DAKSHINA KANNADA
ಮದ್ದಲೆಯ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಇನ್ನಿಲ್ಲ..!
ಮದ್ದಲೆಯ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಇನ್ನಿಲ್ಲ..!
ಉಡುಪಿ : ಯಕ್ಷಗಾನ ಕ್ಷೇತ್ರದ ಅನರ್ಘ್ಯ ರತ್ನಗಳಲ್ಲಿ ಒಬ್ಬರಾಗಿದ್ದ ‘ಮದ್ದಲೆ ಮಾಂತ್ರಿಕ’ ಖ್ಯಾತಿಯ ಶತಾಯುಷಿ ಹಿರಿಯಡ್ಕ ಗೋಪಾಲರಾಯರು ನಿನ್ನೆ ರಾತ್ರಿ ಉಡುಪಿ ಹಿರಿಯಡ್ಕದ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 101 ವರ್ಷ ವಯಸ್ಸಾಗಿತ್ತು. ಅವರು ಪುತ್ರ, ಅಪಾರ ಬಂಧುಮಿತ್ರರು ಹಾಗೂ ಅಭಿಮಾನಿ ವೃಂದವನ್ನು ಅಗಲಿದ್ದಾರೆ.
ಕರಾವಳಿಯ ಮೂರು ಜಿಲ್ಲೆಗಳ ಯಕ್ಷಗಾನ ಲೋಕದಲ್ಲಿ ‘ಮದ್ದಲೆ ಮಾಂತ್ರಿಕ’ ರೆಂದೇ ಹೆಸರಾದ ಹಿರಿಯಡ್ಕ ಗೋಪಾಲರಾಯರು ಕಳೆದ ವರ್ಷ ತಮ್ಮ ನೂರು ವರ್ಷ ಪ್ರಾಯದಲ್ಲೂ ನವತಾರುಣ್ಯದ ಎಲ್ಲಾ ಛಾಪನ್ನು ತೋರಿಸಿ ತಮ್ಮ ಕೈಬೆರಳುಗಳಲ್ಲಿದ್ದ ಮದ್ದಲೆಯ ಮಾಂತ್ರಿಕತೆಯನ್ನು ತೋರಿಸಿ ಕಲಾಪ್ರೇಮಿಗಳು ಮತ್ತು ತನ್ನ ಅಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದ್ದರು.
1919ರ ಡಿ.15ರಂದು ಹಿರಿಯಡ್ಕದಲ್ಲಿ ಜನಿಸಿದ ಗೋಪಾಲರಾಯರು ಕಲಿತಿದ್ದು 6ನೇ ತರಗತಿಯವರೆಗೆ ಮಾತ್ರ. ಆದರೆ ಯಕ್ಷಗಾನ ಚೌಕಿ ಹಾಗೂ ರಂಗಸ್ಥಳದಲ್ಲಿ ಅವರು ಕಲಿತಿದ್ದು ಬದುಕಿನ ಕಲೆಯನ್ನು ಮಾತ್ರ.
16ನೇ ವಯಸ್ಸಿನಲ್ಲಿ ತಂದೆ ಶೇಷಗಿರಿ ರಾವ್ ರಿಂದ ಮದ್ದಲೆಯನ್ನು ಅಭ್ಯಾಸ ಮಾಡಿದ ಗೋಪಾಲರಾಯರು ಬಳಿಕ ನೃತ್ಯವನ್ನು ಗುರು ನಾಗಪ್ಪ ಕಾಮತರಿಂದ ಕಲಿತರು.
1934ರಲ್ಲಿ ಹಿರಿಯಡ್ಕ ಮೇಳದಲ್ಲಿ ಪಾತ್ರಧಾರಿಯಾಗಿ ಪ್ರವೇಶ ಪಡೆದ ಅವರು 1936ರಲ್ಲಿ ಸಹ ಮದ್ದಲೆ ಕಲಾವಿದರಾದರು.
ಮುಂದಿನ ವರ್ಷವೇ ಪೆರ್ಡೂರು ಮೇಳದಲ್ಲಿ ಪ್ರಧಾನ ಮದ್ದಲೆಕಾರರಾಗಿ ಸೇರಿದ ಗೋಪಾಲರಾಯರು ನಂತರ ಹಿಂದಿರುಗಿ ತಿರುಗಿ ನೋಡದೆ ಯಶಸ್ಸಿನ ಮೆಟ್ಟಲುಗಳನ್ನು ಏರುತ್ತಲೇ ಹೋದರು.
1939ರಿಂದ 67ರವರೆಗೆ ಅವರು ಅಂದು ಬಡಗುತಿಟ್ಟಿನ ಪ್ರಧಾನ ಮೇಳ ವಾದ ಮಂದಾರ್ತಿ ಮೇಳದ ಪ್ರಧಾನ ಮದ್ದಲೆಕಾರರಾಗಿ ದುಡಿದರು.
ಈ ನಡುವೆ 1961ರಲ್ಲಿ ಕೋಟ ಶಿವರಾಮ ಕಾರಂತರ ಸಂಪರ್ಕಕ್ಕೆ ಬಂದ ಗೋಪಾಲ ರಾಯರು, ಅವರ ಯಕ್ಷಗಾನ ನೃತ್ಯಗಳಿಗೆ ಹಾಗೂ ಯಕ್ಷಗಾನ ಗೋಷ್ಠಿಗಳಲ್ಲಿ ಮದ್ದಲೆಕಾರರಾಗಿ ಕಾರ್ಯನಿರ್ವಹಿಸಿದರು.
ಕಾರಂತರ ಒಡನಾಟ ಸಿಕ್ಕ ಬಳಿಕ ಗೋಪಾಲರಾಯರ ಯಕ್ಷಗಾನ ಬದುಕಿಗೆ ಹೊಸ ದಾರಿ ದೊರೆತಂತಾಯಿತು. ಮುಂದೆ 1968ರಲ್ಲಿ ಕಾರಂತರು ಬ್ರಹ್ಮಾವರದಲ್ಲಿ ಪ್ರಾರಂಭಿಸಿದ ಯಕ್ಷಗಾನ ಕೇಂದ್ರಕ್ಕೆ ಅಧ್ಯಾಪಕರಾಗಿ ಸೇರಿದರು.
ಮರುವರ್ಷ ಪೀಟರ್ ಕ್ಲಾಸ್ರ ಜೊತೆ ಕ್ಯಾಲಿಫೋರ್ನಿಯ ವಿವಿಯಲ್ಲಿ ಕೆಲಸ ಮಾಡಿದರು. 1970ರಲ್ಲಿ ಕಾರಂತರ ಸಲಹೆಯಂತೆ ಉಡುಪಿಗೆ ಮರಳಿದ ಗೋಪಾಲರಾಯರು, ಇಲ್ಲಿ ಯಕ್ಷಗಾನದಲ್ಲಿ ಡಾಕ್ಟರೇಟ್ ಮಾಡಲು ಬಂದ ಮಾರ್ತಾ ಆಸ್ಟನ್ಗೆ ಯಕ್ಷಗಾನ ನೃತ್ಯ ಕಲಿಸಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದರು. ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ ಪ್ರಥಮ ವಿದೇಶಿ ಮಹಿಳೆ ಮಾರ್ತಾ ಆಸ್ಟಿನ್ ಆಗಿದ್ದಾರೆ.
ಹಲವು ಬಾರಿ ಯಕ್ಷಗಾನ ತಂಡಗಳೊಂದಿಗೆ ವಿದೇಶಿಗಳಿಗೆ ಪ್ರಯಾಣ ಬೆಳೆಸಿದ ಗೋಪಾಲರಾಯರಿಗೆ 1972ರಲ್ಲಿ ರಾಜ್ಯ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 1997ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, 1998ರಲ್ಲಿ ಜಾನಪದಶ್ರೀ ಪ್ರಶಸ್ತಿ, 2012ರಲ್ಲಿ ಜಾನಪದ ಸಿರಿ ಪ್ರಶಸ್ತಿಗಳನ್ನು ಪಡೆದಿದ್ದರು. 2018ರಲ್ಲಿ ಅವರಿಗೆ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ವತಹ ಸಚಿವೆ ಜಯಮಾಲ ಅವರೇ ಹಿರಿಯಡ್ಕದ ಅವರಿಗೆ ಮನೆಗೆ ಬಂದು ಪ್ರಶಸ್ತಿ ಪ್ರದಾನ ಮಾಡಿದ್ದರು.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ
ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.
ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್ ಕುಂಪಲ ಎಲ್ಲಿದ್ದರು…?
ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.
ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ
ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.
ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ
ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.
DAKSHINA KANNADA
ನಾಳೆ ನಿಮ್ಮೂರಿಗೆ ಬರ್ತಿದ್ದಾನೆ ಮೇಘರಾಜ: ತಂಪಾಗಲಿದೆ ಇಳೆ
ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
ಈ ಬಾರಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ದೂರವಾಗಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ
ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಗಳಿದ್ದು, 85.2 ಸೆಂ.ಮಿ ಮಳೆ ಬೀಳುವ ನಿರೀಕ್ಷೆಗಳಿವೆ. ಜೂನ್, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕ್ರಮವಾಗಿ 19.9 ಸೆಂ.ಮೀ., 27.1 ಸೆಂ.ಮೀ., ಆಗಸ್ಟ್ 22 ಸೆಂ.ಮೀ ಹಾಗೂ 16.1 ಸೆಂಮೀ ಮಳೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.
ನಾಳೆ ಈ ಜಿಲ್ಲೆಗಳಲ್ಲಿ ಆಗಲಿದೆ ಮಳೆ
ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂಉರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
- LATEST NEWS7 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA7 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS7 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!