Connect with us

    LATEST NEWS

    ಪತ್ನಿ, ಆಕೆಯ ಪ್ರಿಯಕರನ ಕೊಂ*ದು ಆತ್ಮಹ*ತ್ಯೆ ಮಾಡಿಕೊಂಡ ಪತಿ

    Published

    on

    ಮಂಗಳೂರು/ಬೆಂಗಳೂರು : ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪತಿ ಹ*ತ್ಯೆಗೈದು ತಾನೂ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ಫೈತಮ್ ಕೊ*ಲೆಗೀಡಾದ ಪತ್ನಿ. ಗಣೇಶ್ ಕೊ*ಲೆಗೀಡಾದ ಪ್ರಿಯಕರನಾಗಿದ್ದು, ಗೊಲ್ಲಬಾಬು ಆತ್ಮಹ*ತ್ಯೆ ಮಾಡಿಕೊಂಡ ಪತಿ.


    ಗೊಲ್ಲಬಾಬುವಿನ ಪತ್ನಿ ಫೈತಮ್ಮಗೆ ಗಣೇಶ್ ಎಂಬಾತನೊಂದಿಗೆ ಅನೈ*ತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಬಗ್ಗೆ ಪತಿ – ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಪತಿಯ ಮಾತಿಗೂ ಜಗ್ಗದೇ ಫೈತಮ್ಮ ತನ್ನ ಪ್ರಿಯಕರನೊಂದಿಗೆ ಹೋಗಿರುವುದನ್ನು ಗೊಲ್ಲಬಾಬು ಗಮನಿಸಿದ್ದಾನೆ. ಅವರಿಬ್ಬರನ್ನೂ ಹಿಂಬಾಲಿಸಿದ್ದಾನೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಅವರಿಬ್ಬರ ಮೇಲೆ ಮರದ ಕಟ್ಟಿಗೆಯಿಂದ ಹ*ಲ್ಲೆ ಮಾಡಿ ಹ*ತ್ಯೆ ಮಾಡಿದ್ದಾನೆ.

    ಇದನ್ನೂ ಓದಿ : ತೀರ್ಥಹಳ್ಳಿ ತಹಶೀಲ್ದಾರ್ ಬೆಂಗಳೂರಿನ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ!

    ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಮೂವರ ಮೃ*ತದೇಹಗಳನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    LATEST NEWS

    ಉಡುಪಿ: ಬೈಂದೂರಿನ ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

    Published

    on

    ಉಡುಪಿ: ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಒತ್ತಿನೆಣೆ ತಿರುವಿನಲ್ಲಿ ಗುಡ್ಡದ ಮಣ್ಣು ಕುಸಿದ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದ್ದು, ರಾತ್ರಿ ಅಧಿಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ.


    ಗುಡ್ಡದ ಮೇಲ್ಭಾಗದಲ್ಲಿ ಮಣ್ಣು ಅಪಾಯಕಾರಿ ಸ್ಥಿತಿಯಲ್ಲಿದೆ. ಕೆಲವು ತಿಂಗಳ ಹಿಂದೆ ಅಗ್ನಿಶಾಮಕ ವಾಹನದ ಮೂಲಕ ನೀರು ಸಿಂಪಡಿಸಿ ಕುಸಿಯುವ ಭೀತಿಯಲ್ಲಿರುವ ಗುಡ್ಡದ ಮಣ್ಣನ್ನು ಸಮತಟ್ಟು ಮಾಡಲಾಗಿತ್ತು. ಈ ಹಿಂದೆಯೂ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಂಭವವಿದ್ದಾಗ ಮಣ್ಣು ತೆರವುಗೊಳಿಸಿ ಮುಂಜಾಗ್ರತೆ ವಹಿಸಲಾಗಿತ್ತು. ಆದರೆ ಕಳೆದೆರಡು ದಿನದಿಂದ ಮಳೆಯ ಪ್ರಮಾಣ ಅಧಿಕವಾದ ಕಾರಣ ಗುಡ್ಡದ ಮಣ್ಣು ಕುಸಿದಿದೆ.

    ಭೂ ಕುಸಿತದಿಂದ ಚರಂಡಿಗೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಮಾಡಲಾಗಿದೆ. ಗುಡ್ಡದ ಮಣ್ಣು ಕುಸಿತದಿಂದ ಹೆದ್ದಾರಿ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ತೆರಳಿದ ಐಆರ್‌ಬಿ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಒತ್ತಿನೆಣೆ ತಿರುವಿನ ರಾಘವೇಂದ್ರ ಮಠದ ಬಳಿ ಕುಸಿತ ಸಂಭವಿಸುವ ಆತಂಕ ಇರುವ ಕಾರಣ ಹೆದ್ದಾರಿ ಇಲಾಖೆ ಮತ್ತು ಐಆರ್‌ಬಿ ಕಂಪೆನಿ ಪ್ಲಾಸ್ಟರಿಂಗ್‌ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದೆ.

    ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ ಬಳಿಕ ದಿಲ್ಲಿಯಿಂದ ಹಿರಿಯ ಭೂ ವಿಜ್ಞಾನಿಗಳು ಈ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಇದರ ಹೊರತಾಗಿ, ಸಮೀಪದಸೋಮೇಶ್ವರ ಗುಡ್ಡ ಕೂಡಾ ಮಳೆಯ ಅಬ್ಬರದಿಂದಾಗಿ ಕುಸಿಯುತ್ತಿದೆ.ಗುಡ್ಡ ಭಾಗದಲ್ಲಿ ಖಾಸಗಿ ವ್ಯಕ್ತಿಗಳು ರೆಸಾರ್ಟ್‌ ನಿರ್ಮಿಸಲು ಅನಧಿಕೃತವಾಗಿ ರಸ್ತೆ ನಿರ್ಮಿಸಿದ ಕಾರಣ ಮಳೆಗಾಲದಲ್ಲಿ ಗುಡ್ಡದ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಆತಂಕ ಉಂಟು ಮಾಡಿತ್ತು.

    ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಇದುವರಗೆ ಯಾವುದೆ ಕ್ರಮ ಕೈಗೊಂಡಿಲ್ಲ. ಎರಡು ದಿನಗಳ ಹಿಂದೆ ಮಳೆಗೆ ಗುಡ್ಡ ಇನ್ನಷ್ಟು ಕುಸಿದಿದ್ದು, ಗುಡ್ಡದ ಮೇಲ್ಭಾಗದಲ್ಲಿರುವ ಕ್ಷಿತಿಜ ನೇಸರ ಧಾಮ ಕೂಡಾ ಅಪಾಯದಲ್ಲಿದೆ.ಈ ಬಗ್ಗೆ ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸ್ಥಳೀಯ ಜನರು ತಿಳಿಸಿದ್ದಾರೆ.

    Continue Reading

    DAKSHINA KANNADA

    ದೀಪಾವಳಿಗೆ ಬಂಪರ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು

    Published

    on

    ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ ಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.


    ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
    ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 21 ಬೋಗಿ ಸಂಯೋಜನೆಯನ್ನು ಒಳಗೊಂಡಿದೆ.

    ಪ್ರಯಾಣಿಕರ ಬೇಡಿಕೆ :
    ಕಳೆದ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ಮಂಗಳೂರು – ಬೆಂಗಳೂರು – ಮೈಸೂರು ನಡುವೆ ವಿಶೇಷ ರೈಲು ಓಡಾಟ ನಡೆಸಿತ್ತು. ಈ ಬಾರಿ ದಸರಾದಲ್ಲಿ ನಂ.06569 ಯಶವಂತಪುರ – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮತ್ತು ನಂ. 06570 ಕಾರವಾರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ವಯಾ ಪಡೀಲ್‌ ಮೂಲಕ ಸಂಚರಿಸಿದೆ. ಇದರಿಂದ ಮಂಗಳೂರಿಗೆ ಬರುವವರಿಗೆ ಹೆಚ್ಚಿನ ಲಾಭವಾಗಿಲ್ಲ. ದೀಪಾವಳಿಗಾದರೂ ಮಂಗಳೂರು – ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಲಿ ಎನ್ನುವುದು ರೈಲ್ವೇ ಹೋರಾಟಗಾರರ ಆಗ್ರಹವಾಗಿತ್ತು.

    ಸಂಸದರಿಂದ ಮನವಿ ಪತ್ರ:
    ವಿಶೇಷ ರೈಲಿಗೆ ಬೇಡಿಕೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ನೈಋತ್ಯ ರೈಲ್ವೇ ಮಹಾ ಪ್ರಬಂಧಕರಿಗೆ ಪತ್ರ ಬರೆದು, ದೀಪಾವಳಿ ಹಬ್ಬಕ್ಕೆ ಬೆಂಗಳೂರು – ಮಂಗಳೂರು ನಡುವೆ ವಿಶೇಷ ರೈಲು ಓಡಿಸುವಂತೆ ಮನವಿ ಮಾಡಿದ್ದರು. ಬೆಂಗಳೂರಿನಿಂದ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಈ ರೈಲಿನಿಂದ ಅನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ರೈಲನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈಲ್ವೇ ಇಲಾಖೆಗೂ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದರು. ಪ್ರಯಾಣಿಕರು, ಹೋರಾಟಗಾರರು ಹಾಗೂ ಜನ ಪ್ರತಿನಿಧಿಗಳ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ವಿಶೇಷ ರೈಲು ಓಡಾಟಕ್ಕೆ ಮುಂದಾಗಿದೆ.

    Continue Reading

    LATEST NEWS

    ಶೋಭಾ ಕರಂದ್ಲಾಜೆ ಚಿಕನ್ ಆ್ಯಂಡ್ ಮಟನ್ ಶಾಪ್; ಪೋಟೋ ವೈರಲ್.!

    Published

    on

    ಮಂಗಳೂರು/ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್‌ ಮಾಡಿದ್ದಾರೆ.

    ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರ ಹೆಸರಿನಲ್ಲಿ ಈ ಅಂಗಡಿ ತೆರೆದಿದ್ದಾರೆ.

    ಶೋಭಾ ಕರಂದ್ಲಾಜೆ ಮೇಲಿನ ಅಭಿಮಾನಕ್ಕೆ ಈ ರೀತಿ ಹೆಸರು ಇಟ್ಟಿದ್ದೇನೆ ಎಂದು ಖಾಧೀರ್‌ ಕಲಾಲ ತಿಳಿಸಿದ್ದಾರೆ. ‌2008ರಲ್ಲಿ ಚುನಾವಣೆಗೆ ಪ್ರಚಾರಕ್ಕಾಗಿ ಪಟ್ಟಣಕ್ಕೆ ಆಗಮಿಸಿದ್ದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಆಗಿದ್ದರು. ಅವರ ರಾಜಕೀಯ ಮಾತುಗಳನ್ನು ಕೇಳಿ ಅಭಿಮಾನಿ ಆಗಿದ್ದೇನೆ ಎಂದಿದ್ದಾರೆ.

    ಚಿಕನ್‌ ಆ್ಯಂಡ್ ಮಟನ್‌ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಹಾಕಿಸಿರುವ ವಿಚಾರ ಸಾಕಷ್ಟು ವೈರಲ್ ಆಗಿದೆ.

    ಅಪ್ಪಟ ಅಭಿಮಾನಿ ಆಗಿರುವ ಖಾಧೀರ್ ಕಲಾಲ್ ಕಳೆದ 5 ವರ್ಷಗಳ ಹಿಂದೆ ಶೋಭಾ ಕರಂದ್ಲಾಜೆ ಅವರ ಪೋಟೋವನ್ನು ಕೈಮೇಲೆ ಟ್ಯಾಟೋ ಹಾಕಿಸಿಕೊಂಡಿದ್ದಾರೆ.

    ಈಗ ಹೊಸದಾಗಿ ಪ್ರಾರಂಭಿಸಿರುವ ಅಂಗಡಿಗೆ ಶೋಭಾ ಕರಂದ್ಲಾಜೆ ಮಟನ್ ಆ್ಯಂಡ್ ಚಿಕನ್ ಸೆಂಟರ್ ಹೆಸರು ಹಾಕಿಸಿದ್ದಾರೆ.

    Continue Reading

    LATEST NEWS

    Trending