LATEST NEWS
ನೀರಿಲ್ಲದ ಬಾವಿಗೆ ಎಸೆದರೂ ಬದುಕಿದ ಮಗು: ಸರ್ಪದ ಕಾವಲಿನಲ್ಲಿ ರಾತ್ರಿ ಕಳೆದ ನವಜಾತ ಶಿಶು..!
ನೀರಿಲ್ಲದ ಬಾವಿಗೆ 20 ಅಡಿ ಎತ್ತರದಿಂದ ಮಗುವನ್ನು ಎಸೆಯಲಾಗಿದೆ. ಚಳಿಯ ನಡುವೆ ರಾತ್ರಿ ಇಡೀ ಬಾವಿಯಲ್ಲಿ ಅಳುತ್ತಿದ್ದ ಮಗುವಿನ ಪಕ್ಕದಲ್ಲಿ ಸರ್ಪವೊಂದು ಕೂತಿತ್ತು.
ಬರೇಲಿ (ಉತ್ತರ ಪ್ರದೇಶ):ಕೆಲವೊಂದು ಘಟನೆಗಳಿಗೆ ತರ್ಕ ಪ್ರಯೋಗ ಮಾಡಲು ಸಾಧ್ಯವೇ ಇಲ್ಲ. ಏಕೆಂದರೆ ತರ್ಕಕ್ಕೆ ನಿಲುಕದ, ವಿಜ್ಞಾನದ ಅಂಕೆಗೆ ಸಿಗದ ಕೆಲವೊಂದು ಘಟನೆಗಳು ಪವಾಡದ ರೀತಿ ನಡೆಯುತ್ತಿವೆ.
ಉತ್ತರ ಪ್ರದೇಶದ ಪುಟ್ಟ ಗ್ರಾಮದಲ್ಲಿ ಪವಾಡ ಸದೃಶ ಘಟನೆಯೊಂದು ನಡೆದಿದೆ. ಇಲ್ಲಿನ ನಿವಾಸಿಗಳಾದ 50 ವರ್ಷ ವಯಸ್ಸಿನ ಪ್ರೇಮ ರಾಜ್ ಹಾಗೂ ಅವರ ಪತ್ನಿ 48 ವರ್ಷ ವಯಸ್ಸಿನ ಸೌಮ್ವತಿ ದೇವಿ ಅವರಿಗೆ ತಮ್ಮ ಕಣ್ಣನ್ನು ತಾವೇ ನಂಬಲು ಸಾಧ್ಯವಾಗದಂಥಾ ಅಚ್ಚರಿಯೊಂದು ಘಟಿಸಿದೆ.
ಬುದೌನ್ ಜಿಲ್ಲೆಯ ಬಸೌನಿ ಎಂಬ ಗ್ರಾಮದಲ್ಲಿ ಕೃಷಿಕರಾದ ಪ್ರೇಮ ರಾಜ್ ದಂಪತಿ, ಎಂದಿನಂತೆ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದರು.
ಈ ವೇಳೆ ಮಗು ಅಳುವ ಶಬ್ದ ಕೇಳಿಸಿತು. ಈ ಸದ್ದು ಎಲ್ಲಿಂದ ಕೇಳಿ ಬರುತ್ತಿದೆ ಎಂದು ಹುಡುಕ ಹೊರಟ ದಂಪತಿಗೆ ತಮ್ಮದೇ ಜಮೀನಿನಲ್ಲಿ ಇರುವ ನೀರಿಲ್ಲದ ಹಾಳು ಬಾವಿಯಲ್ಲಿ ಮಗು ಅಳುತ್ತಿದೆ ಅನ್ನೋದು ದೃಢಪಟ್ಟಿತು.
20 ಅಡಿ ಆಳದ ಈ ಬಾವಿಯಲ್ಲಿ ಇಳಿಯೋದು ಸುಲಭದ ಕೆಲಸ ಆಗಿರಲಿಲ್ಲ. ಏಕೆಂದರೆ, ಮುಳ್ಳು ಗಿಡ ಗಂಟಿಗಳು ಬಾವಿಯ ತುಂಬೆಲ್ಲಾ ಆವರಿಸಿತ್ತು. ಕೂಡಲೇ ತಮ್ಮ ಗ್ರಾಮದ ಜನರ ನೆರವು ಪಡೆದ ಪ್ರೇಮ ರಾಜ್ ಅವರು, ಹಗ್ಗವನ್ನು ಕಟ್ಟಿಕೊಂಡು ಬಾವಿಯ ಒಳಗೆ ಇಳಿದರು..!
ಬಾವಿಯ ತಳಕ್ಕೆ ಇಳಿದು ನೋಡಿದರೆ ಅಲ್ಲೊಂದು ಅಚ್ಚರಿಯ ಹಾಗೂ ಬೆಚ್ಚಿ ಬೀಳಿಸುವ ದೃಶ್ಯ ಪ್ರೇಮ ರಾಜ್ ಅವರಿಗೆ ಕಾದಿತ್ತು.
ಅಳುತ್ತಿದ್ದ ಮಗುವಿನ ಪಕ್ಕ ಸರ್ಪವೊಂದು ಹೆಡೆ ಎತ್ತಿ ಕುಳಿತಿತ್ತು..!
ಪ್ರೇಮ ರಾಜ್ ಅವರು ಬಾವಿಯ ತಳಕ್ಕೆ ಇಳಿದ ಬಳಿಕ ನಿಧಾನವಾಗಿ ಹಾವು ಸರಿದು ಹೋಯ್ತು. ಬಾವಿಯಲ್ಲಿ ಇದ್ದ ಬಿಲದ ಒಳಗೆ ನುಸುಳಿ ಕಣ್ಮರೆ ಆಗಿಬಿಡ್ತು.
ಕೂಡಲೇ ಮಗುವಿನ ಬಳಿ ಧಾವಿಸಿದ ಪ್ರೇಮ ರಾಜ್ ಅದನ್ನು ಎತ್ತಿಕೊಂಡು ಬಾವಿಯಿಂದ ಮೇಲೆ ಬಂದರು.
ಕೂಡಲೇ ಈ ವಿಚಾರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಗ್ರಾಮಸ್ಥರು ಮಗುವನ್ನು ತಮ್ಮ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಮೂಲಕ ರವಾನಿಸಿದರು.
ಮೊದಲಿಗೆ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿ, ನಂತರ ಮಗುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಿದರು.
ಈ ವಿಷಯ ತಿಳಿದ ಕೂಡಲೇ ಈ ಭಾಗದ ಜನರು ತಂಡೋಪ ತಂಡವಾಗಿ ಘಟನೆ ನಡೆದ ಬಾವಿಯತ್ತ ಧಾವಿಸಲು ಆರಂಭಿಸಿದರು. ಬಾವಿಯಲ್ಲಿ ಇದ್ದ ಸರ್ಪದಿಂದಲೇ ಮಗುವಿನ ಜೀವ ಉಳಿದಿದೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳಲು ಆರಂಭಿಸಿದರು.
ಈ ಕುರಿತು ಮಾತನಾಡಿದ ಪ್ರೇಮ ರಾಜ್ ಅವರ ಪತ್ನಿ ಸೌಮ್ವತಿ, ‘ಆಗ ತಾನೇ ಹುಟ್ಟಿದ ಮಗುವನ್ನು ಯಾರೋ ನಮ್ಮ ಹೊಲದಲ್ಲಿದ್ದ ಬಾವಿಯ ಒಳಗೆ ಎಸೆದಿದ್ದಾರೆ.
ರಾತ್ರಿ ಇಡೀ ಸರ್ಪವು ಮಗುವಿನ ಬಳಿ ಇದ್ದು ಅದಕ್ಕೆ ಎದುರಾಗಬಹುದಾದ ಅಪಾಯದಿಂದ ರಕ್ಷಣೆ ಮಾಡಿದೆ. ಎಲ್ಲಕ್ಕಿಂತಾ ಹೆಚ್ಚಾಗಿ 20 ಅಡಿ ಮೇಲಿನಿಂದ ಎಸೆದರೂ ಮಗುವಿಗೆ ಏನೂ ಆಗಿಲ್ಲ ಅನ್ನೋದಾದ್ರೆ, ಸರ್ಪವೇ ಅದರ ಜೀವ ಉಳಿಸಿರಬೇಕು’ ಎಂದು ಹೇಳಿದ್ದಾರೆ.
DAKSHINA KANNADA
ಸಿಡಿಲ ಬಡಿತಕ್ಕೆ ನವವಿವಾಹಿತ ಬಲಿ..!15 ದಿನಗಳ ಹಿಂದೆಯಷ್ಟೆ ವೈವಾಹಿಕ ಜಿವನಕ್ಕೆ ಕಾಲಿಟ್ಟ ಯುವಕ ವಿಧಿಯಾಟಕ್ಕೆ ಬಲಿ!!
ಕಡಬ: ಹದಿನೈದು ದಿನಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಮೇ.3ರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಇಲ್ಲಿನ ಪರ್ವತಮುಖಿ ನಿವಾಸಿ ಸೋಮಸುಂದರ್(34 ವ)ಮೃತಪಟ್ಟವರು.
ಸುಬ್ರಹ್ಮಣ್ಯದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಡಿತ್ತು. ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮಸುಂದರ್ರವರಿಗೆ ಸಿಡಿಲು ಬಡೆದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಮುಂಧೆ ಓದಿ..; ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ
15 ದಿನಗಳ ಹಿಂದೆಯಷ್ಟೆ ಏ.18ರಂದು ಮೋಹಿನಿ(ಪವಿತ್ರ) ಎಂಬವರ ಜೊತೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸಭಾಭವನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ವಿಧಿಯಾಟಕ್ಕೆ ಸೋಮಸುಂದರ್ ಬಲಿಯಾಗಿದ್ದಾರೆ. ಹೊಸೋಳಿಕೆ ಪರ್ವತಮುಖಿ ದಿ.ಸಾಂತಪ್ಪ ಗೌಡರ ಪುತ್ರ ಸೋಮಸುಂದರ್ ಪರ್ವತಮುಖಿ ಬಳಿ ಕಾರ್ ವಾಷಿಂಗ್ ಉದ್ಯಮವನ್ನು ನಡೆಸುತ್ತಿದ್ದರು. ಮದುವೆ ಸಂಭ್ರಮ ಮಾಸುವ ಮುನ್ನವೇ ಮನೆಯಲ್ಲಿ ಸಾವಿನ ಛಾಯೆ ಮೂಡಿದೆ. ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
DAKSHINA KANNADA
ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ
ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.
ಶುಕ್ರವಾರ ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾ*ತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕೊಡದೆ ಮೃ*ತಪಟ್ಟಿದ್ದಾರೆ.
ಇದನ್ನೂ ಓದಿ : ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?
ಮೃ*ತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿದ್ದರು. ಶ್ರೀಕಾಂತ್ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?
ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5 ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ವಹಿಸಲಾಗಿದೆ.
ಬೆಂದೂರು ಸ್ಥಾವರದಿಂದ ನೀರು ಪೂರೈಕೆ :
ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್ಸ್ಟ್ರೀಟ್, ಬಾವುಟಗುಡ್ಡ, ಆಕಾಶವಾಣಿ, ಪದವು, ಗೋರಿಗುಡ್ಡ, ಸೂಟರ್ಪೇಟೆ, ಶಿವಬಾಗ್, ಕದ್ರಿ, ವಾಸ್ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ, ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್ನಿಂದ ಕುಂಜತ್ತಬೈಲ್, ಮೊಗ್ರೊಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ, ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ – ಪಣಂಬೂರು ನೇರ ಲೈನ್ನಿಂದ ಕಂಕನಾಡಿ, ನಾಗುರಿ, ಪಂಪ್ವೆಲ್, ಬಳ್ಳೂರುಗುಡ್ಡೆ, ಪಡೀಲ್ಗೆ ನೀರು ಪೂರೈಕೆ ಮಾಡಲಾಗುವುದು.
ಪಣಂಬೂರು ಸ್ಥಾವರದಿಂದ ನೀರು ಪೂರೈಕೆ :
ಮೇ 6 ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್ಐಟಿಕೆ, ಮುಕ್ಕ, ಹೊಸಬೆಟ್ಟು, ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ, ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಗೂಡ್ಸ್ಶೆಡ್, ಬಂದರ್ ದಕ್ಕೆ,ಕಣ್ಣೂರು, ನಿಡ್ಡೆಲ್, ಶಿವನಗರ. ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್ಹೌಸ್, ಕೂಳೂರು ಪಂಪ್ಹೌಸ್, ಕಾಪಿಕ್ಕಾಡ್, ದಡ್ಡಲ್ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪೋಲು ಮಾಡಿದಲ್ಲಿ ನೀರು ಕಡಿತ :
ಕಟ್ಟಡ ರಚನೆ ಮತ್ತಿತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ಗಳ ಜೋಡಣೆ ಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ ಜೋಡಣೆ ಕಡಿತಗೊಳಿಸುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ :
ಸಂಪರ್ಕ ಸಂಖ್ಯೆ :
ಕುಡಿಯುವ ನೀರಿನ ಸಮಸ್ಯೆಯಾದರೆ ದೂ.ಸಂ: ಪಡೀಲ್ ರೇಚಕ ಸ್ಥಾವರ-0824-2220364 ಹಾಗೂ ಮನಪಾ ವಾಟ್ಸ್ಆ್ಯಪ್ ಸಂಖ್ಯೆ 9449007722/ಮನಪಾ ಕಂಟ್ರೋಲ್ ರೂಮ್- 0824-2220319/2220306ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
- FILM7 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- DAKSHINA KANNADA7 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- FILM7 days ago
ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್ಬೀರ್, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್
- DAKSHINA KANNADA7 days ago
ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ