Connect with us

STATE

ಪ್ರವಾಸಿಗರನ್ನು ಕೈಬೀಸಿ ಕರೆಯೋ ಕುರುಂಜಿ ಹೂ-12ವರ್ಷಗಳಿಗೊಮ್ಮೆ ಅರಳುವ ಈ ‘ಸುಮ’ದ ಸೊಬಗಿಗೆ ಸಾಟಿಯೇನಿದೆ..?

Published

on

ಚಿಕ್ಕಮಗಳೂರು: ಇಂದು ಪ್ರಕೃತಿಯಲ್ಲಿ ನೂರಾರು ವಿಸ್ಮಯಗಳಿವೆ. ಮನುಷ್ಯನ ಊಹೆಗೂ ನಿಲುಕದ ಅಚ್ಚರಿಗಳಿವೆ. ಮಾನವ ತಾನು ಎಲ್ಲವನ್ನೂ ಸಾಧಿಸುತ್ತೇನೆಂದು ಹೊರಟರೆ ಮಾನವನ ಕೈಗೂ ನಿಲುಕದ ವೈಚಿತ್ರ್ಯಗಳನ್ನು ಈ ಪ್ರಕೃತಿ ಪ್ರದರ್ಶಿಸುತ್ತಿದೆ. ಅದಕ್ಕೆ ಒಂದು ಉದಾಹರಣೆಯೇ ಕುರುಂಜಿ ಹೂ.


ಬರೋಬ್ಬರಿ 12 ವರ್ಷಗಳಿಗೊಮ್ಮೆ ಈ ನೀಲ ಕುರುಂಜಿ ಹೂ ಅರಳುತ್ತದೆ. ಆದರೆ ಇದನ್ನು ನೋಡಬೇಕೆಂದರೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ದತ್ತಪೀಠ ಮಾಣಿಕ್ಯಧಾರ ಜಲಪಾತದತ್ತ ಸಾಗಬೇಕು.

ಸರಿಸುಮಾರು 2000ಕ್ಕೂ ಅಧಿಕ ಎಕ್ಕರೆ ಪಶ್ಚಿಮಘಟ್ಟದಲ್ಲಿ ಈ ಅತ್ಯಪರೂಪದ ನೀಲ ಕುರುಂಜಿ ಹೂ ಕಾಣಲು ಸಾಧ್ಯ. ಹೂವುಗಳ ಬೆಟ್ಟವನ್ನು ನೋಡಲೆಂದೇ ದೂರದೂರಿನಿಂದ ಜನತೆ ಪ್ರವಾಸಿಗರಾಗಿ ಆಗಮಿಸುತ್ತಿದ್ದಾರೆ.


ಬೆಟ್ಟಗಳೆಲ್ಲಾ ನೀಲಿ ಹೊದ್ದಂತೆ ಭಾಸವಾಗುತ್ತಿದ್ದು, ಇಡೀ ಪಶ್ಚಿಮಘಟ್ಟದ ವನ ಸಿರಿಯೇ ನೀಲಿಯ ಚಿತ್ತಾರ ಬಿಡಿಸಿದ ಸೀರೆ ಉಟ್ಟಂತೆ ಕಂಡು ಬರುತ್ತಿದೆ.

ದಕ್ಷಿಣ ಭಾರತದ ಇತರ ಕಡೆಗಳಲ್ಲಿ ಬಿಡುವ ಈ ಹೂವಿಗೆ ಇಷ್ಟೊಂದು ಗಾಢವಾದ ಬಣ್ಣವಿರುವುದಿಲ್ಲ ಎನ್ನುವುದು ಕೂಡಾ ವಿಶೇಷವಾಗಿದೆ. ಇದರ ವೈಜ್ಞಾನಿಕ ಹೆಸರು ಸ್ಟ್ರೊಬಿಯಾಂತಸ್ ಕುಂತಿಯಾನ.

ನೀಲಗಿರಿ ಬೆಟ್ಟವನ್ನು ಈ ಹೆಸರಿನಲ್ಲಿ ಗುರುತಿಸಲ್ಪಡಲು ಈ ಹೂವೇ ಕಾರಣ ಎಂದೂ ಜನ ಹೇಳುತ್ತಾರೆ.
2006ರಲ್ಲಿ ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಭಾಗಗಳಲ್ಲಿ ನೀಲಿಕುರುಂಜಿ ಅರಳಿ ನಿಂತಿತ್ತು. ಕರ್ನಾಟಕದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಬಳ್ಳಾರಿ ಜಿಲ್ಲೆಯ ಸಂಡೂರು, ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮೂನ್ನಾರ್ ಗಳಲ್ಲಿ ನೀಲಿಕುರುಂಜಿ ಅರಳುತ್ತದೆ.


ಹೂವಾಗಿ ಒಣಗಿ ಬೀಜ ಉದುರಿ ಮತ್ತೆ ಗಿಡವಾಗಿ ಮತ್ತೆ ಹೂವಾಗುವುದಕ್ಕೆ ತೆಗೆದುಕೊಳ್ಳುವ ಅವಧಿ 12 ವರ್ಷ. ಒಮ್ಮೆ ಅರಳಿದರೆ ಸುಮಾರು 30ರಿಂದ 40 ದಿನಗಳ ಕಾಲ ಅರಳಿರುತ್ತದೆ.

Click to comment

Leave a Reply

Your email address will not be published. Required fields are marked *

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

LATEST NEWS

ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ

Published

on

ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Continue Reading

LATEST NEWS

ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?

Published

on

ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ ಗರ್ಭ ಧರಿಸಿದ್ದಾಳೆ.

pregnant

ಮೊದಲಾಗಿ ಅಕ್ರಮ ಸಂಬಂಧ ಹೊಂದಿದ್ದ ಪುರುಷನಿಂದ ಗರ್ಭ ಧರಿಸಿದ್ದಳು. ಈ ಮಗುವನ್ನು ಪೋಷಕರು ತನಗರಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕಿ ಪೋಷಕರು ಸೇರಿದಂತೆ ಶಿಕ್ಷಕರು, ವಕೀಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಮುಂದೆ ಓದಿ..; 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ಪೋಷಕರು ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ವಕೀಲರ ನೇತೃತ್ವದಲ್ಲಿ ಕೆಲವು ದಾಖಲೆ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ.  7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಿದ್ದು, ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇನ್ನು ಹೆರಿಗೆ ಆದ ಆರು ತಿಂಗಳ ಬಳಿಕ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದ್ದಾಳೆ. ಈ ವೇಳೆ ಆತ ಅವಳನ್ನು ವರಿಸಳು ಸಿದ್ಧನಾಗಿದ್ದೇನೆ ಎಂದು ಹೇಳುತ್ತಾನೆ. ಆದರೆ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. , ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಕುರಿತಾಗಿ ಪ್ರಶ್ನಿಸಿದಕ್ಕೆ ಅಜ್ಜಿ ಮನೆಗೆ ಕಳುಹಿಸಿದ್ದಾರೆ. ಇನ್ನು ಅಲ್ಲಿ ಈ ಬಾಲಕಿಗೆ 23ವರ್ಷದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಲಾಗಿತ್ತು.  ಈ ವೇಳೆ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಾಳೆ. ಬಳಿಕ ಬಾಲಕಿ ಮತ್ತೊಮ್ಮೆ ಗರ್ಭ ಧರಿಸುತ್ತಾಳೆ. ಅಷ್ಟಾಗಲೇ ವಿವಾಹ ನಿಶ್ಚಯವಾಗಿದ್ದ ಹುಡುಗನಿಗೆ ಇವಳ ಮೊದಲ ಮಗುವಿನ ಕುರಿತಾಗಿ ತಿಳಿದು ಇವಳನ್ನು ಮದುವೆಯಾಗಲು ನಿರಾಕರಿಸುತ್ತಾನೆ. ಬಳಿಕ ಅಜ್ಜಿ ಮನೆಯಿಂದ ಹೊರಟು ಬರ್ತಾಳೆ. ಪರಿಚಯಸ್ಥರ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಪೋಷಕರು ಎರಡನೇ ಮಗವನ್ನೂ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದು ಈ ನಿಟ್ಟಿನಲ್ಲಿ ಬಾಲಕಿ ಪೊಲೀಸ್ ಮೆಟ್ಟಿಲೇರಿದ್ದಾಳೆ. ಇನ್ನು ಪೊಲೀಸರು ಮಾರಾಟ ಮಾಡಿದ್ದ ಹೆಣ್ಣು ಮಗುವನ್ನು ಹುಡುಕಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

 

 

Continue Reading

LATEST NEWS

Trending