LATEST NEWS
ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ
ದಾವಣಗೆರೆ: ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ ಶೇಖ್ ಬಂಧಿತ ಆರೋಪಿಗಳು. ಬಂಧಿತರಿಂದ 9.5 ಲಕ್ಷ ಮೌಲ್ಯದ 155 ಗ್ರಾಂ ಚಿನ್ನದ ಆಭರಣ ಹಾಗೂ 1.27 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.
ಕಳೆದ ಸೆಪ್ಟೆಂಬರ್ 30ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಇಲಿಯಾಜ್ ನಗರದ ನಿವಾಸಿ ಮುಜೀಬುಲ್ ಶೇಖ್ ಜೊತೆ ಸೇರಿ ತಸ್ಮೀಯ ಖಾನಂ ತನ್ನದೇ ಮನೆಯ ಕಳ್ಳತನ ಮಾಡಿದ್ದಳು. ಬಳಿಕ ಮನೆಯಲ್ಲಿ ತಾನು ಒಬ್ಬಳೇ ಇದ್ದಾಗ ಯಾರೋ ಬಂದು ಮುಖಕ್ಕೆ ಬೂದಿ ಹಾಗೂ ಕೆಮಿಕಲ್ ಹಾಕಿ ಪ್ರಜ್ಞೆ ತಪ್ಪಿಸಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಚನ್ನಗಿರಿ ಇನ್ಸ್ ಪೆಕ್ಟರ್ ಬಾಲಚಂದ್ರ ನಾಯ್ಕ ತಂಡ ಫೋನ್ ಕಾಲ್ ಮಾಹಿತಿ ಮೇಲೆ ಮುಜೀಬುಲ್ನನ್ನು ವಶಕ್ಕೆ ಪಡೆದಿದ್ದರು. ನಂತರ ತಸ್ಮೀಯ ಖಾನಂ ತಾನು ಮಾಡಿದ ಕಳ್ಳತನವನ್ನು ಒಪ್ಪಿಕೊಂಡಿದ್ದಾರೆ. ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
LATEST NEWS
ಉಗ್ರರಿಂದ ಅಪ*ಹರಣಕ್ಕೊಳಗಾಗಿದ್ದ ಯೋಧ ; ದೇಹದಲ್ಲಿ ಗುಂಡೇಟಿನೊಂದಿಗೆ ಶ*ವವಾಗಿ ಪತ್ತೆ
ಮಂಗಳೂರು/ಜಮ್ಮು-ಕಾಶ್ಮೀರ: ಅನಂತನಾಗ್ ಪ್ರದೇಶದಲ್ಲಿ ಉಗ್ರರಿಂದ ಅಪ*ಹರಣಕ್ಕೊಳಗಾಗಿದ್ದ ಯೋಧ ಶ*ವವಾಗಿ ಪತ್ತೆಯಾಗಿದದ್ದು, ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ ಎಂಬುವುದು ತಿಳಿದು ಬಂದಿದೆ.
ಆದರೆ, ಅವರಲ್ಲಿ ಒಬ್ಬರು ಎರಡು ಗುಂಡಿನ ಗಾಯಗಳ ನಂತರವೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮತ್ತೋರ್ವ ಯೋಧ ಬುಧವಾರ, ಅಕ್ಟೋಬರ್ 9 ರಂದು ಅನಂತನಾಗ್ನ ಪತ್ರಿಬಲ್ ಅರಣ್ಯ ಪ್ರದೇಶದಲ್ಲಿ ಶ*ವವಾಗಿ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗುಂಡಿನ ಗಾಯಗಳಿದ್ದು, ಶೋ*ಧ ಕಾರ್ಯಾಚರಣೆಯ ವೇಳೆ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಭಾರತೀಯ ವಾಯುಪಡೆಯ ದಿನದ ಮಹತ್ವ ನಿಮಗೆ ಗೊತ್ತಾ…? ಇಲ್ಲಿದೆ ಸಂಪೂರ್ಣ ಮಾಹಿತಿ !!
ಗಾಯಗೊಂಡ ಮತ್ತೊಬ್ಬ ಯೋಧನನ್ನು ಅಗತ್ಯ ಚಿಕಿತ್ಸೆಗಾಗಿ ವೈದ್ಯಕೀಯ ಸೌಲಭ್ಯಕ್ಕೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
LATEST NEWS
ಸ್ಕೂಟರ್ ಗೆ ಡಿ*ಕ್ಕಿ ಹೊಡೆದ ಬಿಎಂಟಿಸಿ ಬಸ್; ಕೆಳಗೆ ಬಿದ್ದ ಸವಾರೆ ತಲೆ ಮೇಲೆ ಹರಿದ ಕಾರು
ಮಂಗಳೂರು/ಬೆಂಗಳೂರು : ಬಿಎಂಟಿಸಿಗೆ ಮಹಿಳೆಯೊಬ್ಬರು ಬ*ಲಿಯಾಗಿದ್ದಾರೆ. ಸ್ಕೂಟರ್ನಲ್ಲಿ ಬರುತ್ತಿದ್ದಾಗ ಬಿಎಂಟಿಸಿ ಬಸ್ ಡಿ*ಕ್ಕಿ ಹೊಡೆದ ಬೆಂಗಳೂರಿನ ಉಲ್ಲಾಳ ಉಪನಗರ ಕೆರೆ ಬಳಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆ 100 ಫೀಟ್ ರಸ್ತೆಯಲ್ಲಿ ಅಪಘಾ*ತ ಸಂಭವಿಸಿದೆ. ಮೋನಿಕಾ ಮೃ*ತ ದುರ್ದೈವಿ.
ಸೊನ್ನೆನಾಹಳ್ಳಿಯ ಮಾರುತಿ ನಗರದ ನಿವಾಸಿಯಾಗಿದ್ದ ಮೋನಿಕಾ, ರಿಂಗ್ ರೋಡ್ನಲ್ಲಿರುವ ಷೋ ರೂಂನಲ್ಲಿ ಹೆಚ್ಆರ್ ಆಗಿ ಕೆಲಸ ಮಾಡುತ್ತಿದ್ದರು. ತಮ್ಮ ಜ್ಯೂಪಿಟರ್ ಸ್ಕೂಟರ್ನಲ್ಲಿ ಬರುತ್ತಿದ್ದರು. 100 ಫೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣ ಒಂದು ಬದಿಯ ರಸ್ತೆ ಕ್ಲೋಸ್ ಆಗಿತ್ತು. ಕೇವಲ ಒಂದೇ ಬದಿಯ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಈ ವೇಳೆ ಸ್ಕೂಟರ್ನಲ್ಲಿ ಬರುತ್ತಿದ್ದ ಮೋನಿಕಾಗೆ ಬಿಎಂಟಿಸಿ ಬಸ್ ಡಿ*ಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದಿದ್ದ ಮೋನಿಕಾ ತಲೆ ಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರಿನ ಚಕ್ರ ಹತ್ತಿದೆ. ಪರಿಣಾಮ ಮೋನಿಕಾ ತಲೆ ಛಿದ್ರಗೊಂಡಿದ್ದು, ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.
ಇದನ್ನೂ ಓದಿ : ಹಿಟ್ ಆ್ಯಂಡ್ ರನ್ : ಬೈಕ್ ಡಿ*ಕ್ಕಿ ಹೊಡೆದು ತಾಯಿ – ಮಗ ಸಾ*ವು
ಮಂಡ್ಯ ಮೂಲದ ಮೋನಿಕಾಗೆ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಪತಿ ಜತೆಗೆ ಸೊನ್ನೆನಾಹಳ್ಳಿಯ ಮಾರುತಿ ನಗರದಲ್ಲಿ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಜ್ಞಾನಭಾರತಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
LATEST NEWS
ಹಿಟ್ ಆ್ಯಂಡ್ ರನ್ : ಬೈಕ್ ಡಿ*ಕ್ಕಿ ಹೊಡೆದು ತಾಯಿ – ಮಗ ಸಾ*ವು
ಮಂಗಳೂರು/ಕೋಲಾರ : ಅಪರಿಚಿತ ವಾಹನ ಬೈಕ್ಗೆ ಡಿ*ಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ನಡೆದಿದೆ.
ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48ವ), ಪುತ್ರ ರಘು(26ವ) ಮೃ*ತಪಟ್ಟವರು. ಶ್ರೀನಿವಾಸಪುರದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ತೆರಳುವಾಗ ದುರಂ*ತ ಸಂಭವಿಸಿದೆ.
ಇದನ್ನೂ ಓದಿ : ಅತ್ಯಾಚಾರ ಆರೋಪ : ಶಾಸಕನ ವಿರುದ್ಧ FIR ದಾಖಲು.!
ಅಪಘಾ*ತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Pingback: ಮಂಗಳೂರಿನ ಮಾರ್ನೆಮಿಕಟ್ಟೆ : ಸಹಸ್ರಾರ್ಚನೆ ಸಹಿತ ದುರ್ಗಾನಮಸ್ಕಾರ ಪೂಜೆ - NAMMAKUDLA NEWS - ನಮ್ಮಕುಡ್ಲ ನ್ಯೂಸ್