LATEST NEWS
Zomato ಪ್ರತಿ ಆರ್ಡರ್ ಗೆ ₹10 ಶುಲ್ಕ ಹೆಚ್ಚಳ!
ನವದೆಹಲಿ: ಆನ್ ಲೈನ್ ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್ ಫಾರ್ಮ್ ಫೀ) ₹10 ಹೆಚ್ಚಳ ಮಾಡಿದೆ.
ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ ಹೆಚ್ಚಿರುವುದರಿಂದ ಶುಲ್ಕವನ್ನು ಏರಿಕೆ ಮಾಡಲಾಗಿದ್ದು, ಸದ್ಯ ದೆಹಲಿಯಲ್ಲಿ ₹10 ಹೆಚ್ಚು ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ. ಬೇರೆ ಬೇರೆ ನಗರದಲ್ಲಿ ಶುಲ್ಕದ ದರ ಬದಲಾಗಲಿದೆ ಎಂದಿರುವ ಕಂಪನಿ ಯಾವ ನಗರದಲ್ಲಿ ಎಷ್ಟು ಶುಲ್ಕ ಇರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಿಲ್ಲ.
ಕಳೆದ ಏಪ್ರಿಲ್ ತಿಂಗಳಿನಲ್ಲಿಯೂ ಜೊಮಾಟೊ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು ₹4 ಏರಿಕೆ ಮಾಡಿತ್ತು. ಈಗ ಮತ್ತೆ ದರ ಏರಿಸಿ ಪ್ರಕಟಣೆ ಹೊರಡಿಸಿದೆ.
LATEST NEWS
ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ವಿರುದ್ಧ ಪೊಲೀಸರಿಂದಲೇ ದೂರು
ಲೇಖಕಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯೊಂದರ ಸಂಬಂಧ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರ ಬಂಧನದ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಗಾಯಗೊಳಿಸಿದ ಬಗ್ಗೆ ಪೊಲೀಸರು ಮತ್ತೊಂದು ಕೇಸು ದಾಖಲಿಸಿದ್ದಾರೆ.
ಡಾ.ಲಕ್ಷ್ಮೀ ಜಿ.ಪ್ರಸಾದ್ ಹಾಗೂ ಅವರ ಪುತ್ರ ಅರವಿಂದ್ ವಿರುದ್ಧ ಜ್ಞಾನಬಾರತಿ ಪೊಲೀಸರು ಹೊಸ ಎಫ್ಐಆರ್ ದಾಖಲಿಸಿದ್ದಾರೆ. ಸಾಹಿತಿ ಪವನಜ ಎಂಬವರು ನೀಡಿದ್ದ ಮಾನನಷ್ಟ ಮೊಕದ್ದಮೆಯ ಹಿನ್ನಲೆಯಲ್ಲಿ ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಬೆಂಗಳೂರು 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಬಂಧನ ಮಾಡಲು ಹೋದ ವೇಳೆ ತಾಯಿ ಹಾಗೂ ಮಗ ಅಡ್ಡಿ ಪಡಿಸಿದಾಗಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 20 ರಂದು ಸಂಜೆ ಈ ಘಟನೆ ನಡೆದಿದ್ದು, ಜ್ಞಾನಬಾರತಿ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ಪೆಕ್ಟರ್ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾದೀಶರ ಮುಂದೆ ಹಾಜರಿ ಪಡಿಸುವ ಮೊದಲು ಆರೋಪಿ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾಗಿ ಜ್ಞಾನಬಾರತಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುರೇಖ ಹಾಗೂ ಇನ್ನಿಬ್ಬರು ಸಿಬ್ಬಂದಿ ದೂರು ನೀಡಿದ್ದಾರೆ.
ಸಾಹಿತಿಯಾಗಿರುವ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರು ಸಾಮಾಜಿಕ ಜಾಲತಾಣವೊಂದರಲ್ಲಿ ಅವಮಾನ ಮಾಡಿದ್ದಾಗಿ ಸಾಹಿತಿ ಪವನಜ ಎಂಬವರು ನ್ಯಾಯಾಲಯದಲ್ಲಿ ದೂರು ದಾಖಲಿಸಿ ಬಂಧನ ವಾರೆಂಟ್ ಮಾಡಿಸಿದ್ದರು. ಆದರೆ ಪೊಲೀಸ್ ಠಾಣೆಯಲ್ಲಿ ಮಗನನ್ನು ಕರೆಯಿಸಿ ಗಲಾಟ ಮಾಡಿ ಬೆದರಿಕೆ ಹಾಕಿ ಹೊಡೆದು ಗಾಯ ಮಾಡಿದ್ದಾರೆ ಎಂದು ಪೊಲೀಸರೇ ಕೇಸು ದಾಖಲಿಸಿಕೊಂಡಿದ್ದಾರೆ.
LATEST NEWS
ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15,000 ರೂ. ದಂಡ
ಚೆನ್ನೈ: ಬರೀ 50 ಪೈಸೆ ಅಲ್ವಾ ಎಂದು ಗ್ರಾಹಕನ ಬೇಡಿಕೆ ನಿರ್ಲಕ್ಷಿಸಿದ ಅಂಚೆ ಕಚೇರಿಯೊಂದಕ್ಕೆ 15,000 ರೂ. ದಂಡ ವಿಧಿಸಿದ ಅಪರೂಪದ ಘಟನೆ ನಡೆದಿದೆ.
ಚೆನ್ನೈನ ಮಾನ್ಯ ಎಂಬುವರು 2023ರ ಡಿಸೆಂಬರ್ನಲ್ಲಿ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್ ಪೋಸ್ಟ್ ಮಾಡಲು 30 ರೂ. ನೀಡಿದ್ದರು. ಅದಕ್ಕೆ ನಿಗದಿತ ಶುಲ್ಕ 29.50 ರೂ. ಆಗಿತ್ತು. ಬಾಕಿ 50 ಪೈಸೆ ಕೊಡಲು ಸಿಬಂದಿ ಒಪ್ಪಿಲ್ಲ. ನಮ್ಮ ಕಂಪ್ಯೂಟರ್ ವ್ಯವಸ್ಥೆಯಲ್ಲಿ ಮೊತ್ತ ರೌಂಡಾಫ್ ಆಗಿದ್ದು, 30 ರೂ. ತೋರಿಸುತ್ತಿದ್ದು ಅಷ್ಟನ್ನೇ ಪಾವತಿ ಮಾಡಿ ಎಂದರು. ಅದಕ್ಕೆ ಒಪ್ಪದ ಮಾನ್ಯ ಯುಪಿಐ ಮೂಲಕ ನಿಗದಿತ ಶುಲ್ಕ ಪಾವತಿ ಮಾಡುತ್ತೇನೆ ಎಂದರೂ ಸಿಬ್ಬಂದಿ ಒಪ್ಪಿರಲಿಲ್ಲ.
ಅಂಚೆ ಕಚೇರಿ ವಿರುದ್ಧ ಚೆನ್ನೈ ಜಿಲ್ಲಾ ಗ್ರಾಹಕ ವೇದಿಕೆಗೆ ದೂರು ನೀಡಿ, ಪ್ರತಿ ದಿನ ರೌಂಡಾಫ್ ಮಾಡುವುದರಿಂದ ಬೃಹತ್ ಮೊತ್ತ ಸಂಗ್ರಹಿಸಿದಂತಾಗುತ್ತದೆ. ಇದು ಕಪ್ಪುಹಣಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಮತ್ತು ಸರಕಾರಕ್ಕೆ ಬರುವ ಜಿಎಸ್ಟಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ವೇದಿಕೆ ಅಂಚೆ ಇಲಾಖೆಗೆ 15,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
LATEST NEWS
ಮುಸ್ಲಿಂ ಯುವತಿಯ ವರಿಸಿದ ಹಿಂದು ಯುವಕ; ಪೊಲೀಸ್ ಠಾಣೆ ಮೆಟ್ಟಿಲೇರಿದ ಅಂತರ್ ಧರ್ಮೀಯ ವಿವಾಹ
ಮಂಗಳೂರು: ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆಗೆಂದು ಪೊಲೀಸರ ಮೊರೆ ಹೋದ ಸಂದರ್ಭದಲ್ಲಿ ಯುವತಿಯನ್ನು ಪೊಲೀಸರು ಯುವಕನ ಜೊತೆ ಕಳುಹಿಸದೇ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದು, ಇದರಿಂದ ಪ್ರಿಯಕರ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ಮಾಡಿದ್ದಾನೆ. ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾನೆ.
ಈ ಘಟನೆ ನಡೆದಿರುವುದು ಹಾವೇರಿ ಮಹಿಳಾ ಠಾಣೆಯಲ್ಲಿ. ತನ್ನ ಸ್ನೇಹಿತರ ಜೊತೆ ಸೇರಿ ಪ್ರಿಯಕರ ಪ್ರತಿಭಟನೆ ಮಾಡಿದ್ದಾನೆ. ಕಳೆದ ಮೂರು ವರ್ಷದಿಂದ ಯುವಕ ಪ್ರದೀಪ್ ಬಣಕಾರ್ ಮತ್ತು ತಂಜಿಮ್ ಭಾನು ಪರಸ್ಪರ ಪ್ರೀತಿ ಮಾಡುತ್ತಿದ್ದು, ಹದಿನೈದು ದಿನದ ಹಿಂದೆ ಮನೆಯಿಂದ ಓಡಿ ಹೋಗಿ, ವಿವಾಹವಾಗಿದ್ದಾರೆ.
ಅಲ್ಲಿಂದ ನೇರವಾಗಿ ಹಾವೇರಿ ಮಹಿಳಾ ಪೊಲೀಸ್ ಠಾಣೆಗೆ ಜೋಡಿ ಬಂದಿದ್ದು, ಮನೆಯವರ ಬೆದರಿಕೆ ಇದ್ದುದ್ದರಿಂದ ರಕ್ಷಣೆ ಕೋರಿ ಬಂದಿದ್ದರು. ಪೊಲೀಸರು ಇದೀಗ ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿ, ಎಲ್ಲಾ ಸಮಸ್ಯೆ ಬಗೆಹರಿಸಿದಿದ್ದರೂ, ಆಕೆಯನ್ನು ಮಾತ್ರ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಆಕೆಯನ್ನು ಮನೆಗೆ ಕಳಿಸಿಕೊಂಡುವಂತೆ ಪ್ರಿಯಕರ ಹೇಳಿದ್ದಾನೆ.
ಆದರೆ ಪೊಲೀಸರು ಈಗ ಹೊರಗೆ ಹೋದರೆ ಸಮಸ್ಯೆ ಆಗುತ್ತೆ, ಇಬ್ಬರಿಗೂ ಏನಾದರೂ ಮಾಡಬಹುದು. ಅದಕ್ಕೆ ಅಲ್ಲಿಯೇ ಕೂರಿಸಿದ್ದಾರೆ ಎಂದು ಹೇಳಿದ್ದಾನೆ. ನಾನು ನನ್ನ ಹೆಂಡ್ತಿನ ಕರೆದುಕೊಂಡು ಹೋಗಬೇಕು ಎಂದು ಸ್ಟೇಷನ್ ಮುಂದೆಯೇ ಕೂತುಕೊಳ್ತೇನೆ ಎಂದು ಯುವಕ ಪಟ್ಟು ಹಿಡಿದು ಕುಳಿತಿರುವುದಾಗಿ ವರದಿಯಾಗಿದೆ.
- FILM3 days ago
ಇರಲು ಮನೆ ಇರಲಿಲ್ಲ; ಮೆಜೆಸ್ಟಿಕ್ನಲ್ಲೇ ಸುತ್ತಾಡಿದ್ದ ಸಿಹಿ ಕುಟುಂಬ; ಕಷ್ಟಗಳ ನೆನೆದು ಪುಟಾಣಿ ಕಣ್ಣೀರು
- BIG BOSS6 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- LATEST NEWS3 days ago
ನಿಜವಾದ ಸಾಧನೆ: ಎಂ.ಬಿ.ಬಿ.ಎಸ್ ಸೀಟ್ ಪಡೆದು ಭವಿಷ್ಯದ ವೈದ್ಯರಾಗಲು ಹೊರಟ 4 ಸಹೋದರಿಯರು
- BIG BOSS5 days ago
ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ