Connect with us

    DAKSHINA KANNADA

    Zika Virus : ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ ಏನು?

    Published

    on

    ಮಂಗಳೂರು: ರಾಜ್ಯದಲ್ಲಿ ಝಿಕಾ ವೈರಸ್ ನಿಂದಾಗಿ ಜನರು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರ ಏನು ಮಾಡಬೇಕು ಎನ್ನುವುದರ ಬಗ್ಗೆ ತಿಳಿಯೋಣ.

    ಝಿಕಾ ರೋಗದ ಲಕ್ಷಣಗಳೇನು?

    ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

    ಜನರು ಯಾವ ನಿಯಮ ಪಾಲಿಸಬೇಕು?

    ರೋಗದ ಲಕ್ಷಣ ಕಂಡು ಬಂದರೆ ಕೂಡಲೇ ಜನರು ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಈ ಮೂಲಕ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳಬಾರದು ಎಂಬ ಸಲಹೆಯನ್ನು ಆರೋಗ್ಯ ಇಲಾಖೆ ನೀಡಿದೆ.

    ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಬೇಕು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ ಏನು?

    • ನೀರು ಶೇಖರಣಾ ಪರಿಕರಗಳನ್ನು (ಟ್ಯಾಂಕ್‌, ಟಬ್‌ ಇತ್ಯಾದಿ) ಮುಚ್ಚಿಡಬೇಕು. ಅಲ್ಲದೆ, ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು.
    • ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
    • ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
    • ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    DAKSHINA KANNADA

    ಜಾತ್ರಾ ವ್ಯಾಪಾರಿಯ ಪ್ರಾಮಾಣಿಕತೆ..! ಬೆಲೆಬಾಳುವ ಬ್ಯಾಗ್ ಮಾಲೀಕರಿಗೆ ವಾಪಾಸ್‌..!

    Published

    on

    ಕಾಪು : ಉಚ್ಚಿಲ ದಸರಾದಲ್ಲಿ ನಮ್ಮ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ರಘು ಧರ್ಮಸ್ಥಳ ಇವರಿಗೆ ದೇವಸ್ಥಾನದ ವಠಾರದಲ್ಲಿ 20,000.ಸಾವಿರ ನಗದು ಮತ್ತು ಕೆಲವೊಂದು ದಾಖಲೆ ಪತ್ರಗಳು, ಬ್ಯಾಗ್ ಸಮೇತ ಸಿಕ್ಕಿತ್ತು.


    ತಕ್ಷಣ ಅವರು ವಾರೀಸುದಾರರಾದ ಧರಣೇಂದ್ರ ಬಳ್ಳಾಂಜ ಅವರ ಫೋನ್ ನಂಬರನ್ನು ಸಂಪರ್ಕಿಸಿ ಸೊತ್ತುಗಳನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    Continue Reading

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ

    Published

    on

    ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.

    ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್‌ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.

    Continue Reading

    LATEST NEWS

    Trending