Connect with us

    BELTHANGADY

    ಪಂಚೆ ಉಟ್ಟು ಸುರಿಯ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್

    Published

    on

    ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುರಿಯ ದೇವಸ್ಥಾನಕ್ಕೆ ಯಟ ಯಶ್ ಕುಟುಂಬ ಸಮೇತ ಭೇಟಿ ನೀಡಿದರು. ಪತ್ನಿ ನಟಿ ರಾಧಿಕಾ ಮತ್ತು ಮಕ್ಕಳ ಜೊತೆ ಭೇಟಿ ನೀಡಿದ ಯಶ್ ಅಲ್ಲಿ ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆಯನ್ನು ದೇವರಿಗೆ ಸಮರ್ಪಿಸಿದರು.

    ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

    ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಇದರ ಶೂಟಿಂಗ್ ಆರಂಭ ಆಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ಬಂದು ಮಂಜುನಾಥನ ದರ್ಶನ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಬಳಿಕ ಅವರು ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿದ್ದಾರೆ.

    ಈ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಯಶ್​ ಅವರು ಬಂದ ಸುದ್ದಿ ಕೇಳಿ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.

    Click to comment

    Leave a Reply

    Your email address will not be published. Required fields are marked *

    BELTHANGADY

    ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ

    Published

    on

    ಬೆಳ್ತಂಗಡಿ: ಜೀವ ವಿಮಾ ಕಂಪನಿಯ ಬೆಳ್ತಂಗಡಿ ಶಾಖಾ ವತಿಯಿಂದ ಹಮ್ಮಿಕೊಳ್ಳಲಾದ ಹೈಸ್ಕೂಲ್ ವಿಭಾಗದ ಚಲನಚಿತ್ರ ಗಾಯನ ಸ್ಪರ್ಧೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂದು ಆರೋಪ ಕೇಳಿಬಂದಿದೆ.

    ಗಾಯನ ಸ್ಪರ್ಧೆಯ ಇಬ್ಬರು ತೀರ್ಪುಗಾರರಲ್ಲಿ ಸುರೇಶ್ ಎ.ಡಿ ಎಂಬುವರ ಒಬ್ಬರಾಗಿದ್ದರು. ಇವರು ಸುಗಮ ಸಂಗೀತ ತರಗತಿಯನ್ನು ಕೂಡಾ ನಡೆಸುತ್ತಿದ್ದು, ಮೊನ್ನೆ ನಡೆದ ಗಾಯನ ಸ್ಪರ್ಧೆಯಲ್ಲಿ ಪಕ್ಷಪಾತೀಯ ಧೋರಣೆಯನ್ನು ಅನುಸರಿಸುವ ಮೂಲಕ ಸ್ಪರ್ಧೆಗೆ ಕಳಂಕವನ್ನು ತಂದಿದ್ದಾರೆ. ತನ್ನ ಮಗಳಿಗೆ ಪ್ರಥಮ ಹಾಗೂ ತನ್ನ ಸಂಗೀತ ತರಗತಿಯ ವಿದ್ಯಾರ್ಥಿಗಳಿಗೆ ಎರಡನೇ ಮತ್ತು ಮೂರನೇ ಬಹುಮಾನ ನೀಡಿದ್ದಾರೆಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಜೀವ ವಿಮಾ ಕಂಪನಿಯ ಬೆಳ್ತಂಗಡಿ ಶಾಖಾ ಪ್ರಬಂಧಕರಲ್ಲಿ ಮಾತನಾಡಿಸಿದಾಗ ಅವರು, ಉಡಾಫೆಯಿಂದ ವರ್ತಿಸಿ ಕಾಲ್ ಕಟ್ ಮಾಡಿದ್ದಾರೆ. ಕಲೆ,ಚಿತ್ರಕಲೆ,ಸಾಹಿತ್ಯ, ಸಂಗೀತ, ಪಂದ್ಯಾವಳಿ ಮೊದಲಾದವುಗಳ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳ ಹೆತ್ತವರಾಗಲಿ,ಮನೆಯವರಾಗಲಿ ಇಲ್ಲವೇ ಕುಟುಂಬದವರಾಗಲಿ ಅಥವಾ ಅವರ ತರಬೇತುದಾರರಾಗಲಿ,ಗುರುಗಳಾಗಲಿ ತೀರ್ಪುಗಾರರಾಗುವಂತಿಲ್ಲ ಇದು ಸ್ಪರ್ಧೆಯ ನಿಯಮಾವಳಿ. ಹೀಗಿರುವಾಗ ಮಗಳು ಹಾಗೂ ತನ್ನ ಶಿಷ್ಯಂದಿರುವ ಭಾಗವಹಿಸಿದ್ದ ಸ್ಪರ್ಧೆಯಲ್ಲಿ ತೀರ್ಪುಗಾರನಾಗಿದ್ದು ತಪ್ಪು ಮತ್ತು ಈ ಬಗ್ಗೆ ಆಯೋಜಕರಲ್ಲಿ ಮಾತನಾಡಿಸಿದಾಗ ಅವರು ಉಡಾಫೆಯಿಂದ ವರ್ತಿಸಿದ್ದು ಕೂಡಾ ಸರಿಯಲ್ಲ ಎಂದು ಆರೋಪಿಸಲಾಗಿದೆ.

    ಜೀವ ವಿಮಾ ಕಂಪನಿ ಭಾರತದ ಸರಕಾರದ ಸ್ವಾಮ್ಯಕ್ಕೆ ಒಳಪಟ್ಟ ಪಬ್ಲಿಕ್ ಸೆಕ್ಟರ್ ಆಗಿರುತ್ತದೆ. ಇಂತಹ ಕಂಪನಿಯ ಪ್ರಬಂಧಕರು ತಾರತಮ್ಯ ನೀತಿಯನ್ನು ಅನುಸರಿಸುವುದು ಮತ್ತು ಸಾರ್ವಜನಿಕರಲ್ಲಿ ಉಡಾಫೆಯಿಂದ ವರ್ತಿಸುವುದು ಕಂಪನಿಯ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದಂತಾಗುತ್ತದೆ ಹಾಗಾಗಿ ಕಂಪನಿಯ ಮೇಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

    Continue Reading

    BELTHANGADY

    ರಾಯಚೂರಿನಲ್ಲಿ ಶಾಸಕ ಹರೀಶ್ ಪೂಂಜಗೆ ಸ್ವಾಗತ ಕೋರಿರುವ ಫ್ಲೆಕ್ಸ್‌ಗಳಲ್ಲಿ ಕಾಂಗ್ರೆಸ್ ಸಚಿವ, ಶಾಸಕರ ಫೋಟೋಗಳು!

    Published

    on

    ರಾಯಚೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಸ್ವಾಗತ ಕೋರಿರುವ ಫ್ಲೆಕ್ಸ್‌ಗಳಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರ ಫೋಟೋಗಳು ರಾರಾಜಿಸಿವೆ.

    ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆರಳಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಸ್ವಾಗತ ಕೋರಿ ಮಾನ್ವಿಯಲ್ಲಿ ಹಲವು ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ.

    ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಸ್ವಾಗತ ಕೋರಿರುವ ಫ್ಲೆಕ್ಸ್‌ಗಳಲ್ಲಿ ಸಚಿವ ಎನ್‌.ಎಸ್.ಬೋಸರಾಜು ಮಾನ್ವಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಂಪಯ್ಯ ಸಾಹುಕಾರ್, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಮತ್ತು ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಸೇರಿ ಅನೇಕ ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಾಕಲಾಗಿದೆ.

    ಮಾನ್ವಿ ಪಟ್ಟಣ ಹಾಗೂ ರಾಯಚೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಮುಖ್ಯ ಅತಿಥಿಯಾಗಿ ಬಿಜೆಪಿ ಶಾಸಕ ಹರೀಶ್ ಪೂಂಜ ರಾಯಚೂರು ಜಿಲ್ಲೆಗೆ ಭೇಟಿ ನೀಡಿದ್ದಾರೆ.

    Continue Reading

    BELTHANGADY

    ಓವರ್‌ಟೆಕ್‌ ಭರದಲ್ಲಿ ಎರಡು ಕಾರು, ಲಾರಿ ಮಧ್ಯೆ ಅಪಘಾ*ತ; ಓರ್ವ ಸ್ಥಳದಲ್ಲೇ ಮೃ*ತ್ಯು

    Published

    on

    ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್‌ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.

    ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50 ವ) ಮೃತಪಟ್ಟವರು. ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಓವರ್‌ಟೇಕ್‌ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ

    ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್‌ಟೆಕ್‌ ಮಾಡುವ ಭರದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆಯಲ್ಲಿ ತಪ್ಪಿಹೋಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಶರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪಘಾತದಿಂದ ಗಾಯಗೊಂಡವರನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕತ್ಸೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending