Connect with us

    DAKSHINA KANNADA

    ಜಿಲ್ಲಾ ಕಂಬಳ ಸಮಿತಿಗೆ ಎರ್ಮಾಳ್ ರೋಹಿತ್ ಹೆಗ್ಡೆ ನೂತನ ಸಾರಥಿ

    Published

    on

    ಮೂಡುಬಿದಿರೆ: ಸಾಧನೆಯ ಮೂಲಕ ನಾವು ಕಂಬಳದ ಗೌರವವನ್ನು ಉಳಿಸಿಕೊಳ್ಳಬೇಕು. ಕಂಬಳ ಸಮಿತಿ ಹೊರತಾಗಿ ಇನ್ಯಾರೂ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸಬಾರದು.

    ಪತ್ರಿಕೆ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು. ಶಿಸ್ತುಬದ್ಧ ಕಂಬಳಕ್ಕೆ ಅಪಸ್ವರ ಬಾರದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ ಹೇಳಿದರು.


    ಜಿಲ್ಲಾ ಕಂಬಳ ಸಮಿತಿ ವತಿಯಿಂದ ಶನಿವಾರ ಸಮಾಜಮಂದಿರದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಮಾತನಾಡಿದರು. ಕರಾವಳಿ ಜನರ ಸ್ವಾಭಿಮಾನದ ಸಂಕೇತ ಕಂಬಳ. ಇದು ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.

    ಇದರಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಗೌರವವಿದೆ. ಶಿಸ್ತುಬದ್ಧ ಕಂಬಳ ನಡೆದು ನಾವು ಇನ್ನೊಬ್ಬರಿಗೆ ಮಾದರಿಯಾಗಬೇಕಾಗಿದೆ ಎಂದರು.
    ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ್ ಎಸ್.ಕೋಟ್ಯಾನ್ ಮಾತನಾಡಿ, ಈಗಾಗಲೇ ಶಿಸ್ತು ಕಮಿಟಿಯಿಂದ ಎರಡು ಬಾರಿ ಸಭೆ ನಡೆದಿದ್ದು, ಇದರ ಬಗ್ಗೆ ರೂಪುರೇಷೆಗಳನ್ನು ಸಿದ್ಧ ಪಡಿಸಲಾಗಿದೆ.

    ಮುಂದಿನ ಸಭೆಯಲ್ಲಿ ಮಂಡಿಸಿ ಅನುಷ್ಠಾನಕ್ಕೆ ತರಲಾಗುವುದು. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕಾದರೆ ಜಿಲ್ಲಾ ಕಂಬಳ ಸಮಿತಿಯ ಸಹಕಾರವೂ ಅಗತ್ಯ. ಎಂದರು.
    ಜಿಲ್ಲಾ ಕಂಬಳ ಸಮಿತಿಯ ನಿರ್ಗಮನ ಉಪಾಧ್ಯಕ್ಷ ಮಾಳ ದಿನೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

    ಮಾಜಿ ಸಚಿವ ಅಭಯಚಂದ್ರ ಜೈನ್, ನೂತನ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಕಂಬಳ ಸಮಿತಿಯ ಪ್ರಮುಖರಾದ ಸುರೇಶ್ ಕೆ.ಪೂಜಾರಿ, ಚಂದ್ರಹಾಸ ಸನಿಲ್, ತ್ರಿಶಾಲ್ ಕೆ.ಪೂಜಾರಿ, ಸುಧಾಕರ ಶೆಟ್ಟಿ, ಜನಾರ್ದನ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು. ಎಡ್ತೂರು ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
    ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ಆಯ್ಕೆ

    ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ
    ಕಾಸರಗೋಡು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಅದ್ಯಕ್ಷರಾಗಿ ಕಟಪಾಡಿ ವ್ಯವಸ್ಥಾಪಕ ಎರ್ಮಾಳ್ ರೋಹಿತ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಜೈನ್ ಆಯ್ಕೆಯಾಗಿದ್ದಾರೆ.
    ಪದಾಧಿಕಾರಿಗಳು: ಪಿ.ಆರ್ ಶೆಟ್ಟಿ (ಗೌರವಾಧ್ಯಕ್ಷ), ಭಾಸ್ಕರ್ ಕೋಟ್ಯಾನ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಜೀವಂಧರ್, ಗುಣಪಾಲ್ ಕಡಂಬ, ಡಾ.ಜೀವಂಧರ್ ಬಲ್ಲಾಳ್, ಕೊಳಚೂರು ಸೀತಾರಾಮ ಶೆಟ್ಟಿ, ಬಾರ್ಕೂರು ಶಾಂತರಾಮ ಶೆಟ್ಟಿ, ಅಶೋಕ್ ಕುಮಾರ್ ರೈ ಉಪ್ಪಿನಂಗಡಿ, ಸುರತ್ಕಲ್ ಗೋಪಾಲಕೃಷ್ಣ ಪ್ರಭು, ಕೊಳಚೂರು ಸುಕುಮಾರ್ ಶೆಟ್ಟಿ, ಚಂದ್ರಹಾಸ ಸನಿಲ್ ,ಹರ್ಷ ಸಂಪಿಗೆತ್ತಯ, (ಗೌರವ ಸಲಹೆಗಾರರು), ಹರ್ಷವರ್ಧನ್ ಪಡಿವಾಳ್(ಕೋಶಾಧಿಕಾರಿ), ರಶ್ಮಿತ್ ಶೆಟ್ಟಿ ಸಿದ್ದಕಟ್ಟೆ, ದಿನೇಶ್ ಶೆಟ್ಟಿ ಮಾಳ, ಬೆಳ್ಳಿಪಾಡಿ ಕೇಶವ ಭಂಡಾರಿ, ಚಂದ್ರಹಾಸ ಶೆಟ್ಟಿ ಪುತ್ತೂರು, ಉದಯ ಕೋಟ್ಯಾನ್, ಕೊಳಕೆ ಇರ್ವತ್ತೂರು ಆನಂದ್, ರಂಜಿತ್ ಕೆ.ಪೂಜಾರಿ, ಅನಿಲ್ ಶೆಟ್ಟಿ ಜಪ್ಪಿನಮೊಗರು, ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಡಾಲ್ಪಿ ಡಿಸೋಜ(ಉಪಾಧ್ಯಕ್ಷ), ಸುದೇಶ್ ಕುಮಾರ್ ಅರಿಗ ಸಿದ್ದಕಟ್ಟೆ , ಸಂದೀಪ್ ಶೆಟ್ಟಿ, ಯತೀಶ್ ಭಂಡಾರಿ, ಧನಂಜಯ ಶೆಟ್ಟಿ ಸರಪಾಡಿ(ಜೊತೆ ಕಾರ್ಯದರ್ಶಿ), ಸುರೇಶ್ ಕೆ.ಪೂಜಾರಿ (ತೀರ್ಪುಗಾರರ ಸಂಚಾಲಕ), ಧನಂಜಯ್ ಶೆಟ್ಟಿ ಇರುವೈಲ್ ದೊಡ್ಡಗುತ್ತು(ಕಾನೂನು ಸಲಹೆಗಾರರು) ಅವರನ್ನು ಆಯ್ಕೆ ಮಾಡಲಾಯಿತು.
    ಕಂಬಳ ಸಮಿತಿಯ ವಕ್ತಾರರನ್ನಾಗಿ ಗುಣಪಾಲ ಕಡಂಬ ಮತ್ತು ಎಡ್ತೂರು ರಾಜೀವ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending