bangalore
ಚುನಾವಣೆಗೆ ಸ್ಪರ್ಧಿಸ್ತಾರಾ ಸತ್ಯಜಿತ್ ಸುರತ್ಕಲ್…?
ಮಂಗಳೂರು : ಚುನಾವಣೆಯಲ್ಲಿ ತನ್ನ ಮಗನಿಗೆ ಹಾವೇರಿಯಿಂದ ಟಿಕೆಟ್ ಕೊಟ್ಟಿಲ್ಲ ಎಂದು ಆಕ್ರೋಶಗೊಂಡಿರೋ ಕೆ.ಎಸ್.ಈಶ್ವರಪ್ಪ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಸೋದಿಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಜಾಗರಣ ವೇದಿಕೆಯ ಸತ್ಯಜಿತ್ ಸುರತ್ಕಲ್ ಅವರು ಬೆಂಬಲ ನೀಡಿದ್ದಾರೆ. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶಗೊಂಡಿರುವ ಈಶ್ವರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.
ಸತ್ಯಜಿತ್ ಅವರಿಗೆ ಟಿಕೆಟ್ ತಪ್ಪಿಸಿದ್ದು ಯಾರು ?
ಸತ್ಯಜಿತ್ ಸುರತ್ಕಲ್ ಒಂದು ಕಾಲದಲ್ಲಿ ಹಿಂದುತ್ವಕ್ಕಾಗಿ ಹೋರಾಟ ನಡೆಸಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದಲ್ಲೇ ಹೆಸರು ಗಳಿಸಿದ್ದ ನಾಯಕ. ಇಂದಿಗೂ ಜಾಗರಣ ವೇದಿಕೆಯ ಕಾರ್ಯಕರ್ತರ ಸತ್ಯಣ್ಣನಾಗಿ ಹಿಂದುತ್ವದ ಕೆಲಸದಲ್ಲಿ ತೊಡಗಿಸಿಕೊಂಡವರು. ಆದ್ರೆ ಅವರ ರಾಜಕೀಯ ಎಂಟ್ರಿಗೆ ಅವರದೇ ನಾಯಕರು ಅಡ್ಡಿಯಾಗಿದ್ದಾರೆ ಅನ್ನೋ ಆಕ್ರೋಶ ಅವರಲ್ಲಿದೆ. ಪ್ರಮುಖವಾಗಿ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸತ್ಯಜಿತ್ ಸುರತ್ಕಲ್ ಅವರಿಗೆ ಕೋಪ ಇದೆ. 2014 ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೊನೆ ತನಕ ಹೆಸರಿದ್ದ ಸತ್ಯಜಿತ್ ಅವರ ಹೆಸರು ತೆಗೆದು, ನಳಿನ್ ಹೆಸರು ಸೂಚಿಸಿದ್ದೇ ಕಲ್ಲಡ್ಕ ಪ್ರಭಾಕರ ಭಟ್ ಅನ್ನೋದು ಸತ್ಯಜಿತ್ ಆರೋಪ. ಬಳಿಕ ಹಲವು ಬಾರಿ ಚುನಾವಣೆಗೆ ಟಿಕೇಟ್ ಆಕಾಂಕ್ಷಿ ಅಂತ ಹೇಳಿದ್ರೂ ಪಕ್ಷ ಇವರನ್ನು ಕಡೆಗಣಿಸಿತ್ತು. ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೊಡಬೇಕು ಅಂತ ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ರು. ಆದ್ರೆ ಈ ಬಾರಿಯೂ ಇವರಿಗೆ ಟಿಕೆಟ್ ಕೈ ತಪ್ಪಿದ್ದು, ಸದ್ಯಕ್ಕೆ ಇವರ ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ.
ಸಿಕ್ಕ ಅವಕಾಶ ಕೈ ಚೆಲ್ಲಿದ್ದ ಸತ್ಯಜಿತ್ ಸುರತ್ಕಲ್…!
ಹುಬ್ಬಳಿಯ ಈದ್ಗಾ ಮೈದಾನದ ಹೋರಾಟ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟ, ಲವ್ ಜಿಹಾದ್ ವಿರುದ್ಧದ ಹೋರಾಟ, ಹೀಗೇ ಹಿಂದುತ್ವಕ್ಕಾಗಿ ದೊಡ್ಡ ಹೋರಾಟವನ್ನು ಕಳೆದ 35 ವರ್ಷದಿಂದ ಮಾಡಿಕೊಂಡು ಬಂದಿದ್ದವರು ಸತ್ಯಜಿತ್ ಸುರತ್ಕಲ್. 1994 ರಲ್ಲಿ ಯುವ ನಾಯಕನಾಗಿದ್ದಾಗ ಸುರತ್ಕಲ್ ( ಇಂದಿನ ಮಂಗಳೂರು ಉತ್ತರ ) ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸೋ ಅವಕಾಶ ಸಿಕ್ಕಿತ್ತಾದ್ರೂ ಅದನ್ನ ನಿರಾಕರಿಸಿ ಸಂಘಟನೆಯಲ್ಲೇ ಸೇವೆ ಸಲ್ಲಿಸೋದಾಗಿ ಹೇಳಿದ್ದರು. ತನ್ನ ಬದಲು ಕುಂಬ್ಳೆ ಸುಂದರ್ ರಾವ್ ಅವರಿಗೆ ಅವಕಾಶ ಕಲ್ಪಿಸಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡಿದ್ರು. ಆದ್ರೆ ಆಮೇಲೆ ಅಂತಹ ಅವಕಾಶ ಸತ್ಯಜಿತ್ ಸುರತ್ಕಲ್ ಅವರಿಗೆ ಸಿಕ್ಕಲೇ ಇಲ್ಲ.
ಈ ಬಾರಿಯೂ ಕೈ ತಪ್ಪಿದ ಟಿಕೆಟ್…!
ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿದ ಸತ್ಯಜಿತ್ ಸುರತ್ಕಲ್ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ತನಗೆ ಪಕ್ಷ ಹಾಗೂ ಸಂಘ ಪರಿವಾರ ಅನ್ಯಾಯ ಮಾಡಿದೆ ಅಂತ ಕಾರ್ಯಕರ್ತರ ಮುಂದೆ ಬೇಸರ ವ್ಯಕ್ತಪಡಿಸಿದ್ದರು. ‘ನನಗೆ ಟಿಕೆಟ್ ಯಾಕೆ ಕೊಡುವುದಿಲ್ಲ ಅಂತ ಕೇಳಿದ ಪ್ರಶ್ನೆಗೆ ನನಗೆ ಈ ವರೆಗೂ ಉತ್ತರ ಸಿಕ್ಕಿಲ್ಲ’ ಎಂದು ಹೇಳುವ ಮೂಲಕ ಈ ಬಾರಿ ಟಿಕೆಟ್ ನನಗೆ ಕೊಡಲೇ ಬೇಕು ಎಂಬ ಬೇಡಿಕೆ ಇಟ್ಟಿದ್ರು. ಆದ್ರೆ ಭಾರತೀಯ ಜನತಾ ಪಕ್ಷ ಇವರ ಯಾವ ಮಾತಿಗೂ ಜಗ್ಗದೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ನೀಡಿದೆ.
ಈಶ್ವರಪ್ಪ ಭೇಟಿಯಿಂದ ಸತ್ಯಜಿತ್ ಮುಂದಿನ ನಡೆಯ ಬಗ್ಗೆ ಕುತೂಹಲ..!
ಟಿಕೆಟ್ ಕೈತಪ್ಪಿದ ನೋವಿನಲ್ಲಿರುವ ಸತ್ಯಜಿತ್ ಸುರತ್ಕಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಂತ ಅಸಮಾಧಾನವನ್ನು ಶಿವಮೊಗ್ಗದಲ್ಲಿ ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಿ ತೋರಿಸಿದ್ದಾರೆ. ಈಶ್ವರಪ್ಪ ಅಂತಹ ನಾಯಕರನ್ನು ಬಿಜೆಪಿ ತುಳಿಯುತ್ತಿದೆ ಎಂದು ಮಾದ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ನನ್ನ ಜೊತೆ ಕಾರ್ಯಕರ್ತ ಪಡೆ ಇದ್ದು ನನ್ನ ಸಹಕಾರ ನಿಮಗೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಸಡ್ಡು ಹೊಡೆದಿದ್ದಾರೆ. ಸತ್ಯಜಿತ್ ಸುರತ್ಕಲ್ ಅವರ ಈ ನಡೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡ್ತಾರಾ ಅನ್ನೋ ಸಂಶಯ ಮೂಡಿದೆ.
bangalore
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.
ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.
ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
bangalore
ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.
ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ
ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.
- FILM5 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA5 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore7 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ