ಅತ್ತ ವಿದ್ಯಾರ್ಥಿ, ಮಧ್ಯೆ Zomato Delivery ಕೆಲ್ಸ, ಇತ್ತ ಸಿನಿಮಾ ಮಾಡಿಯೇ ಬಿಟ್ಟ ಹಠಯೋಗಿ..!
ಅತ್ತ ವಿದ್ಯಾರ್ಥಿ, ಮಧ್ಯೆ Zomato Delivery ಕೆಲ್ಸ, ಇತ್ತ ಸಿನಿಮಾ ಮಾಡಿಯೇ ಬಿಟ್ಟ ಹಠಯೋಗಿ..!
ಮಂಗಳೂರು: ಹಠ ಹಿಡಿದ್ರೆ ಯಾವುದು ಕೂಡಾ ಅಸಾಧ್ಯವಲ್ಲ.ಅದಕ್ಕೆ ಒಂದು ಉದಾಹರಣೆ ಈ ಬಿಸಿ ರಕ್ತದ ಯುವಕ. ಈತನ ಹೆಸರು ಹರ್ಷಿತ್ ಸೋಮೇಶ್ವರ.
ಮಂಗಳೂರಿನ ಕಾರ್ ಸ್ಟೀಟ್ ಕಾಲೇಜಿನ ಪದವಿ ವಿದ್ಯಾರ್ಥಿ ಈ ಹರ್ಷಿತ್. ಕಲಿಕೆ ಜೊತೆಗೆ ಏನಾದ್ರೂ ಸಾಧನೆ ಮಾಡಲೇ ಬೇಕೆಂಬ ಹಠ ಈತನಿಗೆ.
ಅದಕ್ಕಾಗಿ ಈತ ಆಯ್ಕೆ ಮಾಡಿಕೊಂಡದ್ದು ಸಿನಿಮಾ ಕ್ಷೇತ್ರವನ್ನು. ಯೋಚಿಸಿ ಸಂಕಲ್ಪ ಮಾಡಿದ್ದೇ ಹರ್ಷಿತ್ ಹಿಂತಿರುಗಿ ನೋಡದೆ ಒಂದು ಸಿನಿಮಾವನ್ನೇ ಮಾಡಿಯೇ ಬಿಟ್ಟಿದ್ದಾನೆ.
ವಿಶೇಷ ಎಂದರೆ ಹರ್ಷಿತ್ ಸೋಮೇಶ್ವರ ಪದವಿ ವಿದ್ಯಾಭ್ಯಾಸದ ಜೊತೆಗೆ ಎರಡು ಚಿತ್ರಗಳಿಗೆ ಸಹಾಯಕನಾಗಿ ಕೆಲಸ ಮಾಡಿದ್ದರು. ಇದು ಅವರಿಗೆ ಮುಂದಿನ ಮೆಟ್ಟಲುಗಳು ಏರಲು ಸಹಕಾರಿಯಾಗಿದೆ.
ಇದರಲ್ಲಿ ತುಳುವಿನ ‘ಪಮ್ಮಣ್ಣೆ ದಿ ಗ್ರೇಟ್’ ಮತ್ತು ಕನ್ನಡ ಸಿನಿಮಾಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು. ಅಷ್ಟೇ ಅಲ್ಲ, ಐದಿನೈದಕ್ಕೂ ಹೆಚ್ಚು ಅಲ್ಬಂ ಸಾಂಗ್ ಕೂಡಾ ಇವರು ಮಾಡಿದ್ದಾರೆ. ಇದರ ಜೊತೆಗೆ ಕಳೆದ ಒಂದು ವರ್ಷದಿಂದ Zomatoದಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದಾರೆ.
ಅದರಲ್ಲಿ ಬಂದ ಸಂಬಳದಲ್ಲಿ ಹಣ ಉಳಿಕೆ ಮಾಡಿ ಹೊಸ ಟೆಲಿ ಫಿಲ್ಮ್ ನಿರ್ಮಾಣಕ್ಕಾಗಿ ಮುಂದಡಿ ಇಟ್ಟರು.ಇವರ ಕಠಿಣ ಪರಿಶ್ರಮದ ಫಲವೇ ‘ಗರ್ವ’ ಎಂಬ ಟೆಲಿಫಿಲ್ಮ್. ಕಳೆದ ಎರಡು ವರ್ಷಗಳಿಂದ ಈ ಸಿನಿಮಾಕ್ಕಾಗಿ ಕೆಲಸ ಮಾಡಿದ್ದರು.
ಇದೀಗ ‘ಗರ್ವ’ ಟೆಲಿಫಿಲ್ಮ್ ಸಿದ್ದವಾಗಿ ನಿಂತಿದ್ದು ಮಾರ್ಚ್ 15 ಕ್ಕೆ ಮಂಗಳೂರಿನ ಪುರ ಭವನದಲ್ಲಿ ರಿಲೀಸ್ ಆಗಲು ರೆಡಿಯಾಗುತ್ತಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ 100ಕ್ಕೂ ಹೆಚ್ಚು ಹಿರಿಯ ಕಿರಿಯ ಕಲಾವಿದರು ನಟಿಸಿದ್ದಾರೆ…!!
ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿರುವ ನಟ ಪೃಥ್ವಿ ಅಂಬರ್ ರ ಹಿನ್ನೆಲೆ ಧ್ವನಿ ಕೂಡಾ ಈ ಸಿನಿಮಾದಲ್ಲಿದೆ. ಒಟ್ಟಿನಲ್ಲಿ ತುಳುವಿನ ಮೊದಲ ಮಾಸ್ ಟೆಲಿ ಪಿಚ್ಚರ್ ಇದಾಗಿದ್ದು,ಮಾರ್ಚ್ 15 ರಂದು ವಿವಿಧ ಕಡೆ ರಿಲೀಸ್ ಆಗಲಿದೆ.
ಏನಾದರೂ ಜೀವನದಲ್ಲಿ ಮಾಡಬೇಕೆಂಬ ಛಲವಿರುವ ಬಿಸಿ ರಕ್ತದ ಯುವಕರಿಗೆ ಸ್ಪೂರ್ತಿಯಾಗಿರುವ ಈ ಹರ್ಷಿತ್ ಸೋಮೇಶ್ವರರಿಗೆ ಗುಡ್ ಲಕ್ ಹೇಳುವ ಮತ್ತು ಅವನ ಚಿತ್ರಕ್ಕೆ ಪ್ರಚಾರದ ಮೂಲಕ ಪ್ರೋತ್ಸಾಹ ನೀಡುವ..!
DAKSHINA KANNADA
ಹಿಂಜಾವೇ ಮುಖಂಡ ಅಕ್ಷಯ್ ರಜಪೂಜ್ಗೆ ಗಡಿಪಾರು.!.
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಅಕ್ಷಯ್ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.
LATEST NEWS
ಪ್ರಿಯಕರನ ಮೇಲೆ ಆ್ಯ*ಸಿಡ್ ಎರಚಿದ ಯುವತಿ!
ಮಂಗಳೂರು/ ಉತ್ತರ ಪ್ರದೇಶ : ಪ್ರೀತಿಸಿ ಮೋಸ ಮಾಡಿದರೆ ಯುವಕರು ಪ್ರೇಯಸಿಯನ್ನು ಹ*ತ್ಯೆ ಮಾಡುವುದನ್ನು, ಆ್ಯಸಿ*ಡ್ ಎರಚುವ ಸುದ್ದಿಗಳನ್ನು ಕೇಳುತ್ತೇವೆ. ಆದರೆ, ಉತ್ತರ ಪ್ರದೇಶದಲ್ಲಿ ವಿಭಿನ್ನವಾದ ಘಟನೆ ನಡೆದಿದೆ. ಇಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನ ಮೇಲೆ ಆ್ಯ*ಸಿಡ್ ದಾಳಿ ನಡೆಸಿದ್ದಾರೆ. ಮಂಗಳವಾರ(ಏ.23) ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಕೃತ್ಯ ಎಸಗಿದ್ದು ಯಾಕೆ?
ಯುವತಿ ಈ ರೀತಿ ದುಷ್ಕೃತ್ಯ ಮೆರೆಯಲು ಕಾರಣ ‘ಪ್ರೀತಿ’. ಆಕೆಯ ಪ್ರಿಯತಮ ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಎನ್ನಲಾಗಿದೆ. ಹೀಗಾಗಿ ಯುವತಿ ಆತನ ಮುಖದ ಮೇಲೆ ಆ್ಯ*ಸಿಡ್ ಎರಚಿದ್ದಾಳೆ. ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ ಎನ್ನಲಾಗಿದೆ.
ಆ್ಯ*ಸಿಡ್ ಬಿದ್ದ ಪರಿಣಾಮ ಗಾಯಗೊಂಡ ಯುವಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನಿಗೆ ಆ್ಯ*ಸಿಡ್ ಎರಚಿದ ಯುವತಿಯನ್ನು ಹಿಡಿದ ಮಹಿಳೆಯರು ಸರಿಯಾಗಿ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ತಿಳಿಸಿದ್ದಾರೆ.
ಇದನ್ನೂ ಓದಿ : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಯುವಕ – ಯುವತಿ ಪರಸ್ಪರ ಪ್ರೀತಿಸಿದ್ದರು. ದೈಹಿಕ ಸಂಪರ್ಕ ಹೊಂದಿದ್ದರು. ಆದರೆ, ಇವರ ಸಂಬಂಧವನ್ನು ಎರಡೂ ಕುಟುಂಬ ವಿರೋಧಿಸಿತ್ತು ಎನ್ನಲಾಗಿದೆ. ಏಪ್ರಿಲ್ 22 ರಂದು ಯುವಕನ ಮನೆಯವರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿದ್ದರು. ಇದರಿಂದ ಕೋಪಗೊಂಡ ಯುವತಿ ಮದುವೆ ಮೆರವಣಿಗೆಯಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.
LATEST NEWS
ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಖಾದರ್ ಭಾಷಾ (28) ಕೊ*ಲೆಯಾದ ವ್ಯಕ್ತಿ. ಮಾರುತಿ ಹ*ತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀ*ಭತ್ಸವಾಗಿ ಹ*ತ್ಯೆ ಮಾಡಿದ್ದಾನೆ.
ಕೊ*ಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊ*ಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!