ಮಂಗಳೂರು: ಯುವಕನೋರ್ವ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ಮಂಗಳೂರಿನ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ.
ಟಿಕೆಎಚ್ ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (34) ಮೃತಪಟ್ಟ ಯುವಕ.
ಕುದ್ರೋಳಿ ಸಮೀಪದ ಕಂಡತ್ಪಳ್ಳಿ ಬಳಿಯಲ್ಲಿ ತರಕಾರಿ ಅಂಗಡಿ ಹೊಂದಿರುವ ಇವರು ಮನೆಯೊಂದರ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡರು ಎಂದು ಹೇಳಲಾಗಿದ್ದು,
ತಕ್ಷಣ ಮುಹಮ್ಮದ್ ರಿಯಾಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.