Connect with us

bangalore

ರಾಕಿಂಗ್ ಸ್ಟಾರ್ ಯಶ್ ಮಗನ ಗ್ರ್ಯಾಂಡ್ ಬರ್ತ್‌ಡೇ ಪಾರ್ಟಿ

Published

on

ಬೆಂಗಳೂರು : ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ, ಪ್ಯಾನ್‌ ಇಂಡಿಯಾ ಮಟ್ಟದಲ್ಲೂ ಗುರುತಿಸಕೊಂಡ ನಟ ಯಶ್‌ ಮಗ ಯಥರ್ವ್‌ 4ನೇ ವರ್ಷದ ಬರ್ತ್‌ಡೇಯನ್ನು ಅದ್ದೂರಿಯಾಗಿಯೇ ಆಚರಿಸಿದ್ದಾರೆ . ಪುತ್ರಿ ಐರಾ ಮತ್ತು ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಗ್ರ್ಯಾಂಡ್‌ ಸೆಲೆಬ್ರೇಟ್ ಮಾಡುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ಯಶ್ ಪುತ್ರನ ಬರ್ತ್‌ಡೇ ಅದ್ದೂರಿಯಾಗಿ ನಡೆದಿದೆ. ಮಗನ ಬರ್ತ್‌ಡೇಯಂದು ಮಕ್ಕಳ ಜೊತೆ ಯಶ್, ರಾಧಿಕಾ ಕೂಡ ಮಸ್ತ್ ಆಗಿ ಡ್ಯಾನ್ಸ್ ಸ್ಟೇಪ್ಸ್ ಹಾಕಿದ್ದಾರೆ.


ಖಾಸಗಿ ಹೋಟೆಲ್‌ವೊಂದರಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ. ಬಾಲ ಹನುಮಾನ್ ಥೀಮ್‌ನಲ್ಲಿ ಸೆಲೆಬ್ರೇಶನ್ ನಡೆದಿದೆ. ಈ ಕಲರ್‌ಫುಲ್ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು.ಇನ್ನೂ ‘ಯಶ್ 19’ ಚಿತ್ರದ ಬಗ್ಗೆ ಇದುವರೆಗೂ ಯಾವುದೇ ಅಪ್‌ಡೇಟ್ ಸಿಕ್ಕಿಲ್ಲ. ಒಂದೂವರೆ ವರ್ಷ ಕಳೆದರೂ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೆ ಅದರ ತಯಾರಿಯಲ್ಲಿ ರಾಕಿ ಭಾಯ್ ಬ್ಯುಸಿಯಾಗಿದ್ದಾರೆ.ಖಾಸಗಿ ಹೋಟೆಲ್‌ವೊಂದರಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ. ಬಾಲ ಹನುಮಾನ್ ಥೀಮ್‌ನಲ್ಲಿ ಸೆಲೆಬ್ರೇಶನ್ ನಡೆದಿದೆ. ಈ ಕಲರ್‌ಫುಲ್ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು.

Click to comment

Leave a Reply

Your email address will not be published. Required fields are marked *

bangalore

ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!

Published

on

Film: ತೆಲುಗು ನಟ ನರೇಶ್ ಈಗಾಗಲೇ ಮೂರನೇ ಪತ್ನಿ ರಮ್ಯಾ ರಘುಪತಿಯವರಿಂದ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ ರಮ್ಯಾ ಡಿವೋರ್ಸ್ ನೀಡಲು ಒಪ್ಪುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಲೋಕೇಶ್ ಜೊತೆ ನರೇಶ್ ಸಹಜೀವನ ನಡೆಸುತ್ತಿದ್ದಾರೆ.


ಬಹುದಿನಗಳ ನಂತರ ನರೇಶ್ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಪೋಸ್ಟ್ ಮಾಡಿದ್ದಾರೆ. “ನಾನು ನನ್ನ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ, ಈ ಒಂದು ಹಾಡು ನನಗೆ ಸ್ಫೂರ್ತಿ ನೀಡಿತು. ಆ ಸಮಯದಲ್ಲಿ ನಾನು ನನ್ನ ಕರಿಯರ್ ಕಳೆದುಕೊಂಡೆ. ನಾನು ಆರ್ಥಿಕ ಸಮಸ್ಯೆ ಎದುರಿಸಿದೆ. ನನ್ನ ಆತ್ಮೀಯರು ನನ್ನನ್ನು ಅಗಲಿದ್ದರು. ಕ್ಷುಲ್ಲಕ ಪ್ರಕರಣದಲ್ಲಿ ಸಂಬಂಧಿಕರಿಂದ ಕಿರಿಕಿರಿ, ಜೋಕರ್‌ನಿಂದ ತೊಂದರೆ ಎದುರಾದರೂ ನನ್ನ ಬೆಂಬಲಕ್ಕೆ ನಿಂತಿದ್ದು ನನ್ನ ತಾಯಿ ಮತ್ತು ಸ್ನೇಹಿತ ವಿಜಯ್ ವಾಧ್ವಾ ಮಾತ್ರ.ಈಗ ಈ ರೀತಿ ಬದಲಾಗಿದ್ದೇನೆ. ಈ ಹಾಡು ನನಗೆ ಸ್ಫೂರ್ತಿ ನೀಡಿದ್ದು ಮಾತ್ರವಲ್ಲ. ಮತ್ತೆ ಬಲವಾಗಿ ಎದ್ದು ನಿಲ್ಲುವಂತೆ ಮಾಡಿದೆ. ಈಗಲೂ ಪ್ರೇರೇಪಿಸುತ್ತದೆ. ಈಗ ನಾನು ನನ್ನ ವೃತ್ತಿಜೀವನದ 50ನೇ ವರ್ಷದಲ್ಲಿದ್ದೇನೆ. ಈ ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಲು ನನಗೆ ತುಂಬಾ ಸಹಾಯ ಮಾಡಿದ ಎಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ” ಎಂದು ನರೇಶ್ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Continue Reading

bangalore

ಮಾಲಿವುಡ್ ನ ಹಿರಿಯ ನಟಿ ಆರ್. ಸುಬ್ಬಲಕ್ಷ್ಮಿ ಇನ್ನಿಲ್ಲ..!

Published

on

Film: ಮಲಯಾಳಂ ಚಿತ್ರದ ಖ್ಯಾತ ಹಿರಿಯ ನಟಿ ಹಾಗೂ ಸಂಗೀತ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡಿರುವ ಆರ್. ಸುಬ್ಬಲಕ್ಷ್ಮಿ ಅವರು ನಿಧನ ಹೊಂದಿದರು.


ಕಾಯಿಲೆಯಿಂದ ಬಳಲುತ್ತಿದ್ದ ಆರ್. ಸುಬ್ಬಲಕ್ಷ್ಮಿ ಅವರಿಗೆ 87 ವಯಸ್ಸಾಗಿತ್ತು. ಸಿನಿಮಾ ರಮಗದಲ್ಲಿ ಹಲವಾರು ವರ್ಷಗಳ ಕಾಲ ನಟನೆ ಮಾಡಿ ಅಲ್ಲದೆ ಚಿತ್ರಕಲೆ, ಸಂಗೀತ ಕ್ಷೇತ್ರದಲ್ಲೂ ಸಾಧನೆ ಮಾಡಿರುವ ಹಿರಿಯ ನಟಿ.

ಇವರಿಗೆ ವಯಸ್ಸಾದರೂ ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಅಜ್ಜಿ ಪಾತ್ರ ಮಾಡಿ ಫೆಮಸ್ ಆಗಿದ್ದರು. ಹಾಗೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.


ಈ ನಟಿಯ ನಿಧನಕ್ಕೆ ಸಿನಿಮಾ ತಾರೆಯರು ಅಲ್ಲದೆ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending