FILM
ಬಿಗ್ ಬಾಸ್ ಕನ್ನಡ ಸೀಸನ್ 11 ರ ನಿರೂಪಕ ಯಾರು..? ಬಯಲಾಯ್ತು ರಹಸ್ಯ..!
ಮಂಗಳೂರು/ಬೆಂಗಳೂರು : ಕನ್ನಡದ ಬಿಗ್ ಬಾಸ್ ಸೀಸನ್ 11 ಶೀಘ್ರದಲ್ಲೇ ಶುರುವಾಗಲಿದ್ದು, ಸ್ಪರ್ಧಿಗಳ ಬಗ್ಗೆ ಹಾಗೂ ನಿರೂಪಕರ ವಿಚಾರದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆದ ಬೆನ್ನಲ್ಲೇ, ಸುದೀಪ್ ಈ ಬಾರಿ ನಿರೂಪಣೆ ಮಾಡುವುದಿಲ್ಲ ಎಂಬ ಸುದ್ದಿ ಹರಿದಾಡಿತ್ತು.
ಸೆಪ್ಟೆಂಬರ್ ಅಂತ್ಯಕ್ಕೆ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಬಿಗ್ಬಾಸ್ ಕನ್ನಡ ಸೀಸನ್ 11 ಆರಂಭವಾಗಲಿದೆ. ಯೂಟ್ಯೂಬರ್ ವರ್ಷಾ ಕಾವೇರಿ , ಕಿರುತೆರೆ ನಟ ವರುಣ್ ಆರಾಧ್ಯ, ಕಾಮಿಡಿ ಕಿಲಾಡಿಯಲ್ಲಿ ಮಿಂಚುತ್ತಿರುವ ತುಕಾಲಿ ಸಂತು ಪತ್ನಿ ಮಾನಸ ಸೇರಿದಂತೆ ಹಲವರ ಹೆಸರುಗಳು ಕೇಳಿ ಬಂದಿದೆ. ಕಿರುತೆರೆ, ಸಿನೆಮಾ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿನ ವ್ಯಕ್ತಿಗಳು ಬಿಗ್ ಬಾಸ್ ಮನೆಯನ್ನು ಪ್ರವೇಶಿಸಲಿದ್ದಾರೆ. ಸಾಮಾನ್ಯವಾಗಿ ವಿವಾದಾತ್ಮಕ ವ್ಯಕ್ತಿಗಳಿಗೆ ಬಿಗ್ ಬಾಸ್ನಲ್ಲಿ ಮೊದಲ ಸ್ಥಾನ ಇರಲಿದ್ದು, ಅಂತವರೇ ಬಿಗ್ ಬಾಸ್ ಹೌಸ್ ಪ್ರವೇಶಿಸಲಿದ್ದಾರೆ. ಆದ್ರೆ ಬಿಗ್ ಬಾಸ್ 11 ರ ನಿರೂಪಣೆಯಿಂದ ಸುದೀಪ್ ದೂರ ಉಳಿಯಲಿದ್ದಾರೆ ಅನ್ನೋ ಗಾಸಿಪ್ಗೆ ಈಗ ತೆರೆ ಬಿದ್ದಿದೆ.
ಫೋಟೋ ವೈರಲ್ :
ಕಳೆದ ಹತ್ತು ಸೀಸನ್ನಲ್ಲಿ ತನ್ನ ವಿಭಿನ್ನ ಶೈಲಿಯ ನಿರೂಪಣೆ ಮೂಲಕ ಸ್ಪರ್ಧಿಗಳನ್ನು ಹಾಗೂ ಪ್ರೇಕ್ಷಕರನ್ನು ಹಿಡಿದಿಟ್ಟಿದ್ದ ಸುದೀಪ್ ಹನ್ನೊಂದನೇ ಸೀಸನ್ನಲ್ಲೂ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ 11 ರ ಪ್ರೋಮೋ ಶೂಟ್ ಮಾಡಲಾಗಿದ್ದು, ಇದರ ಫೋಟೋ ಒಂದು ಲೀಕ್ ಆಗಿದೆ. ಹೀಗಾಗಿ ಸುದೀಪ್ ಬಿಗ್ ಬಾಸ್ 11 ರ ನಿರೂಪಣೆಯಿಂದ ದೂರ ಉಳಿತಾರೆ ಅನ್ನೋ ಗಾಸಿಪ್ಗೆ ತೆರೆ ಬಿದ್ದಿದೆ.
ಇದನ್ನೂ ಓದಿ : ಖ್ಯಾತ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು
ಬಿಗ್ ಬಾಸ್ ಸೀಸನ್ 10 ಭರ್ಜರಿ ಟಿಆರ್ಪಿ ಪಡೆದುಕೊಂಡು ಕೋಟ್ಯಂತರ ವೀಕ್ಷಕರನ್ನು ಸೆಳೆದಿತ್ತು. ಇದೀಗ ಮತ್ತೆ ಸುದೀಪ್ ನಿರೂಪಣೆ ಮಾಡಲಿದ್ದಾರೆ ಅನ್ನೋ ಸುದ್ದಿ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.
FILM
ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!
ಬೆಂಗಳೂರು/ಮಂಗಳೂರು: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನವಾಗಿದೆ. 21 ವರ್ಷ ಪ್ರಾಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕೊರಿಯೋಗ್ರಾಫರ್ ಬಂಧನವಾಗಿದೆ.
ಇತ್ತೀಚಿಗೆ ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಸ್ಟರ್ ವಿರುದ್ಧ 21 ವರ್ಷದ ಸಹಾಯಕ ಡ್ಯಾನ್ಸರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿ, ತೆಲುಗು, ಕನ್ನಡ, ತಮಿಳು ಸಿನೆಮಾಗಳಿಗೆ ಮಾತ್ರವಲ್ಲದೆ ಸ್ಟಾರ್ ನಟರಿಗೆ ಕೊರಿಯೋಗ್ರಫಿ ಮಾಡಿರುವ ಕೋರಿಯೋಗ್ರಾಫರ್ ಇದೀಗ ಬಂಧನಕ್ಕೊಳಗಾಗಿದ್ದಾರೆ.
ಏನಿದು ಘಟನೆ?
ಯುವತಿಯ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರ ಮೇಲೆ ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ.
ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ
ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್ಐಆರ್ ಕೂಡ ದಾಖಲಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.
FILM
ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ
ಮಂಗಳೂರು/ಮುಂಬೈ : ನಟ ಸಲ್ಮಾನ್ ಖಾನ್ ತಂದೆ, ಹಿರಿಯ ಸಾಹಿತಿ ಸಲೀಂ ಖಾನ್ ಅವರಿಗೆ ವಾಕಿಂಗ್ ವೇಳೆ ಮಹಿಳೆಯೊಬ್ಬರು ಬೆದರಿ*ಕೆ ಹಾಕಿದ್ದಾರೆ ಎನ್ನಲಾಗಿದೆ. ಮುಂಜಾನೆಯ ವಾಕಿಂಗ್ ಸಮಯದಲ್ಲಿ ಮಹಿಳೆಯೊಬ್ಬಳು ಡಾನ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿ*ಕೆ ಹಾಕಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಕಿಂಗ್ ವೇಳೆ ಹತ್ತಿರಕ್ಕೆ ಬಂದಿದ್ದ ಮಹಿಳೆ ಸಲೀಂ ಖಾನ್ ಅವರಿಗೆ, ಸರಿಯಾಗಿ ನಡೆದುಕೊಳ್ಳಿ, ಇಲ್ಲದೆ ಇದ್ದರೆ ಸಲ್ಮಾನ್ ಖಾನ್ ಅವರಿಗೆ ಕೊ*ಲೆ ಬೆದರಿ*ಕೆ ಹಾಕಿರುವ ಡಾನ್ ಲಾರೆನ್ಸ್ಗೆ ಕರೆ ಮಾಡುವುದಾಗಿ ಹೇಳಿದ್ದಾಗಿ ದೂರು ನೀಡಲಾಗಿದೆ. ಮಹಿಳೆ ಯಾರು? ಎಲ್ಲಿಂದ ಬಂದವಳು ? ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಸಲ್ಮಾನ್ ಖಾನ್ ನಗರದಿಂದ ಹೊರಟ ಕೆಲವೇ ಗಂಟೆಯಲ್ಲಿ ಈ ಘಟನೆ ನಡೆದಿದೆ
ಎಪ್ರಿಲ್ ತಿಂಗಳಲ್ಲಿ ಸಲ್ಮಾನ್ ಖಾನ್ ಅವರ ಬಾಂದ್ರದ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಗುಂಡಿನ ದಾ*ಳಿ ನಡೆಸಲಾಗಿತ್ತು. ಇದು ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಮಾಡಿರುವುದಾಗಿ ಫೇಸ್ಬುಕ್ನಲ್ಲಿ ಹೇಳಿಕೊಂಡಿದ್ದ. ಸಲ್ಮಾನ್ ಖಾನ್ ವಿಚಾರಣೆಯ ವೇಳೆಯಲ್ಲಿ ತನ್ನ ಕುಟುಂಬಕ್ಕೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿ*ಕೆ ಇದೆ ಎಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿ : ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾ*ರ ಕೇಸ್ ದಾಖಲು
ಇದೀಗ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಕುಟುಂಬಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆ ಯಾರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.
FILM
ಮೊದಲ ಬಾರಿಗೆ ದರ್ಶನ್ ಭೇಟಿಗೆ ಬಂದ ತಾಯಿ..! ದರ್ಶನ್ಗಾಗಿ ತಾಯಿ ತಂದಿದ್ದೇನು ಗೊತ್ತಾ?
ಮೈಸೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಬಿಡುಗಡೆ ಭಾಗ್ಯ ಇನ್ನೂ ದೊರೆತಿಲ್ಲ. ಇನ್ನು ಜೈಲಲ್ಲಿರುವ ದರ್ಶನ್ ಭೇಟಿಗೆ ಚಿತ್ರರಂಗದ ನಟ ನಟಿಯರು ಭೇಟಿ ನೀಡುತ್ತಿದ್ದಾರೆ. ಕೆಲ ದಿನಗಳ ಹಿಂದ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪ ಅವರಲ್ಲಿ ತಾಯಿಯಯನ್ನು ಕಾಣುವ ಹಂಬಲ ವ್ಯಕ್ತಪಡಿಸಿದ್ದರು. ಈ ಹಿಂದೆಯೇ ತಾಯಿ ಮೀನಾ ಕೂಡಾ ದರ್ಶನ್ ಭೇಟಿ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ.
ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ಸೆ.30ರವರೆಗೆ ಜೈಲೇ ಗತಿ
ಇದೀಗ ದರ್ಶನ್ ತಾಯಿ ಮೀನಾ ತೂಗುದೀಪ ಹಾಗೂ ಅಕ್ಕ, ಭಾವ ಮತ್ತು ಅವರ ಮಕ್ಕಳು ಕೇಂದ್ರ ಕಾರಾಗ್ರಹಕ್ಕೆ ಭೇಟಿ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದಾಗ ದರ್ಶನ್ರನ್ನು ಕಾಣಲು ಮಗ ದಿನಕರ್ ತೂಗುದೀಪ ಜೊತೆ ಬಂದಿದ್ದರು. ಬಳ್ಳಾರಿ ಜೈಲಿಗೆ ಇದೇ ಮೊದಲ ಬಾರಿಗೆ ತಾಯಿ ಮೀನಾ ತೂಗುದೀಪ ಬಂದಿದ್ದಾರೆ. ಮಗನನ್ನು ಕಾಣುವ ತವಕದಲ್ಲಿ ತನ್ನ ಮಗಳ ಜೊತೆಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ.
ದರ್ಶನ್ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ. ಮಡದಿ ವಿಜಯಲಕ್ಷ್ಮೀ, ಸ್ನೇಹಿತರು ಈಗಾಗಲೇ ದರ್ಶನ್ರನ್ನು ಭೇಟಿ ಮಾಡಿದ್ದಾರೆ. ಆದರೆ ಬೆಂಗಳೂರಿನಿಂದ ಬಳ್ಳಾರಿಗೆ 300ಕಿಮೀ ಅಂತರವಿರುವ ಕಾರಣ ತಾಯಿ ಮೀನಾ ತೂಗುದೀಪ್ ದರ್ಶನ್ರನ್ನು ಭೇಟಿ ಮಾಡಿರಲಿಲ್ಲ.
- DAKSHINA KANNADA7 days ago
ಫುಟ್ ಬೋರ್ಡ್ನಲ್ಲಿ ನೇತಾಡಿ ಪ್ರಯಾಣಿಸಿದ ವಿದ್ಯಾರ್ಥಿಗಳು; ಬಸ್ ಸೀಝ್
- LATEST NEWS4 days ago
ಆಪಲ್ ಮೊಬೈಲ್ ವಿರುದ್ಧ ಗ್ರಾಹಕರ ಪ್ರತಿಭಟನೆ
- International news4 days ago
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
- BELTHANGADY7 days ago
ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ
Pingback: ಅಮೆರಿಕಾದಲ್ಲಿ ತರಬೇತಿ ಮುಗಿಸಿ ವಾಪಾಸಾದ ವೈದ್ಯ ಆತ್ಮಹ*ತ್ಯೆ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್