ಶ್ರಮಿಕ್ ರೈಲಿನಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದ ವಲಸೆ ಕಾರ್ಮಿಕ ಮಹಿಳೆ.!!
ಶ್ರಮಿಕ್ ರೈಲಿನಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದ ವಲಸೆ ಕಾರ್ಮಿಕ ಮಹಿಳೆ.!!
ಬೆಂಗಳೂರು: ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದ ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ಸಹ ಪ್ರಯಾಣಿಕರ ಸಹಾಯದಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಮಹಿಳೆಯ ಪತಿ ಸಂದೀಪ್ ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದರು. ರೈಲಿನಲ್ಲಿರುವ ಮಹಿಳೆಯರು ನನ್ನ ಪತ್ನಿಯ ಹೆರಿಗೆಗೆ ನೆರವಾದರು ಎಂದು ಸಂದೀಪ್ ಹೇಳಿದ್ದಾರೆ.
ಸಂದೀಪ್ ದಂಪತಿಯು ಬೆಂಗಳೂರಿನಿಂದ ಉತ್ತರಪ್ರದೇಶದ ಬಲರಾಂಪುರಕ್ಕೆ ಪ್ರಯಾಣಿಸುತ್ತಿತ್ತು.
ರೈಲು ಮಧ್ಯಪ್ರದೇಶದ ಬಿನಾ ಸ್ಟೇಶನ್ಗೆ ಹತ್ತಿರವಿರುವಾಗ ನನ್ನ ಪತ್ನಿ ಹೆಣ್ಣುಮಗುವಿಗೆ ಜನ್ಮ ನೀಡಿದಳು.
ವೈದ್ಯರು ಆಕೆಯನ್ನು ಪರೀಕ್ಷಿಸಿದ್ದಾರೆ. ಆರೋಗ್ಯವಾಗಿದ್ದ ನನ್ನ ಪತ್ನಿ ಹಾಗೂ ಮಗುವಿನೊಂದಿಗೆ ಪ್ರಯಾಣ ಮುಂದುವರಿಸಲು ಅವಕಾಶ ಮಾಡಿಕೊಟ್ಟರು ಸಂದೀಪ್ ಹೇಳಿದ್ದಾರೆ.
LATEST NEWS
ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ
ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಸ್ತೆ ಅಪಾಘಾತಕ್ಕೀಡಾದವರ ಗೋಲ್ಡನ್ ಅವಧಿಯ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬುಲೆನ್ಸ್ಗಳ ಸೇವೆಗೆ ಇಂದು (ಸೆ.23ರಂದು) ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಪ್ರತಿ ವರ್ಷ 40 ಸಾವಿರ ಅಪಘಾತ ಪ್ರಕರಣಗಳು ನಡೆಯುತ್ತಿವೆ. ಸರಾಸರಿ 10 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ. ಮುಂಬರುವ ವರ್ಷದಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಅಂಬುಲೆನ್ಸ್ಗಳು ಹೇಗೆ ಕಾರ್ಯನಿರ್ವಹಿಸಲಿವೆ?
- ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಹತ್ತಿರದ ಆಸ್ಪತ್ರೆಗಳಲ್ಲಿ ಅಂಬುಲೆನ್ಸ್ಗಳು ತಂಗಲಿವೆ.
- 65 ಹಾಟ್ಸ್ಪಾಟ್ಗಳನ್ನ ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಅಂಬುಲೆನ್ಸ್ಗಳನ್ನು ನೀಡಲಾಗಿದೆ.
- ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ (ALS) ಅಂಬ್ಯುಲೆನ್ಸ್ ಸೇವೆ ಲಭ್ಯವಾಗಲಿದೆ.
- ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ಚಿಕಿತ್ಸೆ ಅಗತ್ಯವಾದಲ್ಲಿ ಆರೋಗ್ಯ ಇಲಾಖೆಯ ಸ್ಟಾಫ್ ನರ್ಸ್ನ್ನು ಅಂಬುಲೆನ್ಸ್ಗಳಿಗೆ ಡೆಪ್ಯೂಟ್ ಮಾಡಲಾಗುವುದು.
- ವೆಂಟೀಲೇಟರ್ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗಳಿಗೆ ರೋಗಿಗಳನ್ನ ಕರೆದೊಯ್ದು ಚಿಕಿತ್ಸೆ ಕೊಡಿಸುವ ಸೌಲಭ್ಯ ಒದಗಿಸಲಾಗಿದೆ.
- ಅಂಬುಲೆನ್ಸ್ಗಳು ಸುಸಜ್ಜಿತ ಉಪಕರಣಗಳು, ಔಷಧಿ ಹಾಗೂ ಉಪಭೋಗ್ಯ ವಸ್ತುಗಳನ್ನು ಹೊಂದಿರಲಿವೆ. ಈ ಪ್ರಕ್ರಿಯೆಯು ಅಪಘಾತಕ್ಕೆ ಒಳಗಾದ ವ್ಯಕ್ತಿಯ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಅಲ್ಲದೇ ಸ್ಥಳಾಂತರಕ್ಕೆ ರೋಗಿಗಳ ಸ್ವಂತ ಹಣದ ವ್ಯಯವನ್ನು ತಪ್ಪಿಸಲಿದೆ.
LATEST NEWS
‘ಮಿಸ್ ಯೂನಿವರ್ಸ್ ಇಂಡಿಯಾ 2024’ ಮುಡಿಗೇರಿಸಿಕೊಂಡ ರಿಯಾ ಸಿಂಘಾ
ಮಂಗಳೂರು/ಜೈಪುರ : ರಾಜಸ್ಥಾನದ ಜೈಪುರದಲ್ಲಿ ಭಾನುವಾರ (ಸೆಪ್ಟೆಂಬರ್ 22) ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಾರ್ಯಕ್ರಮ ನಡೆದಿದ್ದು, ರಿಯಾ ಸಿಂಘಾ ಅವರು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಊರ್ವಶಿ ರೌಟೇಲಾ ಅವರು ಈ ಕಿರೀಟವನ್ನು ತೊಡಿಸಿದ್ದಾರೆ.
‘ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಗೆದ್ದಿದ್ದೇನೆ. ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಾನು ಇಲ್ಲಿಗೆ ಬರಲು ಸಾಕಷ್ಟು ಕಷ್ಟಪಟ್ಟಿದ್ದೇನೆ. ಈ ಕಿರೀಟಕ್ಕೆ ನಾನು ಅರ್ಹ ಎಂದು ಭಾವಿಸುತ್ತೇನೆ. ಈ ಮೊದಲಿನ ವಿನ್ನರ್ಗಳಿಂದ ನಾನು ಸ್ಫೂರ್ತಿ ಪಡೆದಿದ್ದೇನೆ’ ಎಂದಿದ್ದಾರೆ ರಿಯಾ ಸಿಂಘಾ.
‘ಮಿಸ್ ಯೂನಿವರ್ಸ್ 2024’ನ ಮೊದಲ ರನ್ನರ್ ಅಪ್ ಆಗಿ ಪ್ರಂಜಲ್ ಪ್ರಿಯಾ ಮೊದಲ ರನ್ನರ್ ಅಪ್ ಆಗಿದ್ದಾರೆ. ಚವಿ ವರ್ಗ್ ಎರಡನೇ ಸ್ಥಾನ ಪಡೆದಿದ್ದಾರೆ. ಸುಷ್ಮಿತಾ ರಾಯ್ ಮೂರನೇ ರನ್ನರ್ ಅಪ್ ಆಗಿದ್ದಾರೆ.
ರಿಯಾ ಸಿಂಘಾ 19 ವರ್ಷದಲ್ಲಿಯೇ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಗುಜರಾತ್ ಮೂಲದವರಾದ ರಿಯಾ ಇತರ ಸ್ಪರ್ಧಿಗಳ ಜೊತೆ ಟಫ್ ಪರ್ಫಾರ್ಮೆನ್ಸ್ ನೀಡಿದ್ದಾರೆ.
ಮಿಸ್ ಯೂನಿವರ್ಸ್ ಕಿರೀಟ ಗೆದ್ದರೆ ಸಹಜವಾಗಿಯೇ ಅವರ ಖ್ಯಾತಿ ಹೆಚ್ಚಲಿದೆ. ಸಿನಿಮಾ ರಂಗದಿಂದ ಸಾಕಷ್ಟು ಆಫರ್ಗಳು ಕೂಡ ಬರುತ್ತವೆ. ಈವರೆಗೆ ಭಾರತದ ಮಿಸ್ ಯೂನಿವರ್ಸ್ ಗೆದ್ದವರು ಎಂದರೆ ಸುಷ್ಮಿತಾ ಸೇನ್ (1994), ಲಾರಾ ದತ್ (2000) ಹಾಗೂ ಹರ್ನಾಜ್ ಸಂಧು.
International news
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ದಿಸ್ಸನಾಯಕೆ ಪ್ರಮಾಣವಚನ
ಮಂಗಳೂರು/ಕೊಲಂಬೊ : ಮಾರ್ಕ್ಸ್ ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ದ್ವೀಪ ರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಸೋಮವಾರ(ಸೆ.23) ಪ್ರಮಾಣವಚನ ಸ್ವೀಕರಿಸಿದ್ದಾರೆ. 56 ವರ್ಷದ ದಿಸ್ಸ ನಾಯಕೆ ಅವರಿಗೆ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಪ್ರಮಾಣವಚನ ಬೋಧಿಸಿದರು.
ನ್ಯಾಷನಲ್ ಪೀಪಲ್ಸ್ ಪವರ್ ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್ ವಾದಿ ಜನತಾ ವಿಮುಕ್ತಿ ಪೆರೆಮುನಾ ಪಕ್ಷದಿಂದ ದಿಸ್ಸನಾಯಕೆ ಕಣಕ್ಕಿಳಿದಿದ್ದರು. ವಿರೋಧ ಪಕ್ಷ ಸಮಗಿ ಜನ ಬಲವೇಗಯ ಅಭ್ಯರ್ಥಿ ಸಜಿತ್ ಪ್ರೇಮದಾಸ್ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ : WATCH: ಎಸಿ ಕೋಚ್ನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ ಹಾವು; ವೀಡಿಯೋ ವೈರಲ್
2022ರಲ್ಲಿ ಎದುರಾದ ತೀವ್ರ ಆರ್ಥಿಕ ಸಂಕಷ್ಟದಿಂದ ಶ್ರೀಲಂಕಾ ಚೇತರಿಸಿಕೊಳ್ಳುತ್ತಿದೆ. ದೇಶವನ್ನು ಚೇತರಿಕೆಯ ಹಾದಿಯಲ್ಲಿ ಮುನ್ನಡೆಸುವುದಾಗಿ ಪ್ರಚಾರದ ವೇಳೆ ನಿರ್ಗಮಿತ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಪ್ರಚಾರದ ವೇಳೆ ಹೇಳಿಕೊಂಡಿದ್ದರು. ಮರು ಆಯ್ಕೆ ಬಯಸಿದ್ದ ಸಿಂಘೇ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಶನಿವಾರ(ಸೆ.21) ಮತದಾನ ನಡೆದಿದ್ದು. ಭಾನುವಾರ ಫಲಿತಾಂಶ ಪ್ರಕಟವಾಗಿದೆ.
- FILM5 days ago
ಬಿಗ್ ಬಾಸ್ ಕನ್ನಡ ಸೀಸನ್ -11 ರ ಸ್ಪರ್ಧಿಗಳ ಹೆಸರು ರಿವೀಲ್..?
- NATIONAL4 days ago
ಶ್ವಾನ ನೆಗೆದು ಗರ್ಭಪಾತ; ಮಾಲಿಕನಿಗೆ 10 ಲಕ್ಷ ದಂಡ
- NATIONAL4 days ago
ವಿಶ್ವದ ಶ್ರೀಮಂತ ಭಿಕ್ಷುಕ ಇವರೇ ನೋಡಿ ! ಭರತ್ ಜೈನ್ ಒಟ್ಟು ಆಸ್ತಿ ಎಷ್ಟು ಗೊತ್ತಾ ???
- LATEST NEWS4 days ago
ಟಾರ್ಗೆಟ್ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾ*ವು