Connect with us

DAKSHINA KANNADA

ಸರ್ಕಾರದ ಸಹಾಯಕ್ಕಾಗಿ 4-5 ವರ್ಷದಿಂದ ಮಂದಾರಬೈಲಿನ ಯುವತಿ ಸುರಕ್ಷಾಳ ಕಚೇರಿ ಅಲೆದಾಟಕ್ಕೆ ಸಿಗದ ಮುಕ್ತಿ..! ಸುರಕ್ಷಾಳ ಕುಟುಂಬಕ್ಕೆ ಸುರಕ್ಷೆಯ ಆಸರೆ ನೀಡುವಿರಾ..?

Published

on

ಸರ್ಕಾರದ ಸಹಾಯಕ್ಕಾಗಿ 4-5 ವರ್ಷದಿಂದ ಮಂದಾರಬೈಲಿನ ಯುವತಿ ಸುರಕ್ಷಾಳ ಕಚೇರಿ ಅಲೆದಾಟಕ್ಕೆ ಸಿಗದ ಮುಕ್ತಿ..! ಸುರಕ್ಷಾಳ ಕುಟುಂಬಕ್ಕೆ ಸುರಕ್ಷೆಯ ಆಸರೆ ನೀಡುವಿರಾ..? 

ಪುತ್ತೂರು : ಸ್ವಂತ ಸೂರಿಗಾಗಿ ಕಳೆದ 4-5 ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಂದಾರಬೈಲಿನ ಯುವತಿ ಸುರಕ್ಷಾಳ ಸರ್ಕಾರಿ ಕಚೇರಿ ಅಲೆದಾಟಕ್ಕೆ ಮುಕ್ತಿ ಸಿಕ್ಕಿಲ್ಲ.

ಈ ಮಧ್ಯೆ ಈ ಕುಟುಂಬದ ಹೆಸರಿನಲ್ಲಿ ಕೇರಳ ಮೂಲದ ಸಂಸ್ಥೆಯೊಂದು ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಸುರಕ್ಷಾಳ ಕುಟುಂಬಕ್ಕೆ ಹಸ್ತಾಂತರಿಸಲು ನಿರಾಕರಿಸಿದ್ದು, ಇಡೀ ಕುಟುಂಬಕ್ಕೆ ಇದೀಗ ಅಸುರಕ್ಷತೆ ಕಾಡುತ್ತಿದೆ.

ಪುತ್ತೂರು ನಗರಭಾ ವ್ಯಾಪ್ತಿಯ ಕೆಮ್ಮಿಂಜೆ ಸಮೀಪದ ಮಂದಾರ ಬೈಲು ನಿವಾಸಿಯಾಗಿರುವ ಸುರಕ್ಷಾ ತನ್ನ ಅನಾರೋಗ್ಯ ಪೀಡಿತ ತಂದೆ ತಾಯಿ ಹಾಗೂ ತಮ್ಮನ ಜತೆ ವಾಸವಾಗಿದ್ದಾಳೆ. ಪ್ರಸ್ಥುತ ಈ ಪುಟ್ಟ ಕುಟುಂಬ ಇರುವ ಜೋಪಡಿ ಮನೆ ಆಗಲೋ- ಈಗಲೋ ಕುಸಿಯುವ ಹಂತಕ್ಕೆ ತಲುಪಿದೆ.

ಸರ್ಕಾರಿ ಜಮೀನಿನಲ್ಲಿ ಕಳೆದ 25 ವರ್ಷಗಳಿಂದ ವಾಸಿಸುತ್ತಿದ್ದ ಸುರಕ್ಷಾ ತಂದೆ ಪ್ರಕಾಶ್ ಪೂಜಾರಿ ಹಾಗೂ ಮೀನಾಕ್ಷಿ ಹೆಸರಿನಲ್ಲಿ 2018ರಲ್ಲಿ 94 ಸಿಸಿ ಯೋಜನೆಯಡಿ 2.5 ಸೆಂಟ್ ನಿವೇಶನ ನೀಡಲಾಗಿದೆ.

ಆದರೆ ಮನೆ ಕಟ್ಟಲು ಬೇಕಾದ ಆರ್ಥಿಕ ಭದ್ರತೆ ಸುರಕ್ಷಾಳಲ್ಲಿ ಇರದ ಕಾರಣ ಅದು ಹಾಗೇಯೇ ಉಳಿದಿದೆ. ಇತ್ತ ಇದ್ದ ಜೋಪಡಿಯ ಹಳೆ ಮನೆ ಕಳೆದ ಮಳೆಗಾಲಕ್ಕೆ ಸಂಪೂರ್ಣ ಕುಸಿದಿದ್ದು, ಅಸುರಕ್ಷಿತ ಮನೆಯಲ್ಲೇ ಈ ಕುಟುಂಬ ವಾಸಿಸುತ್ತಿದೆ.

ಮತಾಂತರ ಭಯದಲ್ಲಿ ಸುರಕ್ಷಾಳ ಕುಟುಂಬ:

ಇತ್ತೀಚೆಗೆ ಕೇರಳ ಮೂಲದ ಸಂಸ್ಥೆಯೊಂದು ಪ್ರಕಾಶ್ ಪೂಜಾರಿ ಅವರನ್ನು ಸಂಪರ್ಕಿಸಿ ನಿಮಗೆ ವಿದೇಶದ ದಾನಿಗಳಿಂದ ೧೦ಲಕ್ಷ ರೂ. ವೆಚ್ಚದ ಮನೆ ನಿರ್ಮಿಸುವುದಾಗಿ ತಿಳಿಸಿ ಮನೆಯ ಹಾಗೂ ಪ್ರಕಾಶ್ ಪೂಜಾರಿ ಅವರ ಮಕ್ಕಳ ವಿಡಿಯೋ ಚಿತ್ರೀಕರಣ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದು ವೈರಲ್ ಆಗಿತ್ತು.

ಪ್ರಕಾಶ್ ಪೂಜಾರಿ ಕುಟುಂಬದ ಹೆಸರಿನಲ್ಲಿ ಕೇರಳ ಮೂಲದ ಸಂಸ್ಥೆ ಈಗಾಗಲೇ ೫ ಲಕ್ಷ ರೂ. ಅಽಕ ಮೊತ್ತದ ಹಣವನ್ನು ತಮ್ಮ ಬ್ಯಾಂಕ್ ಅಕೌಂಟ್ ನಂಬರ್ ನೀಡಿಯೇ ಸಂಗ್ರಹಿಸಿದ್ದು, ಪ್ರಕಾಶ್ ಪೂಜಾರಿ ಕುಟುಂಬಕ್ಕೆ ನೀಡಲು ನಿರಾಕರಿಸಿದೆ. ಈಬಗ್ಗೆ ಮಾಹಿತಿ ಪಡೆದ ಸ್ಥಳೀಯ ಹಿಂದೂ ಸಂಘಟನೆ ಕಾರ್ಯಕರ್ತರು ಮನೆ ಆಮಿಷ ನೀಡಿ ಮತಾಂತರಕ್ಕೆ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಿ ತಾವೇ ಮನೆ ನಿರ್ಮಿಸಿ ಕೊಡಲು ಮುಂದಾಗಿದೆ.
—————-
ಕಚೇರಿ ಅಲೆದಾಟದಿಂದ ಸಿಗದ ಮುಕ್ತಿ :
ನಗರಸಭೆಯಲ್ಲಿ ಈ ಹಿಂದಿನ ಆಡಳಿತಾವಧಿಯಲ್ಲಿ ಮಂದಾರಬೈಲಿನ ಯುವತಿ ಸುರಕ್ಷಾ ಅವರು ತಮ್ಮ ಕುಟುಂಬ ಅಪಾಯದಲ್ಲಿದ್ದು, ಸೂಕ್ತ ನಿವೇಶನದ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿ, ಕಚೇರಿಯಿಂದ ಕಚೇರಿ ಅಲೆದಾಡಿ ಸೂಕ್ತ ದಾಖಲೆ ಪತ್ರ ನೀಡಿದ್ದರು.

ಆದರೆ ಈಬಗ್ಗೆ ನಗರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಕಾಶ್ ಪೂಜಾರಿ ಕುಟುಂಬಕ್ಕೆ ಮನೆ ಆಮಿಷ ನೀಡಿ ಮತಾಂತರಕ್ಕೆ ಯತ್ನ ನಡೆಸಲಾಗುತ್ತಿದೆ ಎಂಬ ವದಂತಿ ಹಬ್ಬುತ್ತಿದ್ದಂತೆ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾಗೌರಿ, ಸದಸ್ಯ ಪಿಜಿ ಜಗನ್ನಿವಾಸ್ ರಾವ್, ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಹಲವರು ಬೇಟಿ ನೀಡಿ ಮನೆ ಸ್ಥಿತಿ ಗತಿ ಪರಿಶೀಲನೆ ನಡೆಸಿ ದಾನಿಗಳ ನೆರವಿನಿಂದ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.
—————
೫ ವರ್ಷವಾದರೂ ಮನೆ ನಿರ್ಮಣವಾಗಲ್ಲ
ನಿಮಗೆ ಮುಂದಿನ ೫ವರ್ಷ ಕಳೆದರೂ ಸರ್ಕಾರದಿಂದ ಮನೆ ನಿರ್ಮಣವಾಗಲ್ಲ, ನಮ್ಮ ಸಂಘದಿಂದ ೩ ತಿಂಗಳೊಳಗೆ ಮನೆ ನಿರ್ಮಿಸುತ್ತೇವೆ ಎಂದು ಕೇರಳ ಮೂಲದ ಸಂಸ್ಥೆ ಕಾರ್ಯಕರ್ತರು ಚಾಲೇಂಜ್ ಹಾಕಿದ್ದರು.

ನಮ್ಮ ಅನಾರೋಗ್ಯದ ಮಧ್ಯೆ ಮನೆ ನಿರ್ಮಾಣ ನಮಗೆ ಕನಸಿನ ಮಾತು. ಈ ಕಾರಣಕ್ಕೆ ಕೇರಳ ಮೂಲದ ಸಂಸ್ಥೆಯ ಮನೆ ನಿರ್ಮಾಣ ಯೋಜನೆಗೆ ಒಪ್ಪಿಗೆ ಸೂಚಿಸಿದೆವು ಎಂದು ಪ್ರಕಾಶ್ ಪೂಜಾರಿ ವಿಜಯವಾಣಿಗೆ ತಿಳಿಸಿದ್ದಾರೆ.
————-
ದಾನಿಗಳಿಂದ ನೆರವಿಗೆ ಮನವಿ
ಸ್ವಂತ ಸೂರಿಗಾಗಿ ಹಾಗೂ ಸರ್ಕಾರದ ಸಹಾಯಕ್ಕಾಗಿ 4-5 ವರ್ಷದಿಂದ ಮಂದಾರಬೈಲಿನ ಯುವತಿ ಸುರಕ್ಷಾಳ ಕಚೇರಿ ಅಲೆದಾಟಕ್ಕೆ ಸಿಗದ ಮುಕ್ತಿ ನೀಡುವ ನೆಲೆಯಲ್ಲಿ ದಾನಿಗಳಿಂದ ಸಹಾಯಕ್ಕೆ ಮನವಿ ಮಾಡಲಾಗಿದೆ.

ಪ್ರಕಾಶ್ ಪೂಜಾರಿ ಅವರ ಪತ್ನಿ ಮೀನಾಕ್ಷಿ ಅವರ ಬ್ಯಾಂಕ್ ಖಾತೆಗೆ ದಾನಿಗಳು ನೆರವು ನೀಡುವಂತೆ ಮನವಿ ಮಾಡಲಾಗಿದೆ.

ಎಸ್‌ಸಿಡಿಸಿಸಿ ಬ್ಯಾಂಕ್ ಪುತ್ತೂರು ಶಾಖೆ

ಖಾತೆ ನಂಬ್ರ- 00203020116289

IFSC code – IBKL078SCDC

 

 

Click to comment

Leave a Reply

Your email address will not be published. Required fields are marked *

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

DAKSHINA KANNADA

Mangaluru: ಬೆಳ್ಮ ಬೋಲ್ದನ್‌ ಕುಟುಂಬಿಕರು ತರವಾಡು ಮನೆಯಲ್ಲಿ ಕೋಲೋತ್ಸವ

Published

on

ಮಂಗಳೂರು: ಕೊಣಾಜೆ ಬೆಳ್ಮದಲ್ಲಿರುವ ಬೋಲ್ದನ್‌ ಕುಟುಂಬಿಕರ ತರವಾಡು ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಮೂರನೇ ವರ್ಷದ ಕೋಲೋತ್ಸವ ಭಾನುವಾರ ರಾತ್ರಿ ಸಂಭ್ರಮದಿಂದ ಜರುಗಿತು.

ಭಾನುವಾರ ಬೆಳಿಗ್ಗೆ ಪ್ರಶಾಂತ್ ಉಡುಪ ಪೌರೋಹಿತ್ಯದಲ್ಲಿ ನಾಗತಂಬಿಲ, ಗಣಹೋಮ ನಡೆದ ಬಳಿಕ ಶ್ರೀ ವೆಂಕಟ್ರಮಣ ದೇವರ ಮುಡಿಪು ಕಟ್ಟುವಿಕೆಯಲ್ಲಿ ಸರ್ವ ಕುಟುಂಬಿಕರು ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸಿದರು. ಮಧ್ಯಾಹ್ನ ಅನ್ನಸಂಪರ್ತಣೆ ನಡೆಯಿತು.

ಅದೇ ದಿನ ರಾತ್ರಿ 7.30ಕ್ಕೆ ದೈವದ ಭಂಡಾರ ಏರಿ ಬಳಿಕ ಕಲ್ಲುರ್ಟಿ , ಪಂಜುರ್ಲಿ, ಗುಳಿಗ ಕೋಲ ಉತ್ಸವ ಜರುಗಿತು. ಮರುದಿನ ಅಗೇಲು ಸೇವೆ ನಡೆಯಿತು.

ತರವಾಡು ಮನೆಯ ಮೋಹಿಣಿ ಬೆಳ್ಮ, ಐತಪ್ಪ ಬೆಳ್ತಂಗಡಿ, ಧರ್ಣಪ್ಪ ಧರ್ಮಸ್ಥಳ, ವಿಶ್ವನಾಥ ಕಡಬ, ದಯಾನಂದ್‌ ಹುಬ್ಬಳ್ಳಿ, ದೇವದಾಸ ಬೆಳ್ಮ, ಆನಂದ ಕಡಬ, ಚಂದ್ರಶೇಖರ ಎಕ್ಕೂರು, ಹರೀಶ ವರ್ಕಾಡಿ ಮೊದಲಾದವರು ಭಾಗವಹಿಸಿದ್ದರು.

ರಾತ್ರಿ ತರವಾಡಿನ ಆಡಳಿತ ಸಮಿತಿ ಪದಾಧಿಕಾರಿಗಳ ಸಭೆ ನಡೆದು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಆನಂದ ಕಡಬ ಮಂಡಿಸಿದರು.

ಕ್ಷೇತ್ರದ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಸಿದ ದಯಾನಂದ ಹುಬ್ಬಳ್ಳಿ, ತರವಾಡು ಮನೆಗೆ ಗ್ರೈಂಡರ್‌ ನೀಡಿದ ಶೋಭಾ ವಾಮಂಜೂರು, ತರವಾಡು ಮನೆಗೆ ಕೊಡುಗೆಯಾಗಿ ನೀಡಿದ ಕುರ್ಚಿಗಳಿಗೆ ಆರ್ಥಿಕ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

 

ದಿನಕರ ಕಯ್ಯಾರ, ವಿಕ್ರಾಂತ್‌ ಜಪ್ಪಿನಮೊಗರು , ಧನ್‌ರಾಜ್ ತಲಪಾಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರೂ ಉಪಸ್ಥಿತರಿದ್ದರು.

Continue Reading

LATEST NEWS

Trending