LATEST NEWS
25 ಬಾರಿ ಪ್ರಿಯತಮರೊಂದಿಗೆ ಓಡಿಹೋದರೂ ಅವಳೇ ನನ್ನ ಮುದ್ದಿನ ಹೆಂಡತಿ ಎಂದ ಪತಿ
ಗುವಾಹಾಟಿ: ಮದುವೆಯಾಗಿ ಗಂಡನೊಂದಿಗೆ ವಾಸವಿದ್ದರೂ 25 ಬಾರಿ ಹಲವು ಪ್ರಿಯತಮರೊಂದಿಗೆ ಓಡಿಹೋದರೂ ಪತಿ ಮಾತ್ರ ನನಗೆ ಅವಳೇ ಹೆಂಡತಿ ಬೇಕೆಂದು ಕೇಳಿಕೊಂಡ ಘಟನೆ ಅಸ್ಸಾಂ ರಾಜ್ಯದ ನಾಗಾಂವ್ ಜಿಲ್ಲೆಯ ಧಿಂಗ್ ಲಹ್ಕರ್ ಗ್ರಾಮದಲ್ಲಿ ನಡೆದಿದೆ.
40 ವರ್ಷದ ಮಹಿಳೆಯೊಬ್ಬಳು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಾಫಿಜುದ್ದೀನ್ರನ್ನು ವಿವಾಹವಾಗಿದ್ದಾಳೆ.
ಮದುವೆಯ ಬಳಿಕ ಹತ್ತು ವರ್ಷಗಳಲ್ಲಿ 25 ಬಾರಿ ಹಲವು ಪುರುಷರೊಂದಿಗೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ.
ಹೀಗಿದ್ದರೂ ಪತಿ ಮತ್ತು ಅತ್ತೆ ಮಾತ್ರ ಯಾವುದೇ ದೂರು ನೀಡದೆ, ಆಕೆಯನ್ನು ಮರಳಿ ಮನೆಗೆ ಸೇರಿಸಿಕೊಂಡಿದ್ದಾರೆ.
ಅಲ್ಲದೇ ಈ ಮಹಿಳೆಗೆ 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದು, 6 ವರ್ಷದ ಓರ್ವ ಮಗಳಿದ್ದಾಳೆ.
ಈ ಬಗ್ಗೆ ಆಕೆಯ ನೆರೆಮನೆಯವರು ಈ ಬಗ್ಗೆ ಮಾತನಾಡಿ, ಯುವಕನೊಂದಿಗೆ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಳು.
ಅಲ್ಲದೇ ಅನೇಕ ಬಾರಿ ಪ್ರೀತಿ ಮಾಡಿ ಓಡಿ ಹೋಗಿದ್ದಳು. ಆದರೆ ಕೆಲವು ತಿಂಗಳ ಬಳಿಕ ಅತ್ತೆ ಮನೆಗೆ ಮರಳಿದ್ದಳು ಎಂದು ಹೇಳಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಮಹಿಳೆಯ ಪತಿ ಮಾಫಿಜುದ್ದೀನ್, “ನನ್ನ ಹೆಂಡತಿ ವಾಪಸ್ ಬಂದ ಬಳಿಕ ಮತ್ತೊಮ್ಮೆ ಓಡಿ ಹೋಗುವುದಿಲ್ಲ ಎಂದು ಮಾತು ನೀಡಿದ್ದಳು. ಆದರೆ ಆ ಮಾತನ್ನು ಈಗ ಉಳಿಸಿಕೊಂಡಿಲ್ಲ.
ಕೆಲವು ಬಾರಿ ನನ್ನ ಹೆಂಡತಿ ತನ್ನ ಸಂಬಂಧಿಕರ ಮನೆಗೆ ಹೋಗಿರುವುದಾಗಿ ಹೇಳುತ್ತಿದ್ದಳು. ಮತ್ತೆ ಕೆಲವು ಬಾರಿ ತನ್ನ ಸಂಬಂಧಿಗೆ ಅನಾರೋಗ್ಯದ ಕಾರಣ ಅವರನ್ನು ನೋಡಲು ಹೋಗಿದ್ದೆ ಎನ್ನುತ್ತಿದ್ದಳು.
ನಮಗೆ ಮೂವರು ಮಕ್ಕಳಿದ್ದಾರೆ. ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ನಾವು ಆಕೆಯನ್ನು ಮರಳಿ ಮನೆಗೆ ಸೇರಿಸಿಕೊಳ್ಳುತ್ತಿದ್ದೇವೆ,” ಎಂದಿದ್ದಾರೆ.
“ಶನಿವಾರ ನಾನು ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗಿದಾಗ, ನೆರೆ ಮನೆಯವರ ಬಳಿ ನನ್ನ ಮೂರು ತಿಂಗಳ ಮಗುವನ್ನು ಬಿಟ್ಟು ಓಡಿ ಹೋಗಿದ್ದಾಳೆ ಎಂದು ನನ್ನ ತಂದೆ ತಿಳಿಸಿದರು. ಅಲ್ಲದೇ ನೆರೆಮನೆಯವರು, ಆಡುಗಳಿಗೆ ಮೇವು ತರಲು ಹೋಗಿಬರುವುದಾಗಿ ಹೇಳಿ ಹೊರಟಿದ್ದಳು,” ಎಂದು ತಿಳಿಸಿದ್ದಾರೆ.
“ಇದೀಗ ಮತ್ತೆ ತಮ್ಮ ಹೆಂಡತಿ ಯಾವಾಗ ಮನೆಗೆ ಹಿಂದಿರುಗುತ್ತಾಳೆ ಅಂತ ಗೊತ್ತಿಲ್ಲ. ಅಲ್ಲದೇ ಮನೆಯಲ್ಲಿದ್ದ 22,000 ರೂ. ಹಣ ಮತ್ತು ಕೆಲವು ವಸ್ತುಗಳನ್ನು ಜೊತೆಗೆ ತೆಗೆದುಕೊಂಡು ಹೋಗಿದ್ದಾಳೆ. ಆದರೆ ಯಾರ ಜೊತೆಗೆ ಹೋಗಿದ್ದಾಳೆ ಎಂಬ ಬಗ್ಗೆ ಮಾಹಿತಿ ಇಲ್ಲ.
ಇದು ಅವಳು ಓಡಿ ಹೋಗುತ್ತಿರುವುದು 25ನೇ ಬಾರಿ.
ಆದರೂ ನಾನು ಅವಳನ್ನು ಪ್ರಾಮಾಣಿಕವಾಗಿ ಪ್ರೀತಿಸುತ್ತೇನೆ ಹಾಗೂ ಅವಳನ್ನು ಮತ್ತೆ ಒಪ್ಪಿಕೊಳ್ಳುತ್ತೇನೆ.
ನಮಗೆ ಇನ್ನೂ ಸಣ್ಣಸಣ್ಣ ಮಕ್ಕಳಿದ್ದಾರೆ. ನಾನು ಅವಳನ್ನು ಒಪ್ಪಿಕೊಳ್ಳದಿದ್ದರೆ, ಮಕ್ಕಳನ್ನು ನೋಡಿಕೊಳ್ಳುವವರು ಯಾರು? ಕಾನೂನು ಮತ್ತು ಇತರೆ ಸಮಸ್ಯೆಗಳು ಆಗಬಾರದೆಂದು ನಾನು ಇನ್ನೂ ಪೊಲೀಸರಿಗೆ ದೂರು ನೀಡಿಲ್ಲ,” ಎಂದು ಪತಿ ಮಾಫಿಜುದ್ದೀನ್ ಹೇಳಿದ್ದಾರೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.