Connect with us

LATEST NEWS

ಕೋವಿಡ್ ನಿಯಮಗಳನ್ನು ಉಲ್ಲಂಘನೆ: ಆಂಗ್‌ ಸಾನ್‌ ಸೂಕಿಗೆ 4 ವರ್ಷ ಜೈಲು

Published

on

ಮಯನ್ಮಾರ್‌: ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನೋಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.


76 ವರ್ಷದ ಸೂಕಿ, ಪ್ರಚೋದನೆ, ಕೋವಿಡ್ -19 ಪ್ರೋಟೋಕಾಲ್‌ಗಳ ಉಲ್ಲಂಘನೆ ಮತ್ತು ಅಧಿಕೃತ ರಹಸ್ಯಗಳ ಕಾಯಿದೆಯ ಉಲ್ಲಂಘನೆ ಸೇರಿದಂತೆ ಸುಮಾರು ಹನ್ನೆರಡು ಆರೋಪಗಳನ್ನು ಎದುರಿಸುತ್ತಿದ್ದಾರೆ.
ಫೆಬ್ರವರಿ 1 ರ ದಂಗೆಯಲ್ಲಿ ಮಿಲಿಟರಿ ಅಧಿಕಾರವನ್ನು ವಶಪಡಿಸಿಕೊಳ್ಳುವವರೆಗೆ ಸೂಕಿ ಮ್ಯಾನ್ಮಾರ್‌ನ ರಾಜ್ಯ ಸಲಹೆಗಾರರಾಗಿದ್ದರು ಮತ್ತು ನಾಯಕಿರಾಗಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

FILM

ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

Published

on

ದೆಹಲಿ: ಆಗ್ರಾದ ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಶಿಕ್ಷಕಿ ನಡುವೆ ಮಾತಿನ ಚಕಾಮಕಿ ನಡೆದು ಬಳಿಕ ದೈಹಿಕವಾಗಿ ಹೊಡೆದಾಡಿಕೊಂಡಿರುವ ಘಟನೆ ಮೇ.3ರಂದು ನಡೆದಿದೆ.

fight

ಮುಂದೆ ಓದಿ..; ಮಹಿಳೆಯರ ಸುರಕ್ಷತೆಗೆ ಬಂತು ‘ವುಮೆನ್ ಸೇಫ್ಟೀ’ ಅಪ್ಲಿಕೇಷನ್‌..!

ಪ್ರಾಂಶುಪಾಲರು ಶಿಕ್ಷಕಿ ಶಾಲೆಗೆ ತಡವಾಗಿ ಬರುವುದನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಶಿಕ್ಷಕಿ ಪ್ರಾಂಶುಪಾಲೆಗೆ ನೀವು ಕೂಡ ನಾಲ್ಕು  ದಿನಗಳಿಂದ ತಡವಾಗಿ ಬರುತ್ತಿದ್ದೀರಲ್ವಾ ಎಂದು ಮರುತ್ತರಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಹೆಚ್‌ಎಮ್ ಶಿಕ್ಷಕಿ ಜೊತೆ ವಾಗ್ವಾದಕ್ಕಿಳಿದು ಕೊನೆಗೆ ಹೊಡೆದಾಡಿಕೊಂಡಿದ್ದಾರೆ. ಶಿಕ್ಷಕಿ ಗುಂಜಾ ಚೌಧರಿ ಹಾಗೂ ಪ್ರಾಂಶುಪಾಲೆ ಇಬ್ಬರೂ  ಹಿಡಿದು ಎಳೆದಾಡಿದ್ದಾರೆ.  ಈ ವೇಳೆ ಶಿಕ್ಷಕಿಯ ಕಣ್ಣಿಗೆ ಗಾಯಗಳಾಗಿದೆ. ಇನ್ನು ಶಿಕ್ಷಕಿ ಪ್ರಾಂಶುಪಾಲರ ಬಟ್ಟೆಯನ್ನು ಹರಿದು ಹಾಕಿದ್ದಾರೆ. ಈ ಮಧ್ಯೆ ಅಲ್ಲೇ ಇದ್ದ ಸಿಬಂದಿಗಳು ಗಲಾಟೆಯನ್ನು ಬಿಡಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರೀ ಚರ್ಚೆ ಒಳಗಾಗಿದೆ.

Continue Reading

DAKSHINA KANNADA

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!

Published

on

ಮಂಗಳೂರು: ನಾವು ಯಾವುದೇ ಹಿಂದೂ ಧರ್ಮದವರ ಮನೆಗೆ ಹೋದಾಗ ಅಲ್ಲಿ ಏನು ನೋಡುತ್ತೇವೊ ಗೊತ್ತಿಲ್ಲ ಆದರೆ ಮನೆಯ ಎದುರೊಂದು ತುಳಸಿ ಗಿಡ ಇದ್ದೇ ಇರುತ್ತದೆ. ಯಾಕೆಂದರೆ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನ ಕೊಡುತ್ತಾರೆ. ಬೆಳಗ್ಗೆ ಎದ್ದ ಕೂಡಲೇ ಮಹಿಳೆಯರು ದೇವರಿಗೆ ದೀಪ ಇಟ್ಟು ಬಳಿಕ ತುಳಸಿ ಗಿಡಕ್ಕೆ ಕಲಶದಲ್ಲಿ ನೀರನ್ನು ಹಾಕುತ್ತಾರೆ.

ಕೆಲವರ ಮನೆಯಲ್ಲಿ ಒಂದೇ ತುಳಸಿ ಗಿಡವನ್ನು ನೋಡಿದರೆ ಇನ್ನು ಕೆಲವರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ಇರುತ್ತದೆ. ಆರೋಗ್ಯದ ಪ್ರಯೋಜನವಾಗಿಯೂ ಇದನ್ನು ಬಳಸುತ್ತಾರೆ. ಆದರೆ ಕೆಲವೊಂದು ನಿಯಮವನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ತುಳಸಿ ಗಿಡವನ್ನು ಇಟ್ಟು ಕೊಂಡರೆ ಏನಾಗುತ್ತದೆ ಎಂಬುದರ ಬಗ್ಗೆ ತಿಳಿಯೋಣ.

ತುಳಸಿ ಗಿಡ ಬೆಸ ಸಂಖ್ಯೆಯಲ್ಲಿ ಇರಬೇಕು:

ಕೆಲವೊಂದು ಮನೆಯಲ್ಲಿ ತುಳಸಿ ಗಿಡ ಎಲ್ಲಾ ಕಡೆಯಲ್ಲಿ ಬೆಳೆಯುತ್ತದೆ. ಇನ್ನು ಕೆಲವು ಮನೆಯಲ್ಲಿ ನೆಟ್ಟ ಒಂದು ಗಿಡವೂ ಸರಿಯಾಗಿ ಉಳಿಯುವುದು ಕಷ್ಟ. ಆದರೆ ತುಳಸಿ ಗಿಡದ ಸಂಖ್ಯೆ ಬೆಸಸಂಖ್ಯೆಯಲ್ಲಿರಬೇಕು. 1, 3, 5, 7 ಹೀಗೆ ಬೆಸಸಂಖ್ಯೆಯಲ್ಲಿ ತುಳಸಿ ಗಿಡವನ್ನು ಮನೆಯಲ್ಲಿಟ್ಟುಕೊಳ್ಳಬೇಕು. ಈ ರೀತಿಯಾಗಿ ಇದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡವನ್ನು ಹೀಗೆ ನೆಡಬೇಕು:

ತುಳಸಿ ಗಿಡವನ್ನು ನೇರವಾಗಿ ನೆಲದ ಮೇಲೆ ನೆಡಬಾರದು. ಇಂತಹ ತಪ್ಪನ್ನು ಎಂದಿಗೂ ಮಾಡಬಾರದು. ಈ ಸಸಿಯನ್ನು ಕುಂಡದಲ್ಲಿ ಅಥವಾ ತೊಟ್ಟೆಯಲ್ಲಿ ಪ್ರತ್ಯೇಕವಾಗಿ ನೆಡಬೇಕು. ಕುಂಡದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಯಾವೂದೇ ರೀತಿಯ ಅಶುದ್ಧತೆಗಳು ತುಳಸಿ ಗಿಡವನ್ನು ಮುಟ್ಟುವುದಿಲ್ಲ.

ಈ ದಿನದಂದು ತುಳಸಿಯನ್ನು ಕೀಳಬಾರದು:

ತುಳಸಿ ಗಿಡವನ್ನು ಎಲ್ಲಾ ದಿನ ನೆಡಬಾರದು. ತುಳಸಿಯನ್ನು ಭಾನುವಾರದಂದು ಮತ್ತು ಏಕಾದಶಿಯ ದಿನದಂದು ನೆಡಬಾರದು ಮತ್ತು ಅದರ ಎಲೆಗಳನ್ನು ತೆಗೆಯಬಾರದು. ಈ ಎರಡು ದಿನ ತುಳಸಿಯನ್ನು ಕೀಳುವುದು ಮತ್ತು ಮುಟ್ಟುವುದು ಮಾಡಿದರೆ ಅಶುಭವೆಂದು ಹೇಳುತ್ತಾರೆ.

ತುಳಸಿಯನ್ನು ನಾವು ಮನೆಯಲ್ಲಿ ನೆಡುವಾಗ ಈ ಮೇಲಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ನೆಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಸಮ ಸಂಖ್ಯೆಯಲ್ಲಿ ತುಳಸಿ ಗಿಡವಿದ್ದರೆ ಯಾವೂದಾದರು ಒಂದನ್ನು ಬೇರೆಯವರಿಗೆ ದಾನ ಮಾಡಿ. ಇದರಿಂದ ಯಾವೂದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

Continue Reading

LATEST NEWS

Trending