Connect with us

DAKSHINA KANNADA

ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾದ ಯುವ ಕಲಾವಿದೆ ‘ರಂಜಿತಾ ಎಲ್ಲೂರು’

Published

on

ಮಂಗಳೂರು: ಪ್ರತಿಭಾನ್ವಿತ ಯುವ ಕಲಾವಿದೆ ರಂಜಿತಾ ಎಲ್ಲೂರು ಅವರು ಬೆಂಗಳೂರಿನ ಸೃಷ್ಟಿಕಲಾ ವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಎನ್‌ಆರ್‌ ಕಾಲನಿ ಪತ್ತಿ ಸಭಾಂಗಣದಲ್ಲಿ ಅ.೩೦ರದು ನಡೆಯುವ ಸೃಷ್ಟಿ ಸಂಭ್ರಮ-21 ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಮೊದಲಾದ ಶ್ರೇಷ್ಠ ಕಲಾವಿದರಿಗೆ ಈ ಹಿಂದೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು, ಈ ಬಾರಿ ಅಭಿನಯ ವಿಶಾರದೆಯಾಗಿರುವ ಯುವ ಕಲಾವಿದೆ ರಂಜಿತಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸೃಷ್ಟಿ ಕಲಾವಿದ್ಯಾಲಯದ ಅಧ್ಯಕ್ಷ ಛಾಯಾಪತಿ ಕಂಚಿಬೈಲ್‌ ತಿಳಿಸಿದ್ದಾರೆ.

ಕಲಿಕೆಯಲ್ಲಿಯೂ ಅಗ್ರಸ್ಥಾನಿಯಾಗಿರುವ ರಂಜಿತಾ, ಕರ್ನಾಟಕ ಸಂಗೀತ ಗಾಯಕಿ, ಅಪ್ರತಿಮ ಯಕ್ಷಗಾನ ಕಲಾವಿದೆ, ರಾಷ್ಟ್ರೀಯ ಮಟ್ಟದ ಥ್ರೋಬಾಲ್ ಚಾಂಪಿಯನ್, ರಾಜ್ಯ ಮಟ್ಟದ ಚರ್ಚಾಪಟು ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಟೆಡ್‌ಎಕ್ಸ್ ಎಂಬ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶನ ನೀಡಿದ ಖ್ಯಾತಿ ಹೊಂದಿದ್ದಾರೆ. ಮ್ಯಾನೇಜ್‌ ಮೆಂಟ್‌ ಫೆಸ್ಟ್‌ಗಳಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದ ಬಹುಮಾನಗಳನ್ನು ಪಡೆದಿದ್ದಾರೆ.

ಕದ್ರಿಯ ಬಾಲಯಕ್ಷಕೂಟ ಮತ್ತು ಯಕ್ಷಕೂಟದಡಿ ನೂರಾರು ಯಕ್ಷಗಾನ ಪ್ರದರ್ಶನಗಳನ್ನು ನೀಡಿರುವ ರಂಜಿತಾ ಎಲ್ಲೂರು, ಬಭ್ರುವಾಹನ, ಸುದರ್ಶನ, ಭಾರ್ಗವ, ನರಕಾಸುರ ಭ್ರಮರಕುಂತಳೆ ಮೊದಲಾದ ಪಾತ್ರಗಳಿಗೆ ಅಭಿನಯದ ಮೂಲಕ ಸಾಂಪ್ರದಾಯಿಕ ಶೈಲಿಗೆ ಮೆರುಗು ನೀಡಿದ್ದಾರೆ.

ತಂದೆ ಕದ್ರಿ ರಾಮಚಂದ್ರ ಭಟ್‌ ಎಲ್ಲೂರು ಅವರಿಂದ ಯಕ್ಷಗಾನದ ಪಟ್ಟುಗಳನ್ನು ೩ ವರ್ಷದಿಂದಲೇ ಅಭ್ಯಾಸ ಆರಂಭಿಸಿದ ರಂಜಿತಾ ತನ್ನ 15ನೇ ವರ್ಷಕ್ಕೆ ಯಕ್ಷಗಾನ ಅಕಾಡೆಮಿಯ ರಾಷ್ಟ್ರೀಯ ಪ್ರಶಸ್ತಿ ಗಳಿಸಿರುವ ಯಕ್ಷ ಸುಮೇರು ಗೋವಿಂದ ಭಟ್ಟರ ಜತೆ ಸಪ್ತಾಹದಲ್ಲಿ ಪ್ರಮುಖ ಪಾತ್ರಧಾರಿಯಾಗಿ ಮಿಂಚಿದವರು.

ದೆಹಲಿ ರಾಷ್ಟ್ರಪತಿ ಭವನದಲ್ಲಿ ಲಲಿತಕಲೆಗಳ ದಾಖಲೀಕರಣದ ಸಂದರ್ಭ ಯಕ್ಷಗಾನ ಪ್ರದರ್ಶನದಲ್ಲಿ ಪ್ರಮುಖ ಪಾತ್ರ ಮಾಡುವ ಮೂಲಕ ಎಳವೆಯಲ್ಲಿಯೇ ಕೀರ್ತಿಯನ್ನು ದಿಲ್ಲಿಯವರೆಗೆ ಪಸರಿಸಿದ್ದಾರೆ.

DAKSHINA KANNADA

ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?

Published

on

ಇತ್ತೀಚಿನ ದಿನಗಳಲ್ಲಿ ತುಳುನಾಡಿನ ದೈವಾರಾಧನೆ ವಿಶ್ವ ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದ್ದು, ಸಾವಿರಾರು ಜನ ತುಳುನಾಡ ದೈವಗಳನ್ನು ನಂಬಲು ಆರಂಭಿಸಿದ್ದಾರೆ. ಆದ್ರೆ ದೈವಗಳನ್ನು ನಂಬುವ ಬಗೆ ಹೇಗೆ ಅನ್ನೋದು ಗೊತ್ತಿಲ್ಲದೆ ಇದ್ರೂ ಭಕ್ತಿಯಿಂದ ಕೈ ಮುಗಿದವರನ್ನು ದೈವಗಳು ಎಂದಿಗೂ ಕೈ ಬಿಟ್ಟಿಲ್ಲ. ಹೀಗಾಗಿ ಸೆಲೆಬ್ರೆಟಿಗಳೂ ಸೇರಿದಂತೆ ಪ್ರತಿನಿತ್ಯ ಹಲವಾರು ಜನ ದೈವ ಸಾನಿಧ್ಯಕ್ಕೆ ಬಂದು ಭಕ್ತಿಯಿಂದ ಕೈ ಮುಗಿಯುತ್ತಿದ್ದಾರೆ. ಅದರಲ್ಲೂ ಕುತ್ತಾರು ಕೊರಗಜ್ಜನ ಕ್ಷೇತ್ರವಂತೂ ನಿತ್ಯ ಹೊರ ಜಿಲ್ಲೆಯ ಭಕ್ತರಿಂದ ತುಂಬಿ ತುಳುಕುತ್ತಿರುತ್ತದೆ.

ದೈವಾರಾಧನೆಯೇ ಪ್ರಮುಖವಾಗಿರುವ ತುಳುನಾಡಿನಲ್ಲಿ ಜನ ದೇವರಿಗಿಂತ ಹೆಚ್ಚು ಭಯ ಪಡೋದು ದೈವಗಳಿಗೆ. ಪ್ರಕೃತಿಯ ಆರಾಧನೆಯ ಮೂಲಕ ಇಲ್ಲಿನ ನೆಲ, ಜಲ, ಹಾಗೂ ಪರಿಸರ ಎಲ್ಲದರಲ್ಲೂ ದೈವಗಳನ್ನು ಕಾಣುವ ಸಂಸ್ಕೃತಿ ತುಳುನಾಡಿನದ್ದು. ಸಾವಿರದ ಎರಡು ದೈವಗಳು ಇಲ್ಲಿ ಆರಾಧಿಸಲ್ಪಡುತ್ತದೆ ಅನ್ನೋದು ಇತ್ತೀಚಿನ ವರೆಗೆ ಸಂಶೋಧಕರು ಕಂಡು ಕೊಂಡಿರೋ ಸತ್ಯ ಕೂಡ.

ಕೊರಗಜ್ಜ ಯಾರು ಏನು ಅನ್ನೋದು ಇಲ್ಲಿ ಮುಖ್ಯವಾಗದೇ ಇದ್ರೂ ಕೊರಗಜ್ಜ ಸಮಸ್ಯೆಗಳಿಗೆ ಪರಿಹಾರ ನೀಡ್ತಾನೆ ಅನ್ನೋದು ನಂಬಿ ಬರುವ ಭಕ್ತರಿಗೆ ಇರುವ ಆಶಾಕಿರಣ. ಯಾವುದೇ ಮದ್ಯವರ್ತಿ ಇಲ್ಲದೆ ತಾವೇ ಕೊರಗಜ್ಜನಿಗೆ ಪೂಜೆ ಸಲ್ಲಿಸಿ ಅವರಿಗೆ ಇಷ್ಟವಾದುದನ್ನು ಕೊಟ್ಟು ಕೈ ಮುಗಿದು ಬೇಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ಮೇಲು ಕೀಳೆಂಬ ಭೇದ-ಭಾವ ಇಲ್ಲ. ಇನ್ನು ಕೊರಗಜ್ಜ ಶ್ರೀಮಂತನಿಂದಲೂ ಬಡವನಿಂದಲೂ ಕೇಳೋದು ಎಲೆ ಅಡಿಕೆ , ಚಕ್ಕುಲಿ, ಹಾಗೂ ಒಂದು ಸ್ವಲ್ಪ ಮದ್ಯ ಅಷ್ಟೇ…

ಕೇವಲ ಎಲೆ-ಅಡಿಕೆಗೆ ನಮ್ಮ ಕಷ್ಟಕಾರ್ಪಣ್ಯಗಳನ್ನು ಪರಿಹಾರ ಮಾಡೊ ದೈವ ಎಂದರೆ ಸ್ವಾಮಿ ಕೊರಗಜ್ಜ. ಅಜ್ಜನನ್ನು ಆರಾಧಿಸಬೇಕೆಂದರೆ ದೊಡ್ಡ ದೊಡ್ಡ ದೈವ ಸ್ಥಾನಗಳೇ ಬೇಕೆಂದಿಲ್ಲ. ಕೇವಲ ಮನಸಿನಲ್ಲೇ ಸ್ವಾಮಿ ಕೊರಗಜ್ಜ ಅಂತ ಕಷ್ಟದ ಸಮಯದಲ್ಲಿ ನೆನೆಸಿದ್ರೆ ಸಾಕು ಅದ್ಯಾವುದೋ ರೂಪದಲ್ಲಿ ಬಂದು ಕಷ್ಟ ಪರಿಹಾರ ಮಾಡ್ತಾರೆ ಅನ್ನೋ ನಂಬಿಕೆ ತುಳುನಾಡಿನ ಜನರಲ್ಲಿ ಇದೆ. ಇನ್ನು ಕೊರಗಜ್ಜನ ಹಲವು ಕ್ಷೇತ್ರಗಳು ತುಳುನಾಡಿನಲ್ಲಿದ್ದು ಅಲ್ಲಿಗೆ ಎಲೆ ಅಡಿಕೆ, ಚಕ್ಕುಲಿ, ಮದ್ಯದ ಹರಕೆ ಹೇಳಿಕೊಂಡ್ರೆ ಮುಗಿತು.

ಇನ್ನು ಕೊರಗಜ್ಜನಿಗೆ ಅಗೇಲು ನೀಡುವ ಸಂಪ್ರದಾಯವಿದ್ದು ಅಲ್ಲಿ ಕೊರಗಜ್ಜನಿಗೆ ಕೋಡೊದು ಅನ್ನ, ಬಸಳೆಯ ಸಾರು, ಮೀನಿನ ಪದಾರ್ಥ, ಕೋಳಿಯ ಪದಾರ್ಥ, ಬೇಯಿಸಿದ ಮೊಟ್ಟೆ, ನಿಂಬೆ ಹಣ್ಣಿನ ಉಪ್ಪಿನಕಾಯಿ ಹಾಗೂ ಮದ್ಯ ಮಾತ್ರ. ಇದಿಷ್ಟಕ್ಕೆ ತೃಪ್ತಿಪಟ್ಟುಕೊಳ್ಳುವ ಕೊರಗಜ್ಜ “ಅಜ್ಜಾ ಕಾಪುಲೆ ನಮನ್.. ಈರೆಗ್ ಬಾಜೆಲ್ ಕೊರ್ಪೆ” ಅಂತ ಹೇಳಿದರೆ ಸಾಕು ಕ್ಷಣ ಮಾತ್ರದಲ್ಲಿ ಭಕ್ತರ ಇಚ್ಛೆಯನ್ನು ನೆರವೇರಿಸುತ್ತಾನೆ.

ನೀವು ಕೊರಗಜ್ಜನ ಫೋಟೊವನ್ನು ಮನೆಯಲ್ಲಿ ಇಡಬಹುದಾ.. ಎಂದು ನೋಡುವುದಾದರೆ ಅಜ್ಜನ ಫೋಟೋ ಮಾತ್ರವಲ್ಲ ಯಾವ ದೈವಗಳ ಫೋಟೋವನ್ನೂ ಮನೆಯಲ್ಲಿ ಇಟ್ಟು ಆರಾಧನೆ ಮಾಡುವ ಪದ್ಧತಿ ಅಷ್ಟು ಬಳಕೆಯಲ್ಲಿಲ್ಲ. ಫೋಟೋ ಇಟ್ಟು ಆರಾಧನೆ ಮಾಡಬೇಕೆಂದು ಎಲ್ಲೂ ಹೇಳಿಲ್ಲ. ತಿನ್ನುವಂತಹ ಆಹಾರದಲ್ಲಿ, ನಾವು ನೋಡುವಂತಹ ನೋಟದಲ್ಲಿ, ನಾವು ಮಾಡುವ ಒಳ್ಳೆಯ ಕೆಲಸದಲ್ಲಿ, ಅಜ್ಜನ ಪ್ರಸಾದದಲ್ಲಿ ಅಜ್ಜ ಇರುತ್ತಾನೆ. ಹೀಗಾಗಿ ಅಜ್ಜನ ಫೋಟೋ ಇಟ್ಟು ಪೂಜಿಸುವ ಕ್ರಮ ಇಲ್ಲ. ಪವಿತ್ರವಾದ ಹೃದಯದಲ್ಲಿ ನಾವು ಯಾವ ದೈವವನ್ನು ನಂಬುತ್ತೇವೊ ಆ ದೈವಕ್ಕೆ ನೆಲೆ ಕೊಟ್ಟರೆ ನಾವು ಎಲ್ಲಿ ನಿಂತು ಕೈ ಮುಗಿದರೂ ಕೂಡ ಕೊರಗಜ್ಜ ಆಗಲಿ ಅಥವಾ ಇನ್ನು ಯಾವೂದೇ ದೈವವಾಗಲಿ ಅಲ್ಲಿ ಬಂದು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

LATEST NEWS

Trending