LATEST NEWS
ತೆಂಕುತಿಟ್ಟಿನ ಹಿರಿಯ ಕಲಾವಿದ ಮುಳಿಯಾಲ ಭೀಮ ಭಟ್ ವಿಧಿವಶ
ಉಡುಪಿ: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ, ಹಿರಿಯ ಕಲಾವಿದ ಮುಳಿಯಾಲ ಭೀಮ ಭಟ್ ಅವರು ಇಂದು ಮುಂಜಾನೆ ಕಾಂತಾವರದಲ್ಲಿ ನಿಧನ ಹೊಂದಿದ್ದಾರೆ.
85 ವರ್ಷ ಪ್ರಾಯದವರಾಗಿದ್ದ ಅವರು ವಯೋಸಜಹ ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ಬಳಲುತ್ತಿದ್ದರು. ಕಳೆದ ಇಪ್ಪತ್ತು ವರ್ಷಗಳಿಂದ ಕಾಂತಾವರ ದೇವಸ್ಥಾನದಲ್ಲಿ ಸೇವೆ ಮಾಡಿದ ಭೀಮ ಭಟ್ಟರ ಆರೋಗ್ಯ ಕಳೆದ ನಾಲ್ಕು ತಿಂಗಳಿಂದ ಹದಗೆಟ್ಟಿತ್ತು.
1951ರಲ್ಲಿ ಕುರಿಯ ಶಾಸ್ತ್ರಿಗಳ ಸಂಚಾಲಕತ್ವದ ಶ್ರಿ ಧರ್ಮಸ್ಥಳ ಮೇಳದಿಂದ ಕಲಾ ಜೇವನ ಆರಂಭಿಸಿದ್ದು, ಕೋಡಂಗಿ, ಬಾಲಗೋಪಾಲ, ಮುಖ್ಯಸ್ತ್ರೀವೇಷ, ಪೀಠಿಕೆ ವೇಷ. ಹೀಗೆ ಹಂತಹಂತವಾಗಿ ಮೇಲೇರಿದ ಅವರು ಪ್ರಸಿದ್ಧ ಕಲಾವಿದರಾಗಿದ್ದರು.
ಭೀಮ ಭಟ್ಟರ ತಂದೆ ಕೇಚಣ್ಣ (ಕೇಶವ) ಭಟ್ಟರೂ ಯಕ್ಷಗಾನ ವೇಷಧಾರಿಯಾಗಿದ್ದರು. ಕುರಿಯ ಶಾಸ್ತ್ರಿಗಳ ನೆಚ್ಚಿನ ಶಿಷ್ಯರಲ್ಲೊಬ್ಬರಾದ ಇವರು ಏಳು ವರುಷ ಧರ್ಮಸ್ಥಳ ಮೇಳದ ತಿರುಗಾಟ ಮಾಡಿ 1958ರಿಂದ ಕಟೀಲು ಮೇಳಕ್ಕೆ ಸೇರಿದರು.
ದೇವಿ ಮಹಾತ್ಮೆ ಪ್ರಸಂಗದ ದೇವಿಯ ಪಾತ್ರವನ್ನು ಒಲಿಸಿಕೊಂಡ ಮುಳಿಯಾಲದವರು ಕಲಾಭಿಮಾನಿಗಳಿಗೆ ದೇವಿ ಭಟ್ರು ಎಂದೇ ಪರಿಚಿತರಾಗಿದ್ದರು.
ದೇವಿ ಮಹಾತ್ಮೆ ಪ್ರಸಂಗದ ಶ್ರೀದೇವಿಯ ಪಾತ್ರವನ್ನು ಒಲಿಸಿಕೊಂಡ ಮುಳಿಯಾಲದವರು ಕಲಾಭಿಮಾನಿಗಳಿಗೆ ದೇವಿ ಭಟ್ರು ಎಂದೇ ಪರಿಚಿತರಾಗಿದ್ದರು.
ಪ್ರಮೀಳೆ, ಶಶಿಪ್ರಭೆ, ಮೀನಾಕ್ಷಿಯಂತಹ ಗಂಡುಗತ್ತಿನ ಪಾತ್ರಗಳ ಮೂಲಕ ಜನರ ಮೆಚ್ಚುಗೆಗೆ ಭಾಜನರಾಗಿದ್ದರು.
ಸ್ತ್ರೀ ಪಾತ್ರವಲ್ಲದೆ ಪುರುಷ ಪಾತ್ರಗಳಾದ ಅತಿಕಾಯ, ತಾಮ್ರಧ್ವಜ, ಕರ್ಣ, ದ್ರುಪದ, ಕೃಷ್ಣ, ಹನುಮಂತ ಹೀಗೆ ರಂಗದ ಬಹುತೇಕ ಪಾತ್ರಗಳಿಗೆ ಸೈ ಎನಿಸಿಕೊಂಡಿದ್ದರು.
ಸೀತೆ, ದಮಯಂತಿ, ಚಂದ್ರಮತಿ, ದ್ರೌಪದಿ..ಯಂತಹ ಗರತಿ ಪಾತ್ರಗಳಲ್ಲಿಯೂ ಜೀವ ತುಂಬಿ ಪ್ರಾವೀಣ್ಯತೆ ಮೆರೆದಿದ್ದರು.
ಇದೀಗ ಕಾಂತಾವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿರುವ ಹಿನ್ನಲೆಯಲ್ಲಿ ಅವರ ಅಂತ್ಯಕ್ರಿಯೆ ಕ್ಷೇತ್ರದ ಧರ್ಮದರ್ಶಿ ಡಾ. ಜೀವಂಧರ ಬಲ್ಳಾಳರ ಉಪಸ್ಥಿತಿಯಲ್ಲಿ ಬೆಳುವಾಯಿಯ ಸ್ಮಶಾನದಲ್ಲಿ ನಡೆಸಲಾಗುತ್ತಿದೆ.
ಭಟ್ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
LATEST NEWS
ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!
ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.
LATEST NEWS
ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು
ಮಂಗಳೂರು: ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.
ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ
ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4