LATEST NEWS
ಕೆಸರು ನೀರಿನಲ್ಲಿ ಕುಳಿತ ಮಹಿಳೆ..! ರಸ್ತೆ ದುರಾವಸ್ಥೆಗೆ ವಿನೂತನ ಪ್ರತಿಭಟನೆ..!
ತೆಲಂಗಾಣ: ಮೂಲಭೂತ ವಿಚಾರಗಳಲ್ಲಿ ಸರ್ಕಾರ ತೋರುವ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಪ್ರತಿಭಟನೆ ನಡೆಸುವುದ ಸಾಮಾನ್ಯ. ತಮ್ಮ ಬೇಡಿಕೆಗೆ ಸರ್ಕಾರ ಮಣಿಯದೇ ಇದ್ದಾಗ ಇಂತಹ ಪ್ರತಿಭಟನೆಗಳು ಅನಿವಾರ್ಯವಾಗಿರುತ್ತದೆ. ಅಂತಹದೇ ಒಂದು ಘಟನೆ ತೆಲಂಗಾಣ ರಾಜ್ಯದಲ್ಲಿ ನಡದಿದ್ದು, ರಸ್ತೆಯ ದುರಾವಸ್ಥೆ ನೋಡಿ ಬೇಸತ್ತ ಮಹಿಳೆಯೊಬ್ಬರು ಪ್ರತಿಭಟನೆ ನಡೆಸಿದ್ದಾರೆ. ಕೆಸರು ನೀರು ತುಂಬಿ ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿದ್ದ ಹೊಂಡದಲ್ಲಿ ಕೆಸರು ನೀರಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಈ ರಸ್ತೆ ಹದಗೆಟ್ಟಿದ್ದು, ಮಳೆಗಾಲದಲ್ಲಿ ತೀವ್ರ ಸಮಸ್ಯೆಗೆ ಕಾರಣವಾಗಲಿದೆ ಅಂತ ಇವರು ಈ ಹಿಂದೆ ಹಲವು ಮನವಿಗಳನ್ನು ನೀಡಿದ್ದಾರೆ. ತೆಲಂಗಾಣದ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ಗೆ ಹಲವಾರು ಬಾರಿ ಅಡ್ಡಾಡಿದ್ದಾರೆ. ಆದ್ರೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಇದೀಗ ಮಳೆಗಾಲದಲ್ಲಿ ರಸ್ತೆಯ ಗುಂಡಿಯಲ್ಲಿ ಕೆಸರು ನೀರು ತುಂಬಿಕೊಂಡಿದೆ.
Read More..; ಈ ದೇಶದಲ್ಲಿ ಜನರು ಕಟ್ಟಬೇಕು ‘ಮಳೆ ತೆರಿಗೆ’..! ಏನಿದು ವಿಚಿತ್ರ ತೆರಿಗೆ?
ಅಧಿಕಾರಿಗಳ ಈ ನಿರ್ಲಕ್ಷ್ಯದಿಂದ ಜನರ ಜೀವ ಹಾನಿ ಸಂಭವಿಸುವ ಸಾಧ್ಯತೆ ಇದೆ ಎಂದು ಮಹಿಳೆ ಏಕಾಂಗಿಯಾಗಿ ಪ್ರತಿಭಟನೆಗೆ ಇಳಿದಿದ್ದಾರೆ. ರಸ್ತೆಯ ಕೆಸರು ನೀರಿನಲ್ಲಿ ಪ್ರತಿಭಟನೆಗೆ ಕುಳಿತುಕೊಂಡು ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದ್ದಾರೆ. ಆದ್ರೆ ಚುನಾವಣೆ ನೀತಿ ಸಂಹಿತಿ ಇದೆ ನಾವೇನು ಮಾಡಲು ಆಗೋದಿಲ್ಲ ಅಂತ ಅಧಿಕಾರಿಗಳು ಜಾರಿಕೊಂಡಿದ್ದಾರೆ.
LATEST NEWS
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತ; 8 ಮಂದಿ ಸಾವು
ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Read More..; ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ
ನ್ಯೂ ಜಲ್ಪೈಗುರಿ ಬಳಿ ಗೂಡ್ಸ್ ರೈಲು ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಕಾರಣ ಮತ್ತು ಅಗರ್ತಲಾದಿಂದ ಸೀಲ್ದಾಹ್ಗೆ ತೆರಳುತ್ತಿದ್ದ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದೆ ಎಂದು ರೈಲ್ವೇ ಮಂಡಳಿಯ ಅಧ್ಯಕ್ಷ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
DAKSHINA KANNADA
ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ
ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.
ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.
DAKSHINA KANNADA
ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ
ಉಪ್ಪಿನಂಗಡಿ : ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃ*ತಪಟ್ಟಿದ್ದು ಕೊ*ಲೆ ಶಂಕೆ ವ್ಯಕ್ತವಾಗಿದೆ. ಹೇಮಾವತಿ (37) ಮೃ*ತ ಮಹಿಳೆ.
ಈಕೆ ತಾಯಿ, ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ ಭಾನುವಾರ(ಜೂ.16) ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾ*ತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ : ಕಡಬ : ವಿದ್ಯುತ್ ಶಾಕ್ ಹೊಡೆದು ಯುವಕ ಸಾ*ವು
ವಿಚಾರಣೆಗಾಗಿ ಮೃ*ತಳ ಅಕ್ಕನ ಮಗ ಎಸ್ ಎಸ್ ಎಲ್ ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಉಪ್ಪಿನಂಗಡಿ ಪೊಲೀಸರ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃ*ತರು ಹೊಟೇಲ್ ಕಾರ್ಮಿಕೆಯಾಗಿದ್ದರು.
- LATEST NEWS4 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- LATEST NEWS5 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- FILM4 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್
- LATEST NEWS5 days ago
ನಿಲ್ಲಿಸಿದ್ದ ಕಂಟೈನರ್ ಗೆ ಎಕ್ಸ್ ಪ್ರೆಸ್ ಬಸ್ ಡಿಕ್ಕಿ..; ಚಾಲಕ ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ