ ದಿಕ್ಕು ಹೆಚ್ಚಾಗಿದ್ದಲ್ಲಿ ವಾಸ್ತು ಬಲವು ಹೆಚ್ಚುತ್ತದೆ. ಇದರಿಂದ ಕುಟುಂಬದ ಜನರ ಮುಖ್ಯವಾಗಿ ಕುಟುಂಬದ ಯಜಮಾನನ ಆರೋಗ್ಯದಲ್ಲಿ ಸ್ಥಿರತೆ ಕಂಡು ಬರುತ್ತದೆ.
ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸಿದರು ಹೆಚ್ಚಿನ ಪರಿಶ್ರಮವಿಲ್ಲದೆ ಕುಟುಂಬದವರ ಅಥವಾ ಆತ್ಮೀಯರ ಸಹಕಾರದಿಂದ ಯಶಸ್ವಿಯಾಗುತ್ತದೆ. ಕನ್ನಡಿಯನ್ನು ಪೂರ್ವ ದಿಕ್ಕಿನ ಗೋಡೆಯ ಮಧ್ಯಭಾಗದಲ್ಲಿ ಹಾಕಬಹುದು. ಪೂರ್ವ ಮತ್ತು ಉತ್ತರ ದಿಕ್ಕಿನ ಹತ್ತಿರ ಕನ್ನಡಿಯನ್ನು ಹಾಕಬಹುದು. ಇದರಿಂದ ದೇವಮೂಲೆ ಬೆಳೆದಂತೆ ಆಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಪೂರ್ವ ಮತ್ತು ದಕ್ಷಿಣ ಗೋಡೆಗೆ ಹತ್ತಿರವಾಗಿ ಕನ್ನಡಿಯನ್ನು ಹಾಕಬಾರದು.
ಯಾವ ದಿಕ್ಕಿನಲ್ಲಿ ಕನ್ನಡಿ ಇಡುವಂತಿಲ್ಲ
ದಕ್ಷಿಣ ದಿಕ್ಕಿನಲ್ಲಿ ಸಾಮಾನ್ಯವಾಗಿ ಕನ್ನಡಿಯನ್ನು ಇಡಬಾರದು. ಆದರೆ ಅನಿವಾರ್ಯವಾದ ಪಕ್ಷದಲ್ಲಿ ಮಾತ್ರ ತ್ರಿಕೋನದ ಆಕಾರದಲ್ಲಿರುವ ಕನ್ನಡಿಯನ್ನು ಇರಿಸಬಹುದು. ಆದರೆ ಇದರ ಚೌಕಟ್ಟು ಕೆಂಪು ಬಣ್ಣದ ಮರದಿಂದ ಮಾಡಿರಬೇಕು. ಸಾಧ್ಯವಿಲ್ಲದೆ ಹೋದಲ್ಲಿ ತಿಳಿ ಕೆಂಪು ಬಣ್ಣದ ಪ್ಲಾಸ್ಟಿಕ್ ಚೌಕಟ್ಟನ್ನು ಹೊಂದಿರಬೇಕು. ಸಾಧ್ಯವಾದಷ್ಟು ಈ ಕನ್ನಡಿಯು ಪೂರ್ವದ ಗೋಡೆಯ ಕಡೆ ಇರಬೇಕು. ಯಾವುದೇ ಕಾರಣಕ್ಕೂ ಈ ಕನ್ನಡಿಯು ಪಶ್ಚಿಮದ ಗೋಡೆಯನ್ನು ಸ್ಪರ್ಶಿಸಬಾರದು.
ದಕ್ಷಿಣ ದಿಕ್ಕಿನ ಗೋಡೆಗೆ ಹಾಕಿರುವ ಕನ್ನಡಿಯಲ್ಲಿ ಯಾವುದೇ ಲೋಪವು ಕಂಡು ಬಂದರೆ ಕುಟುಂಬದ ಯಜಮಾನ ಅಥವಾ ಯಜಮಾನಿಗೆ ತೊಂದರೆಯಾಗುತ್ತದೆ. ಆದ್ದರಿಂದ ಎಚ್ಚರಿಕೆ ವಹಿಸುವುದು ಅತಿ ಮುಖ್ಯ. ದಕ್ಷಿಣ ದಿಕ್ಕಿನಲ್ಲಿ ಹಾಕಿರುವ ಕನ್ನಡಿಯನ್ನು ನೋಡಿಕೊಂಡು ತಲೆ ಬಾಚಬಾರದು. ಮುಖ್ಯವಾಗಿ ಸ್ತ್ರೀಯರು ಈ ಕನ್ನಡಿಯನ್ನು ಬಳಸಲೇಬಾರದು. ಇಲ್ಲಿನ ಕನ್ನಡಿಯ ಹಿಂಭಾಗದಲ್ಲಿ ಹಸಿರು ಸಸ್ಯಗಳು, ಹರಿಯುವ ನದಿ, ಸರೋವರ, ಮಂಜುಗಡ್ಡೆ ಇರದ ಪರ್ವತಗಳ ಚಿತ್ರಗಳಿದ್ದರೆ ಶುಭಫಗಳು ಅಧಿಕ ಪ್ರಮಾಣದಲ್ಲಿ ದೊರೆಯುತ್ತವೆ.
DAKSHINA KANNADA
ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ
ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.
ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.
ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
LATEST NEWS
ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ
ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.
ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.
LATEST NEWS
ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.
- DAKSHINA KANNADA6 days ago
ಫುಟ್ ಬೋರ್ಡ್ನಲ್ಲಿ ನೇತಾಡಿ ಪ್ರಯಾಣಿಸಿದ ವಿದ್ಯಾರ್ಥಿಗಳು; ಬಸ್ ಸೀಝ್
- LATEST NEWS3 days ago
ಆಪಲ್ ಮೊಬೈಲ್ ವಿರುದ್ಧ ಗ್ರಾಹಕರ ಪ್ರತಿಭಟನೆ
- International news3 days ago
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
- BELTHANGADY6 days ago
ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ