LATEST NEWS
ನಾಗಬಿಂಬ ಎಸೆದ ಪ್ರಕರಣ: ನಾಳೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಸೋಮವಾರ ಕೋಡಿಕಲ್ ಬಂದ್-ಶರಣ್ ಪಂಪ್ವೆಲ್
ಮಂಗಳೂರು: ನಗರದ ಕೋಡಿಕಲ್ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು 24 ಗಂಟೆಯೊಳಗೆ ಬಂಧಿಸದೇ ಇದ್ದಲ್ಲಿ ಸೋಮವಾರ ಕೋಡಿಕಲ್ ಬಂದ್ಗೆ ಕರೆನೀಡುವುದಾಗಿ ವಿಶ್ವಹಿಂದೂ ಪರಿಷತ್ನ ಮುಖಂಡ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ.
ಇಂದು ನಗರದ ಕೋಡಿಕಲ್ ನಾಗಬನದ ಕಲ್ಲನ್ನು ಅಲ್ಲಿಯೇ ಅಂಗಳದಲ್ಲಿ ಎಸೆದ ಬಗ್ಗೆ ಇಂದು ಬೆಳಗ್ಗೆ ಪತ್ತೆಯಾಗಿತ್ತು. ಈ ಪ್ರಕರಣದ ಕಿಡಿಗೇಡಿಗಳನ್ನು ಬಂಧಿಸದೇ ಇರುವ ಪೊಲೀಸ್ ಕ್ರಮವನ್ನು ಖಂಡಿಸಿ ಇಂದು ಕೋಡಿಕಲ್ನ ನಾಗಬನದ ಬಳಿ ಶ್ರೀ ನಾಗಬ್ರಹ್ಮ ದೈವಗಳ ಸೇವಾ ಸಮಿತಿ ಕೋಡಿಕಲ್ ಇದರ ವತಿಯಿಂದ ಪ್ರತಿಭಟನೆ ನಡೆಯಿತು.
ಇಲ್ಲಿನ 13 ನಾಗಕಲ್ಲಿನಲ್ಲಿ ಒಂದು ಬಿಂಬವನ್ನು ಕಿಡಿಗೇಡಿಗಳು ಎಸೆದು ಅಪವಿತ್ರಗೊಳಿಸಿದ್ದರು. ಘಟನೆ ನಡೆದು ಇಷ್ಟು ದಿನ ಸಂದರೂ ಇನ್ನೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ.
ಆರೋಪಿಗಳನ್ನು ಬಂಧಿಸಲು ವಿಳಂಬ ಏಕೆ ಎಂದು ಸ್ಥಳಕ್ಕಾಗಮಿಸಿದ ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ಇಲ್ಲಿನ ಭಕ್ತ ಸಮುದಾಯದ ಮುಖಂಡರು ಪ್ರಶ್ನಿಸಿದರು. ಆರೋಪಿಗಳನ್ನು ಬಂಧಿಸುವುದಾಗಿ ಹೇಳಿಕೆ ನೀಡಬೇಕೆಂದು
ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪ್ವಲ್ ಅವರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ಆಗ್ರಹಿಸಿದರು.
ನಿಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದ ಶರಣ್
ಜಿಲ್ಲೆಯಾದ್ಯಾಂತ ಇಂತಹ ಹಲವು ಪ್ರಕರಣ ನಡೆಯುತ್ತಿದೆ. ಆದರೂ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಶರಣ್ ಪಂಪ್ವೆಲ್
ನೀವು ಈ ಬಗ್ಗೆ ಸೂಕ್ತ ಉತ್ತರ ನೀಡದಿದ್ದರೆ ನಿಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದು ಪೊಲೀಸ್ ಆಯುಕ್ತರ ಮುಂದೇಯೇ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ದೇವಸ್ಥಾನ, ದೈವಸ್ಥಾನದ ಮೇಲೂ ಕಿಡಿಗೇಡಿಗಳ ಕೃತ್ಯ ಹೆಚ್ಚಾಗುತ್ತಿದೆ.
ಅಪವಿತ್ರಗೊಳಿಸಲಾಗುತ್ತಿದೆ ಎಂದು ಶರಣ್ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಉತ್ತರ ಕ್ಷೇತ್ರ ಶಾಸಕ ವೈ ಭರತ್ ಶೆಟ್ಟಿ, ಡಿಸಿಪಿ ಹರಿರಾಂ ಶಂಕರ್, ಸಹಿತ ಹಲವು ಮಂದಿ ನಾಯಕರು ಸ್ಥಳದಲ್ಲಿದ್ದರು. ಘಟನಾ ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗು ಕ್ರಮ ಕೈಗೊಂಡಿದ್ದರು. ಇನ್ನು ನಾಗಬನದ ಮುಂಭಾಗದಲ್ಲಿ ಭಕ್ತರು ಹನುಮಾನ್ ಚಾಲಿಸಾ ಸಹಿತ ಭಜನೆ ಹಾಡುವ ಮೂಲಕ ಪ್ರತಿಭಟನೆ ನಡೆಸಿದರು.
DAKSHINA KANNADA
ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ
ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.
ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
LATEST NEWS
ಒಂದೇ ಒಂದು ಸೊಳ್ಳೆಗಳಿಲ್ಲದ ವಿಚಿತ್ರ ದೇಶವಿದು..!
ಐಸ್ಲ್ಯಾಂಡ್: ಬಿಸಿಲು, ಮಳೆ ಎರಡೂ ಕಾಣಿಸಿಕೊಂಡಾಗ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗ್ಯೂನಂತಹ ಮಾರಣಾಂತಿಕ ಕಾಯಿಲೆಗಳು ಬರಬಹುದು. ಸೊಳ್ಳೆಗಳಿಂದ ಹರಡುವ ರೋಗದಿಂದ ಪ್ರತಿವರ್ಷ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಪ್ರಪಂಚದಾದ್ಯಂತ ಒಟ್ಟು 3 ಸಾವಿರ ಜಾತಿಯ ಸೊಳ್ಳೆಗಳಿವೆ. ಆದರೆ ಒಂದೇ ಒಂದು ಸೊಳ್ಳೆಗಳೂ ಇಲ್ಲದ ವಿಶಿಷ್ಟ ದೇಶವೊಂದಿದೆ. ಹೌದು ಅದುವೇ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿರುವ ಐಸ್ಲ್ಯಾಂಡ್ ದೇಶ. ಇದು ಹಾವು ಮುಕ್ತ ಮಾತ್ರವಲ್ಲ, ಸೊಳ್ಳೆ ಮುಕ್ತ ದೇಶವೂ ಆಗಿದೆ.
ಐಸ್ಲ್ಯಾಂಡ್ ವಿಪರೀತ ಚಳಿ ಇರುವ ಪ್ರದೇಶವಾಗಿದೆ. ಅಲ್ಲಿನ ಶೀತ ವಾತಾವರಣದಲ್ಲಿ ಸೊಳ್ಳೆಗಳು ಬದುಕಲು ಸಾಧ್ಯವಿಲ್ಲ. ಐಸ್ಲ್ಯಾಂಡ್ ಹವಾಮಾನವು ಬಹಳ ವೇಗವಾಗಿ ಬದಲಾಗುತ್ತದೆ. ಹವಾಮಾನದಲ್ಲಿನ ತ್ವರಿತ ಬದಲಾವಣೆಯ ಕಾರಣ ಸೊಳ್ಳೆಗಳು ತಮ್ಮ ಜೀವನಚಕ್ರ ಸಾಗಿಸಲು ಸಾಧ್ಯವಿಲ್ಲ.
ಐಸ್ಲ್ಯಾಂಡ್ ತಾಪಮಾನ ಇಳಿಕೆ ಆರಂಭವಾದಾಗ ನೀರು ಮಂಜುಗಡ್ಡೆ ರೂಪ ತಾಳುತ್ತದೆ. ನೀರು ಸಂಪೂರ್ಣವಾಗಿ ಹೆಪ್ಪುಗಟ್ಟುವ ಕಾರಣ ಪ್ಯೂಪಾ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಐಸ್ಲ್ಯಾಂಡ್ನಲ್ಲಿ ತಾಪಮಾನವು ಮೈನಸ್ 38 ಡಿಗ್ರಿ ಸೆಲ್ಸಿಯಸ್ಗೆ ಇಳಿಯುತ್ತದೆ. ಅಂತಹ ಕಡಿಮೆ ತಾಪಮಾನದಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುವುದು ಅಸಾಧ್ಯ.
ಐಸ್ಲ್ಯಾಂಡ್ನಲ್ಲಿ ಸೊಳ್ಳೆಗಳಿಗೆ ಸಂಬಂಧಿಸಿದ ಒಂದು ಸಿದ್ಧಾಂತವೆಂದರೆ ಈ ದೇಶದ ನೀರು, ಮಣ್ಣು ಮತ್ತು ಸಾಮಾನ್ಯ ಪರಿಸರ ವ್ಯವಸ್ಥೆಯು ರಾಸಾಯನಿಕ ಸಂಯೋಜನೆಯ ಸೊಳ್ಳೆ ಜೀವನವನ್ನು ಬೆಂಬಲಿಸುವುದಿಲ್ಲ. ಆದರೆ ಐಸ್ಲ್ಯಾಂಡ್ನ ನೆರೆಯ ದೇಶಗಳಾದ ನಾರ್ವೆ, ಡೆನ್ಮಾರ್ಕ್, ಸ್ಕಾಟ್ಲೆಂಡ್ ದೇಶಗಳಲ್ಲಿ ಸೊಳ್ಳೆಗಳಿವೆ.
LATEST NEWS
ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಮಂಗಳೂರು : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ಆದ ನಂದಿನಿ ಜಾಗತಿಕ ಬ್ರಾಂಡ್ ಆಗಿ ಲಗ್ಗೆ ಇಟ್ಟಿದೆ. ವಿಶ್ವಕಪ್ ಟಿ-ಟ್ವೆಂಟಿ ಪಂದ್ಯಕೂಟದಲ್ಲಿ ನಂದಿನಿ ಹೆಸರು ರಾರಾಜಿಸಲಿದೆ. ಹೌದು, ನಂದಿನಿ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಕೃಷಿಕರ ಶ್ರಮವನ್ನು ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ವಿಶ್ವಕ್ಕೆ ಸಾರುವ ಯತ್ನದಲ್ಲಿದೆ.
ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ :
ಜೂನ್ ೧ ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿ ಅಮೆರಿಕದಲ್ಲಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದು ಪ್ರದರ್ಶಿಸಲಾಗುತ್ತಿದೆ. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಕೆಎಂಎಫ್ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.
ಸಿಎಂ ಟ್ವೀಟ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ೨೦ ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
ಇದನ್ನೂ ಓದಿ : ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?!
ರಾಜ್ಯದ ಜನರ ಮನೆ-ಮನ ಗೆದ್ದಿರುವ ನಂದಿನಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನಂದಿನಿ ಉತ್ಪನ್ನಗಳು ಕ್ರಿಕೆಟ್ ಆಟಗಾರರ ಹಾಗೂ ಕ್ರಿಕೆಟ್ ಪ್ರೇಮಿಗಳ ಮನ ಗೆಲ್ಲುವುದಂತು ನಿಜ ಸಂಗತಿ ಎಂದು ಬರೆದುಕೊಂಡಿದ್ದಾರೆ.
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
- LATEST NEWS5 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- FILM7 days ago
ನಟಿಗೆ ದುಬಾರಿ IPL ಟಿಕೆಟ್ ಖರೀದಿ ಮಾಡಿದ ‘ದಳಪತಿ ವಿಜಯ್’.! ಆ ನಟಿ ಯಾರು ಗೊತ್ತಾ?