Connect with us

LATEST NEWS

ಮಂಗಳೂರಿನಲ್ಲಿ ವಿವಾಹ ನಿಶ್ಚಿತಾರ್ಥಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು..!

Published

on

ಮಂಗಳೂರಿನಲ್ಲಿ ವಿವಾಹ ನಿಶ್ಚಿತಾರ್ಥಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು..!

ಮಂಗಳೂರು : ಮಂಗಳೂರಿನ ಅಪಾರ್ಟ್ ಮೆಂಟ್  ಒಂದರಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು 28 ವರ್ಷದ ವಿಘ್ನೇಶ್ ನಾಯಕ್ ಎಂದು ಗುರುತ್ತಿಸಲಾಗಿದೆ.

ತಾನು ಕೆಲಸ ಮಾಡುವ ಮಳಿಗೆಯ ಸನಿಹದಲ್ಲೇ ಇದ್ದ ಅಪಾರ್ಟ್ ಮೆಂಟ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣಗಳು ಗೊತ್ತಾಗಿಲ್ಲ. ನಗರದ ಆಯುರ್ವೇದ ಔಷಧಿ ಮಳಿಗೆಯೊಂದರಲ್ಲಿ  ಕೆಲಸ ಮಾಡುತ್ತಿದ್ದ ವಿಘ್ಶ್ನೇಶ್  ಅವರಿಗೆ ಬರುವ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿದ್ದು, ಈಗಾಗಲೇ ನಿಶ್ಚಿತಾರ್ಥ  ಕೂಡ ನಡೆದಿದೆ.

ನಿಷ್ಟೆಯಿಂದ ಕೆಲಸ ಮಾಡುತ್ತಿದ್ದ ವಿಘ್ನೆಶ್ ಸಮಾಜ ಸೇವೆಯಲ್ಲೂ ಸದಾ ಮುಂದಿದ್ದರು. ವಿಘ್ನೆಶ್ ನಿಧನಕ್ಕೆ ಯೂತ್ ಆಫ್ ಜಿಎಸ್‌ಬಿ ಕಂಬನಿ ಮಿಡಿದಿದೆ.

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending