DAKSHINA KANNADA
ಮಂಗಳೂರಿನಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಢಿಕ್ಕಿ ಹೊಡೆದು ಸಾಗಿದ ಪಿಕಪ್-ಬೆನ್ನಟ್ಟಿ ಚಾಲಕನಿಗೆ ಧರ್ಮದೇಟು ನೀಡಿದ ಆಕ್ರೋಶಿತರು
ಮಂಗಳೂರು: ಚಾಲಕನೊಬ್ಬ ತನ್ನ ಪಿಕಪ್ ವಾಹನವನ್ನು ಬೇಕಾಬಿಟ್ಟಿ ಚಲಾಯಿಸಿ ಸಿಕ್ಕ ಸಿಕ್ಕ ವಾಹನಗಳಿಗೆ ಢಿಕ್ಕಿ ಹೊಡೆಸಿ ಜಖಂಗೊಳಿಸಿದ ಕಾರಣಕ್ಕೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಆಕ್ರೋಶಿತರಾದ ವಾಹನ ಚಾಲಕ- ಮಾಲಕರು ಪಿಕಪ್ ವಾಹನವನ್ನು ಸುಮಾರು 12 ಕಿಲೋ ಮೀಟರ್ ಗಳಷ್ಟು ದೂರ ಬೆನ್ನಟ್ಟಿ ಹೊಸ ಕಾವೇರಿ ಬಳಿ ತಡೆದು ನಿಲ್ಲಿಸಿ ಪಿಕಪ್ ಚಾಲಕ ಮತ್ತು ನಿರ್ವಾಹಕನಿಗೆ ಧರ್ಮದೇಟು ನೀಡಿದ್ದಾರೆ.
ಚಾಲಕ ಅಮಲಿನಲ್ಲಿ ವರ್ತಿಸುತ್ತಿದ್ದು ಆತ ಗಾಂಜಾ ಸೇವನೆ ಮಾಡಿದ್ದ ಎಂದು ಶಂಕಿಸಲಾಗಿದೆ.
ಬಜಪೆಯಿಂದ ಹೊರಟಿದ್ದ ಪಿಕಪ್ ವಾಹನ ಬಜಪೆ ಚೆಕ್ ಪೋಸ್ಟ್ ಬಳಿಯೇ 3 ಬೈಕ್ ಗೆ ತಾಗಿಸಿತ್ತು. ಆದರೆ ಚಾಲಕನು ಪಿಕಪ್ ವಾಹನವನ್ನು ಅಲ್ಲಿ ನಿಲ್ಲಿಸದೆ ಮುಂದಕ್ಕೆ ಚಲಾಯಿಸುತ್ತಾ ಹೋಗಿ ಮತ್ತೆ ಹಲವು ಬೈಕ್, ಕಾರು, ಬಸ್ ಗಳಿಗೆ ಢಿಕ್ಕಿ ಹೊಡೆಸಿದ್ದನು.
ಇದರಿಂದ ಆಕ್ರೋಶಿತರಾದ ಸಾರ್ವಜನಿಕರು ಪರಾರಿಯಾಗಲು ಯತ್ನಿಸಿದ್ದ ಪಿಕಪ್ ಚಾಲಕನನ್ನು ಸುಮಾರು ಹತ್ತು ಬೈಕ್ ಗಳಲ್ಲಿ ಬೆನ್ನಟ್ಟಿದ್ದರು.
ಸುಮಾರು 12 ಕಿಲೋ ಮೀಟರ್ ಕ್ರಮಿಸಿದ ಬಳಿಕ ಹೊಸ ಕಾವೇರಿ ಬಳಿ ಪಿಕಪ್ ವಾಹನವನ್ನು ಅಡ್ಡ ಗಟ್ಟುವಲ್ಲಿ ಯಶಸ್ವಿಯಾದ ಆಕ್ರೋಶಿತರ ಗುಂಪು ಪಿಕಪ್ ಚಾಲಕ ಮತ್ತು ನಿರ್ವಾಹಕನನ್ನು ವಾಹನದಿಂದ ಹೊರಗೆಳೆದು ಮುಖ, ಮೂತಿ ನೋಡದೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪಿಕಪ್ ಚಾಲಕ ಮತ್ತು ನಿರ್ವಾಹಕರಿಬ್ಬರೂ ಗಾಂಜಾ ನಶೆಯಲ್ಲಿದ್ದರು ಎನ್ನಲಾಗಿದೆ. ಹಲ್ಲೆ ನಡೆಸುವ ವೇಳೆ ಚಾಲಕನು ಹಿಂದೂ ಧರ್ಮೀಯನೆಂದು ನಂಬಿಸಲು ಹಿಂದೂ ಹೆಸರು ಹೇಳಿದ್ದನು.
ಆದರೆ ಡ್ರೈವಿಂಗ್ ಲೈಸೆನ್ಸ್ ಪರಿಶೀಲನೆ ವೇಳೆ ಅದರಲ್ಲಿ ಮುಸ್ಲಿಮ್ ಹೆಸರು ಕಂಡು ಬಂದಿತ್ತು. ಹಿಂದೂ ಹೆಸರು ಹೇಳಿದ್ದಕ್ಕಾಗಿ ಬೆನ್ನಟ್ಟಿ ಬಂದ ಜನರು ತೀವ್ರ ಆಕ್ರೋಶಗೊಂಡಿದ್ದರು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!