Connect with us

    LATEST NEWS

    ಪಕ್ಕದ್ಮನೆ ಯುವಕನ ಜೊತೆ ಕಾಮದಾಟಕ್ಕೆ ಅಡ್ಡಿಯಾದ ಪತಿಯನ್ನೇ ಕತ್ತು ಹಿಸುಕಿ ಮುಗಿಸಿದ ಆಂಟಿ..!

    Published

    on

    ಹುಣಸೂರು: ಪಕ್ಕದ ಮನೆಯ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯೊಬ್ಬಳು ಮಲಗಿದ್ದ ತನ್ನ ಪತಿಯನ್ನು ಕೊಲೆಗೈದ ಆಘಾತಕಾರಿ ಘಟನೆ ತಾಲೂಕಿನ ಹುಣಸೂರು ಹುಂಡಿಮಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿ ಪತ್ನಿ ಶಿಲ್ಪಾ

    ಲೋಕಮಣಿ (36) ಮೃತ ದುರ್ದೈವಿ, ಆರೋಪಿ ಪತ್ನಿ ಶಿಲ್ಪಾ.
    ಘಟನೆ ವಿವರ
    ಲೋಕಮಣಿಗೆ 9 ವರ್ಷಗಳ ಹಿಂದೆ ಎಚ್.ಡಿ .ಕೋಟೆ ತಾಲೂಕಿನ ಅಗಸನಹುಂಡಿ ಶಿಲ್ಪ ಎಂಬುವಳೊಂದಿಗೆ ವಿವಾಹವಾಗಿತ್ತು. ಇವರಿಗೆ 6 ಮತ್ತು 3 ವರ್ಷದ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಶಿಲ್ಪಾಳಿಗೆ ಪಕ್ಕದ ಮನೆಯ ಅಭಿ ಎಂಬಾತನೊಂದಿಗೆ ಅಕ್ರಮ ಸಂಬಂಧವಿದ್ದು, ಕೆಲದಿನಗಳ ಹಿಂದೆ ಪತಿಗೆ ತಿಳಿದಿದೆ.

    ಈ ವಿಚಾರ ತಿಳಿಯುತ್ತಿದ್ದಂತೆ ಗಂಡನ ಕೈಕಾಲು ಹಿಡಿದು, ಮರ್ಯಾದೆ ಹೋಗುತ್ತದೆ ಯಾರಿಗೂ ಹೇಳಬೇಡಿ ತಪ್ಪಾಯಿತು. ಇನ್ನು ಮುಂದೆ ತಪ್ಪು ಮಾಡಲ್ಲವೆಂದು ಹೇಳಿಕೊಂಡಿದ್ದಳು. ಇದರಿಂದ ಸಮಾಧಾನಗೊಂಡ ಗಂಡನನ್ನು ಜೂ.9 ರಂದು ಮಲಗಿದ್ದಲ್ಲೇ ಮಧ್ಯರಾತ್ರಿ ಕತ್ತುಹಿಸುಕಿ ಕೊಲೆಗೈದಿದ್ದಳು.

    ಜೂ.10 ರಂದು ಮುಂಜಾನೆ 5 ಗಂಟೆಗೆ ಗಂಡನನ್ನು ಎಬ್ಬಿಸುವಂತೆ ಅತ್ತೆ ಶಿಲ್ಪಾಳಿಗೆ ತಿಳಿಸಿದಾಗ ಅವಳು ನೀವೇ ನಿಮ್ಮ ಮಗನನ್ನು ಎಬ್ಬಿಸಿ ಎಂದು ಹೇಳಿದಳು.

    ಆಗ ತಾಯಿ ಮಗನ ಬಳಿ ಹೋಗಿ ಎಬ್ಬಿಸಿದಾಗ ಎದ್ದೇಳದೇ ಇದ್ದುದನ್ನು ಕಂಡು ಪತಿ ಲೋಕಮಣಿ ಹೃದಯಘಾತದಿಂದ ನಿಧನ ಹೊಂದಿದ್ದಾರೆಂದು ಊರಿನವರಿಗೆ ನಂಬಿಸಿದ್ದಾಳೆ.

    ನಂತರ ಅವನ ಮೃತದೇಹವನ್ನು ಸಂಬಂಧಿಕರು ಹಾಗೂ ಊರವರ ಸಹಾಯದಿಂದ ದಹನಗೈದಿದ್ದಾರೆ.

    ಮೃತ ಪತಿ ಲೋಕಮಣಿ

    ಬಯಲಾಗಿದ್ದು ಹೇಗೆ?
    ಮಗನ ಸಾವಿನ ನಂತರ ಸೊಸೆ ಶಿಲ್ಪ ಹಾಗೂ ಪಕ್ಕದ ಮನೆಯ ಯುವಕನ ನಡವಳಿಕೆಯಲ್ಲಿ ಅನುಮಾನಗೊಂಡ ಅತ್ತೆ ರಾಜಮ್ಮ ಹುಣಸೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿ, ತನಿಖೆ ನಡೆಸಿದಾಗ ಅಕ್ರಮ ಸಂಬಂಧ ಬಯಲಿಗೆ ಬಂದಿದೆ.

    ಪ್ರಕರಣ ಸಂಬಂಧ ಆರೋಪಿ ಶಿಲ್ಪಾಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಪ್ರಿಯಕರ ಅಭಿ ತಲೆಮರೆಸಿಕೊಂಡಿದ್ದಾನೆ.

    ಸದ್ಯ ಇವರ ಕಾಮದಾಟದಿಂದ ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending