Connect with us

DAKSHINA KANNADA

ಮುಡಿಪು: ದ್ವಿಚಕ್ರ ವಾಹನಕ್ಕೆ ಒಂದೇ ತಿಂಗಳಲ್ಲಿ ಬರೋಬ್ಬರಿ 9 ಸಾವಿರ ಟ್ರಾಫಿಕ್ ಫೈನ್-ಬೆಚ್ಚಿಬಿದ್ದ ಮಾಲಕಿ

Published

on

ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ‌ ನಡೆದಿದೆ.

ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ರೂ. 9,000 ದಷ್ಟು ದಂಡ ವಿಧಿಸಲಾಗಿದೆ. ಯಾವ ಕಡೆಯೂ ಇಲ್ಲದ ಕಾನೂನನ್ನು ಮುಡಿಪು ಜಂಕ್ಷನ್ನಿನಲ್ಲಿ ನಾಗುರಿ ಸಂಚಾರಿ ಠಾಣಾ ಪೊಲೀಸರು ಹೇರಿದ್ದಾರೆ ಅನ್ನುವ ಆರೋಪ ವ್ಯಕ್ತವಾಗಿದೆ.

ಮೆಡಿಕಲ್ ಸ್ಟೋರ್ ಮಾಲಕಿ ಶ್ರೀಮತಿ ಅವರನ್ನು ಮುಡಿಪುವಿನಲ್ಲಿ ಕಳೆದ ವರ್ಷದ ಆರಂಭದಲ್ಲಿ ತಡೆದ ಟ್ರಾಫಿಕ್ ಪೊಲೀಸರು ನಿಮ್ಮ ಸ್ಕೂಟರ್ ವಿರುದ್ಧ 5,000 ರೂಪಾಯಿ ದಂಡ ಹಾಕಿದ್ದಾರೆ. ದಂಡ ಪ್ರಯೋಗದ ಮಾಹಿತಿಯೇ ಇಲ್ಲದ ಮಹಿಳೆ ಅವರು ತನಗೇಕೆ ದಂಡ ಎಂದು ಕೇಳಿದಾಗ ನೋ ಪಾರ್ಕಿಂಗ್ ವಿಚಾರವನ್ನು ಟ್ರಾಫಿಕ್ ಪೊಲೀಸರು ಪ್ರಸ್ತಾಪಿಸಿದ್ದಾರೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಬದಿಯಲ್ಲಿ ವಾಹನವನ್ನು ನಿಲ್ಲಿಸಿರುವ ಕಾರಣಕ್ಕೆ ಸಂಚಾರಿ ಪೊಲೀಸರು ಛಾಯಾಚಿತ್ರ ತೆಗೆದು ಪೊಲೀಸ್ ಕಂಟ್ರೋಲ್ ರೂಮ್‌ಗೆ ಕಳಿಸುತ್ತಾರೆ. ಅಲ್ಲಿ ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ನೋಟೀಸನ್ನು ವಾಹನದ ನೋಂದಣಿದಾರರಿಗೆ ಕಳುಹಿಸಲಾಗುವುದು.

ಇದೀಗ ನಿಯಮ ಉಲ್ಲಂಘಿಸಿರುವ ದಂಡವನ್ನು ವಾಹನದ ಮಾಲೀಕರು ಮರುಪಾವತಿಸಲೇಬೇಕಾಗಿದೆ. ದಂಡದಲ್ಲಿ ವಿನಾಯಿತಿ ಪಡೆಯಬಹುದು ಹೊರತು ಪ್ರಕರಣ ಹಿಂಪಡೆಯಲಾಗುವುದಿಲ್ಲ. ದಿನದಲ್ಲಿ ಸಂಚಾರಿ ಠಾಣಾ ಪಿ.ಸಿ.ಆರ್‌, ಹೊಯ್ಸಳ, ಗಸ್ತು ನಿರತ ಸಂಚಾರಿ ಪೊಲೀಸರು ತಿರುಗುವ ಸಂದರ್ಭ ನಿಯಮ ಉಲ್ಲಂಘನೆ ಆದಾಗ ಫೋಟೋ ಕ್ಲಿಕ್ಕಿಸುತ್ತಾರೆ.

ದಿನದಲ್ಲಿ ಬೇರೆ ಬೇರೆ ಸಿಬ್ಬಂದಿ ಫೋಟೋ ತೆಗೆದು ಕಳುಹಿಸುತ್ತಾರೆ. ಆದರೆ ಒಂದು ದಿನದ ಒಂದು ಪ್ರಕರಣದ ದಂಡ ಮಾತ್ರ ಪಡೆಯುತ್ತೇವೆ. ನೋ ಪಾರ್ಕಿಂಗ್ ಸಂಬಂಧ ರೂ.500 ಮತ್ತು ಸಂಚಾರಕ್ಕೆ ಅಡ್ಡಿ ಸಂಬಂಧ ರೂ. 1000 ದಂಡ ವಿಧಿಸಲಾಗಿದೆ ಎಂದು ನಾಗುರಿ ಸಂಚಾರಿ ಠಾಣೆ ನಿರೀಕ್ಷಕ ಗುರು ಕಾಮತ್ ತಿಳಿಸಿದ್ದಾರೆ.

ತನಗೆ ಅದರ ಬಗ್ಗೆ ಗೊತ್ತಿಲ್ಲ. ಕೇಸ್ ಬಗ್ಗೆ ಯಾವುದೇ ನೋಟೀಸ್ ಬಂದಿಲ್ಲ ಎಂದು ಶ್ರೀಮತಿ ಅವರು ಪೊಲೀಸರಲ್ಲಿ ಹೇಳಿದ್ದಾರೆ. ತಿಂಗಳಿಗೆ 500 ರೂ. ಮತ್ತು 1,000 ರೂಪಾಯಿ ದಂಡ ಪ್ರಯೋಗದ ಎರಡು ನೋಟೀಸುಗಳು ಬರಲಾರಂಭಿಸಿದ್ದು ಈವರೆಗೆ 16 ನೋಟೀಸುಗಳು ಬಂದಿದೆ.

ಅವೆಲ್ಲವನ್ನು ಶ್ರೀಮತಿ ಅವರು ತನ್ನ ಮೆಡಿಕಲ್ ಶಾಪ್ ಎದುರುಗಡೆ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

LATEST NEWS

Trending