Connect with us

    bengaluru

    ಪಿಜಿ ಗರ್ಲ್ಸ್ ‘ಬಿ ಕೇರ್‌ಫುಲ್’: ಸ್ನಾನ ಮಾಡೋ ದೃಶ್ಯ ಸೆರೆಹಿಡಿದು ಟಾರ್ಚರ್-ಸೆಕ್ಸ್ ಆಫರ್‌ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ

    Published

    on

    ಬೆಂಗಳೂರು: ಪಿಜಿಯಲ್ಲಿ ಆಶ್ರಯ ಪಡೆಯುವ ಯುವತಿಯರ ಸ್ನಾನ ಮಾಡುವ ದೃಶ್ಯಗಳನ್ನು ಬಾತ್‌ರೂಂನ ಕಿಟಕಿಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸೆರೆಹಿಡಿದು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಪಾಂಡಿಚೇರಿ ಮೂಲದ ನಿರಂಜನ್ ಬಂಧಿತ ಕಾಮುಕ.


    ಯುವತಿಯ ಹೆಸರಿನಲ್ಲಿ ಪೊಲೀಸರೇ ಸೆಕ್ಸ್ ಆಫರ್ ಕೊಟ್ಟು ಸಿನಿಮೀಯ ರೀತಿಯಲ್ಲಿ ಇವನನ್ನು ಅರೆಸ್ಟ್ ಮಾಡಿದ್ದಾರೆ.

    ಹತ್ತನೇ ತರಗತಿ ಪಾಸು ಮಾಡಿಕೊಂಡಿದ್ದ ಈತ ಪಾಂಡಿಚೆರಿ ಮೂಲದವನು. ಕಳೆದ 4 ವರ್ಷಗಳಿಂದ ಬೊಮ್ಮನಹಳ್ಳಿಯ ಪಿಜಿಯಲ್ಲೇ ನೆಲೆಸಿದ್ದ ಆತ, ಆ ಪಿಜಿ ಮಾಲೀಕನೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡಿದ್ದ. ಆ ಪಿಜಿ ಕಟ್ಟಡಕ್ಕೆ ಹೊಂದಿಕೊಂಡೇ ಮಹಿಳೆಯರ ಪಿಜಿ ಇದ್ದು, ಎರಡು ಪಿಜಿಗಳಿಗೆ ಒಬ್ಬನೇ ಮಾಲೀಕ.

    ಹೀಗಾಗಿ ಮಹಿಳೆಯರ ಪಿಜಿಯಲ್ಲಿ ಏನಾದರೂ ಕೆಲಸಗಳಿದ್ರೆ, ತಾನೇ ಮುಂದೆ ನಿಂತು ಮಾಡಿಸುತ್ತಿದ್ದ. ಇದರಿಂದ ಲೇಡಿಸ್ ಪಿಜಿಯಲ್ಲಿ ಕೂಡಾ ನಿರಾತಂಕವಾಗಿ ಆರೋಪಿ ಓಡಾಡಲು ಮಾಲೀಕನೇ ಅವಕಾಶ ಕೊಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೇ ದುರ್ಬಳಕೆ ಮಾಡಿಕೊಂಡ ನಿರಂಜನ್ ಮಹಿಳೆಯರಿಲ್ಲದ ಹೊತ್ತಿನಲ್ಲಿ ಪಿಜಿಗೆ ತೆರಳಿ ಸ್ನಾನ ಗೃಹ, ಬೆಡ್ ರೂಂ ಹಾಗೂ ಇತರೆ ಸ್ಥಳಗಳನ್ನು ಪರಿಶೀಲಿಸಿದ್ದ. ಬಳಿಕ ಯುವತಿಯರು ಸ್ನಾನ ಮಾಡುವಾಗ ಎಲ್ಲಿಂದ ವಿಡಿಯೋ ರೆಕಾರ್ಡ್ ಮಾಡಿದ್ರೆ ಯಾರಿಗೂ ತಿಳಿಯುವುದಿಲ್ಲವೆಂದು ಸಂಚು ರೂಪಿಸಿ ತಾನು ವಾಸವಿದ್ದ ಪಿಜಿಯ ಟೆರೇಸ್ ಮೇಲಿಂದ ಪಕ್ಕದ ಲೇಡಿಸ್ ಪಿಜಿಯಲ್ಲಿದ್ದ ಯುವತಿಯರ ಚಲನವಲನದ ಮೇಲೆ ಕಣ್ಣಿಟ್ಟಿದ್ದ.

    ಆಗ ಯಾರಾದರೂ ಯುವತಿ ಸ್ನಾನ ಮಾಡಲು ಪಿಜಿಯ ಹೊರಗೆ ಒಣ ಹಾಕಿದ್ದ ಟವಲನ್ನು ತೆಗೆದುಕೊಂಡ ಕೂಡಲೇ ಆರೋಪಿ ಅಲರ್ಟ್‌ ಆಗಿ ಕೂಡಲೇ ತನ್ನ ಪಿಜಿಯ ಮಹಡಿಯಿಂದ ಲೇಡಿಸ್ ಪಿಜಿಯ ಮಹಡಿಗೆ ಜಿಗಿದು ನೀರಿನ ಪೈಪನ್ನು ಹಿಡಿದುಕೊಂಡು ಸ್ನಾನ ಗೃಹದ ಕಿಟಕಿಯ 1.5 ಅಡಿ ಎತ್ತರದ ಸಜ್ಜಾ ಮೇಲೆ ಕುಳಿತುಕೊಳ್ಳುತ್ತಿದ್ದ.

    ಅಲ್ಲಿಂದ ಮೊಬೈಲನ್ನು ತೂಗು ಬಿಟ್ಟು ಕಿಟಕಿ ಮೂಲಕ ಸ್ನಾನ ಮಾಡುತ್ತಿದ್ದ ಯುವತಿಯರ ನಗ್ನ ದೃಶ್ಯವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ. ಅಲ್ಲದೆ ಆಕೆಯ ಫೋಟೋ ಸಹ ತೆಗೆದು ಬಳಿಕ ಲೇಡಿಸ್ ಪಿಜಿ ರಿಜಿಸ್ಟರ್ ನಲ್ಲಿ ಆ ಯುವತಿಯರ ಮೊಬೈಲ್ ನಂಬರ್ ತೆಗೆದುಕೊಂಡು ಚಾಟಿಂಗ್ ಆರಂಭಿಸುತ್ತಿದ್ದ.

    ಬಹು ಕಿಲಾಡಿಯಂತೆ ಯೋಚಿಸುತ್ತಿದ್ದ ನಿರಂಜನ್ ತನ್ನ ಬಗ್ಗೆ ಯಾರಿಗೂ ತಿಳಿಯಬಾರದೆಂದು ತನ್ನ ಮೊಬೈಲ್‌ನಲ್ಲಿ ಓಇಘಿಖಿ PಐUS ಎಂಬ ಆ್ಯಪನ್ನು ಇನ್‌ಸ್ಟಾಲ್ ಮಾಡಿಕೊಂಡು ಆ್ಯಪ್‌ಗೆ ತನ್ನ ಇಮೇಲ್ ಐಡಿ ಮೂಲಕ ನೋಂದಾಯಿಸಿಕೊಂಡಿದ್ದ. ಆಗ ಸ್ಥಳೀಯ ಮೊಬೈಲ್ ಸಂಖ್ಯೆಯನ್ನು ವಿದೇಶಿ ಸಂಖ್ಯೆಯಾಗಿ ಪರಿವರ್ತಿಸಿ +1(747)222-8960 ಎಂಬ ನಂಬರನ್ನು ಪಡೆದು ಆ ನಂಬರ್‌ನಿಂದ ಯುವತಿಯರನ್ನು ಸಂಪರ್ಕಿಸುತ್ತಿದ್ದ.

    ತಾನು ಸೆರೆ ಹಿಡಿದ ನಗ್ನ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವುದಾಗಿ ಯುವತಿಯರಿಗೆ ಬೆದರಿಕೆ ಹಾಕುತ್ತಿದ್ದ. ಇದಕ್ಕೆ ಬೆದರಿದ ಯುವತಿಯರನ್ನು ಲಾಡ್ಜ್ ಅಥವಾ ಇತರೆ ಸ್ಥಳಗಳಿಗೆ ಕರೆಸಿ ಲೈಂಗಿಕವಾಗಿ ಬಳಕೆ ಮಾಡಿಕೊಡಿರುವುದು ತನಿಖೆಯಿಂದ ದೃಢಪಟ್ಟಿದೆ.

    ಇತ್ತೀಚೆಗೆ ತಾನು ನೆಲೆಸಿದ್ದ ಪಿಜಿಯಲ್ಲಿ ಯುವತಿಯರು ಸ್ನಾನಕ್ಕೆ ಹೋದಾಗ ಅಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್ ಮಾಡಿಕೊಂಡು ಬಳಿಕ ಮೊಬೈಲ್‌ಗೆ ಅನಾಮಧೇಯ ಸಂದೇಶ ಕಳುಹಿಸಿ ಲೈಂಗಿಕತೆಗೆ ಒತ್ತಾಯಿಸಿದ್ದ.

    ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದ ಇನ್‌ಸ್ಪೆಕ್ಟರ್ ಎಸ್.ಟಿ ಯೋಗೇಶ್ ನೇತೃತ್ವದ ತಂಡವು, ಯುವತಿ ಹೆಸರಿನಲ್ಲಿ ತಾವೇ ಯುವಕನಿಗೆ ಚಾಟಿಂಗ್ ಮಾಡಿದ್ದಾರೆ. ಬಳಿಕ ಸೆಕ್ಸ್ಗೆ ಒಪ್ಪಿಕೊಂಡಿರುವುದಾಗಿ ಆಫರ್ ಕೊಟ್ಟು ಕಾಮುಕನನ್ನ ಖೆಡ್ಡಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.

    bengaluru

    ಸರಿಗಮ ವಿಜಿ ಹೆಸರಿಗೆ ‘ಸರಿಗಮ’ ಸೇರಿಕೊಳ್ಳಲು ಆ ಒಂದು ನಾಟಕ ಕಾರಣ !

    Published

    on

    ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ. ಅವರು ಕನ್ನಡ ಸಿನಿಮಾ, ಧಾರವಾಹಿ ಹಾಗೂ ರಂಗಭೂಮಿಯಲ್ಲಿ ನಟಿಸಿದ್ದರು.

    ಸರಿಗಮ ವಿಜಿ ಅವರ ಮೂಲ ಹೆಸರು ವಿಜಯ್ ಕುಮಾರ್. ಆದರೆ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡಿದ್ದು ಹೇಗೆ ಎನ್ನುವ ಕುತೂಹಲ ಹಲವರಲ್ಲಿ ಇದೆ.

    ‘ಸರಿಗಮ ವಿಜಿ’ ಎಂದೇ ಕರೆಯಲ್ಪಡುವ ನಟ ವಿಜಯ್ ಕುಮಾರ್ (76) ಅವರು ಬುಧವಾರ (ಜ.15) ನಿಧ*ನರಾದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಶ್ವಾಸಕೋಶದ ಸೋಂಕು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವಾರದ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 9:45ರ ಸುಮಾರಿಗೆ ಅವರು ನಿಧ*ನ ಹೊಂದಿದ್ದಾರೆ.

    ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇ*ನ್ನಿಲ್ಲ

    ಬೆಂಗಳೂರಿನ ವಿಮಾನಪುರದಲ್ಲಿ (ಎಚ್ಎಎಲ್ ಪ್ರದೇಶ) ಜನಿಸಿದ ವಿಜಯ್ ಕುಮಾರ್, ನಾಟಕದ ನಂಟು ಇಟ್ಟುಕೊಂಡು ಸಿನಿಮಾಲೋಕ ಪ್ರವೇಶಿಸಿದವರು. ‘ಬೆಳುವಲದ ಮಡಿಲಲ್ಲಿ’ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ, ನಟನಾಗಿ ಮೊದಲ ಹೆಜ್ಜೆ ಇಟ್ಟ ಅವರು ಎನ್ ಜಿಇಎಫ್ ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ದುಡಿದವರು. ಈ ಅವಧಿಯಲ್ಲೇ ಅವರು ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕ ಬರೆದರು.

    ಇದು ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ, ಹೈದರಾಬಾದ್, ಚೆನ್ನೈ, ದೆಹಲಿಗಳಲ್ಲಿಯೂ ಆ ನಾಟಕ ಪ್ರದರ್ಶನವಾಗಿತ್ತು. ಸುಮಾರು 1390 ಪ್ರದರ್ಶನಗಳಲ್ಲಿ ‘ಸಂಸಾರದಲ್ಲಿ ಸರಿಗಮ’ ನಾಟಕ ಕಂಡಿತ್ತು. ಇದೇ ಕಾರಣಕ್ಕೆ ವಿಜಿ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡು ಸರಿಗಮ ವಿಜಿ ಎಂದೇ ಜನಪ್ರಿಯರಾದರು.

    ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದ ವಿಜಿ ಅವರು, ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

    Continue Reading

    bengaluru

    ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾ*ವು

    Published

    on

    ಮಂಗಳೂರು/ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾ*ವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.

    ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃ*ತ ಬಾಣಂತಿ ಎಂದು ಗುರುತಿಸಲಾಗಿದೆ.

    ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅ*ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃ*ತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್‌ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎ*ಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

    ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾ*ಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫ*ಲಿಸದೆ ಮೃ*ತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂ*ರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    bangalore

    ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !

    Published

    on

    ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.

    ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.

    ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್‌.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

    ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

    ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

    Continue Reading

    LATEST NEWS

    Trending