Connect with us

LATEST NEWS

ಮಂಗಳೂರು & ಉಡುಪಿ ಆಕಾಶದಲ್ಲಿ ಕಂಡು ಬಂದ ಬೆಳಕಿನ ಸಾಲಿನ ಕೌತುಕ…

Published

on

ಮಂಗಳೂರು: ಮಂಗಳೂರು ಮತ್ತು ಉಡುಪಿ ಭಾಗದ ಆಕಾಶದಲ್ಲಿ ನಿನ್ನೆ ರಾತ್ರಿ ಬೆಳಕಿನ ಸಾಲಿನ ಕೌತುಕ ಕಂಡು ಬಂದಿದೆ.

30 ರಿಂದ 50 ಬೆಳಕಿನ ಚುಕ್ಕಿಗಳು ಒಂದೇ ಸರಳ ರೇಖೆಯಲ್ಲಿ ಸಂಚರಿಸಿದಂತೆ ಗೋಚರಿಸಿವೆ. ಜನ ಇದನ್ನು ಏಲಿಯನ್ಸ್ ಎಂದು ಭಾವಿಸಿದ್ದಾರೆ.


ಆದರೆ ಇವು ಅಮೆರಿಕದ ವಿಜ್ಞಾನಿ ಎಲಾನ್ ಮಸ್ಕ್ ಅವರ ಕಂಪೆನಿ ಸ್ಟಾರ್‌ಲಿಂಕ್ ಕಂಪನಿಯ ಸ್ಯಾಟಲೈಟ್ ಗಳಾಗಿವೆ.

ಈ ಬಗ್ಗೆ ಯಾರೂ ಆತಂಕ ಪಡುವ ಆವಶ್ಯಕತೆ ಇಲ್ಲ ಎಂಬುದಾಗಿ ಖಗೋಳಶಾಸ್ತ್ರಜ್ಞ ಅತುಲ್ ಭಟ್ ಸ್ಪಷ್ಟ ಪಡಿಸಿದ್ದಾರೆ. ಸ್ಟಾರ್‌ ಲಿಂಕ್ ಕಂಪೆನಿಯು ಹಳ್ಳಿಗಳು ಮತ್ತು ನೆಟ್ವರ್ಕ್ ಸಿಗದ ಪ್ರದೇಶಗಳಿಗೆ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲು ಉಪಗ್ರಹಗಳನ್ನು ಅಂತರಿಕ್ಷಕ್ಕೆ ಬಿಡುವ ವ್ಯವಸ್ಥೆ ಮಾಡಿದೆ.

ಭೂಮಿಯ ಸುತ್ತಲೂ ಹನ್ನೆರಡು ಸಾವಿರ ಸ್ಯಾಟಲೈಟ್‌ಗಳನ್ನು ಕವಚದ ರೂಪದಲ್ಲಿ ಕಳುಹಿಸಲಿದೆ. ಮುಂದಿನ ದಿನಗಳಲ್ಲಿ 44,000 ಸ್ಯಾಟಲೈಟ್ ಗಳನ್ನು ಬಿಡುವ ಸಾಧ್ಯತೆ ಇದೆ.

ಈಗಾಗಲೇ ಮೂರುವರೆ ಸಾವಿರ ಸ್ಯಾಟಲೈಟ್ ಗಳು ಬಿಡುಗಡೆಯಾಗಿವೆ. ಈ ಸ್ಯಾಟಿಲೈಟುಗಳು ಕಕ್ಷೆಯನ್ನು ಸೇರುವ ಮುಂಚೆ ಒಂದೇ ಸರಳ ರೇಖೆಯಲ್ಲಿ ಆಕಾಶದಲ್ಲಿ ಸಂಚರಿಸುತ್ತವೆ.

ನಿನ್ನೆ ಸಂಜೆ ಕಂಡಿರುವುದು ಸ್ಟಾರ್ ಲಿಂಕ್ ಜಿ 31 ಸೀರೀಸ್‌ ನ ಸ್ಯಾಟಲೈಟ್ ಗಳಾಗಿವೆ. ನಿನ್ನೆ 53 ಉಪಗ್ರಹಗಳನ್ನು ಬಿಡುಗಡೆ ಮಾಡಲಾಗಿತ್ತು. ಇವು ಕ್ಷಿತಿಜಕ್ಕೆ ತುಂಬಾ ಹತ್ತಿರ ಹಾದು ಹೋದಂತೆ ಕಾಣುತ್ತವೆ.

48 ಗಂಟೆಗಳ ಬಳಿಕ ಈ ಸ್ಯಾಟಿಲೈಟ್ ಗಳು ತಮ್ಮ ಕಕ್ಷೆ ಸೇರಲಿವೆ. ಈ ಹಿಂದೆಯೂ ಒಂದು ಬಾರಿ ಸರಳ ರೇಖೆಯಲ್ಲಿ ಸ್ಯಾಟಲೈಟ್ ಗಳ ಸಂಚಾರ ಕಂಡು ಬಂದಿತ್ತು.

ಇವುಗಳಿಂದ ಮನುಷ್ಯನಿಗೆ ಯಾವುದೇ ಹಾನಿ ಇಲ್ಲ. ಆದರೆ ಖಗೋಳ ಶಾಸ್ತ್ರಜ್ಞರು ಈ ಬಗ್ಗೆ ಸ್ವಲ್ಪ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಟೆಲಿಸ್ಕೋಪ್ ಮೂಲಕ ಆಕಾಶದ ಅಧ್ಯಯನ ಮಾಡುವಾಗ, ಈ ರೀತಿ ಸರಳ ರೇಖೆಯಲ್ಲಿ ಬರುವ ಸ್ಯಾಟಲೈಟ್ ಗಳು ಅಧ್ಯಯನಕ್ಕೆ ಅಡ್ಡಿಪಡಿಸುತ್ತವೆ. ಹಾಗಾಗಿ ಖಗೋಳಶಾಸ್ತ್ರಜ್ಞರು ಇದನ್ನು ವಿರೋಧಿಸುತ್ತಿದ್ದಾರೆ.

LATEST NEWS

‘ಗೀತಾಂಜಲಿ ಸಿಲ್ಕ್ಸ್’, ‘ಶಾಂತಿ ಸಾಗರ್’ ಹೊಟೇಲ್ ಸಂಸ್ಥಾಪಕ ನೀರೆಬೈಲೂರು ಗೋವಿಂದ ನಾಯಕ್ ನಿ*ಧನ

Published

on

ಉಡುಪಿ : ಉಡುಪಿಯ ಖ್ಯಾತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್ಸ್’ ಮತ್ತು ‘ಶಾಂತಿ ಸಾಗರ್’ ಹೊಟೇಲ್ ಸಂಸ್ಥಾಪಕ ನೀರೆಬೈಲೂರು ಗೋವಿಂದ ನಾಯಕ್ ಇಂದು ಮುಂಜಾನೆ ಸ್ವಗೃಹದಲ್ಲಿ ವಿಧಿವ*ಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮೃ*ತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

Continue Reading

LATEST NEWS

KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

Published

on

ಕಾರ್ಕಳ :  ಕಲ್ಲು ಲೋಡು ಮಾಡಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃ*ತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃ*ತಪಟ್ಟವರು.

ಇದನ್ನೂ ಓದಿ : ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 24ರ ವರೆಗೂ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕಾರ್ಕಳ ನಿಟ್ಟೆ ಭ್ರಾಮರಿ ಕ್ರಾಸ್ ಸಮೀಪ ಲಾರಿಯಲ್ಲಿ ಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಕೋರೆಯ ಪಕ್ಕದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಪರಿಣಾಮ ಕಾರ್ಮಿಕರು ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿ ಮೃ*ತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ದಾಂಪತ್ಯಕ್ಕೆ ಕಾಲಿಡಲಿದ್ದಾರಾ ‘ಪ್ರಭಾಸ್‌’..! ಈ ಪೋಸ್ಟ್‌ ಹಿಂದಿನ ಅಸಲಿಯತ್ತೇನು!?

Published

on

ಟಾಲಿವುಡ್‌ ನ ಮೋಸ್ಟ್ ಬ್ಯಾಚುಲರ್‌ ಎಂದೇ ಹೆಸರಾಗಿರುವ ಪ್ರಭಾಸ್ ಸದಾ ತಮ್ಮ ಮದುವೆಯ ವಿಚಾರವಾಗಿಯೇ ಸುದ್ದಿಯಲ್ಲಿರುತ್ತಾರೆ. ಸೂಪರ್ ಸ್ಟಾರ್ ಪ್ರಭಾಸ್‌ರವರ ಹೆಸರಿನ ಜೊತೆ ಹಲವು ಸ್ಟಾರ್ ನಟಿಯರ ಹೆಸರುಗಳು ತುಣುಕು ಹಾಕುತ್ತಿತ್ತು. ಅದರಲ್ಲೂ ಪುತ್ತೂರಿನ ಬೆಡಗಿ ಅನುಷ್ಕಾ ಶೆಟ್ಟಿ ಯವರ ಹೆಸರು ಆಗಾಗ ಕೇಳಿಬರುತ್ತಿತ್ತು. ಇನ್ನು ಬಾಹುಬಲಿ ಸಿನೆಮಾದ ಬಳಿಕ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಇನ್ನೇನು ದಾಂಪತ್ಯ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಮಧ್ಯೆ ಪ್ರಭಾಸ್ ಹಾಗೂ ಅನುಷ್ಕಾ ಅದೆಲ್ಲವನ್ನು ಅಲ್ಲಗಳೆದಿದ್ದಾರೆ.

ಇದೀಗ ಪ್ರಭಾಸ್ ಅವರ ಒಂದು ಪೋಸ್ಟ್‌ ಅಭಿಮಾನಿಗಳಲ್ಲಿ ಖುಷಿ ನೀಡಿದೆ. ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ‘ಡಾರ್ಲಿಂಗ್ಸ್‌!!.. ಕೊನೆಗೂ ನನ್ನ ಜೀವನದಲ್ಲಿ ಒಬ್ಬ ವಿಶೇಷ ವ್ಯಕ್ತಿ ಬರಲಿದ್ದಾರೆ.. ಸ್ವಲ್ಪ ಕಾಯಿರಿ” ಎಂದು ಬರೆದುಕೊಂಡು ಪೋಸ್ಟ್‌ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಖುಷಿ ಜೊತೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪೋಸ್ಟ್‌ ನೋಡಿದ ಬಳಿಕ ಪ್ರಭಾಸ್ ಮದುವೆಗೆ ಸಜ್ಜಾಗಿದ್ದಾರಾ..!? ಎಂಬುದಾಗಿಯೂ ಕುತೂಹಲ ಮೂಡಿದೆ. ಇನ್ನೂ ಕೆಲವರು ಸಿನೆಮಾ ಪ್ರಚಾರಕ್ಕಾಗಿ ಈ ತಂತ್ರವನ್ನು ಬಳಸಿದ್ದಾರಾ ಎನ್ನುವುದು ಅನುಮಾನ ಮೂಡಿದೆ.

ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

ಸಿನೆಮಾ ಪ್ರಚಾರಕ್ಕಾಗಿ ಪೋಸ್ಟ್‌ ಹಾಕಿದ್ರಾ ಪ್ರಬಾಸ್..?

kalki

ಸಲಾರ್ ಸಿನೆಮಾ ಹಿಟ್ ಬಳಿಕ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ ‘ ಸಿನೆಮಾ ತೆರೆಗೆ ಬರಲು ಸಿದ್ಧವಾಗಿದೆ. ಇನ್ನೂ ಈ ಸಿನೆಮಾದಲ್ಲಿ ಘಟಾನುಘಟಿಗಳು ಬಣ್ಣ ಹಚ್ಚಿದ್ದಾರೆ. ಅಮಿತಾಬಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾನಿ ಮುಂತಾದವರು ನಟಿಸಿದ್ದಾರೆ. ಇದೇ ಸಿನೆಮಾದ ಪ್ರಚಾರಕ್ಕಾಗಿ ಮಾಡಿರುವ ತಂತ್ರ ಎಂದು ಹೇಳಲಾಗಿದೆ. ಇನ್ನು ಈ ಸಿನೆಮಾ ಪ್ರಚಾರಕ್ಕಾಗಿಯೇ ಹೊಸ ವಿನ್ಯಾಸದ ಕಾರೊಂದನ್ನು ತಯಾರು ಮಾಡಲಾಗಿದೆಯಂತೆ. ಹೀಗಾಗಿ ಪ್ರಭಾಸ್ ‘ ನನ್ನ ಜೀವನದಲ್ಲಿ ಹೊಸ ವ್ಯಕ್ತಿ ಆಗಮನ’ ಎಂದು ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಅದೇನೆ ಇರಲಿ ಪ್ರಭಾಸ್ ಮದುವೆ ಆಗಲು ನಿರ್ಧಿರಿಸಿದ್ದಾರಾ..? ಅಥವಾ ಸಿನೆಮಾ ಪ್ರಚಾರಕ್ಕಾಗಿ ಹೀಗೆ ಬರೆದುಕೊಂಡಿದ್ದಾರಾ..? ಅನ್ನೋದರ  ಅಸಲಿಯತ್ತು  ಇನ್ನೆರೆಡು ದಿನಗಳಲ್ಲಿ ಕಾದು ನೋಡಬೇಕಿದೆ.

 

 

Continue Reading

LATEST NEWS

Trending