bangalore
ಮಹಿಳೆಯರ ಬಗ್ಗೆ ಕನಿಕರ ಬೇಕಿಲ್ಲ, ಅವರ ಧ್ವನಿಗೆ ಶಕ್ತಿ ಹಾಗೂ ಗೌರವ ಸಾಕು-ಸಚಿವೆ ಶೋಭಾ
ಬೆಂಗಳೂರು: ಮಹಿಳೆಯರ ಬಗ್ಗೆ ಕನಿಕರ ಬೇಕಿಲ್ಲ. ಅವರ ಧ್ವನಿಗೆ ಶಕ್ತಿ, ಬೆಲೆ ಹಾಗೂ ಗೌರವ ಬಂದರೆ ಸಾಕು. ಅವರಿಗೆ ಒಂಟಿಯಾಗಿ ಬದುಕಲು ಹಾಗೂ ನಿರ್ಧಾರ ತೆಗೆದುಕೊಳ್ಳಲು ದೈರ್ಯ ಬರುವುದು ಶಿಕ್ಷಣ ಹಾಗೂ ಉದ್ಯೋಗ ದೊರಕಿದಾಗ ಮಾತ್ರ. ಮಹಿಳೆಯರಿಗೆ ಅವರ ಕುಟುಂಬದಲ್ಲಾಗಲಿ, ಸಂಸ್ಥೆಗಳಲ್ಲಾಗಲಿ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಸಿಗಬೇಕು.
ಮಹಿಳೆಯರು ಹೃದಯದಿಂದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮಹಿಳೆಯರು ತಮ್ಮ ಮಕ್ಕಳನ್ನು ಗಂಡು ಹೆಣ್ಣು ಎಂಬ ಭೇದ-ಭಾವ ತೋರದೆ ಲಿಂಗ ಸಮಾನತೆಯ ಅಡಿಯಲ್ಲಿ ಬೆಳಸಬೇಕು ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ನಿನ್ನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ “ಬಿಲ್ಲವ ಭವನ’ದ ದೇವಕಿ ಆನಂದ ಸುವರ್ಣ ಕನ್ವೆನ್ಷನ್ ಹಾಲ್ನಲ್ಲಿ ಬಿಲ್ಲವ ಅಸೋಸಿಯೇಶನ್ ಬೆಂಗಳೂರು (ರಿ) ವತಿಯಿಂದ ನಡೆದ “ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ ‘ಮಹಿಳಾ ದಿನಾಚರಣೆ 2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ ‘ಮಹಿಳೆಯರು ತಮ್ಮ ಮಕ್ಕಳನ್ನು ಓದಿಸುವಲ್ಲಿ ಹೇಗೆ ಶ್ರಮ ಪಡುತ್ತಾರೋ ಅದೇ ರೀತಿ ನಮ್ಮ ಪರಶುರಾಮ ಸೃಷ್ಠಿಯ ಭೂಮಿಯ ಸಂಸ್ಕೃತಿಯನ್ನು ಕಲಿಸುವ ಕೆಲಸ ಕೂಡಾ ನಿಮ್ಮಿಂದಾಗಲಿ.
ಇದನ್ನು ನಿಮ್ಮ ಹಿರಿಯರಿಂದ ಪಡೆದು ಮಕ್ಕಳಿಗೆ ಕಲಿಸುವ ಜವಾಬ್ದಾರಿ ಮಹಿಳೆಯರದ್ದು. ಸಂಘದ ವತಿಯಿಂದ ಈಗಾಗಲೇ ಹಲವಾರು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ನೀಡುತ್ತಿದ್ದು, ವಿದ್ಯಾರ್ಥಿನಿಯರಿಗಾಗಿ ಒಂದು ವಿದ್ಯಾರ್ಥಿನಿ ನಿಲಯ ಸ್ಥಾಪಿಸುವ ಕೆಲಸ ಪ್ರಾರಂಭವಾಗಿರುವ ಬಗ್ಗೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ‘ಮಹಿಳೆಯರು ಅಲಂಕಾರ ಮಾಡಿಕೊಳ್ಳುವುದು ತಾವು ಆರೋಗ್ಯವಾಗಿದ್ದೇವೆ ಎಂಬ ಸಂಕೇತದೊಂದಿಗೆ ಸಮಾಜಕ್ಕೆ ಕೊಡುವ ಸಂದೇಶ ಎಂಬುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಲ್ಲವ ಅಸೋಸಿಯೇಶನ್ ಬೆಂಗಳೂರು ವತಿಯಿಂದ ನಿಮಾರ್ಣಗೊಳ್ಳುತ್ತಿರುವ ವಿದ್ಯಾರ್ಥಿನಿ ನಿಲಯದ ಕಟ್ಟಡಕ್ಕೆ ತಮ್ಮ ವಿಧಾನ ಪರಿಷತ್ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿದರು.
ಇದೇ ಸಂದರ್ಭದಲ್ಲಿ ಈಗಾಗಲೇ ಬನ್ನೇರುಘಟ್ಟ ರಸ್ತೆಯ ಜೆ.ಡಿ ಮರ ಜಂಕ್ಷನ್ಗೆ “ಬ್ರಹ್ಮಶ್ರೀ ನಾರಾಯಣಗುರು ಜಂಕ್ಷನ್” ಎಂಬ ನಾಮಕರಣವಾಗಿದ್ದು ಮುಂದೆ ಅಲ್ಲಿಯೇ ನಿರ್ಮಾಣಗೊಳ್ಳುತ್ತಿರುವ ಮೆಟ್ರೊ ಜಂಕ್ಷನ್ಗೆ ಬಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಇಟ್ಟು ನಾಮಕರಣ ಮಾಡಿಸುವಂತೆ ಸಚಿವರಿಗೆ ಮನವಿ ಪತ್ರ ಒಪ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಕರ್ನಾಟಕ ಮೀನುಗಾರಿಕಾ ನಿಗಮ ನಿಯಮಿತದ ನಿರ್ದೇಶಕ ಗೀತಾಂಜಲಿ ಸುವರ್ಣ, ಬಿಬಿಎಂಪಿ ಆರೆಸಿ ವಾರ್ಡಿನ ಮಾಜಿ ಸದಸ್ಯರಾದ ಶ್ರೀಮತಿ ಭಾಗ್ಯಲಕ್ಷ್ಮಿ ಮುರಳಿ, ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಹಾಗೂ ಶಿವಮೊಗ್ಗ ಈಡಿಗರ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಗೀತಾಂಜಲಿ ದತ್ತಾತ್ರೇಯ ಉಪಸ್ಥಿತರಿದ್ದರು.
bangalore
ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.
ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.
2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ
bangalore
‘ಕಾಂತಾರ-1’ ಫಸ್ಟ್ ಲುಕ್ ಟೀಸರ್ 7 ಭಾಷೆಗಳಲ್ಲಿ ಬಿಡುಗಡೆ..!
ಕುಂದಾಪುರ: ತುಳುನಾಡ ಮಣ್ಣಿನ ಶಕ್ತಿ ದೈವಾರಾಧನೆ ಮಹತ್ವವನ್ನು ಇಡೀ ಜಗತ್ತಿಗೆ ತೋರಿಸಿದ ಚಿತ್ರ ಕಾಂತಾರ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸೂಪರ್ ಹಿಟ್ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್ ಲುಕ್ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.
ಇಂದು ಬೆಳಿಗ್ಗೆ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸಿನಿಮಾದ ಮೂಹೂರ್ತ ಕಾರ್ಯಕ್ರಮ ನೆರವೇರಿದೆ. ಮುಹೂರ್ತದ ಜೊತೆಗೆ ಫಸ್ಟ್ ಲುಕ್ ಹಾಗೂ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಟೀಸರ್ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಟೀಸರ್ ನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂಬುದು ಬಹಿರಂಗವಾಗಿದೆ.
ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ಬಣ್ಣಿಸಿದೆ. ಟೀಸರ್ ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇಂದು ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನಲ್ಲಿ ರಿಷಬ್ ಶೆಟ್ಟಿಯವರು ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಅವತಾರ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚುವಂತೆ ಮಾಡಿದೆ. ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ರೌದ್ರವತಾರದಲ್ಲಿ ಅಚ್ಚರಿ ಮೂಡುವಂತೆ ಕಂಡು ಬಂದಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವುದು ಕಂಡು ಬಂದಿದ್ದು, ಈ ಪೋಸ್ಟರ್ ಹಲವು ಕುತೂಹಲವನ್ನು ಸೃಷ್ಟಿಸಿದೆ. ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದರು. ಸಣ್ಣ ಬಜೆಟ್ನಲ್ಲಿ ಸಿದ್ಧವಾದ ಈ ಸಿನಿಮಾ, ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
bangalore
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
ಬಿಗ್ ಬಾಸ್: ಬಿಗ್ ಬಾಸ್ ಸ್ಪರ್ಧಿಗಳು ಹೊರ ಹೋದ ಬೆನ್ನಲೆ ವೈಲ್ಡ್ ಕಾರ್ಡ್ ಮೂಲಕ ಇದೀಗ ಇಬ್ಬರು ಸ್ಪರ್ಧಾಳುಗಳು ಎಂಟ್ರಿಯಾಗಿದ್ದಾರೆ.
ಕನ್ನಡ ಬಿಗ್ ಬಾಸ್ ’10’ ಈಗಾಗಲೇ 50 ದಿನಗಳನ್ನು ಪೂರ್ಣಗೊಳಿಸಿದ್ದು, ಇನ್ನು 50 ದಿನ ಪೂರ್ಣಗೊಂಡರೆ ಫಿನಾಲೆಯೆ ಬಂದು ಬಿಡುತ್ತದೆ. ಇದೀಗ ಇವುಗಳ ನಡುವೆ ಬಿಗ್ ಬಾಸ್ ಮನೆಯಿಂದ 6 ಜನ ಔಟ್ ಆಗಿ ಸ್ಪರ್ಧಿಗಳ ಸಂಖ್ಯೆ 11ಕ್ಕೆ ಇಳಿಕೆಯಾಗಿದೆ. ಬಿಗ್ ಬಾಸ್ ನ ಪ್ರತಿ ಸೀಸನ್ ನಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿಯಾಗುತ್ತಾರೆ. ಹಾಗಾಗಿ ಈ ಬಾರಿ ಯಾರು ಎಂಟ್ರಿಯಾಗುತ್ತರೆ ಅನ್ನೋ ಕೂತುಹಲವಿತ್ತು. ಆ ಕೂತಹಲದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೆಚ್ಚು ಜನಪ್ರಿಯತೆ ಪಡೆದಿರುವ ಹಾಗೂ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ ಇದೀಗ ಬಿಗ್ ಬಾಸ್ ಗೆ ಎಂಟ್ರಿಯಾಗಿದ್ದಾರೆ. ಜೊತೆಗೆ ಮತ್ತೋಬ್ಬ ಸ್ಪರ್ಧಿ ನಟ ಮಾಡೆಲ್ ಆಗಿರುವ ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ಎಂಟ್ರಿಯಾಗಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS7 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು