LATEST NEWS
ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ-ಸುಪ್ರೀಂ ಕೋರ್ಟ್ ಎಚ್ಚರಿಕೆ
ನವದೆಹಲಿ: ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.
ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ವಿರುದ್ದ ಸುಮೋಟೋ ಪ್ರಕರಣದ ವಿಚಾರಣೆ ವೇಳೆ ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಹೇಳಿದೆ.
ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್ ‘ಸು ಮೋಟೊ’ (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧದ ‘ಸು ಮೋಟೊ’ ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿತ್ತು. ಇದೀಗ ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.
DAKSHINA KANNADA
ಕಾಲಿಯಾ ರಫೀಕ್ ಹತ್ಯೆ ಪ್ರಕರಣ..! ಎಲ್ಲಾ 9 ಆರೋಪಿಗಳು ಖುಲಾಸೆ..!
ಮಂಗಳೂರು : ಏಳು ವರ್ಷಗಳ ಹಿಂದೆ ನಡೆದಿದ್ದ ನಟೋರಿಯಸ್ ರೌಡಿ ಕಾಲಿಯ ರಫೀಕ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ್ದ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪ ಸಾಬೀತಾಗದ ಹಿನ್ನಲೆಯಲ್ಲಿ ಎಲ್ಲಾ 9 ಆರೋಪಿಗಳನ್ನು ನಿರ್ದೋಶಿಗಳು ಎಂದು ತೀರ್ಪು ನೀಡಿದೆ. ಸರಕಾರಿ ಅಬಿಯೋಜಕರು ಈ ಪ್ರಕರಣದ ಸಂಬಂಧ 31 ಸಾಕ್ಷಿಗಳ ವಿಚಾರಣೆ ನಡೆಸಿದ್ದರು.
ಉಳ್ಳಾಲದ ಕೋಟೆಕಾರ್ ಬಳಿಯ ಪೆಟ್ರೋಲ್ ಪಂಪ್ ಬಳಿ 2017 ರಲ್ಲಿ ಕಾಲಿಯಾ ರಫೀಕ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಟಿಪ್ಪರ್ ಲಾರಿಯನ್ನು ಕಾಲಿಯಾ ರಫೀಕ್ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಂಡು ಓಡುವ ವೇಳೆ ಪಿಸ್ತೂಲಿನಿಂದ ಗುಂಡು ಹಾರಿಸಿ ತಲವಾರಿನಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಕಾಸರಗೋಡು ಜಿಲ್ಲೆಯ ಉಪ್ಪಳದ ಹಿದಾಯತ್ ನಗರದ 9 ಜನ ಈ ಕೃತ್ಯ ನಡೆಸಿದ್ದಾಗಿ ನ್ಯಾಯಾಲಯಕ್ಕೆ ದೋಷಾರೋಪಣ ವರದಿ ಸಲ್ಲಿಸಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಾದ ನಂ.1 ನೂರಲಿ, ನಂ.2 ಜಿಯ @ ಇಸುಬು ಶಿಯಾದ್, ನಂ.5 ರಶೀದ್, ನಂ. 6 ಮಜಿಬ್ @ ಕಲ್ಲಟ ನಜೀಬ್ ಕೆ.ಎ. ಇವರನ್ನು ಮಾನ್ಯ ನಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ದಕ್ಷಿಣ ಕನ್ನಡ ಗೌರವಾನ್ವಿತ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶರಾದ ಮಲ್ಲಿಕಾರ್ಜುನ ಸ್ವಾಮಿಯವರು ಈ ಮೇಲೆ ನಮೂದಿಸಿದ ಆರೋಪಿಗಳ ವಿರುದ್ಧ ಆರೋಪಗಳನ್ನು ಸಾಬೀತು ಪಡಿಸುವರೇ ವಿಫಲವಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿಗಳನ್ನು ಬಿಡುಗಡೆ ಮಾಡಿ ತೀರ್ಪನ್ನು ಕೊಟ್ಟಿರುತ್ತಾರೆ.
LATEST NEWS
ಕೊಲ್ಲೂರು ದೇಗುಲ ವ್ಯವಸ್ಥಾಪನ ಸಮಿತಿಗೆ ಡಾ.ಅಭಿಲಾಷ್ ಪಿ.ವಿ ಆಯ್ಕೆ.
ಮಂಗಳೂರು ( ಕೊಲ್ಲೂರು ) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಮಂಗಳೂರಿನ ಡಾ। ಅಭಿಲಾಷ್ ಪಿ.ವಿ. ನೇಮಕವಾಗಿದ್ದಾರೆ.
2011ರಿಂದ 17ರ ವರೆಗೆ 2 ಅವಧಿಗೆ ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಸೆನೆಟ್ ಸದಸ್ಯರಾಗಿದ್ದ ಅವರು ಮೆಸ್ಕಾಂ ನಿರ್ದೇಶಕರಾಗಿ, ಕೇಂದ್ರೀಯ ಸೆನ್ಸಾರ್ ಮಂಡಳಿ ಸದಸ್ಯರಾಗಿ, 2018ರಿಂದ 2021ರ ವರೆಗೆ ಕೊಲ್ಲೂರು ದೇಗುಲದ ಟ್ರಸ್ಟಿಯಾಗಿದ್ದರು. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋ ಥೆರಪಿಯಲ್ಲಿ ಅಸೋಸಿ ಯೆಟ್ ಪ್ರೊಫೆಸರ್ ಹಾಗೂ ಪಿಆರ್ಒ ಆಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
chikkamagaluru
ಗೈರು ಹಾಜರಾದ ವಿದ್ಯಾರ್ಥಿಗಳಿಂದ ಹಣ ವಸೂಲಿ ಸಂಚು; ತಾವು ಬೀಸಿದ ಬಲೆಗೆ ತಾವೇ ಸಿಕ್ಕಿಬಿದ್ದ ಆರೋಪಿಗಳು
ಮಂಗಳೂರು/ಚಿಕ್ಕಮಗಳೂರು: ಅನಿವಾರ್ಯ ಕಾರಣಗಳಿಂದ ಕಾಲೇಜಿಗೆ ವಿದ್ಯಾರ್ಥಿಗಳು ಗೈರು ಹಾಜರಾಗುವುದು ಸಹಜ. ಹಾಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಬೇಕೆಂದಿದ್ದರೆ, ಹಣ ನೀಡುವಂತೆ ಆದೇಶಿಸಿದ್ದ ಬೀರೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ.ಹರೀಶ್ ಮುಖಾಂತರ ಹಣದ ಬೇಡಿಕೆಯನ್ನಿಟ್ಟಿದ್ದ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್ ಪೇ ಮೂಲಕ 10 ಸಾವಿರ ಹಾಗೂ ಪ್ರಾಂಶುಪಾಲ ಎಂ.ಕೆ.ಪ್ರವೀಣ್ ಕುಮಾರ್ 5 ಸಾವಿರ ರೂ. ಕಸಿದುಕೊಂಡಿರುವುದಾಗಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್, ಅನಿಲ್ ರಾಥೋಡ್ ಇತರರು ಪಾಲ್ಗೊಂಡಿದ್ದರು.
- FILM4 days ago
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
- NATIONAL6 days ago
ವಿಶ್ವದ ಶ್ರೀಮಂತ ಭಿಕ್ಷುಕ ಇವರೇ ನೋಡಿ ! ಭರತ್ ಜೈನ್ ಒಟ್ಟು ಆಸ್ತಿ ಎಷ್ಟು ಗೊತ್ತಾ ???
- NATIONAL6 days ago
ಶ್ವಾನ ನೆಗೆದು ಗರ್ಭಪಾತ; ಮಾಲಿಕನಿಗೆ 10 ಲಕ್ಷ ದಂಡ
- DAKSHINA KANNADA4 days ago
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!