Connect with us

NATIONAL

ಕೋವಿಡ್‌ನಿಂದ ವಿಧವೆಯಾದ ಅತ್ತಿಗೆಗೆ ಬಾಳು ಕೊಟ್ಟ ಮೈದುನ

Published

on

ಮಹಾರಾಷ್ಟ್ರ: ಕೋವಿಡ್​​ನಿಂದ ಪತಿ ಸಾವನ್ನಪ್ಪಿದ್ದರಿಂದ ತಬ್ಬಲಿಯಾಗಿದ್ದ ಪುಟ್ಟ ಮಗು ಹಾಗೂ ವಿಧವೆಗೆ ಪತಿಯ ಸಹೋದರ ಹೊಸ ಬಾಳು ನೀಡಿದ ಅಪರೂಪದ ಘಟನೆ ಮಹಾರಾಷ್ಟ್ರದ ಅಹಮದ್​​ನಗರದ ಅಕೋಲೆ ತಾಲೂಕಿನಲ್ಲಿ ನಡೆದಿದೆ.

ಗಂಡನನ್ನು ಕಳೆದುಕೊಂಡ ಯುವತಿಯ ಬಾಳಿಗೆ ಆತನ ಸಹೋದರನೇ ಮತ್ತೆ ಆಧಾರ ಕಂಬವಾದ ಈ ಆದರ್ಶ ವಿವಾಹ ಗ್ರಾಮಸ್ಥರಲ್ಲಿ ಖುಷಿ ತಂದಿದೆ.

ಅಕೋಲೆ ತಾಲೂಕಿನ ಧೋಕ್ರಿಯ ನೀಲೇಶ್ ಶೇಟೆ (31) ಕೋವಿಡ್​ನಿಂದಾಗಿ ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ಸಾವನ್ನಪ್ಪಿದ್ದರು.
ಪತಿಯ ಸಾವಿನಿಂದಾಗಿ ಹೆಂಡತಿ, ಮಗಳು ಅಸಹಾಯಕರಾಗಿದ್ದು, 19 ತಿಂಗಳ ಮಗಳು ಹಾಗೂ ಪತ್ನಿ ಪೂನಂ ಗಂಡನ ಅನುಪಸ್ಥಿತಿಯಲ್ಲಿ ಅನೇಕ ಕಷ್ಟಗಳನ್ನು ಎದುರಿಸುತ್ತಾರೆ.

ನಂತರ ವಿಧವೆಯ ಬಾಳಿಗೆ ಕೈಹಿಡಿದ ಗಂಡ ನಿಲೇಶ್​ನ ಸಹೋದರ ಕೋವಿಡ್​ನಿಂದ ನೀಲೇಶ್​ ಸಾವನ್ನಪ್ಪುತ್ತಿದ್ದಂತೆ ಆತನ ಸಹೋದರ ಸಮಾಧಾನ್​ (23) ಪೂನಂ ಜೊತೆ ಮರು ವಿವಾಹ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸುತ್ತಾರೆ.

ಇವರು ವಸತಿ ಶಾಲೆಯಲ್ಲಿ ಉದ್ಯೋಗಿಯಾಗಿದ್ದು ಗ್ರಾಮದ ಹಿರಿಯರು, ಎರಡು ಕುಟುಂಬದವರು ಮದುವೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದು, ಕಳೆದ ಎರಡು ದಿನಗಳ ಹಿಂದೆ ಸರಳ ಮದುವೆ ಸಮಾರಂಭ ನಡೆದಿದೆ.

ಅಕೋಲಾದ ಖಂಡೋಬಾ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನಡೆದಿದ್ದು, ಸಮಾಧಾನ್ ಇದೀಗ ಪೂನಂ ಜೊತೆ ಸಪ್ತಪದಿ ತುಳಿದಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದಿರುವ ಈ ಆದರ್ಶ ಮದುವೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 

LATEST NEWS

ಈ ಬೀಚ್‌ಗಳಿಗೆ ಬಟ್ಟೆ ಧರಿಸಿ ಹೋಗುವಂತಿಲ್ಲ…!

Published

on

ಮಂಗಳೂರು : ಸುಂದರವಾದ ಹಾಗೂ ಪ್ರವಾಸಿಗರನ್ನು ಸೆಳೆಯುವ ಬೀಚ್‌ಗಳು ಯಾವುದು ಅಂತ ಕೇಳಿದ್ರೆ ನಮ್ಮಲ್ಲಿ ನೆನಪಾಗೋದು ಗೋವಾದ ಬೀಚ್‌ಗಳು. ವಿದೇಶಿಯರು ಹೆಚ್ಚಾಗಿ ಬರೋ ಗೋವಾ , ಗೋಕರ್ಣ ಮೊದಲಾ ಬೀಚ್‌ ಹೋದವರಿಗೆ ಅಲ್ಲಿ ಬಿಕಿನಿಯಲ್ಲಿ ಕಾಣಿಸೋ ವಿದೇಶಿ ಮಹಿಳೆಯರು ಗಮನಸೆಳೆಯುತ್ತಾರೆ. ಆದ್ರೆ ಅಂತಹ ಬೀಚ್‌ಗಳ ಸಾಲಿನಲ್ಲಿ ಬರೋ ಕೆಲ ಬೀಚ್‌ಗಳಲ್ಲಿ ಮಹಿಳೆಯರು ಹಾಗೂ ಪುರುಷರು ಬಟ್ಟೆನೇ ಹಾಕದೆ ತಿರುಗಾಡ್ತಾರೆ. ಇಂತಹ ಬೀಚ್‌ಗಳು ಬತ್ತಲೆ ಬೀಚ್ ಅಂತಾನೇ ಫೇಮಸ್‌. ಅಂತಹ ಬೀಚ್‌ಗಳು ಯಾವುದು ಅನ್ನೋ ಡಿಟೈಲ್ ಇಲ್ಲಿದೆ.

ಸಂಪೂರ್ಣ ಬೆತ್ತಲಾಗಿ ಜನರು  ಸೆಲೆಬ್ರೇಟ್ ಮಾಡೋ ಸಾಕಷ್ಟು ಉತ್ಸವಗಳ ವಿದೇಶಗಳಲ್ಲಿ ಹಲವೆಡೆ ನಡೆಯುತ್ತದೆ. ಅದೇ ರೀತಿ ಬೀಚ್‌ಗಳಲ್ಲೂ ಬೆತ್ತಲಾಗಿ ತಿರುಗಾಡೋ ಸಂಸ್ಕೃತಿಯನ್ನು ವಿದೇಶದ ಹಲವು ದೇಶಗಳಲ್ಲಿ ನಾವು ಕಾಣಬಹುದಾಗಿದೆ. ಅಂತಹ ಬೀಚ್‌ಗಳ ಲಿಸ್ಟ್ ಇಲ್ಲಿದೆ.

1. ಲುಕಾಟ್ ಬೀಚ್:

ಇಲ್ಲಿ ಬಟ್ಟೆ ಧರಿಸದೇ ಪೂರ್ಣವಾಗಿ ಬೆತ್ತಲೆ ದೇಹದಿಂದ ಅಲ್ಲಿಯ ಪ್ರಕೃತಿಯನ್ನು ಜನರು ಆನಂದಿಸುತ್ತಾರೆ. ಈ  ಬೀಚ್ ಫ್ರಾನ್ಸ್‌ ದೇಶದಲ್ಲಿದ್ದು ಈ ಬೀಚ್‌ ಹೆಸರು ಲುಕಾಟ್ ಬೀಚ್. ಮೆಡಿಟರೇನಿಯನ್ ಸಮುದ್ರದ ಪಕ್ಕದಲ್ಲಿರುವ ಈ ಕಡಲತೀರದಲ್ಲಿ ನಗ್ನತೆಗೆ ಯಾವುದೇ ಮಿತಿ ಇಲ್ಲ. ಇಲ್ಲಿ ಯಾರು ಬೇಕಾದರೂ ಬೆತ್ತಲೆಯಾಗಿ ತಿರುಗಾಡಬಹುದು ಮತ್ತು ಯಾರೂ ಯಾರನ್ನೂ ಗಮನಿಸೋದಿಲ್ಲ ಅನ್ನೋದೇ ವಿಶೇಷ.

2. ವಲಾಲ್ಟಾ ಬೀಚ್:

ಕ್ರೊಯೇಷಿಯಾದ ವಲಾಲ್ಟಾ ತುಂಬಾ ಸ್ವಚ್ಛವಾದ ಕಡಲತೀರವಾಗಿದ್ದು,ಈ ಬೀಚ್​ಗೆ ಹೆಚ್ಚಿನ ಸಂಖ್ಯೆಯಲ್ಲಿ ಯುರೋಪಿನ ಪ್ರವಾಸಿಗರು ಭೇಟಿ ನೀಡುತ್ತಾರೆ. ಯುರೋಪ್ ಅಲ್ಲದೆ ಜಗತ್ತಿನ ವಿವಿಧ ದೇಶಗಳ ಪ್ರವಾಸಿಗರು ಇಲ್ಲಿಗೆ ಬಂದು ಬಟ್ಟೆ ಇಲ್ಲದೆ ಸಮುದ್ರದಲ್ಲಿ ಮೋಜು ಮಸ್ತಿ ಮಾಡುತ್ತಾರೆ.

3. ಬೆಲ್ಲೆವ್ಯೂ ಬೀಚ್:

ಡೆನ್ಮಾರ್ಕ್‌ನ ಬೆಲ್ಲೆವ್ಯೂ ಬೀಚ್ ಪ್ರಪಂಚದ ಪ್ರಸಿದ್ಧ ಬೆತ್ತಲೆ ಬೀಚ್‌ಗಳಲ್ಲಿ ಒಂದಾಗಿದೆ. ಇಲ್ಲಿ ಯಾರೂ ಹೇಗೆ ಬೇಕಾದ್ರೂ ಇರಬಹುದು. ಆದರೆ ಅನ್ಯರಿಗೆ ಯಾವುದೇ ತೊಂದರೆ ಮಾಡುವಂತಿಲ್ಲ. ಇಲ್ಲಿಯ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

4. ಕಾರ್ನಿಗ್ಲಿಯಾ ಬೀಚ್:

ಇಟಲಿಯು ಕಾರ್ನಿಗ್ಲಿಯಾ ಬೀಚ್ ಕಡಲತೀರಗಳಿಗೆ ಪ್ರಸಿದ್ಧಿಯಾಗಿದೆ. ಈ ಕಡಲತೀರವನ್ನು ತಲುಪಲು ಸುರಂಗದ ಮೂಲಕ ಹೋಗಬೇಕು. ಇಲ್ಲಿ ಅನೇಕ ಮಹಿಳೆಯರು ಟಾಪ್ ಲೆಸ್ ಆಗಿ ಸ್ನಾನ ಮಾಡುವುದನ್ನು ಕಾಣಬಹುದು.

5. ಕೇಪ್ ಡಿ ಎಗ್ಡೆ ಬೀಚ್:

ಫ್ರಾನ್ಸ್‌ನ ಕ್ಯಾಪ್ ಡಿ’ಆಗ್ಡೆ ಬೀಚ್‌ಗೆ ಬಟ್ಟೆ ಇಲ್ಲದೆ ಹೋಗಬೇಕು. ಬೆತ್ತಲೆಯಾಗಿ ಹೋಗಿ ಅಲ್ಲಿ ಸ್ನಾನ ಮಾಡಬಹುದು. ಸ್ನಾನ ಮಾಡುವಾಗ ನಿಮ್ಮ ಮೈಮೇಲೆ ಬಟ್ಟೆ ಇದ್ದರೆ ಬೀಚ್ ಗಾರ್ಡ್ ಗಳು ನಿಮ್ಮನ್ನು ತಡೆಯಬಹುದು. ಆದ್ದರಿಂದ ನೀವು ವಿವಸ್ತ್ರಗೊಳ್ಳಬೇಕು.

Continue Reading

LATEST NEWS

ಈ ಶ್ರೀನಿವಾಸನ ವಿಗ್ರಹಕ್ಕೆ ಸೂರ್ಯನ ಕಿರಣಗಳು ಬೀಳುವ ಹಾಗಿಲ್ಲ..!

Published

on

ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನಿಗೆ ಇರೋವಷ್ಟು ಭಕ್ತರು ಬಹುಶಃ ಯಾವ ದೇವರಿಗೂ ಇಲ್ಲ ಅಂತಾನೇ ಹೇಳಬಹುದು . ಇದೇ ಕಾರಣದಿಂದ ದೇಶದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ. ಆದ್ರೆ ಈ ದೇವಸ್ಥಾನದಲ್ಲಿರೋ ಅದೊಂದು ರಹಸ್ಯ ಮಾತ್ರ ದೇವಸ್ಥಾನಕ್ಕೆ ಬೇಟಿ ನೀಡೋ ಬಹುತೇಕ ಭಕ್ತರಿಗೆ ಗೊತ್ತಿಲ್ಲ. ಸಾಮಾನ್ಯವಾಗಿ ಭಕ್ತರು ಕಾಣುವ ಶ್ರೀನಿವಾಸ ಮಂದಸ್ಮಿತನಾಗಿದ್ದರೆ, ಗರ್ಭಗುಡಿಯಲ್ಲಿರೋ ಶ್ರೀನಿವಾಸ ಕೋಪಿಷ್ಠನಾಗಿದ್ದು, ಹುಬ್ಬುಗಳನ್ನು ಗಂಟು ಹಾಕಿಕೊಂಡಿದ್ದಾನೆ. ವರ್ಷಕ್ಕೊಂದು ಬಾರಿ ಮಾತ್ರ ಹೊರ ಬರುವ ಈತನ ಮೇಲೆ ಸೂರ್ಯ ರಶ್ಮಿ ಬಿದ್ರೆ ಜಗತ್ತಿಗೆ ಅಪಾಯ ಇದೆ ಅಂತಾರೆ.

ತಿರುಪತಿ ದೇವಸ್ಥಾನದ ಗರ್ಭಗುಡಿಯಲ್ಲಿರುವ ಈ ಉತ್ಸವ ಮೂರ್ತಿಯನ್ನು ವರ್ಷಕ್ಕೊಂದು ಬಾರಿ ಮಾತ್ರ ಆಚೆ ತರಲಾಗುತ್ತದೆ. ಸೂರ್ಯೋದಯಕ್ಕೂ ಮೊದಲೇ ಆಚೆ ತಂದು ಹಲವು ದೃವ್ಯಗಳಿಂದ ಶುದ್ದೀಕರಣ ಮಾಡಲಾಗುತ್ತದೆ. ಹಾಲು ಮೊಸರು ತುಪ್ಪ ಅರಶಿನ ಮೊದಲಾದವುಗಳಿಂದ ದೇವರ ವಿಗ್ರಹವನ್ನು ಶುದ್ಧೀಕರಣ ಮಾಡಲಾಗುತ್ತದೆ. ಕೈಕಿಷ ದ್ವಾದಶಿ ದಿನದಂದು ಈ ಪ್ರಕ್ರಿಯೆ ನಡೆಯುವುದು ವಾಡಿಕೆಯಾಗಿದ್ದು, ಸೂರ್ಯನ ಕಿರಣ ಭೂಮಿಯನ್ನು ತಲುಪುವ ಮೊದಲು ಎಲ್ಲಾ ವಿದಿವಿಧಾನಗಳು ಪೂರ್ಣಗೊಂಡು ಮೂರ್ತಿಗಳು ಮತ್ತೆ ಗರ್ಭಗುಡಿ ಸೇರುತ್ತದೆ. ವಿಶೇಷ ಅಂದ್ರೆ ಕೇವಲ ಶ್ರೀನಿವಾಸ ಮಾತ್ರವಲ್ಲದೆ ಆತನ ಅಕ್ಕಪಕ್ಕದಲ್ಲಿರುವ ಶ್ರೀದೇವಿ ಹಾಗೂ ಭೂ ದೇವಿಯ ಮುಖಭಾವ ಕೂಡಾ ಶ್ರೀನಿವಾಸನಂತೆ ಮುಖಭಾವದಂತೆ ಕೋಪದಲ್ಲಿದೆ.

ತಿರುಪತಿ ತಿಮ್ಮಪ್ಪನ ಗರ್ಭಗುಡಿಯಲ್ಲಿ ಇರುವ ಶ್ರೀನಿವಾಸನ ಈ ಉತ್ಸವ ಮೂರ್ತಿಯ ಹೆಸರು ವೆಂಟತುರೈವಾರ್. ತಿರುಪತಿಯಲ್ಲಿ ಭಕ್ತರು ಕಾಣವು ಶ್ರೀನಿವಾಸ ವಿಗ್ರಹ ಹೊರತು ಪಡಿಸಿದ್ರೆ ಇಲ್ಲಿರೋ ಅತ್ಯಂತ ಪುರಾತನ ವಿಗ್ರಹ ಇದಾಗಿದೆ. ಸರಿ ಸುಮಾರು 14 ನೇ ಶತಮಾನದ ವರೆಗೂ ಬ್ರಹ್ಮೋತ್ಸವದಲ್ಲಿ ಇದೇ ಮೂರ್ತಿಯನ್ನು ಹೊತ್ತೊಯ್ಯಲಾಗುತ್ತಿತ್ತು. ಆದ್ರೆ ಆ ಕಾಲದಲ್ಲಿ ನಡೆದಿದ್ದ ಒಂದು ಘಟನೆಯಿಂದ ಈ ವಿಗ್ರಹವನ್ನು ಬ್ರಹ್ಮೋತ್ಸವದಲ್ಲಿ ತರುವುದನ್ನು ನಿಲ್ಲಿಸಲಾಯಿತು.

14 ನೇ ಶತಮಾನದಲ್ಲಿ ನಡೆದಿದ್ದ ಬ್ರಹ್ಮೋತ್ಸವದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಹಲವಾರು ಮನೆಗಳು ಸುಟ್ಟು ಬಸ್ಮವಾಗಿತ್ತಂತೆ. ಈ ವೇಳೆ ಭಕ್ತನೊಬ್ಬನಿಗೆ ಅಶರೀರವಾಣಿಯೊಂದು ಕೇಳಿಸಿದ್ದು, ಅದು ಶ್ರೀನಿವಾಸ ದೇವರದ್ದೇ ಎನ್ನಲಾಗಿದೆ. ಆ ಅಶರೀರವಾಣಿಯಲ್ಲಿ ಕೋಪದಲ್ಲಿ  ಉಗ್ರ ಸ್ವರೂಪಿಯಾಗಿ ಕಾಣಿಸುವ ಈ ಶ್ರೀನಿವಾಸ ವಿಗ್ರಹವನ್ನು ಬೆಳಕಿನ ಆಚೆಗೆ ತರದಂತೆ ಎಚ್ಚರಿಕೆ ನೀಡಲಾಗಿತ್ತಂತೆ. ಇನ್ನು ಮುಂದೆ ಸೂರ್ಯನ ಬೆಳಕು ಈ ವಿಗ್ರಹದ ಮೇಲೆ ಬಿದ್ದರೆ ಇಡೀ ಪ್ರಪಂಚಕ್ಕೆ ಬೆಂಕಿ ಹತ್ತಿಕೊಳ್ಳಬಹುದು ಎಂದು ಎಚ್ಚರಿಕೆ ನೀಡಲಾಗಿತ್ತಂತೆ. ಅಂದಿನಿಂದ ಈ ಉಗ್ರ ಸ್ವರೂಪಿ ಶ್ರೀನಿವಾಸನನ್ನು ಸೂರ್ಯನ ಬೆಳಕಿಗೆ ಆಚೆ ತರೋದು ನಿಲ್ಲಿಸಲಾಗಿದೆ. ವರ್ಷಕ್ಕೊಂದು ಬಾರಿ ಶುಚಿ ಮಾಡಲು ಹೊರತಂದ್ರೂ ಸೂರ್ಯೋದಯದ ಮೊದಲೇ ಶುಚಿಗೊಳಿಸಿ ಗರ್ಭಗುಡಿ ಸೇರಿಸಲಾಗುತ್ತದೆ.

Continue Reading

DAKSHINA KANNADA

ಮಂಗಳೂರಿನಲ್ಲಿ ಹವಾ ಸೃಷ್ಟಿಸಿದ ಪ್ರಧಾನಿ ಮೋದಿ.. ಮುಗಿಲು ಮುಟ್ಟಿದ ಮೋದಿ ಘೋಷಣೆ

Published

on

ಮಂಗಳೂರು:  ಪ್ರಧಾನಿ ನರೇಂದ್ರ ಮೋದಿಯವರು ಎ.14ರಂದು ಮಂಗಳೂರಿಗೆ ಭೇಟಿ ನೀಡಿದ್ದು,  ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ರಾತ್ರಿ ಸರಿ ಸುಮಾರು 7.45 ಕ್ಕೆ ಮಂಗಳೂರು ಆಗಮಿಸಿ ಪ್ರಧಾನಿ ನಾರಾಯಣ ಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಬಳಿಕ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ರೋಡ್ ಶೋ ನಡೆಸಿದ್ದಾರೆ.

ನಾರಾಯಣ ಗುರು ವೃತ್ತದಿಂದ ನವಭಾರತ್ ವೃತ್ತದ ವರೆಗೆ ಬೃಹತ್ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರ ಸಮಾವೇಶ ರದ್ದಾಗಿ ರೋಡ್ ಶೋ ನಿಗದಿಯಾಗಿದ್ದ ಹಿನ್ನಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ನಡೆಸಲಾಗಿತ್ತು. ಹೀಗಾಗಿ ರೋಡ್ ಶೋ ನಡೆಯುವ ರಸ್ತೆಯಲ್ಲಿ ರಸ್ತೆಯ ಇಕ್ಕೆಲೆಯಲ್ಲೂ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ರೋಡ್ ಶೋ ನಡೆದ ಲಾಲ್‌ಭಾಗ್ ಬಳ್ಳಾಲ್ ಭಾಗ್‌, ಪಿವಿಎಸ್ ಹಾಗೂ ರೋಡ್ ಶೋ ಕೊನೆಗೊಂಡ ನವಭಾರತ್ ಸರ್ಕಲ್‌ ವರೆಗೂ ಸಾವಿರಾರು ಜನರು ಮೋದಿಯವರಿಗಾಗಿ ಕಾದು ಕುಳಿತಿದದ್ದರು. ಮೋದಿ ಆಗಮಿಸುತ್ತಿದ್ದಂತೆ ಮೋದಿ ಘೋಷಣೆ ಮುಗಿಲು ಮುಟ್ಟಿದ್ದು ಅದು ರೋಡ್‌ ಶೋದ ಉದ್ದಕ್ಕೂ ಕೇಳಿಸಿ ಇಡೀ ನಗರವೇ ಮೋದಿ ಘೋಷ ಮೊಳಗಿತ್ತು. 7. 50 ಕ್ಕೆ ಆರಂಭವಾದ ರೋಡ್ ಶೋ 8. 45ಕ್ಕೆ ನವಭಾರತ್ ವೃತ್ತದಲ್ಲಿ ಅಂತ್ಯಗೊಂಡಿದೆ.

Read More..; ರೋಡ್‌ ಶೋ ವೇಳೆ ಕಲ್ಲು ತೂರಾಟ…! ಆಂದ್ರ ಸಿಎಂ ಹಣೆಗೆ ಗಾಯ…!

road show

 

Continue Reading

LATEST NEWS

Trending