Connect with us

    ಮಹಿಳೆಯ ಅಂತ್ಯಸಂಸ್ಕಾರ ಹೈಡ್ರಾಮ: ಶಾಸಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯುಟಿ ಖಾದರ್..

    Published

    on

    ಮಹಿಳೆಯ ಅಂತ್ಯಸಂಸ್ಕಾರ ಹೈಡ್ರಾಮ: ಶಾಸಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯುಟಿ ಖಾದರ್..

    ಮಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅಂತ್ಯಸಂಸ್ಕಾರ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಡ್ರಾಮ ನಡೆದಿತ್ತು.

    ಇದೀಗ ಈ ಅಮಾನವೀಯ ಘಟನೆಯ ಬಗ್ಗೆ ಶಾಸಕ ಯುಟಿ ಖಾದರ್ ಟ್ವಿಟ್ಟರ್ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ‘ಮೃತ ಶರೀರದೊಂದಿಗೆ ಅಮಾನವೀಯವಾಗಿ ವರ್ತಿಸುವುದು ಪೈಶಾಚಿಕತೆ. ನಮ್ಮ ಜಿಲ್ಲೆಯಲ್ಲಿ ನಿನ್ನೆ ನಡೆದ ಅಮಾನವೀಯ ಘಟನೆ ನಿಜಕ್ಕೂ ದುಖಕರ.

    ನಿನ್ನೆ ಕೋವಿಡ್ ನಿಂದ ಮೃತಪಟ್ಟ ತಾಯಿಯ ಶವ ಸಂಸ್ಕಾರಕ್ಕೆ ರಾತ್ರಿಯಿಡಿ ಪರದಾಡುವಂತಾಗಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಹದ್ದು.

    ಅದರಲ್ಲೂ ಶಾಸಕರುಗಳೇ ಮುಂದೆ ನಿಂತು ಶವ ಸಂಸ್ಕಾರಕ್ಕೂ ಅನುಮತಿ ನೀಡದೇ ಇರೋದು ನಿಜಕ್ಕೂ ಖಂಡನೀಯ’.

     

    ‘ಇಂತಹ ಪರಿಸ್ಥಿತಿಯಲ್ಲಿ ಜನ ಭಯಬಿದ್ದು ಪ್ರತಿಭಟಿಸುವುದು ಸಾಮಾನ್ಯ. ಆದರೆ ಘಟನೆಯ ವಿವರದ ಜತೆ ಸಮಸ್ಯೆಯ ವೈಜ್ಙಾನಿಕ ಪರಿಹಾರ ನೀಡಿ ಜನರನ್ನ ಜಾಗೃತಗೊಳಿಸುವುದು ಶಾಸಕರ ಕರ್ತವ್ಯ’ ಎಂದಿದ್ದಾರೆ.

    ‘ಅದರೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾವಂತ ಶಾಸಕರು ಸಾವಿನಲ್ಲೂ ಲೆಕ್ಕಾಚಾರ ಹಾಕಿರುವುದು ಸರಿಯಲ್ಲ. ಧರ್ಮ ಯಾವುದೇ ಇರಲಿ ಸಾವು ಸಂಭವಿಸಿದಾಗ ನಾವು ಗೌರವದಿಂದ ಬಿಳ್ಕೊಡಬೇಕೇ ವಿನಹ ದಾರಿಯಲ್ಲಿ ಶವ ನಿಲ್ಲಿಸಿ ರಾಜಕೀಯ ಮಾಡುವುದು ಸಲ್ಲ’.

    ‘ಅದು ನಮ್ಮ ಸಂಸ್ಜೃತಿಯೂ ಅಲ್ಲ. ಕಳೆದ ಒಂದು ತಿಂಗಳಿನಿಂದ ದಿನಕ್ಕೆರಡು ಬಾರಿ ಸಭೆ ನಡೆಸುವ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಸ್ಥಳಿಯ ಸಂಸದರು,ಶಾಸಕರು ಕೋವಿಡ್ ಪೀಡಿತರ ಶವ ಸಂಸ್ಕಾರದ ವ್ಯವಸ್ಥೆ ಮಾಡಲೂ ವಿಫಲರಾಗಿರುವುದಕ್ಕೆ ಉತ್ತರಿಸುವಿರಾ?.

    ಇಂದು DK ದಲ್ಲಿ ನಡೆದ ಘಟನೆ ರಾಜ್ಯದ ಇತರ ಭಾಗದಲ್ಲಿ ನಡೆಯೋ ಮುನ್ನ ಆರೋಗ್ಯ ಹಾಗೂ ಕಂದಾಯ ಸಚಿವರು ಎಚ್ಚೆತ್ತುಕೊಳ್ಳುವುದು ಒಳಿತು’ ಎಂದು ಶಾಸಕ ಯುಟಿ ಖಾದರ್ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

    ಇನ್ನು ಕೊರೋನಾ ಸೋಂಕಿತ ವೃದ್ದೆ ಶವ ಸಂಸ್ಕಾರದ ಹೈಡ್ರಾಮಾ ವಿಚಾರದಲ್ಲಿ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದು, ಜಿಲ್ಲೆಯಲ್ಲಿ ನಿನ್ನೆ ನಡೆದ ಘಟನೆ ಖೇದಕರ,‌

    ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆ ಎಂದಿದ್ದಾರೆ. ಮೃತ ಶರೀರದ ಜೊತೆ ಕಠೋರವಾಗಿ ವರ್ತಿಸಿ ಅಂತ ಯಾವ ಧರ್ಮವೂ ಹೇಳಿಲ್ಲ.

    ಆದರೆ ಶಾಸಕರೇ ಮುಂದೆ ನಿಂತು ಪ್ರತಿಭಟಿಸಿದ್ದು ಆಶ್ಚರ್ಯ ಆಗ್ತಿದೆ. ಶಾಸಕ ಸ್ಥಾನ ಶಾಶ್ವತವಲ್ಲ,

    ಮನುಷ್ಯತ್ವೇ ಮುಖ್ಯವಾಗಿದೆ. ಶಾಸಕರ ಮನುಷ್ಯತ್ವ ಇಲ್ಲದ ವರ್ತನೆಯನ್ನ ಖಂಡಿಸ್ತೇನೆ ಎಂದು ಖಾದರ್ ಗುಡುಗಿದ್ದಾರೆ.

    ಇನ್ನು ಶವ ಸಂಸ್ಕಾರಕ್ಕೆ ಮಾನವೀಯತೆ ತೋರಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನಡೆಯನ್ನು ಸ್ವಾಗತಿಸುತ್ತೇನೆ ಎಂದು ನುಡಿದ ಖಾದರೆ, ದ.ಕ ಜಿಲ್ಲಾಡಳಿತ ಕೊರೋನಾ ಆಕ್ಷನ್ ಪ್ಲಾನ್ ನಲ್ಲಿ ಅಂತ್ಯ ಸಂಸ್ಕಾರದ ಬಗ್ಗೆಯೂ ಯೋಚಿಸಬೇಕು.

    ಜಿಲ್ಲಾಡಳಿತ ಈ ವಿಚಾರದಲ್ಲಿ ವಿಫಲವಾಗಿದೆ. ಇದು ರಾಜ್ಯದ ಬೇರೆ ಕಡೆ ಆಗಬಾರದು ಎಂದು ಮನವಿ ಮಾಡಿದ್ದಾರೆ.

    ಆರೋಗ್ಯ ಸಚಿವರು, ಕಂದಾಯ ಸಚಿವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿ. ನಿನ್ನೆ ಘಟನೆ ನಡೆದ ಬಗ್ಗೆ ಜಿಲ್ಲಾಡಳಿತ ಮತ್ತು ಇಲ್ಲಿನ ಶಾಸಕರ ಬಗ್ಗೆ ಬೇಸರವಿದೆ.

    ಶಾಸಕರು ಮನುಷ್ಯತ್ವ ಅಳವಡಿಸಿಕೊಳ್ಳಬೇಕು, ಇದರಿಂದ ಜನರಿಗೆ ನೋವಾಗಿದೆ ಎಂದು ಮಾಜಿ ಸಚಿವ ಖೇದ ವ್ಯಕ್ತಪಡಿಸಿದ್ದಾರೆ.

    ಬಳಿಕ ಪಾದರಾಯನಪುರ ಹಲ್ಲೆ ಪ್ರಕರಣದ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡಿದ ವಿಚಾರದ ಬಗ್ಗೆ ಮಾತನಾಡಿದ ಶಾಸಕರು,

    ಇದು ಸರ್ಕಾರವೇ ಸೃಷ್ಟಿಸಿದ ದೊಡ್ಡ ಸಮಸ್ಯೆ. ಏಕಾಏಕಿ ಆರೋಪಿಗಳನ್ನು ಅಲ್ಲಿನ ಜೈಲಿಗೆ ಶಿಫ್ಟ್ ಮಾಡಿದ್ದು ಸರಿಯಲ್ಲ.

    ಸರ್ಕಾರ ಯಾವುದನ್ನೂ ಯೋಚನೆ ಮಾಡದೇ ಇಲ್ಲದೆ ಯಾಕೆ ಮಾಡುತ್ತೆ.?. ಕೊರೊನಾ ಎದುರಿಸಲು ಸರ್ಕಾರದಲ್ಲಿ ಪ್ಲಾನ್ ಇಲ್ಲ ಅನ್ನೋದಕ್ಕೆ ಇದೊಂದು ಉದಾಹರಣೆ.

    ಇವತ್ತು ಸಮಸ್ಯೆ ಆಗಿದೆ, ಹೀಗಾಗಿ ಸರ್ಕಾರಕ್ಕೆ ಒಂದು ಆಕ್ಷನ್ ಪ್ಲಾನ್ ಇರಬೇಕು. ಜನಸಾಮಾನ್ಯರು ಸಹಕಾರ ಕೊಟ್ಟರೂ ಸರ್ಕಾರ ಇನ್ನೂ ಆಕ್ಷನ್ ಪ್ಲಾನ್ ಇಲ್ಲ ಎಂದು ರಾಜ್ಯ ಸರ್ಕಾರವನ್ನು ಟೀಕೆ ಮಾಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending