KADABA
ಕಡಬ: ಪ್ರೊಫೆಶನಲ್ ಕೊರಿಯರ್ ನಡೆಸುತ್ತಿದ್ದ ಯುವಕ ಜೀವಾಂತ್ಯ..
ಕಡಬ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಯುವಕನೋರ್ವ ಜೀವಾಂತ್ಯಗೊಳಿಸಿದ್ದಾನೆ.
ಮೃತನನ್ನು ಸ್ಥಳೀಯ ಮೊರಂಕಲ ನಿವಾಸಿ ಶೆಬಿನ್(25) ಎಂದು ಗುರುತಿಸಲಾಗಿದೆ. ಶೆಬಿನ್ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿಯಲ್ಲಿ ಪ್ರೊಫೆಶನಲ್ ಕೊರಿಯರ್ ನಡೆಸುತ್ತಿದ್ದರು.
ತಾಯಿ ಹಾಗೂ ಸಹೋದರ ಅ.8ರಂದು ಸಂಜೆ ಸಂಬಂಧಿಕರ ಮನೆಗೆ ಹೋಗಿದ್ದು ಮನೆಯಲ್ಲಿ ಶೆಬಿನ್ ಒಬ್ಬರೇ ಇದ್ದರು.
ಅ.9ರಂದು ಬೆಳಿಗ್ಗೆ ಶೆಬಿನ್ರವರ ಮೊಬೈಲ್ಗೆ ತಾಯಿ ಎಲ್ಸಮ್ಮರವರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ.
ಈ ಹಿನ್ನೆಲೆಯಲ್ಲಿ ಅವರು ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದು ಅವರು ಮನೆಗೆ ಹೋಗಿ ನೋಡುವ ವೇಳೆ ಶೆಬಿನ್ ಮಲಗುವ ಕೋಣೆಯಲ್ಲಿಯೇ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನೆಲ್ಯಾಡಿ ಗ್ರಾ.ಪಂ.ಸದಸ್ಯ ಮಹಮ್ಮದ್ ಇಕ್ಬಾಲ್ರವರು ಪೊಲೀಸರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಶೆಬಿನ್ರವರು ತಾಯಿ ಎಲ್ಸಮ್ಮ, ಸಹೋದರ ಲಿಜೋರನ್ನು ಅಗಲಿದ್ದಾರೆ.
5 ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ನಲ್ಲಿ ಸಹಸವಾರರಾಗಿದ್ದ ಶೆಬಿನ್ರವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ನಂತರ ಗುಣಮುಖರಾಗಿ ಮತ್ತೆ ಕೊರಿಯರ್ ಕೆಲಸದಲ್ಲಿ ತೊಡಗಿಕೊಂಡಿದ್ದರು.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ
ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
DAKSHINA KANNADA
ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ!
ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಆಗಿ ಜಯಣ್ಣ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.
ಇದಕ್ಕೂ ಮೊದಲು ಸೋಮವಾರ ಪೇಟೆ ತಾಲೂಕ ಪಂಚಾಯತ್ ನಲ್ಲಿ ಅವರು ಇಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿರುವಾಗಲೇ ಇವರ ವಿರುದ್ಧ ಅಕ್ರಮ ಆಸ್ತಿಗಳಿಕೆಯ ದೂರು ದಾಖಲಾಗಿದ್ದು, ಆ ವಿಚಾರದ ತನಿಖೆಗೆ ಇಂದು ಕಡಬದಲ್ಲಿ ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆಯ ಮನೆ, ಕಡಬದ ಕಚೇರಿ ಹಾಗೂ ಕಡಬದಲ್ಲೇ ಇರುವ ಜಯಣ್ಣ ಅವರ ಬಾಡಿಗೆ ಮನೆ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಜಯಣ್ಣ ಅವರ ವಿಚಾರಣೆ ನಡೆಸುತ್ತಿದ್ದಾರೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
- DAKSHINA KANNADA5 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!