Connect with us

    ಕೊರೊನಾ ಹಿನ್ನಲೆ ನಿರಾಶ್ರಿತರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸದೇ ಇರುವುದು ದುರಾದೃಷ್ಟ

    Published

    on

    ಕೊರೊನಾ ಹಿನ್ನಲೆ ನಿರಾಶ್ರಿತರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸದೇ ಇರುವುದು ದುರಾದೃಷ್ಟ  

    ಬೆಂಗಳೂರು:- ಕೊರೊನಾ ವೈರಸ್ ಹಿನ್ನಲೆಯಲ್ಲಿ ದೇಶಾದ್ಯಂತ ಎಪ್ರಿಲ್ 14ರ ವರೆಗೆ ಲಾಕ್ ಡೌನ್ ವಿಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

    ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿರುವುದರಿಂದ ಬೀದಿಬದಿ ವ್ಯಾಪಾರಸ್ಥರು, ಕೂಲಿ ಕಾರ್ಮಿಕರು, ರೈತರು, ಮಧ್ಯಮ ವರ್ಗದವರು ಹೆಚ್ಚಾಗಿ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುವವರಾಗಿದ್ದಾರೆ.

    ಇವರಿಗೆ ಪ್ರಧಾನಿ ಮೋದಿಯ ಕೊರೊನಾ  ಸಂಬಂಧಿಸಿ ನಿನ್ನೆ ಮಾಡಿದ ಭಾಷಣದಲ್ಲಿ ಯಾವುದೇ ಕನಿಷ್ಟ ಕ್ರಮಗಳನ್ನು ಕೈಗೊಳ್ಳದೇ ಇರುವುದು ವಿಷಾದನೀಯವಾಗಿದೆ.

    ಮೂರುವರೆ ಕೋಟಿ ಜನಸಂಖ್ಯೆ ಇರುವ ನೆರೆಯ ಕೇರಳ ರಾಜ್ಯ ಸರಕಾರ ಕೊರೊನಾ ವಿರುದ್ಧ ಹೋರಾಡಲು ಇಪ್ಪತ್ತು ಸಾವಿರ ಕೋಟಿ ಬಿಡುಗಡೆಗೊಳಿಸಿದೆ.

    ಮಾತ್ರವಲ್ಲದೆ ಇಪ್ಪತ್ತು ರೂಪಾಯಿಗೆ ಆಹಾರ, ಎಪಿಎಲ್, ಬಿಪಿಎಲ್ ಜನರಿಗೆ ಒಂದು ತಿಂಗಳ ಉಚಿತ ಪಡಿತರ ವ್ಯವಸ್ಥೆಯನ್ನು ಪೂರೈಕೆ ಮಾಡಲು ವ್ಯವಸ್ಥೆ ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ ಮತ್ತು ಇಡೀ ದೇಶಕ್ಕೆ ಮಾದರಿಯಾಗಿದೆ.

    ಆದರೆ 135 ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಇಡೀ ದೇಶಕ್ಕೆ ಮೋದಿ ಸರಕಾರ ಬಿಡುಗಡೆಗೊಳಿಸಿರುವುದು ಕೇವಲ ಹದಿನೈದು ಸಾವಿರ ಕೋಟಿ ಮಾತ್ರ.

    ಇದರಲ್ಲಿ ಕೂಡ ದೈನಂದಿನ ಕೆಲಸ ಮಾಡಿ ದಿನದೂಡುವ ಬಡವರ ಬಗ್ಗೆ, ನಿರಾಶ್ರಿತರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಯಾವುದೇ ಯೋಜನೆ ಕೈಗೊಳ್ಳಲಿಲ್ಲ ಹಾಗೂ ಕರ್ನಾಟಕ ಸರ್ಕಾರ ಕೂಡ ಅಧಿವೇಶನದಲ್ಲಿ ಇಂತಹವರಿಗೆ ಯಾವುದೇ ವಿಶೇಷ ಯೋಜನೆ ರೂಪಿಸದೇ ಇರುವುದು ವಿಷಾದನೀಯವಾಗಿದೆ. ಆದ್ದರಿಂದ ಕೂಡಲೇ ಅದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳಬೇಕಾಗಿದೆ‌.

    ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರೀಯ ಲಾಕ್ ಡೌನ್ ಹೇರಿದ 12 ಗಂಟೆಯ ಒಳಗೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿ ರಾಮ ವಿಗ್ರಹ ಸ್ಥಳಾಂತರ ಆಚರಣೆಯಲ್ಲಿ ಭಾಗವಹಿಸಿ ತನ್ನದೇ ಸರಕಾರ ಹೇರಿದ ಲಾಕ್ ಡೌನ್ ನ್ನು ಉಲ್ಲಂಘಿಸಿರುವುದು ಖಂಡನೀಯವಾಗಿದೆ.

    ಹಾಗಾದರೆ ಈ ಲಾಕ್ ಡೌನ್ ದುಡಿದು ತಿನ್ನುವ  ಸಾಮಾನ್ಯ ಜನರಿಗೆ ಮಾತ್ರವಾ ಎಂದು ಪ್ರಶ್ನಿಸುವಂತಾಗಿದೆ.

    ಅದೇ ರೀತಿ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೂಡ ಈ ವೈರಸ್ ಹರಡಲು ನಿರ್ದಿಷ್ಟ ಸಮುದಾಯವೇ ಕಾರಣವೆಂದು ಆರೋಪಿಸಿ ಸಾಮಾಜಿಕ ಜಾಲಾತಾಣದಲ್ಲಿ ಕೋಮು ಪ್ರಚೋದನಕಾರಿಯಾಗಿ ಪೋಸ್ಟ್ ಹಾಕಿ ಸಮಾಜದ ಸ್ವಾಸ್ಥ್ಯ ಕೆಡವಲು ಪ್ರಯತ್ನ ಪಡುವವರ ವಿರುದ್ಧ ಪೋಲಿಸ್ ಇಲಾಖೆ ಸರಕಾರ ಮತ್ತು ಜಿಲ್ಲಾಡಳಿತಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

    ಅದೇ ರೀತಿ ಈ ಅಪಾಯಕಾರಿ ವೈರಸ್ ನ್ನು ಹೋಗಲಾಡಿಸಲು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿರುವುದರಿಂದ ಲಾಕ್ ಡೌನ್ ನ್ನು ಎಲ್ಲರೂ ಪಾಲಿಸಿ ಇದರ ವಿರುದ್ಧ ಹೋರಾಡಲು ಜಿಲ್ಲಾಡಳಿತ ಮತ್ತು ಸರಕಾರ ಗಳೊಂದಿಗೆ ಕೈಜೋಡಿಸಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯಾದ್ಯಕ್ಷೆ ಶಾಹಿದಾ ತಸ್ನೀಂ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ

    Published

    on

    ಮಂಗಳೂರು/ಮಹಾರಾಷ್ಟ್ರ : ತಂದೆ ಮತ್ತು ಮಗ ಇಬ್ಬರೂ ಒಂದೇ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

    ‘ತಂದೆ ತನಗೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ’ ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ ‘ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಲಿಲ್ಲ’ ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಂದೇಡ್ ಜಿಲ್ಲೆಯ ಬಿಳೋಳಿ ಮಿನಾಕಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

    ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಓಂಕಾರ್ ಹಾಸ್ಟೆಲ್ ಒಂದರಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆ ಇರುವುದರಿಂದ ಮನೆಗೆ ಬಂದಿದ್ದ.

    ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು

    ‘ಇದೇ ವೇಳೆ ಬಾಲಕ ಓಂಕಾರ್ ತನ್ನ ತಂದೆಗೆ ಸ್ಮಾರ್ಟ್ ಫೋನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು, ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ. ಅದೇ ರಾತ್ರಿ ಮಗನನ್ನು ಹುಡುಕಿಕೊಂಡು ಹೋಗಿದ್ದ ತಂದೆಯೂ ಮಗ ನೇಣೂ ಹಾಕಿಕೊಂಡಿದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ನಾಂದೇಡ್ ಎಸ್ ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

    ಮೃತ ಬಾಲಕನ ತಾಯಿ ನೀಡಿದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

     

    Continue Reading

    LATEST NEWS

    ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು

    Published

    on

    ಮಂಗಳೂರು/ಬೆಂಗಳೂರು : ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೃ*ತ್ಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ದು*ಷ್ಕರ್ಮಿಗಳು ವಿ*ಕೃತಿ ಮೆರೆದಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ಕೆಚ್ಚಲುಗಳನ್ನು ಕೊಯ್ದು ಕಿ*ಡಿಗೇಡಿಗಳು ಪರಾರಿಯಾಗಿದ್ದಾರೆ.

    ರಾತ್ರಿಯಿಡೀ ಹಸುಗಳು ರ*ಕ್ತದ ಮಡುವಿನಲ್ಲಿ ನರಳಾಡಿವೆ. ಇಂದು(ಡಿ.12) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದಿದ್ದಾರೆ.

    ಸಂಸದ ಪಿಸಿ ಮೋಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ.

    Continue Reading

    LATEST NEWS

    ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು

    Published

    on

    ಮಂಗಳೂರು/ಹೈದರಾಬಾದ್ : ರೀಲ್ಸ್ ಮಾಡಲು ಹೋದ ಐವರು ಯುವಕರು ನೀರುಪಾಲಾದ ಘಟನೆ ತೆಲಂಗಾಣದ ಸಿದ್ದಿ ಪೇಟ್ ಜಿಲ್ಲೆಯ ಕೊಂಡ ಪೋಚಮ್ಮ ಸಾಗರ ಜಲಾಶಯದಲ್ಲಿ ನಡೆದಿದೆ.

    ಇಂದು ಏಳು ಮಂದಿ ಯುವಕರ ತಂಡ ಬೆಳಗ್ಗೆ ಒಂಬತ್ತರ ಸುಮಾರಿಗೆ ಜಲಾಶಯದ ಬಳಿ ಬಂದು, ಅಲ್ಲೇ ತಿರುಗಾಡಿ ಕೊನೆಗೆ ನೀರಿಗೆ ಇಳಿದಿದ್ದರು. ನೀರಿಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದ ದೃಶ್ಯವನ್ನು ಈಜು ಬಾರದ ಇಬ್ಬರು ಬದಿಯಲ್ಲಿ ನಿಂತು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದರು.

    ಇದನ್ನೂ ಓದಿ: ಕಡಬ : ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾ*ವು

    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಐವರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಇಬ್ಬರು ಅವರ ರಕ್ಷಣೆಗೆ ಮುಂದಾದ್ರೂ ಸಾಧ್ಯವಾಗಿಲ್ಲ. ಮುಶೀರಾಬಾದ್‌ನ ಸಹೋದರರಾದ ಧನುಷ್ (20), ಲೋಹಿತ್ (17), ಬನ್ಸಿಲಾಲ್ ಪೇಟೆಯ ದಿನೇಶ್ವರ್ (17), ಖೈರತಾಬಾದ್‌ನ ಚಾಂತಲ್ ಬಸ್ತಿಯ ಜತಿನ್ (17), ಮತ್ತು ಸಾಹಿಲ್ (19) ನೀರು*ಪಾಲಾದ ಯುವಕರು. ಮೃಗಾಂಕ್‌ (17) ಮತ್ತು ಇಬ್ರಾಹಿಂ (19) ಇಬ್ಬರು ನೀರಿನ ಆಳಕ್ಕೆ ಇಳಿಯದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

    ಜಲಾಶಯದ ಬಳಿ ಜನರ ಓಡಾಟ ಕಡಿಮೆ ಇದ್ದ ಕಾರಣ ಮುಳುಗುತ್ತಿದ್ದ ಐವರ ರಕ್ಷಣೆಗೆ ಯಾರೂ ಸಿಗಲಿಲ್ಲ ಎಂದು, ಬದುಕಿ ಉಳಿದ ಇಬ್ಬರು ಸ್ನೇಹಿತರು ಪೊಲೀಸರ ಬಳಿ ಹೇಳಿದ್ದಾರೆ.

     

    Continue Reading

    LATEST NEWS

    Trending