Connect with us

DAKSHINA KANNADA

ಬಸ್‌ನಲ್ಲಿ ಯುವತಿಗೆ ಕಿರುಕುಳ : ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಿದ ಆಯುಕ್ತರು..!

Published

on

ಬಸ್‌ನಲ್ಲಿ ಯುವತಿಗೆ ಕಿರುಕುಳ : ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಿದ ಆಯುಕ್ತರು..!

ಮಂಗಳೂರು : ನಗರದ ಖಾಸಗಿ ಬಸ್‌ನಲ್ಲಿ ಯುವತಿಗೆ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತ ಸಾಮಾಜಿಕ ಜಾಲತಾಣದಲ್ಲಿ ಯುವತಿಯು ಪೋಸ್ಟ್ ಹಂಚಿಕೊಂಡಿರುವುದು ಗಮನಕ್ಕೆ ಬಂದ ಬಳಿಕ ಅವರನ್ನು ಸಂಪರ್ಕಿಸಲಾಗಿದೆ. ಯುವತಿಯೇ ಉಳ್ಳಾಲ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಒಂದು ವೇಳೆ ಯುವತಿ ದೂರು ನೀಡದಿದ್ದಲ್ಲಿ ಸ್ವಯಂ ಪ್ರೇರಿತ ದೂರನ್ನು ಪೊಲೀಸರೇ ದಾಖಲಿಸುತ್ತಿದ್ದರು ಎಂದು ಹೇಳಿದರು.

ಈ ಬಗ್ಗೆ ಶೀಘ್ರದಲ್ಲಿಯೇ ಬಸ್ ಸಂಘ, ಮಾಲಕರ ಸಭೆ ಕರೆಯಲಾಗುವುದು. ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲು ಡಿಸಿಪಿಗೆ ಸೂಚಿಸಲಾಗಿದೆ ಎಂದರು.

ಬಸ್‌ಗಳಲ್ಲಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಇಂತಹ ಘಟನೆಗಳನ್ನು ತಡೆಗಟ್ಟಬಹುದು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಮಹಿಳಾ ತಂಡವೊಂದನ್ನು ರಚಿಸಿ, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಚಿಂತಿಸಿದ್ದೇವೆ. ಶೀಘ್ರದಲ್ಲಿಯೇ ಈ ಕಾರ್ಯಾಚರಣೆ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.

ಜ.14ರಂದು ಅಪರಾಹ್ನ 3:45ರ ಸುಮಾರಿಗೆ ಯುವತಿಯೊಬ್ಬಳು ಖಾಸಗಿ ಬಸ್‌ನಲ್ಲಿ ದೇರಳಕಟ್ಟೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದರು. ಈ ವೇಳೆ ಯುವತಿ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಆಕೆಯ ದೇಹ ಸ್ಪರ್ಶಿಸಲು ಆರಂಭಿಸಿದ್ದಾನೆ.

ಈ ವೇಳೆಯಲ್ಲಿ ಯುವತಿ ವಿರೋಧ ವ್ಯಕ್ತಪಡಿಸಿದರೂ ಆಕೆಯ ಬೆಂಬಲಕ್ಕೆ ಬಸ್ಸಿನಲ್ಲಿದ್ದ ಯಾವ ಪ್ರಯಾಣಿಕರೂ ಮುಂದಾಗಿರಲಿಲ್ಲ.

ಚಾಲಕ, ಬಸ್ ನಿರ್ವಾಹಕರೂ ಸ್ಪಂದಿಸಿರಲಿಲ್ಲವೆಂದು ಯುವತಿ ಇನ್‌ಸ್ಟಾಗ್ರಾಂನಲ್ಲಿ ಘಟನೆಯ ವಿವರ ಹಂಚಿಕೊಂಡಿದ್ದರು ಎಂದು ಆಯುಕ್ತರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶೀಘ್ರದಲ್ಲಿ ಪತ್ತೆಹಚ್ಚಿ, ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಯು ಯಾವುದೇ ಭಾಗದಲ್ಲಿ ನಡೆದರೂ 112 ನಂಬರ್‌ಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!

Published

on

ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್‌ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.

ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್‌ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ;  ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.

2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ತನ್ನ ಬ್ರ್ಯಾಂಡಿಂಗ್‌ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.

ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್‌ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

Continue Reading

DAKSHINA KANNADA

ಪದ್ಮರಾಜ್ ಪೂಜಾರಿ ಪ್ರಚಾರ ಶೈಲಿ..! ಜನಾರ್ದನ ಪೂಜಾರಿಯನ್ನ ನೆನೆದ ಜನ…!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಪ್ರಚಾರ ಶೈಲಿಗೆ ಜನ ಜನಾರ್ದನ ಪೂಜಾರಿಯವರನ್ನು ನೆನಪಿಸಿಕೊಳ್ತಾ ಇದ್ದಾರೆ. ಗುರುವಿನಂತೆ ಶಿಷ್ಯ ಕೂಡಾ ಪ್ರಚಾರ ಮಾಡ್ತಾ ಇರೋದು ನೋಡಿದ ಜನ ಇವರು ನಿಜವಾಗಿಯೂ ಜನಾರ್ದನ ಪೂಜಾರಿ ಅವರಂತೆ ಜನನಾಯಕ ಅಂತಿದ್ದಾರೆ.

ಜನಾರ್ದನ ಪೂಜಾರಿ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕೊನೆಯ ಸ್ಪರ್ಧೆಯನ್ನ ನೀಡಿದ್ದರು. ಹತ್ತು ವರ್ಷದ ಬಳಿಕ ಅವರ ಶಿಷ್ಯ ಪದ್ಮರಾಜ್ ಪೂಜಾರಿ ಈಗ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಪದ್ಮರಾಜ್ ಪೂಜಾರಿ ಅವರು ಜನರೊಂದಿಗೆ ಬೆರೆಯುವ ರೀತಿ, ಜನರಿಗೆ ತೋರಿಸುವ ಪ್ರೀತಿ, ಹಾಗೂ ಪ್ರಚಾರದ ವೇಳೆ ಅವರು ವರ್ತಿಸೋ ರೀತಿ ನೋಡಿದ ಸಾಕಷ್ಟು ಜನ ಜನಾರ್ಧನ ಪೂಜಾರಿ ಅವರ ಚುನಾವಣ ಪ್ರಚಾರದ ವೈಖರಿಯನ್ನು ನೆನಪಿಸಕೊಳ್ಳುವಂತೆ ಮಾಡಿದೆ.

ಸಂಸದರಾಗಿ , ಕೇಂದ್ರ ಸಚಿವರಾಗಿ, ಬಡವರ ಬಂಧು ಅಂತ ಕರೆಸಿಕೊಂಡಿದ್ದ ಜನಾರ್ದನ ಪೂಜಾರಿ ಅವರಿಗೆ ಚುನಾವಣೆಯಲ್ಲಿ ಸೋಲಾಗಿದ್ರೂ, ಜನರು ಮಾತ್ರ ಅವರನ್ನು ಮರೆತಿಲ್ಲ. ಜನಾರ್ದನ ಪೂಜಾರಿಯವರು ರಾಜಕೀಯದಿಂದ ದೂರ ಉಳಿದು ವರ್ಷಗಳೇ ಕಳೆದ್ರು ಜನರಿಗೆ ಅವರ ಮೇಲಿರೋ ಪ್ರೀತಿ ಅಭಿಮಾನ ಕಡಿಮೆ ಆಗಿಲ್ಲ. ಚುನಾವಣಾ ಸಮುಯದಲ್ಲಿ ಪ್ರಚಾರಕ್ಕೆ ಇಳಿಯುತ್ತಿದ್ದ ಜನಾರ್ದನ ಪೂಜಾರಿ ಅವರ ಪ್ರಚಾರ ವೈಖರಿಯನ್ನಂತು ಜನ ಮರೆಯೋದೆ ಕಷ್ಟ. ಮುಂಜಾನೆಯಿಂದ ರಾತ್ರಿ ವರೆಗೂ ಅವರು ಮತಯಾಚನೆ ಮಾಡುತ್ತಿದ್ದ ರೀತಿಗೆ ಜನರೇ ದಂಗಾಗಿ ಹೋಗ್ತಾ ಇದ್ರು. ಇನ್ನು ನಡೆದುಕೊಂಡು ಮತಯಾಚಿಸೋ ಜನಾರ್ದನ ಪೂಜಾರಿ ಅವರ ಜೊತೆ ಕಾರ್ಯಕರ್ತರು ಓಡಿಕೊಂಡು ಹೋಗಬೇಕು ಅನ್ನುವಷ್ಟು ವೇಗವಾಗಿ ಸಾಗ್ತಾ ಇದ್ರು. ಅದೇ ಸೇಮ್ ಟು ಸೇಮ್ ಅನ್ನುವಂತೆ ಪದ್ಮರಾಜ್ ಪೂಜಾರಿ ಕೂಡಾ ಪ್ರಚಾರ ಮಾಡ್ತಾ ಇದ್ದಾರೆ.

ಪದ್ಮರಾಜ್ ಪೂಜಾರಿಯವರು ಒಮ್ಮೆ ಬೈಕ್‌ನಲ್ಲಿ ಮತಯಾಚನೆಗೆ ತೆರಳಿದ್ರೆ, ಮತ್ತೊಮ್ಮೆ ಜೀಪ್ ಏರಿ ರೋಡ್ ಶೋ ನಡೆಸ್ತಾರೆ. ಇನ್ನು ಗ್ರಾಮೀಣ ಪ್ರದೇಶದಲ್ಲಿ ಪಾದಯಾತ್ರೆ ಮಾಡಿದ್ರೆ ಅವರ ವೇಗದ ನಡಿಗೆ ಮತ್ತು ಓಡಿಕೊಂಡು ಹೋಗುವ ಅವರ ಶೈಲಿ ಜನಾರ್ದನ ಪೂಜಾರಿ ಅವರನ್ನು ನೆನಪಿಸುತ್ತದೆ. ಎಲ್ಲೇ ಹೋದ್ರು ಜನ ಪದ್ಮರಾಜ್ ಅವರನ್ನು ಮುತ್ತಿಕೊಂಡು ಪ್ರೀತಿಯಿಂದ ಮಾತಾಡಿಸ್ತಾ ಇದ್ದಾರೆ. ಅದೇ ರೀತಿ ಪದ್ಮಾರಾಜ್ ಕೂಡಾ ಜನರಿಗೆ ಬಹಳಷ್ಟು ಹತ್ತಿರವಾಗಿ ಅಭಿಮಾನ ಪ್ರೀತಿಯನ್ನ ಗಳಿಸಿಕೊಂಡಿದ್ದಾರೆ. ಸದ್ಯಕ್ಕಂತು ಜನ ಜನಾರ್ದನ ಪೂಜಾರಿ ಅವರ ಸ್ಥಾನ ತುಂಬಲು ಪದ್ಮರಾಜ್ ಅವರೇ ಸರಿಯಾದ ಅಭ್ಯರ್ಥಿ ಅಂತ ಮಾತನಾಡುತ್ತಿದ್ದು, ಅವರ ಗೆಲುವಿಗೆ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Continue Reading

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

LATEST NEWS

Trending