Connect with us

LATEST NEWS

ಚಿಕ್ಕಮ್ಮನ ಮಗನ ಜೊತೆ ಅನೈತಿಕ ಸಂಬಂಧ.. ಗಂಡನಿಗೇ ಸುಪಾರಿ ಕೊಟ್ಟು ಹತ್ಯೆಗೈದ ಮಾಯಾಂಗನೆ..!?

Published

on

ಆತ ಬರ್ತಡೇ ಆಚರಿಸಿಕೊಳ್ಳುವ ಸಂಭ್ರಮದಲ್ಲಿದ್ದ. ರಾತ್ರಿ ಬರ್ತಡೇ ಆಚರಿಸಿಕೊಂಡ ಯುವಕ ಬೆಳಗ್ಗೆ ಅನುಮಾನಾಸ್ಪದವಾಗಿ ಸಾವನಪ್ಪಿದ್ದ.

ತುಮಕೂರು :  ಫೆಬ್ರವರಿ ತಿಂಗಳು ಬಂದರೆ ಪ್ರೇಮಿಗಳಿಗೆ ಸಂಭ್ರಮವೋ ಸಂಭ್ರಮ. ಪರಸ್ಪರ ಪ್ರೀತಿ ಹಂಚುಕೊಳ್ಳುವ ಸುದಿನ ಪ್ರೇಮಿಗಳ ದಿನಾಚರಣೆ. ಅದೇ ತಿಂಗಳಲ್ಲಿ ಆತ ಬರ್ತಡೇ ಆಚರಿಸಿಕೊಳ್ಳುವ ಸಂಭ್ರಮದಲ್ಲಿದ್ದ. ರಾತ್ರಿ ಬರ್ತಡೇ ಆಚರಿಸಿಕೊಂಡ ಯುವಕ ಬೆಳಗ್ಗೆ ಅನುಮಾನಾಸ್ಪದವಾಗಿ ಸಾವನಪ್ಪಿದ್ದ.

ಎಲ್ಲರೂ ಅದನ್ನು ಆತ್ಮಹತ್ಯೆ ಅಂತಲೇ ತಿಳಿದು ಕೊಂಡಿದ್ರು. ಆದರೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.ಜಿಲ್ಲೆಯ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯಲ್ಲಿ ನಡೆಯಬಾರದ ಘಟನೆಯೊಂದು ನಡೆದಿದೆ. ಗ್ರಾಮದ ಮಂಜುನಾಥ್ ಹಾಗೂ ಹರ್ಷಿತಾ ಇಬ್ಬರು ಯುವ ದಂಪತಿ. ಇದೀಗ ಹರ್ಷಿತಾ, ತನ್ನ ಅಕ್ರಮ ಬಂಧಕ್ಕಾಗಿ ಗಂಡನನ್ನೇ ಕೊಲೆ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಹರ್ಷಿತಾ ಯಾರಿಗೆ ಸುಪಾರಿ ಕೊಟ್ಟಿದ್ದು ಅನ್ನೋ ವಿಚಾರ ಕೂಡ ಬಯಲಿಗೆ ಬಂದಿದೆ. ಹರ್ಷಿತಾಳ ಚಿಕ್ಕಮ್ಮನ ಮಕ್ಕಳಾದ ರಘು ಹಾಗೂ ಪ್ರಿಯತಮ ರವಿಕಿರಣ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಜೊತೆಗೆ ಹರ್ಷಿತಾಳನ್ನೂ ಕೂಡ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಫೆಬ್ರವರಿ 3ರಂದು ಕುಣಿಗಲ್ ಪಟ್ಟಣದಲ್ಲಿ ಮಂಜುನಾಥ, ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡು ರಾತ್ರಿ ಸೀನಪ್ಪನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಲಗಿರುತ್ತಾನೆ. ಮಧ್ಯರಾತ್ರಿ 12ರ ಸಮಯದಲ್ಲಿ ಫೋನ್ ಕಾಲ್ ಒಂದು ಬರುತ್ತದೆ. ಕೂಡಲೇ ಅಲ್ಲಿಂದ ಎದ್ದು ಹೋಗಿದ್ದ ಮಂಜುನಾಥ್ ಮತ್ತೆ ವಾಪಸ್ ಬರಲೇ ಇಲ್ಲ.ಬೆಳಗ್ಗೆ ಎದ್ದು ಹುಡುಕಾಡಿದಾಗ ಮಂಜುನಾಥ್ ಶವ ಊರಿನ ಕಿತ್ನಾಮಂಗಲ ಕೆರೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ‌ ಪತ್ತೆಗೆ ತಂಡ ರಚಿಸಿದ್ದರು. ತೀವ್ರ ವಿಚಾರಣೆ ವೇಳೆ ಕೊಲೆಗೆ ಹೆಂಡತಿಯೇ ಸುಪಾರಿ ನೀಡಿರೋದು ಕುಣಿಗಲ್ ಪೊಲೀಸರು ತಿಳಿದುಬಂದಿದೆ. ಚಿಕ್ಕಮ್ಮನ ಮಗನ ಜೊತೆ ಅಕ್ರಮ ಸಂಬಂಧಕ್ಕಾಗಿ ಸಪ್ತಪದಿ ತುಳಿದು, ಕೈಹಿಡಿದ ಗಂಡನನ್ನೇ ಹತ್ಯೆ ಮಾಡಿಸಿದ್ದಾಳೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

LATEST NEWS

ನ್ಯೂಡಲ್ಸ್ ಪ್ಯಾಕೇಟ್ ನಲ್ಲಿ ಸಿಕ್ಕಿತು 6 ಕೋಟಿ ರೂ. ಮೌಲ್ಯದ ಡೈಮಂಡ್!

Published

on

ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದ್ದ ವಜ್ರಗಳ ಹರಳುಗಳು ಪತ್ತೆಯಾಗಿವೆ. 6.48 ಕೋಟಿ ರೂಪಾಯಿ ಎಂದು ಮೌಲ್ಯದ ಹರಳನ್ನು ವಶಕ್ಕೆ ಪಡೆಯಲಾಗಿದೆ.


ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಹಲವರು ವಶಕ್ಕೆ

ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ.

ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆಹಿಡಿಯಲಾಯಿತು. ಈ ವೇಳೆ 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್​ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್​ನಲ್ಲಿ ತನ್ನ ಬೆಲ್ಟ್​​ನಲ್ಲಿ ಅಡಗಿಸಿಟ್ಟಿದ್ದ ಬಗ್ಗೆ ವರದಿಯಾಗಿದೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending