Connect with us

    LATEST NEWS

    ಈ ನಾಲ್ಕು ತಿಂಗಳ ಮಗುವಿನ ಸಾಧನೆ ಕೇಳಿದ್ರೆ ಶಾಕ್ ಆಗ್ತೀರಾ..!

    Published

    on

    ಬೆಂಗಳೂರು: ಹುಟ್ಟಿದ ನಾಲ್ಕು ತಿಂಗಳಿನಲ್ಲಿ ಮಗುವೊಂದು ವಿಶ್ವದಾಖಲೆಯನ್ನು ನಿರ್ಮಿಸಿದೆ. ಬೆಂಗಳೂರಿನ ಪ್ರಜ್ವಲ್ ಹಾಗೂ ಸ್ನೇಹಾ ದಂಪತಿ ಪುತ್ರಿ ಇಶಾನ್ವಿ.ಪಿ ಹೆಸರಿನ ನಾಲ್ಕು ತಿಂಗಳ ಮಗು ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಈ ಪುಟ್ಟ ಕಂದಮ್ಮ ಎರಡು ತಿಂಗಳಿದ್ದಾಗಲೇ ಪೋಷಕರು ಎರಡು ಫ್ಲಾಶ್ ಕಾರ್ಡ್‌ ಇಟ್ಟು ಒಂದನ್ನು ಗುರುತಿಸುವಂತೆ ಹೇಳಿದರೆ, ಅದಕ್ಕೆ ಸರಿಯಾದ ಕಾರ್ಡ್‌ ಸೆಲೆಕ್ಟ್ ಮಾಡುತ್ತಿದ್ದಳು. ಇದನ್ನು ತಾಯಿ ಸ್ನೇಹಾ ಗಮನಿಸಿದ್ದಾರೆ.

    world record

    125 ಫ್ಲಾಶ್ ಕಾರ್ಡ್‌ಗಳನ್ನು ಗುರುತಿಸುತ್ತಾಳೆ ಇಶಾನ್ವಿ:

    ಇಶಾನ್ವಿ ಸುಮಾರು 125 ವಿವಿಧ ರೀತಿಯ ವಸ್ತುಗಳು, ಪ್ರಾಣಿ-ಪಕ್ಷಿಗಳು, ತರಕಾರಿ ಫೊಟೋಗಳನ್ನು ಗುರುತಿಸುತ್ತಾಳೆ. ಅದರಲ್ಲಿ 10 ಹಕ್ಕಿಗಳು, 15 ತರಕಾರಿಗಳು, 10 ಕಾಡು ಪ್ರಾಣಿಗಳು, 10 ಸಾಕು ಪ್ರಾಣಿಗಳು, 11 ಕಲರ್ಸ್, 10 ವಿವಿಧ ದೇಶದ ಧ್ವಜಗಳು, 10 ವಾಹನಗಳು, 14 ಹಣ್ಣುಗಳು, 13 ಜನರಲ್ ಇಮೇಜ್, 12 ಶೇಪ್ಸ್‌ಗಳನ್ನು ಗುರತಿಸುವ ಸಾಮರ್ಥ್ಯ ಹೊಂದಿದ್ದಾಳೆ ಈ ಪುಟ್ಟ ಪೋರಿ. 125 ಫ್ಲಾಶ್ ಕಾರ್ಡ್‌ಗಳನ್ನು ಗುರುತಿಸುವ ಮೂಲಕ ಇಡೀ ಜಗತ್ತೇ ಬೆರಗಾಗುವಂತೆ ಮಾಡಿದ್ದಾಳೆ.

    ಮುಲ್ಕಿ: ಚಿಪ್ಪು ಹೆಕ್ಕಲು ಹೋಗಿ ನೀರಲ್ಲಿ ಕಣ್ಮರೆಯಾದ ಯುವಕ.! ಪತ್ತೆಗೆ ಶೋಧ

    world record

    ಇನ್ನು ಮಗುವಿನ ಸಾಮರ್ಥ್ಯವನ್ನು ಅರಿತ ಮಗುವಿನ ತಾಯಿ ಸ್ನೇಹಾ ತನ್ನ ಕುಟುಂಬದವರ ಸಹಾಯದಿಂದ ವೀಡಿಯೋ ರೆಕಾರ್ಡ್‌ ಮಾಡಿ ನೋಬಲ್ ವರ್ಲ್ಡ್‌ ರೆಕಾರ್ಡ್‌ಗೆ ಕಳುಹಿಸಿಕೊಟ್ಟಿದ್ದರು. ಅಲ್ಲಿ ಮಗುವಿನ ಅಸಾಮಾನ್ಯ ಪ್ರತಿಭೆಯನ್ನು ಗುರುತಿಸಿ ವಿಶ್ವ ದಾಖಲೆಗೆ ಆಯ್ಕೆ ಮಾಡಿದೆ. ಆಂಧ್ರಪ್ರದೇಶದ ನಾಲ್ಕು ತಿಂಗಳ ಮಗು ಕೈವಲ್ಯ ಮಾಡಿದ್ದ ಸಾಧನೆಯನ್ನು ಇಶಾನ್ವಿ ಹಿಂದಿಕ್ಕಿದ್ದಾಳೆ. ಕೈವಲ್ಯ 120 ಫ್ಲಾಶ್‌ಗಳನ್ನು ಗುರುತಿಸಿದ್ರೆ, ಇಶಾನ್ವಿ 125 ಫ್ಲಾಶ್‌ಗಳನ್ನು ಗುರುತಿಸುವ ಮೂಲಕ ವಿಶ್ವ ದಾಖಲೆಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾಳೆ.

    DAKSHINA KANNADA

    ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗೆ ವಿಶೇಷ ಗೌರವ..! ಪುಷ್ಪಾರ್ಚಣೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು..!

    Published

    on

    ಮೂಡುಬಿದಿರೆ: ಪೊಲೀಸ್‌ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದರೆ ಎಂತಹ ಗೌರವ ಸಿಗುತ್ತದೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್‌ ಅಧಿಕಾರಿಯೇ ಸಾಕ್ಷಿ. ಹೌದು, ಪೊಲೀಸ್‌ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ಪೊಲೀಸ್ ಉಪನಿರೀಕ್ಷಕ ದಿವಾಕರ್‌ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ.

    ದಿವಾಕರ ರೈ ಅವರು ಸೇವೆಯಿಂದ ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್‌ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್‌ ಜೀಪ್‌ ಏರುವವರೆಗೂ ಮೂಡಬಿದಿರೆಯ ವೃತ್ತ ನಿರೀಕ್ಷಕರಾದ ಸಂದೇಶ್‌ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪುಷ್ಪಾರ್ಚನೆಯನ್ನು ಮಾಡಿದ್ದಾರೆ. ಪೊಲೀಸ್‌ ಜೀಪ್‌ನಲ್ಲೇ ಪೊಲೀಸ್‌ ಅಧಿಕಾರಿಯಾಗಿಯೇ ದಿವಾಕರ ರೈ ಮನೆಗೆ ತೆರಳಿದ್ದಾರೆ. ಸಹೋದ್ಯೋಗಿಗಳು ನೀಡಿದ ಗೌರವಕ್ಕೆ ದಿವಾಕರ ರೈ ಅವರು ಆನಂದ ಬಾಷ್ಪ ಸುರಿಸಿದ್ದಾರೆ. ಸದಾ ಒಂದೊಲ್ಲೊಂದು ಅಪರಾಧ ಪ್ರಕರಣಗಳಿಂದಲೇ ಬ್ಯುಸಿಯಾಗಿರುತ್ತಿದ್ದ ಮೂಡಬಿದಿರೆಯ ಪೊಲೀಸ್‌ ಠಾಣೆ ಇಂದು ವಿನೂತನ ಸಂದರ್ಭಕ್ಕೆ ಸಾಕ್ಷಿಯಾಗಿತ್ತು.

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Continue Reading

    LATEST NEWS

    ಚಿಕ್ಕ ಪುಟ್ಟ ಮಕ್ಕಳನ್ನು ಕಾಡುತ್ತಿದೆ ವೈರಲ್ ಫಿವರ್..! 200ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ

    Published

    on

    ಬಾಗಲಕೋಟೆ/ಮಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಖಾಯಿಲೆಗಳು ವಕ್ಕರಿಸಿಕೊಳ್ಳುತ್ತದೆ.  ವಾತಾವರಣ ಹೆಚ್ಚಳದಿಂದ ವೈರಲ್ ಫಿವರ್ ಹಾವಳಿ ಕೂಡಾ ಹೆಚ್ಚಾಗುತ್ತಿದೆ. ಒಂದು ಕಡೆ ಡೆಂಗ್ಯೂ ಆಂತಕವಾದ್ರೆ ಇದೀಗ ವೈರಲ್ ಫಿವರ್ ಕಾಟ ಚಿಕ್ಕ ಪುಟ್ಟ ಮಕ್ಕಳ ಜೀವ ಹಿಂಡುತ್ತಿದೆ.

    ಈ ಮಧ್ಯೆ ಬಾಗಲಕೋಟೆ ಜಿಲ್ಲೆಯ ಆಸ್ಪತ್ರೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು, ಜಿಲ್ಲೆಯಲ್ಲಿ ಪುಟಾಣಿ ಮಕ್ಕಳು ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆ. ಶೀತ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆಯಿಂದ ಮಕ್ಕಳು ಹೈರಾಣಾಗುತ್ತಿದ್ದಾರೆ.

    ಡೆಂಗ್ಯೂ ಜ್ವರದಿಂದ ಮಗುವಿನ ಜೀವಾಂ*ತ್ಯ..! ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗೆ ತಂದೆಯ ಮನವಿ..!

    ಜಿಲ್ಲೆಯಲ್ಲಿ ಪ್ರತಿ ದಿನ 200ಕ್ಕೂ ಅಧಿಕ ಮಕ್ಕಳು ವೈರಲ್ ಫಿವರ್ ಗೆ ತುತ್ತಾಗಿ, ಜಿಲ್ಲೆಯ ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ.  ವೈರಲ್ ಫೀವರ್ ಹರಡುವುದರಿಂದ ಪೋಷಕರು ಮಕ್ಕಳ ಬಗ್ಗೆ ಭಯಭೀತರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಗೆ ಕಳುಹಿಸುವುದಕ್ಕಿಂತ ಮನೆಯಲ್ಲಿ ಇರುವುದು ಒಳ್ಳೆಯದು ಅಂತ ಅನ್ನಿಸುತ್ತಿದೆ ಎಂದು ಪೋಷಕರು ಹೇಳುತ್ತಿದ್ದಾರೆ.

    ಇನ್ನು ಮಕ್ಕಳಿಗೆ ಚಳಿಯಾಗದಂತೆ, ಬಿಸಿಲಿಗೆ ಹೆಚ್ಚಾಗಿ ಓಡಾಡದಂತೆ ತಡೆಯಬೇಕು. ಮಕ್ಕಳ ಬಗ್ಗೆ ಹೆಚ್ಚು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ವೈರಲ್ ಫೀವರ್ ತಡೆಯಲು ಸಾಧ್ಯ ಎಂದು ವೈದ್ಯರು ಹೇಳಿದ್ದಾರೆ.

    ಒಟ್ಟಿನಲ್ಲಿ ಮಕ್ಕಳು ಮತ್ತು ವೃದ್ಧರು ಈ ವೈರಲ್ ಫೀವರ್‌ಗೆ ಹೈರಾಣಾಗುತ್ತಿದ್ದಾರೆ. ಜ್ವರ ಬರುವ ಮೊದಲೇ ಮುಂಜಾಗೃತಾ ಕ್ರಮ ಕೈಗೊಂಡರೆ ಇದರಿಂದ ಪಾರಾಗಬಹುದಾಗಿದೆ.

    Continue Reading

    DAKSHINA KANNADA

    ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿದ ಸಂಸದ ಚೌಟ

    Published

    on

    ಮಂಗಳೂರು : ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಶೀರ್ವಾದ ಪಡೆದು ಪಡೆದು ವಿದ್ಯಮಾನಗಳ ಕುರಿತು ಮಾತನಾಡಿದರು.

    ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    Continue Reading

    LATEST NEWS

    Trending