LATEST NEWS
ವರದಕ್ಷಿಣೆಯ ದಾಹಕ್ಕೆ ಹೆಂಡತಿಯನ್ನೇ ಮಚ್ಚಿನಿಂದ ಕೊಂದ ಪಾಪಿ ಪತಿ..!
ಬೆಂಗಳೂರು ; ಮಹಿಳೆಯನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಭೂಸಂದ್ರ ಗ್ರಾಮದಲ್ಲಿ ನಡೆದಿದೆ.
ಶ್ರುತಿ (29)ಯನ್ನು ಕೊಲೆಯಾದ ಮಹಿಳೆಯಾಗಿದ್ದಾಳೆ.
ಪತಿಯೇ ಮಾರಕಾಸ್ತ್ರದಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ಬೆಸ್ಕಾಂ ಉದ್ಯೋಗಿಯಾಗಿರುವ ಪತಿ ಕೃಷ್ಣಮೂರ್ತಿ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.
ಕೃಷ್ಣಮೂರ್ತಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.ನಿನ್ನೆಯೂ ಪತಿಯ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಡಿ ಹೆಂಡತಿಗೆ ಮಾರಕಾಸ್ತ್ರಗಳಿಂದ ಹೊಡೆದಿದ್ದಾನೆ.
ಬಳಿಕ ಆಕೆ ಗಂಭೀರವಾಗಿರುವುದನ್ನು ಗಮನಿಸಿ ಬಳಿಕ ಪರಾರಿಯಾಗಿದ್ದಾನೆ.
LATEST NEWS
ವರದಿ ಪಡೆಯದೆ ತಮಿಳು ನಾಡಿಗೆ ನೀರು ಬಿಟ್ಟದ್ದೇಕೆ..? – ಶೋಭಾ ಕರಂದ್ಲಾಜೆ
ಉಡುಪಿ: ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆಯ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಬರಗಾಲ ಇದೆ.
ವಾಡಿಕೆಯ ಮಳೆಯಾಗಿಲ್ಲ. ನಮ್ಮ ಬೆಂಗಳೂರು ಕರ್ನಾಟಕದ ಹೃದಯ ಅಲ್ಲಿಗೆ ನೀರಿನ ಸಮಸ್ಯೆ ಎದುರಾಗಿದೆ.
ಕಾವೇರಿ ಕಬಿನಿ ಡ್ಯಾಮ್ ಗಳಲ್ಲಿ ನೀರಿಲ್ಲ. ಕಳೆದ ಬಾರಿಗೆ ಹೋಲಿಸಿದ್ರೆ ಅರ್ಧದಷ್ಟು ನೀರು ಇಲ್ಲ.
ನಮಗೆ ಕುಡಿಯಲು 35 ಟಿಎಂಸಿ ನೀರುಬೇಕು. ಇಂದಿನ ಬೆಂಗಳೂರಿನ ಜನಸಂಖ್ಯೆ ಗೆ ಆಧಾರಿತ ಲೆಕ್ಕಾಚಾರ ಮಾಡಿಲ್ಲ.
ವಿಪಕ್ಷ, ಸಂಘಟನೆ ಜೊತೆ ಚರ್ಚೆ ಮಾಡಿಲ್ಲ. ಅಧಿಕೃತ ವರದಿ ಪಡೆಯದೆ 15 ಸಾವಿರ ಕ್ಯೂ ಸೆಕ್ಸ್ ನೀರು ಯಾಕೆ ಬಿಟ್ರಿ….? ಎಂದು ರಾಜ್ಯ ಸರಕಾರವನ್ನು ಸಚಿವೆ ತರಾಟೆಗೆ ತೆಗೆದುಕೊಂಡರು.
DAKSHINA KANNADA
Mangaluru: ಧಕ್ಕೆಯಲ್ಲಿ ಬ್ಯಾನರ್ ವಿವಾದ – ಮೀನುಗಾರರ ಸಂಘದಿಂದ ಸ್ಪಷ್ಟನೆ
ಮಂಗಳೂರು: ಮೀನುಗಾರಿಕಾ ಧಕ್ಕೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಈದ್ ಮಿಲಾದ್ ಬ್ಯಾನರ್ ಕುರಿತು ಹಸಿ ಮೀನುಗಾರರ ಸಂಘ ಸ್ಪಷ್ಟನೆ ನೀಡಿದೆ.
ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ ವ್ಯವಹಾರಕ್ಕೆ ಖಡ್ಡಾಯ ರಜೆ ಹೊಂದುವ ಪೂರ್ವ ನಿರ್ಧರಿತ ಪದ್ಧತಿಯಂತೆ ಈ ಬಾರಿ ಬರುವ ಸೆ. 28 ರಂದು ಮುಸ್ಲಿಮ್ ಭಾಂದವರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಅವರು ಮತ್ತು ಇತರ ಧರ್ಮ ಭಾಂದವರು ಖಡ್ಡಾಯ ರಜೆ ಪಾಲಿಸುವ ಬಗ್ಗೆ ವಿವಿಧ ಸಂಘಗಳಲ್ಲಿ ನಿರ್ಣಯಿಸಿದಂತೆ ಪ್ರಕಟಣೆ ಫಲಕ ಅಳವಡಿಸಲಾಗಿರುತ್ತದೆ.
ಅದೇ ರೀತಿಯಲ್ಲಿ ವರ್ಷದ ಇತರ ದಿನಗಳಲ್ಲಿ ಇತರ ಹಬ್ಬಗಳಾದ ಬಾರ್ಕೂರು ಪೂಜೆ,ಉಚ್ಚಿಲ ಪೂಜೆ, ಗಣೇಶ ಚತುರ್ಥಿ, ಈದ್ ಉಲ್ ಫಿತರ್, ಬಕ್ರೀದ್, ಈದ್ ಮಿಲಾದ್, ಗುಡ್ ಫ್ರೈಡೇ ಮತ್ತು ಕ್ರಿಸ್ಮಸ್ ಎಂಬಿತ್ಯಾದಿ ಶುಭ ದಿನಗಳಲ್ಲಿ ಕೂಡಾ ಸಂಘಗಳ ನಿರ್ಣಯದಂತೆ ಮಾರಾಟಗಾರರು ಖಡ್ಡಾಯ ರಜೆ ಹೊಂದಿ ಆ ದಿನದ ಮಟ್ಟಿಗೆ ಮೀನುಗಾರಿಕಾ ಮಾರಾಟ ಚಟುವಟಿಕೆ ಸ್ಥಗಿತ ಗೊಳಿಸುವುದು ಅನೇಕ ವರ್ಷಗಳಿಂದ ನಡೆದು ಕೊಂಡು ಬಂದಿರುತ್ತದೆ.
ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆಯಲ್ಲಿ ಹಸಿ ಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ, ಪರ್ಶಿಯನ್ ಬೋಟ್ ಯೂನಿಯನ್, ಟ್ರಾಲ್ ಬೋಟ್ ಯೂನಿಯನ್, ಫಿಶ್ ಬಯ್ಯರ್ಸ್ ಎಸೋಸಿಯೇಶನ್ ಮತ್ತಿತರ ಸಂಘಗಳು ಸಂಯುಕ್ತವಾಗಿ ಈ ರಜೆಗಳನ್ನು ನಿರ್ಧರಿಸಿದ್ದಾರೆ.
ಆದರೆ ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಸಂಘದ ಮೀಲಾದ್ ರಜೆಯ ಪ್ರಕಟನಾ ಫಲಕ ( ಫ್ಲೆಕ್ಸ್ ) ದ ಬಗ್ಗೆ ಕೆಲವರು ತಪ್ಪು ಗ್ರಹಿಕೆಯ ಪ್ರಚೋದನಾತ್ಮಕ ಮಾಹಿತಿ ಹಂಚುತ್ತಿರುವುದು ಖೇದಕರ.
ಇಂತಹ ತಪ್ಪು ಮಾಹಿತಿ ಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಮಂಗಳೂರು ದಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘದ ಅಧ್ಯಕ್ಷ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DAKSHINA KANNADA
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!
ಉಳ್ಳಾಲ: ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಜೀವಾಂತ್ಯ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿಯ ನಿವಾಸಿಯಾಗಿರುವ ಪ್ರಶಾಂತ್ (44) ಎಂದು ಗುರುತಿಸಲಾಗಿದೆ.
ಸೆ.24 ರಂದು ಸಂಜೆ ಮನೆಯಿಂದ ಹೊರಟ ಪ್ರಶಾಂತ್ ಅವರು ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವಿವಾಹಿತರಾಗಿದ್ದ ಪ್ರಶಾಂತ್ ಅವರಿಗೆ ಯಾವುದೇ ಸಮಸ್ಯೆಗಳಿರಲಿಲ್ಲ.
ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ವೈದ್ಯಕೀಯ ವರದಿಯಿಂದ ಲಭ್ಯವಾಗಿದೆ.
ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ ಐ ಮಧುಚಂದ್ರ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- LATEST NEWS7 days ago
Udupi: ಪತಿಗೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ..!
- FILM6 days ago
ರಶ್ಮಿಕಾ ಮಂದಣ್ಣರನ್ನು ನೋಡಿ ಮುಖ ತಿರುಗಿಸಿದ ಶ್ರದ್ಧಾ ಕಪೂರ್
- DAKSHINA KANNADA5 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- bangalore6 days ago
FILM: ಎಲ್ಲೆಲ್ಲೂ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಸಾಂಗ್ ಹವಾ