DAKSHINA KANNADA
ಜಿಲ್ಲಾ ಕಂಬಳ ಸಮಿತಿಗೆ ಎರ್ಮಾಳ್ ರೋಹಿತ್ ಹೆಗ್ಡೆ ನೂತನ ಸಾರಥಿ
ಮೂಡುಬಿದಿರೆ: ಸಾಧನೆಯ ಮೂಲಕ ನಾವು ಕಂಬಳದ ಗೌರವವನ್ನು ಉಳಿಸಿಕೊಳ್ಳಬೇಕು. ಕಂಬಳ ಸಮಿತಿ ಹೊರತಾಗಿ ಇನ್ಯಾರೂ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸಬಾರದು.
ಪತ್ರಿಕೆ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು. ಶಿಸ್ತುಬದ್ಧ ಕಂಬಳಕ್ಕೆ ಅಪಸ್ವರ ಬಾರದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ ಹೇಳಿದರು.
ಜಿಲ್ಲಾ ಕಂಬಳ ಸಮಿತಿ ವತಿಯಿಂದ ಶನಿವಾರ ಸಮಾಜಮಂದಿರದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಮಾತನಾಡಿದರು. ಕರಾವಳಿ ಜನರ ಸ್ವಾಭಿಮಾನದ ಸಂಕೇತ ಕಂಬಳ. ಇದು ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.
ಇದರಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಗೌರವವಿದೆ. ಶಿಸ್ತುಬದ್ಧ ಕಂಬಳ ನಡೆದು ನಾವು ಇನ್ನೊಬ್ಬರಿಗೆ ಮಾದರಿಯಾಗಬೇಕಾಗಿದೆ ಎಂದರು.
ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ್ ಎಸ್.ಕೋಟ್ಯಾನ್ ಮಾತನಾಡಿ, ಈಗಾಗಲೇ ಶಿಸ್ತು ಕಮಿಟಿಯಿಂದ ಎರಡು ಬಾರಿ ಸಭೆ ನಡೆದಿದ್ದು, ಇದರ ಬಗ್ಗೆ ರೂಪುರೇಷೆಗಳನ್ನು ಸಿದ್ಧ ಪಡಿಸಲಾಗಿದೆ.
ಮುಂದಿನ ಸಭೆಯಲ್ಲಿ ಮಂಡಿಸಿ ಅನುಷ್ಠಾನಕ್ಕೆ ತರಲಾಗುವುದು. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕಾದರೆ ಜಿಲ್ಲಾ ಕಂಬಳ ಸಮಿತಿಯ ಸಹಕಾರವೂ ಅಗತ್ಯ. ಎಂದರು.
ಜಿಲ್ಲಾ ಕಂಬಳ ಸಮಿತಿಯ ನಿರ್ಗಮನ ಉಪಾಧ್ಯಕ್ಷ ಮಾಳ ದಿನೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಸಚಿವ ಅಭಯಚಂದ್ರ ಜೈನ್, ನೂತನ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಕಂಬಳ ಸಮಿತಿಯ ಪ್ರಮುಖರಾದ ಸುರೇಶ್ ಕೆ.ಪೂಜಾರಿ, ಚಂದ್ರಹಾಸ ಸನಿಲ್, ತ್ರಿಶಾಲ್ ಕೆ.ಪೂಜಾರಿ, ಸುಧಾಕರ ಶೆಟ್ಟಿ, ಜನಾರ್ದನ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು. ಎಡ್ತೂರು ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ಆಯ್ಕೆ
ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ
ಕಾಸರಗೋಡು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಅದ್ಯಕ್ಷರಾಗಿ ಕಟಪಾಡಿ ವ್ಯವಸ್ಥಾಪಕ ಎರ್ಮಾಳ್ ರೋಹಿತ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಜೈನ್ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳು: ಪಿ.ಆರ್ ಶೆಟ್ಟಿ (ಗೌರವಾಧ್ಯಕ್ಷ), ಭಾಸ್ಕರ್ ಕೋಟ್ಯಾನ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಜೀವಂಧರ್, ಗುಣಪಾಲ್ ಕಡಂಬ, ಡಾ.ಜೀವಂಧರ್ ಬಲ್ಲಾಳ್, ಕೊಳಚೂರು ಸೀತಾರಾಮ ಶೆಟ್ಟಿ, ಬಾರ್ಕೂರು ಶಾಂತರಾಮ ಶೆಟ್ಟಿ, ಅಶೋಕ್ ಕುಮಾರ್ ರೈ ಉಪ್ಪಿನಂಗಡಿ, ಸುರತ್ಕಲ್ ಗೋಪಾಲಕೃಷ್ಣ ಪ್ರಭು, ಕೊಳಚೂರು ಸುಕುಮಾರ್ ಶೆಟ್ಟಿ, ಚಂದ್ರಹಾಸ ಸನಿಲ್ ,ಹರ್ಷ ಸಂಪಿಗೆತ್ತಯ, (ಗೌರವ ಸಲಹೆಗಾರರು), ಹರ್ಷವರ್ಧನ್ ಪಡಿವಾಳ್(ಕೋಶಾಧಿಕಾರಿ), ರಶ್ಮಿತ್ ಶೆಟ್ಟಿ ಸಿದ್ದಕಟ್ಟೆ, ದಿನೇಶ್ ಶೆಟ್ಟಿ ಮಾಳ, ಬೆಳ್ಳಿಪಾಡಿ ಕೇಶವ ಭಂಡಾರಿ, ಚಂದ್ರಹಾಸ ಶೆಟ್ಟಿ ಪುತ್ತೂರು, ಉದಯ ಕೋಟ್ಯಾನ್, ಕೊಳಕೆ ಇರ್ವತ್ತೂರು ಆನಂದ್, ರಂಜಿತ್ ಕೆ.ಪೂಜಾರಿ, ಅನಿಲ್ ಶೆಟ್ಟಿ ಜಪ್ಪಿನಮೊಗರು, ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಡಾಲ್ಪಿ ಡಿಸೋಜ(ಉಪಾಧ್ಯಕ್ಷ), ಸುದೇಶ್ ಕುಮಾರ್ ಅರಿಗ ಸಿದ್ದಕಟ್ಟೆ , ಸಂದೀಪ್ ಶೆಟ್ಟಿ, ಯತೀಶ್ ಭಂಡಾರಿ, ಧನಂಜಯ ಶೆಟ್ಟಿ ಸರಪಾಡಿ(ಜೊತೆ ಕಾರ್ಯದರ್ಶಿ), ಸುರೇಶ್ ಕೆ.ಪೂಜಾರಿ (ತೀರ್ಪುಗಾರರ ಸಂಚಾಲಕ), ಧನಂಜಯ್ ಶೆಟ್ಟಿ ಇರುವೈಲ್ ದೊಡ್ಡಗುತ್ತು(ಕಾನೂನು ಸಲಹೆಗಾರರು) ಅವರನ್ನು ಆಯ್ಕೆ ಮಾಡಲಾಯಿತು.
ಕಂಬಳ ಸಮಿತಿಯ ವಕ್ತಾರರನ್ನಾಗಿ ಗುಣಪಾಲ ಕಡಂಬ ಮತ್ತು ಎಡ್ತೂರು ರಾಜೀವ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು
DAKSHINA KANNADA
MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ
ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.
ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.
ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
DAKSHINA KANNADA
ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!
ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.
ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.
ಪೊಲೀಸ್ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.
ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.
ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.
ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.