Connect with us

    LATEST NEWS

    ಅಂಬಾನಿ ಮದುವೆಯಲ್ಲಿ 2 ಕೋಟಿ ಬೆಲೆ ಬಾಳುವ ಉಡುಗೊರೆ ಪಡೆದ ‘ಯಶ್’.!!

    Published

    on

    ಮುಂಬೈ/ಮಂಗಳೂರು: ಅಂಬಾನಿ ಕುಟುಂಬದ ಕುಡಿಯ ಮದುವೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದೆ. ಹೌದು, ಪ್ರಪಂಚದ  ಅತ್ಯಂತ ಶ್ರೀಮಂತ ಪಟ್ಟಿಯಲ್ಲಿರುವ ಮುಖೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ದೇಶ-ವಿದೇಶಗಳಲ್ಲೂ ಸದ್ದು ಮಾಡುತ್ತಿದೆ.

    ದೇಶ-ವಿದೇಶದ ಸ್ಟಾರ್ ಸೆಲೆಬ್ರೆಟಿಗಳು ಈ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆಯಲ್ಲಿ ಭಾಗವಹಿಸಿದ ಎಲ್ಲಾ ಅತಿಥಿಗಳಿಗೆ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಗಳನ್ನು ನೀಡಲಾಗಿದೆ.  ಇನ್ನು ಮದುವೆಯಲ್ಲಿ ಭಾಗವಹಿಸಿದ್ದ ನಟ ಯಶ್ ಗೂ ಕೂಡಾ ಬೆಲೆಬಾಳುವ ಉಡುಗೊರೆ ದೊರಕಿದೆ.

    PHOTOS: ರಾಧಿಕಾ ಮರ್ಚೆಂಟ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅನಂತ್ ಅಂಬಾನಿ; ಯಾರೆಲ್ಲ ಭಾಗಿಯಾಗಿದ್ರು ಗೊತ್ತಾ?

    ಅತಿಥಿಗಳಿಗೆ 2 ಕೋಟಿಯ ವಾಚ್‌ ಗಿಫ್ಟ್..:

    ಮುಕೇಶ್ ಅಂಬಾನಿ ತಮ್ಮ ಪುತ್ರನ ಮದುವೆಯನ್ನು ಬಲು ಅದ್ಧೂರಿಯಾಗಿ ಮಾಡಿದ್ದಾರೆ. ದೇಶ-ವಿದೇಶದ ಸಿನಿ ತಾರೆಯರು, ಪಾಪ್ ತಾರೆಯರು, ರಾಜಕಾರಣಿಗಳು, ಉದ್ಯಮಿಗಳು ಅಂಬಾನಿ ಮದುವೆ ಸಮಾರಂಭಕ್ಕೆ ಆಗಮಿಸಿ ವಧು ವರರಿಗೆ ಶುಭಹಾರೈಸಿದ್ದಾರೆ. ಬಂದ ಅತಿಥಿಗಳಿಗೆ ಅಂಬಾನಿ ಫ್ಯಾಮಿಲಿ ಕೋಟ್ಯಾಂತರ ರೂ. ಮೌಲ್ಯದ ಉಡುಗೊರೆಗಳನ್ನು ನೀಡಿದ್ದಾರೆ. ಸ್ಯಾಂಡಲ್‌ವುಡ್‌ ಹಾಗೂ ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಕೂಡಾ ಪತ್ನಿ ರಾಧಿಕಾ ಜೊತೆ ಅಂಬಾನಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದು ಇವರಿಗೂ ಕೂಡಾ ಕೋಟಿ ಬೆಲೆ ಬಾಳುವ ವಾಚ್‌ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಮದುವೆಗೆ ಬಂದ ಅತಿಥಿಗಳಿಗೆ ಬರೋಬ್ಬರಿ ಎರಡು ಕೋಟಿ ರೂಪಾಯಿ ಮೌಲ್ಯದ ದುಬಾರಿ ವಾಚ್ ಅನ್ನು ಉಡುಗೊರೆಯಾಗಿ ನೀಡಿದ್ದಾರಂತೆ. ಶಾರುಖ್ ಖಾನ್ ಸೇರಿದಂತೆ ಮದುವೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ಈ ದುಬಾರಿ ವಾಚು ಉಡುಗೊರೆಯಾಗಿ ದೊರೆತಿದೆ. ಸುಮಾರು 6000 ಕೋಟಿ ಹಣವನ್ನು ಮುಕೇಶ್ ಅಂಬಾನಿ ತಮ್ಮ ಮಗನ ಮದುವೆಗೆ ಖರ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ.

    ಮದುವೆಯ ಖರ್ಚೆಷ್ಟು ಗೊತ್ತಾ..?

    ಸ್ವಿಡ್ಜರ್​ಲ್ಯಾಂಡ್​ನ ಆಡಿಮೆರಾಸ್ ಪಿಗೆಟ್ ಬ್ರ್ಯಾಂಡ್​ನ ಲಿಮಿಟೆಡ್ ಎಡಿಷನ್ ವಾಚ್ ಅನ್ನು ಅಂಬಾನಿ ಕುಟುಂಬದವರು ಬಂದ ಅತಿಥಿಗಳಿಗೆ ನೀಡಿದ್ದಾರೆ. ಈ ವಾಚಿನ ಬೆಲೆ ಸುಮಾರು 1.5 ರಿಂದ 2 ಕೋಟಿ ಎನ್ನಲಾಗುತ್ತಿದ್ದು, ಬಂದ ಪ್ರತಿಯೊಬ್ಬ ಅತಿಥಿಗೂ ಈ ವಾಚನ್ನು ನೀಡಲಾಗಿದೆ. ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚಿನ ಮೊತ್ತವನ್ನು ಕೇವಲ ಉಡುಗೊರೆಗಾಗಿಯೇ ಮುಕೇಶ್ ಅಂಬಾನಿ ಖರ್ಚು ಮಾಡಿದ್ದಾರೆ. ಅಂಬಾನಿ ಮದುವೆಯಲ್ಲಿ ಉಡುಗೊರೆಯಾಗಿ ಸಿಕ್ಕ ವಾಚುಗಳನ್ನು ಧರಿಸಿಕೊಂಡು ಕೆಲ ಸೆಲೆಬ್ರಿಟಿಗಳು ಫೋಟೊಗಳನ್ನು ತೆಗೆಸಿಕೊಂಡಿದ್ದಾರೆ.

    ಮದುವೆಯ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾರುಖ್ ಖಾನ್, ಸಲ್ಮಾನ್ ಖಾನ್ ಇನ್ನೂ ಕೆಲವರಿಗೆ ವಾಚ್​ನ ಜೊತೆಗೆ ಕೆಲವು ದುಬಾರಿ ಉಡುಗೊರೆಗಳನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಮದುವೆಯಲ್ಲಿ ಭಾಗವಹಿಸಿದ ನಟಿಯರು ಹಾಗೂ ಇತರೆ ಸೆಲೆಬ್ರಿಟಿ ಮಹಿಳೆಯರಿಗೆ ಭಾರಿ ದುಬಾರಿ ಸೀರೆಯ ಜೊತೆಗೆ ಚಿನ್ನದ ಆಭರಣವನ್ನು ಸಹ ನೀಡಲಾಗಿದೆ ಎನ್ನಲಾಗುತ್ತಿದೆ.

    FILM

    ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ

    Published

    on

    ಬೆಂಗಳೂರು : ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು.

    ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಅವರು ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ
    ಬೆಂಗಳೂರಿನ ಆರ್​ ಆರ್​ ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಸಾವನ್ನಪಿದ್ದಾರೆ.

    ‘ಮನಸಾಲಜಿ’, ‘ಶುಗರ್​ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ನಿರ್ದೇಶನ ಮಾಡಿದ್ದರು. ದೀಪಕ್ ಅರಸ್ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳು ಇದ್ದಾರೆ.

    Continue Reading

    LATEST NEWS

    ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು..!

    Published

    on

    ನವದೆಹಲಿ : ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ಡಿವೈ ಚಂದ್ರಚೂಡ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೇಮಮಿಸುವಂತೆ ಶಿಫಾರಸು ಮಾಡಿದ್ದಾರೆ. ಡಿವೈ ಚಂದ್ರಚೂಡ್ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್‌ ಪ್ರೊಸೀಜರ್ ಪ್ರಕಾರ ಶಿಫಾರಸು ಕಳುಹಿಸುವಂತೆ ಸರ್ಕಾರ, ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿತ್ತು. ಡಿವೈ ಚಂದ್ರಚೂಡ್‌ ಅವರ ಶಿಫಾರಸನ್ನು ಸರ್ಕಾರ ಅನುಮೋದಿಸಿದ ಬಳಿಕ ನ್ಯಾಯಮೂರ್ತಿ ಸಂಜೀನ್ ಖನ್ನಾ ಅವರು ಭಾರತ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಲಿದ್ದಾರೆ. ಖನ್ನಾ ಅವರಿಗೆ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲು ಕೇವಲ ಆರು ತಿಂಗಳ ಅವಕಾಶ ಮಾತ್ರ ದೊರೆತಿದ್ದು ಅವರು 2025 ಮೇ 13 ರಂದು ನಿವೃತ್ತಿಯಾಗಲಿದ್ದಾರೆ.


    ಸಂಜೀವ್ ಖನ್ನಾ ಅವರ ವೃತ್ತಿ ಜೀವನ :

    1983 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ ಮೂಲಕ ವಕೀಲ ವೃತ್ತಿ ಆರಂಭಿಸಿದ್ದ ಖನ್ನಾ ಬಳಿಕ ತೀಸ್ ಹಜಾರಿ ಜಿಲ್ಲಾ ನ್ಯಾಯಾಲಯಗಳಲ್ಲಿ ತಮ್ಮ ವಕೀಲ ವೃತ್ತಿಯನ್ನು ಮುಂದುವರೆಸಿದ್ದಾರೆ. ಬಳಿಕ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ನ್ಯಾಯಮಂಡಳಿಗಳಲ್ಲಿ ಅವರು ತಮ್ಮ ಸೇವೆಯನ್ನು ನೀಡಿದ್ದಾರೆ.

    2005 ರಲ್ಲಿ ದೆಯಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಬಳಿಕ ಖಾಯಂ ನ್ಯಾಯಾಧೀಶರಾಗಿದ್ದರು. ತಮ್ಮ ಅಧಿಕಾರವಧಿಯಲ್ಲಿ ದೆಹಲಿ ನ್ಯಾಯಾಂಗ ಅಕಾಡೆಮಿ,,ದೆಹಲಿ ಇಂಟರ್ನ್ಯಾಷನಲ್ ಆರ್ಬಿಟ್ರೇಶನ್ ಸೆಂಟರ್ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳು ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳ ಅಧ್ಯಕ್ಷ ಮತ್ತು ನ್ಯಾಯಾಧೀಶರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಜನವರಿ 18, 2019 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಖನ್ನಾ ಅವರು ಅಧಿಕಾರ ವಹಿಸಿಕೊಂಡಿದ್ದರು.

    ನ್ಯಾಯಮೂರ್ತಿಯಾಗಿ ನೀಡಿದ ಪ್ರಮುಖ ತೀರ್ಪುಗಳು :

    * ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇತ್ತೀಚೆಗೆ ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಘೋಷಣೆ ಮಾಡಿದ ಪಂಚಪೀಠದ ಭಾಗವಾಗಿದ್ದರು. ಅನಾಮಧೇಯ ದೇಣಿಗೆಗಳು ಸಾರ್ವಜನಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಈ ಪೀಠ ಅಭಿಪ್ರಾಯಪಟ್ಟಿತ್ತು.

    * ಜಮ್ಮು ಕಾಶ್ಮೀರಕ್ಕೆ ನೀಡಿದ್ದ ಆರ್ಟಿಕಲ್ 370ರ ರದ್ಧತಿಯನ್ನು ಎತ್ತಿಹಿಡಿದ ಖನ್ನಾ ಅದು ಜಮ್ಮು ಮತ್ತು ಕಾಶ್ಮೀರಕ್ಕೆ ಸಾರ್ವಭೌಮತ್ವನ್ನು ನೀಡುವುದಿಲ್ಲ ಎಂದು ಹೇಳಿದ್ದರು.

     

    Continue Reading

    LATEST NEWS

    ‘ಐ ಲವ್ ಯು’ ಹೇಳುವ ಬದಲು ಜಸ್ಟ್ ಹೀಗೆ ಮಾಡಿ ಸಾಕು …. ಸಂಗಾತಿ ಫುಲ್ ಫಿದಾ !!

    Published

    on

    ಮಂಗಳೂರು : ಈಗಿನ ಕಾಲದಲ್ಲಿ ಟೈಮ್ ಪಾಸ್‌ಗಾಗಿಯೇ ಲವ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿ ಎಲ್ಲರ ಮುಂದೆ ಐ ಲವ್ ಯು ಹೇಳಿದರೆ ಅಥವಾ ದಿನಕ್ಕೆ ನೂರಾರು ಸಲ ಐ ಲವ್ ಯು ಎಂದು ಹೇಳಿದರೆ ಪ್ರೀತಿಯಿದೆ ಎಂದು ಸಾಬಿತಾಗುವಂತೆ ಮಾಡುತ್ತಾರೆ.ಪ್ರೀತಿ ಹೇಳಿ ಕೇಳಿ ಹುಟ್ಟಲ್ಲ, ನಿಜವಾದ ಪ್ರೀತಿಗೆ ಕೊನೆಯಿಲ್ಲ. ಪದೇ ಪದೆ ಪ್ರೇಮಿಗೆ ಅಥವಾ ಸಂಗಾತಿಗೆ ಐ ಲವ್ ಯು ಎಂದು ಹೇಳಲು ಸಂಕೋಚವಾಗುತ್ತಿದ್ದರೆ ಈ ರೀತಿಯಾಗಿ ಪ್ರೀತಿ ವ್ಯಕ್ತಪಡಿಸಿ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಿ.


    ಪ್ರೀತಿ ಎಂಬುವುದು ಮಧುರವಾದ ಭಾವನೆ. ಆದರೆ ಈಗಿನ ಕಾಲದಲ್ಲಿ ಪರಿಶುದ್ಧವಾಗಿ ಪ್ರೀತಿಸೋರು ಸಿಗೋದು ಕಷ್ಟ. ಪ್ರೀತಿಗೆ ಗ್ಯಾರಂಟಿಯೇ ಇರುವುದಿಲ್ಲ. ಪ್ರೀತಿಸುತ್ತೇನೆ ಎಂದು ಹೇಳುವ ಬದಲು ಈ ಟ್ರಿಕ್ಸ್ ಬಳಸಿ ಪ್ರೀತಿ ವ್ಯಕ್ತಪಡಿಸಬಹುದು.

    ಸಂಗಾತಿಯ ಪುಟ್ಟ ಪುಟ್ಟ ವಿಷಯಕ್ಕೂ ಆಧ್ಯತೆ ನೀಡಿ :
    ಪ್ರೇಮ ಸಂಬಂಧದಲ್ಲಿ ಅಥವಾ ದಾಂಪತ್ಯ ಜೀವನದಲ್ಲಿ ಮಾಡುವ ದೊಡ್ಡ ತಪ್ಪುಗಳಲ್ಲಿ ಇದು ಒಂದು. ನಮ್ಮವರು ಎನ್ನಿಸಿಕೊಂಡವರ ಸಣ್ಣ ಪುಟ್ಟ ವಿಷಯಗಳನ್ನು ನಿರ್ಲಕ್ಷಿಸುವುದು. ಆದರೆ ಪ್ರಾರಂಭದಲ್ಲಿ ಇದೇನು ಇಷ್ಟು ಸಣ್ಣ ವಿಷಯವೆಂದೆನಿಸಬಹುದು. ಆದರೆ ಈ ಸಣ್ಣಸಣ್ಣ ವಿಷಯಗಳೇ ಇಬ್ಬರೂ ವ್ಯಕ್ತಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ಹೀಗಾಗಿ ಸಂಗಾತಿಯ ಸಣ್ಣ ಪುಟ್ಟ ವಿಷಯಗಳತ್ತ ಹೆಚ್ಚು ಗಮನ ಕೊಡುವ ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಬಹುದು.

    ಸದಾ ಪ್ರೀತಿಯ ಅಪ್ಪುಗೆಯಿರಲಿ :
    ಸಂಗಾತಿಗಳಿಬ್ಬರೂ ಐಲವ್ ಯು ಎಂದು ಹೇಳಲೇ ಬೇಕೆಂದೇನಿಲ್ಲ. ಆದರೆ ದೀರ್ಘವಾದ ಅಪ್ಪುಗೆಯು ಕೂಡ ಪ್ರೀತಿಯಿದೆ ಎನ್ನುವುದನ್ನು ವ್ಯಕ್ತಪಡಿಸುತ್ತದೆ. ಸಂಗಾತಿಯ ಮಾತು ಕೇಳುವಾಗ ಅಪ್ಪುಗೆಯನ್ನು ನೀಡಿ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಿ.

    ಸಂಗಾತಿಗಾಗಿ ಸಮಯ ಮೀಸಲಿಡಿ :
    ಯಾವುದೇ ಸಂಬಂಧವಿರಲಿ ಸಮಯಕ್ಕಿಂತ ಮತ್ತೊಂದು ಅಮೂಲ್ಯವಾದ ವಸ್ತುವಿಲ್ಲ. ನಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ವಿಧಾನಗಳಲ್ಲಿ ಸಮಯ ನೀಡುವುದು ಕೂಡ ಒಂದು. ಇಬ್ಬರೂ ಜೊತೆಯಾಗಿ ಕಾಲ ಕಳೆಯಬೇಕು. ಸಂಗಾತಿಯ ಬೇಕು ಬೇಡಗಳ ಬಗ್ಗೆ ಸ್ಪಷ್ಟತೆಯಿರಬೇಕು.

    ಮಚ್ಚುಗೆ ವ್ಯಕ್ತಪಡಿಸುತ್ತಿರಿ :
    ಸಂಗಾತಿಗಳಿಬ್ಬರೂ ಐಲವ್ ಯು ಹೇಳದೇನೇ ಮೆಚ್ಚುಗೆಯ ಮಾತುಗಳಿಂದ ಒಬ್ಬರು ಇನ್ನೊಬ್ಬರ ಮನಸ್ಸನ್ನು ಗೆಲ್ಲಬಹುದು. ನಿಮ್ಮವರು ಯಾವುದೇ ಕೆಲಸವು ನನ್ನ ಕೈಯಲ್ಲಿ ಆಗುವುದಲ್ಲ ಎಂದು ಕುಳಿತಿದ್ದಾಗ ಅವರಿಗೆ ಧೈರ್ಯ ತುಂಬಿ ಆ ಕೆಲಸದಲ್ಲಿ ತೊಡಗಿ ಕೊಳ್ಳುತ್ತವೆ. ನಮ್ಮ ಮಾತು ನಮ್ಮವರ ಮೇಲೆ ಎಷ್ಟು ಪ್ರೀತಿಯಿದೆ ಎನ್ನುವುದನ್ನು ಅರ್ಥ ಮಾಡಿಸುತ್ತದೆ.

    Continue Reading

    LATEST NEWS

    Trending