LATEST NEWS
ತನ್ನ ಮಗನಿಗಿಂತ ಜಾಸ್ತಿ ಅಂಕ ಪಡೆದಿದ್ದಕ್ಕೆ 8 ಕ್ಲಾಸಿನ ಬಾಲಕನ ಕೊಲೆಗೈದ ಮಹಿಳೆ
ಪುದುಚೇರಿ: ತನ್ನ ಮಗನಿಗಿಂತ ಜಾಸ್ತಿ ಅಂಕ ಪಡೆದಿದ್ದನ್ನು ಸಹಿಸದ ತಾಯಿಯೊಬ್ಬಳು ಮಗನ ಸ್ನೇಹಿತನಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿದ ಕೊಲೆಗೈದ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕನ ಹೆಸರು ಬಾಲ ಮಣಿಕಂದನ್. ಬಂಧಿತ ಮಹಿಳೆಯನ್ನು ಸಹಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ.
ಘಟನೆ ವಿವರ
ವಿಕ್ಟೋರಿಯಾಳ ಮಗ ಮತ್ತು ಬಾಲಮಣಿಕಂದನ್, ಕಾರೈಕಲ್ ನೆಹರು ನಗರದಲ್ಲಿರುವ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿಗಳು. ಪರೀಕ್ಷೆಯಲ್ಲಿ ತನ್ನ ಮಗನಿಗಿಂತ ಹೆಚ್ಚು ಅಂಕ ಪಡೆದಿದ್ದನ್ನು ಸಹಿಸಿಕೊಳ್ಳದ ವಿಕ್ಟೋರಿಯಾ, ವಿಷವುಣಿಸಿ ಬಾಲಮಣಿಕಂದನ್ನನ್ನು ಕೊಲೆ ಮಾಡಿದ್ದಾಳೆ.
ಒಂದು ಬಾಟಲಿಗೆ ತಂಪು ಪಾನೀಯ ತುಂಬಿ, ಅದಕ್ಕೆ ವಿಷದ ಮಾತ್ರೆಗಳನ್ನು ಬೆರೆಸಿದ ವಿಕ್ಟೋರಿಯಾ, ಶಾಲೆಯ ಸೆಕ್ಯುರಿಟಿ ಗಾರ್ಡ್ ಕೈಗೆ ಕೊಟ್ಟು, ಅದನ್ನು ತನ್ನ ಮಗನ ಕ್ಲಾಸ್ಮೇಟ್ ಬಾಲ ಮಣಿಕಂದನ್ ಕೊಡುವಂತೆ ಹೇಳಿದ್ದಾಳೆ.
ಅದನ್ನು ಕುಡಿದ ಮಣಿಕಂದನ್, ಸಂಜೆ ಮನೆಗೆ ಹೋಗುವಾಗ ತೀವ್ರ ವಾಂತಿ ಮಾಡಿಕೊಂಡು ಸ್ಥಳದಲ್ಲೇ ಕುಸಿದುಬಿದ್ದ. ತಕ್ಷಣ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ.
ವೈದ್ಯರು ಪರೀಕ್ಷೆ ಮಾಡಿದಾಗ ವಿಷ ಸೇವನೆ ಮಾಡಿರುವುದಾಗಿ ತಿಳಿಯಿತು. ಅದಕ್ಕೂ ಮುನ್ನವೇ ಮಣಿಕಂದನ್, ತನ್ನ ಕ್ಲಾಸ್ಮೇಟ್ ತಾಯಿ ಸೆಕ್ಯುರಿಟಿ ಗಾರ್ಡ್ ಕೈಯಲ್ಲಿ ಜ್ಯೂಸ್ ಕಳಿಸಿದ್ದಾಗಿ ಪಾಲಕರ ಬಳಿ ಹೇಳಿದ್ದ. ನಂತರ ಸೆಕ್ಯುರಿಟಿ ಗಾರ್ಡ್ ವಿಚಾರಣೆ ನಡೆಸಿದಾಗ, ತಾನು ಹುಡುಗನ ಸಂಬಂಧಿ ಎಂದು ಮಹಿಳೆ ಹೇಳಿದಳು ಮತ್ತು ಜ್ಯೂಸ್ ಅನ್ನು ಹುಡುಗನಿಗೆ ನೀಡುವಂತೆ ಕೇಳಿದಳು ಎಂದು ಬಹಿರಂಗಪಡಿಸಿದರು.
ಇದಾದ ಬಳಿಕ ಸಿಸಿಟಿವಿ ದೃಶ್ಯಗಳಿಂದ ವಿಕ್ಟೋರಿಯಾಳನ್ನು ಗುರುತಿಸಿ, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.
DAKSHINA KANNADA
ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!
ಮಂಗಳೂರು ( ರಾಜಸ್ಥಾನ ) : ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.
ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :
ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.
DAKSHINA KANNADA
ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ
ಮಂಗಳೂರು : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.
ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.
DAKSHINA KANNADA
ನಿಮ್ಮ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನು ಇಟ್ಟರೆ ಶುಭ
ಮಂಗಳೂರು: ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ. ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಬಹುದು. ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡ ಹೆಚ್ಚಾಗುತ್ತದೆ.
ಸ್ಫಟಿಕ ಲೋಹ
ವಾಸ್ತು ಪ್ರಕಾರ ನಿಮ್ಮ ಆಫೀಸ್ ಡೆಸ್ಕ್ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ.
ಬಿದಿರಿನ ಗಿಡ
ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್ ಮೇಲೆ ಇಡುವುದು ಬಹಳ ಮಂಗಳಕರ. ಇದು ನಿಮಗೆ ಚೈತನ್ಯ ತುಂಬುತ್ತದೆ.
ಬುದ್ಧನ ಪ್ರತಿಮೆ
ಬುದ್ಧನ ಪ್ರತಿಮೆಯನ್ನು ಡೆಸ್ಕ್ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.
ಹಡಗು ಚಿತ್ರವಿರುವ ನಾಣ್ಯ
ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು.
ಗಣೇಶ ಮೂರ್ತಿ
ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ.
- FILM7 days ago
“ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
- DAKSHINA KANNADA7 days ago
ಮಂಗಳೂರಿನಲ್ಲಿ ಬೆಳಕಿಗೆ ಬಂತು ಬಹುದೊಡ್ಡ ಆನ್ಲೈನ್ ವಂಚನೆ ಪ್ರಕರಣ; ಕೋಟಿಗಟ್ಟಲೆ ಕಳೆದುಕೊಂಡ ನಿವೃತ್ತ ಇಂಜಿನಿಯರ್
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು