Connect with us

LATEST NEWS

ಬಾಡಿಗೆಗೆ ಮನೆ ಕೊಟ್ಟಿದ್ದ ಆಂಟಿಯನ್ನೇ ತುಂಡು ತುಂಡಾಗಿ ಕತ್ತರಿಸಿದ ಬಿಹಾರ ಯುವಕರು..!

Published

on

ಅನೇಕಲ್: ದೆಹಲಿಯ ಶ್ರದ್ಧಾ ಕೊಲೆ ಪ್ರಕರಣದ ಬಳಿಕ ದೇಶದಲ್ಲಿ ಮತ್ತೆ ಮತ್ತೆ ದೇಹ ತುಂಡರಿಸಿ ಕೊಲೆ ಮಾಡುವ ಪ್ರಕರಣಗಳು ಹೆಚ್ಚಾಗಿ ಕಿವಿಗೆ ಬೀಳುತ್ತಲೇ ಇವೆ.

ನಾಲ್ಕು ದಿನದ ಹಿಂದಷ್ಟೇ ಮಹಾರಾಷ್ಟ್ರದ ಥಾಣೆಯಲ್ಲಿ ಪ್ರಿಯತಮೆ ಕೊಂದು ಪೀಸ್ ಪೀಸ್ ಮಾಡಿ ಕುಕ್ಕರ್​ನಲ್ಲಿ ಬೇಯಿಸಿ ವಿಕೃತಿ ಮೆರೆದಿದ್ದ ಘಟನೆ ನಡೆದಿತ್ತು. ಇದೀಗ ನಮ್ಮ ರಾಜ್ಯದಲ್ಲೇ ಇಂತಹ ಬೀಭತ್ಸ ಘಟನೆ ನಡೆದಿದೆ.

ಮನೆ ಬಾಡಿಗೆಗೆಂದು ಬಂದಿದ್ದ ಯುವಕರು ಒಂಟಿ ಮಹಿಳೆಯೆಂದು ತಿಳಿಯುತ್ತಿದ್ದಂತೆ ಆಕೆಯ ಮನೆಯನ್ನು ತಮ್ಮ ಹೆಸರಿಗೆ ಬರೆಯುವಂತೆ ಹಿಂಸಿಸಿ ಕೊನೆಗೆ ಕೊಂದು ತುಂಡು ತುಂಡಾಗಿ ಕತ್ತರಿಸಿ ಬಿಸಾಕಿದ್ದರು. ಸದ್ಯ ಸಿಕ್ಕ ತುಂಡು ದೇಹದ ಜಾಲ ಹಿಡಿದು ಹೊರಟಿದ್ದ ಪೊಲೀಸರ ಕೈಗೆ ಓರ್ವ ಸಿಕ್ಕಿ ಬಿದ್ದಿದ್ದು ಘಟನೆಯ ರಹಸ್ಯ ಬಯಲಾಗಿದೆ.

ಮಹಿಳೆ ಕೊಂದು ತುಂಡು ತುಂಡಾಗಿ ಕತ್ತರಿಸಿದ ಯುವಕರು
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ವಾಸವಿದ್ದ ಐವತ್ನಾಲ್ಕು ವರ್ಷದ ಗೀತಾಮ್ಮ ಮೇ ತಿಂಗಳ ಅಂತ್ಯದಲ್ಲಿ ನಾಪತ್ತೆಯಾಗಿದ್ದರು.

ಖಾಸಗಿ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೀತಮ್ಮಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅವರಿಗೆ‌ ಮದುವೆ ಮಾಡಿಕೊಟ್ಟು, ಪತಿ ಸಾವಿನ ಬಳಿಕ ಒಬ್ಬಂಟಿಯಾಗಿದ್ದ ಗೀತಾಮ್ಮ, ಒಂದು ಮನೆಯಲ್ಲಿ ವಾಸವಿದ್ರೆ ಉಳಿದ ಎರಡು ಮನೆಗಳನ್ನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಯುವಕರಿಗೆ ಬಾಡಿಗೆಗೆ ಕೊಟ್ಟಿದ್ದರು.

ಹೇಗೋ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆ ಗೀತಾಮ್ಮರ ತುಂಡರಿಸಿದ ದೇಹ ಜೂನ್ 1ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಟ್ಟ ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ವಾಸನೆ ಬರಿತ್ತಿದ್ದ ಸ್ಥಳಕ್ಕೆ ಬಂದು ನೋಡಿದಾಗ ಕಾಲು, ಕೈ ಕತ್ತರಿಸಿದ ರುಂಡ ವಿಲ್ಲದ ದೇಹ ಪತ್ತೆಯಾಗಿತ್ತು.

ಬಳಿಕವೇ ನಾಪತ್ತೆಯಾಗಿದ್ದಾರೆ ಎಂದು ತಿಳಿದಿದ್ದ ಗೀತಾ ಬರ್ಬರವಾಗಿ ಕೊಲೆಯಾಗಿದ್ದಾರೆಂಬ ವಿಚಾರ ಬೆಳಕಿಗೆ ಬಂದಿತ್ತು.
ಇನ್ನು ದೇಹದ ತುಂಡುಗಳು ಪತ್ತೆಯಾಗುತ್ತಿದ್ದಂತೆ ತಂಡ ರಚಿಸಿ ಆರೋಪಿಗಳನ್ನು ಹಿಡಿಯಲು ಸಜ್ಜಾದ ಬನ್ನೇರುಘಟ್ಟ ಪೊಲೀಸರು ಮಹಿಳೆಯ ರುಂಡಾ ಪತ್ತೆಯಾದ ಕೇವಲ ಒಂದು ವಾರದಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ಜನರ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಬಿಹಾರದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ನಾಲ್ಕು ಜನ ಯುವಕರು ಕೊಲೆಯಾದ‌ ಗೀತಾ ಮನೆಯಲ್ಲಿ ಬಾಡಿಗೆಗೆ ಇದ್ದರು. ಗೀತಾ ಒಂಟಿಯಾಗಿರುವುದನ್ನೇ ಬಂಡವಾಳ‌ ಮಾಡಿಕೊಂಡು ಮಹಿಳೆಯ ಮನೆಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಕಾಗದ ಪತ್ರಗಳ‌ ಮೇಲೆ ಸಹಿ ಹಾಕುಬಂತೆ ಬಲವಂತ ಮಾಡಿ, ನಂತರ ಕೊಲೆ ಮಾಡಿದ್ದಾರೆ ಎಂಬ ಸತ್ಯ ಬಯಲಾಗಿದೆ.
ಕೊಲೆ ಮಾಡಿದ ಆರೋಪಿಗಳು, ಕೊಲೆ ವಿಚಾರ ಗೊತ್ತಾಗದಿರಲು ದೇಹ ಬಿಸಾಡಲು ಪ್ಲ್ಯಾನ್ ಮಾಡಿದ್ದಾರೆ. ಹಂತ ಹಂತವಾಗಿ ದೇಹ ಕತ್ತರಿಸಿ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಕವರ್​ನಲ್ಲಿ ಸಾಗಿಸಿದ್ದಾರೆ. ಕೊಲೆಯಾದ‌ ಒಂದು ದಿನದ ನಂತರವೂ ಕೆಲಸಕ್ಕೆ ತೆರಳಿದ್ದ ಕಿರಾತಕರು, ಒಟ್ಟು ಎರಡು ದಿನಗಳ ವರೆಗೂ ದೇಹ ಕಟ್ ಮಾಡಿ‌ ಸಾಗಿಸಿದ್ದಾರೆ.

ಕಟ್ ಮಾಡಿದ ಶವದ ಮುಂದೆಯೇ ಊಟ ಮಾಡಿದ್ದು ಕೃತ್ಯ ನಡೆದ ಮೂರು ದಿನಗಳ ಬಳಿಕ ಆರೋಪಿಗಳಿಗೆ ಭಯ ಕಾಡಲು ಶುರುವಾಗಿದೆ. ಮನೆ ಸುತ್ತಾ ಸತ್ತ ದೇಹದ ವಾಸನೆ ಪಸರಿಸುತ್ತಿದ್ದಂತೆ ನಡುಕ ಶುರುವಾಗಿದೆ. ಅದಕ್ಕೆ ಮನೆಯ ಹಿಂಭಾಗದಲ್ಲಿ ದೇಹ ಬಿಸಾಡಿ ಎಸ್ಕೇಪ್ ಆಗಿದ್ದಾರೆ.

ಕಿ.ಮಿ ದೂರದಲ್ಲಿ ಸತ್ತ ಮಹಿಳೆಯ ತಲೆ,‌‌ ಒಂದು ಕೈ ಪತ್ತೆಯಾಗಿದೆ. ಹಂತಕರು ಬನ್ನೇರುಘಟ್ಟ ಪಾರ್ಕ್ ಅರಣ್ಯ ಪ್ರದೇಶದಲ್ಲಿ ರುಂಡ ಬಿಸಾಡಿದ್ದರು. ಇನ್ನು ಕೃತ್ಯದ ಮುಂಚೆ ಅತ್ಯಾಚಾರ ಆಗಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು ಪೊಲೀಸರು ಪೋಸ್ಟ್ ಮಾರ್ಟಮ್‌ ರಿಪೋರ್ಟ್ ಪರಿಶೀಲನೆ ಮಾಡಲಿದ್ದಾರೆ. ಸದ್ಯಕ್ಕೆ ಆಸ್ತಿ ವಿಚಾರವಾಗಿಯೇ ಕೊಲೆ ನಡೆದಿರುವ ಶಂಕೆ ಇದ್ದು ಮತ್ತಷ್ಟು ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

LATEST NEWS

Trending