Connect with us

    BELTHANGADY

    ಶಾಸಕನ ಬಂಧನಕ್ಕೆ ಮುಂದಾದ ಪೊಲೀಸರು…! ಎಚ್ಚರಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ…!

    Published

    on

    ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸು ದಾಖಲಿಸಿಕೊಂಡ ಪೊಲೀಸರು ಇಂದು ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದಾರೆ.

    ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆಯ ವಿಚಾರದಲ್ಲಿ ಸ್ಫೋಟಕ ಕಾಯ್ದೆಯಡಿ ಬಂಧನವಾಗಿರುವ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರವಾಗಿ ಹರೀಶ್ ಪೂಂಜ ಪ್ರತಿಭಟನೆ ನಡೆಸಿದ್ದರು. ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿಸಿದ್ದು ಮಾತ್ರವಲ್ಲದೆ ಸಭೆಯಲ್ಲಿ ಅವರು ಮಾಡಿದ ಭಾಷಣದ ವಿಚಾರವಾಗಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

    ಪೊಲೀಸ್ ಅಧಿಕಾರಿಗಳ ವಿರುದ್ಧ ಕೀಳು ಮಟ್ಟದ ಭಾಷೆ ಪ್ರಯೋಗಿಸಿದ್ದು, ಮತ್ತು ಡಿಜೆ ಹಳ್ಳಿ ಕೆ.ಜಿ ಹಳ್ಳಿ ಮಾದರಿಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶಾಸಕರು ಹೇಳಿದ್ದರು. ಇದೀಗ ಪೊಲೀಸರು ಶಾಸಕ ಹರೀಶ್ ಪೂಂಜಾ ಮನೆಗೆ ಆಗಮಿಸಿ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ ಈ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ತೀವೃವಾಗಿ ಖಂಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ ಇದು ಕಾಂಗ್ರೆಸ್ ಸರ್ಕಾರದ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ ಮೋರ್ಚಾದ ಅಧ್ಯಕ್ಷನ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದನ್ನು ಕೇಳಲು ಶಾಸಕರು ಹೋಗಿದ್ದಾರೆ. ಅವರ ಬಿಡುಗಡೆಗೆ ಪ್ರತಿಭಟನೆ ಮಾಡಿದ್ದಾರೆ. ಇದನ್ನು ನೀತಿ ಸಂಹಿತೆಯ ಕಾರಣ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ದೊಡ್ಡ ವಿಚಾರ ಮಾಡಿದ್ದಾರೆ. ನಮ್ಮ ಶಾಸಕನನ್ನು ಬಂಧಿಸಿದರೆ ಉಗ್ರ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇನ್ನು ಹರೀಶ್ ಪೂಂಜಾ ಬಂಧನಕ್ಕೆ ಪೊಲೀಸರು ಮುಂದಾದ ವಿಚಾರದ ಸುದ್ದಿ ತಿಳಿದು ಪೂಂಜಾ ಪರ ವಕೀಲರು ಹಾಗೂ ಬೆಂಬಲಿಗರು ಆಗಮಿಸಿದ್ದಾರೆ. ಶಾಸಕರ ಬಂಧನಕ್ಕೆ ಅವಕಾಶ ನೀಡದಂತೆ ಕಾರ್ಯಕರ್ತರು ತಮ್ಮ ವಾಹನಗಳನ್ನು ದಾರಿಗೆ ಅಡ್ಡವಾಗಿಟ್ಟಿದ್ದಾರೆ. ಈ ವಿಚಾರವಾಗಿ ಮಾತನಾಡಿದ ವಕೀಲರು ಪೊಲೀಸರು ನಿಯಮ ಬಾಹಿರವಾಗಿ ಶಾಸಕರನ್ನು ಬಂಧಿಸಲು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗಿ ಅಂತ ನೊಟೀಸು ಕೂಡ ನೀಡದೆ ನೇರವಾಗಿ ಮನೆಗೆ ಬಂದಿದ್ದಾರೆ. ಇದು ತಪ್ಪು ಎಂದು ಹೇಳಿದ್ದಾರೆ. ಡಿಎಸ್‌ಪಿಯವರು ನಿಮ್ಮನ್ನು ಬಂಧಿಸಲು ಬಂದಿದ್ದಲ್ಲ ವಿಚಾರಣೆಗೆ ಬನ್ನಿ ಎಂದು ಕರೆಯಲು ಬಂದಿದ್ದು ಎಂದಿದ್ದಾರೆ. ಆದರೆ ಈ ರೀತಿಯಾಗಿ ಕರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

    BELTHANGADY

    ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ..! ಬಿಜೆಪಿ ಮುಖಂಡ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

    Published

    on

    ಬೆಳ್ತಂಗಡಿ:  ಗಲಾಟೆ ವೇಳೆ ಅಪ್ರಾಪ್ತೆ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ್ದಾನೆ ಎಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮುಂದೆ ಓದಿ..; ಬೈಕ್ – ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃ*ತ್ಯು
    ಬೆಳ್ತಂಗಡಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BANTWAL

    ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ

    Published

    on

    ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ.

    ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ.

    ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.

    ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.

    Continue Reading

    BANTWAL

    ಬೆಳ್ತಂಗಡಿ:ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

    Published

    on

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ.

    ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಇದನ್ನು ಓದಿ: ‘ಹೊಡಿಬೇಡಿ ಪ್ಲೀಸ್’ ಎಂದು ಅಂಗಲಾಚಿದ ಕೆಜಿಎಫ್ ನಟಿ; ಕುಡಿದ ಮತ್ತಿನಲ್ಲಿ ನಡೀತಾ ಗಲಾಟೆ? ವೀಡಿಯೋ ವೈರಲ್

    Continue Reading

    LATEST NEWS

    Trending