DAKSHINA KANNADA
ರಂಗಸ್ಥಳದಲ್ಲೇ ಹೃದಯಘಾತವಾಗಿ ಯಕ್ಷಗಾನ ಕಲಾವಿದ ವಿಧಿವಶ : ಕಟೀಲಿನ 4ನೇ ಮೇಳದ 58 ವರ್ಷದ ಗುರುವಪ್ಪ ಬಾಯಾರು ಇನ್ನಿಲ್ಲ,!
Published
2 years agoon
By
Adminಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ಮಂಗಳೂರಿನ ಕಟೀಲಿನಲ್ಲಿ ನಡೆದಿದೆ.
ಮಂಗಳೂರು : ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ಮಂಗಳೂರಿನ ಕಟೀಲಿನಲ್ಲಿ ನಡೆದಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಮೇಳದ ಕಲಾವಿದ 58 ವರ್ಷದ ಗುರುವಪ್ಪ ಬಾಯಾರು ಅವರು ಬಾಯಾರು ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ.
ಗುರುವಾರ ರಾತ್ರಿ ಕಟೀಲಿನ ಸರಸ್ವತಿ ಸದನದಲ್ಲಿ ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತ್ತಿತ್ತು.
ಅದರಲ್ಲಿ ಬಾಯಾರು ಅವರು ಅದರಲ್ಲಿ ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು.
ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ನಿಧನರಾಗಿದ್ದಾರೆ ಎಂದು ತಿಳಿಸಿದರು.
ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಗುರುವಪ್ಪ ಬಾಯಾರು ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು.
ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸಂಮಾನಗಳು ಸಂದಿವೆ.
ಇದೀಗ ಹಿರಿಯ ಯಕ್ಞಗಾನ ಕಲಾವಿದನೊಬ್ಬನ ನಿಧನಕ್ಕೆ ಯಕ್ಷಗಾನ ರಂಗ ಹಾಗು ಯಕ್ಷಭಿಮಾನಿಗಳು ಕಂಬನಿ ಮಿಡಿದ್ದಾರೆ.ಕ್ಞ
ಮಂಗಳೂರು : ಶ್ವೇತಾ ಜ್ಯುವೆಲರ್ಸ್ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ.
ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು ಹೊಂದಿದ್ದ ಮಂಗಳೂರಿನ ವಿ.ಟಿ. ರೋಡ್ ನಿವಾಸಿ 64 ವರ್ಷದ ಅಶೋಕ್ ಶೇಟ್ ಹೃ*ದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ : ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್ ಮೈಕಾಲ
ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದ ಅಶೋಕ್ ಶೇಟ್ ಈ ಹಿಂದೆ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.
ಮೃ*ತರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ
DAKSHINA KANNADA
ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!
Published
1 day agoon
21/01/2025By
NEWS DESKಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್ಸ್ಪೆಕ್ಟರ್ ರಫೀಕ್ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
DAKSHINA KANNADA
ಗೋವುಗಳ ಮೇಲಿನ ಪೈಶಾಚಿಕ ಕೃ*ತ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Published
1 day agoon
21/01/2025By
NEWS DESK4ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.
ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.
LATEST NEWS
ಸ್ಯಾಂಡಲ್ವುಡ್ ಸ್ಟಾರ್ ನಟನ ಜೊತೆ ನಟಿಸಲಿರುವ ಮೊನಾಲಿಸಾ
ಶ್ವೇತಾ ಜ್ಯುವೆಲರ್ಸ್ನ ಮಾಲಿಕ ಅಶೋಕ್ ಶೇಟ್ ನಿ*ಧನ
ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್ ಮೈಕಾಲ
ಡಾಲಿ ಚಾಯ್ ವಾಲಾ ಮಂಗಳೂರಿನವನಲ್ಲ, ಇಲ್ಲದಿದ್ದರೆ ಅವನ ಅಂಗಡಿ ಮೇಲೆ ಬುಲ್ಢೋಝರ್ ಹೋಗ್ತಿತ್ತು-ರಾಜ್ ಬಿ ಶೆಟ್ಟಿ
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಇನ್ಮುಂದೆ ಹಾಯಾಗಿ ಕಳೆಬಹುದು ನಿವೃತ್ತಿ ಜೀವನ
ಟರ್ಕಿಯ ಸ್ಕಿ ರೆಸಾರ್ಟ್ನಲ್ಲಿ ಅಗ್ನಿ ಅವಘಡ; ಮೃತರ ಸಂಖ್ಯೆ 76ಕ್ಕೆ ಏರಿಕೆ
Trending
- BIG BOSS3 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS10 hours ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS2 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?
- FILM3 days ago
ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು